Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:22 - ಪರಿಶುದ್ದ ಬೈಬಲ್‌

22 ರೆಬೆಕ್ಕಳು ಗರ್ಭಿಣಿಯಾಗಿದ್ದಾಗ, ಅವಳ ಗರ್ಭದಲ್ಲಿದ್ದ ಕೂಸುಗಳು ಒಂದನ್ನೊಂದು ನೂಕಾಡಿದ್ದರಿಂದ ಅವಳು ಬಹಳ ತೊಂದರೆಪಡಬೇಕಾಯಿತು. ರೆಬೆಕ್ಕಳು ಯೆಹೋವನಿಗೆ ಪ್ರಾರ್ಥಿಸಿ, “ನನಗೇಕೆ ಹೀಗೆ ಆಗುತ್ತಿದೆ?” ಎಂದು ಕೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಕೆಯ ಗರ್ಭದಲ್ಲಿ ಶಿಶುಗಳು ಒಂದನ್ನೊಂದು ನೂಕಾಡುತ್ತಿದ್ದಾಗ ಆಕೆಯು, “ಹೀಗಾದರೆ ನಾನು ಹೇಗೆ ಬದುಕಬೇಕು” ಎಂದು ಹೇಳಿ ಇದರ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆಕೆಯ ಗರ್ಭದಲ್ಲಿದ್ದ ಅವಳಿ ಮಕ್ಕಳು ಒಂದನ್ನೊಂದು ಒತ್ತರಿಸಿದಾಗ ಆಕೆ, “ನನಗೇತಕ್ಕೆ ಹೀಗಾಗುತ್ತಿದೆ?” ಎಂದುಕೊಂಡು ಸರ್ವೇಶ್ವರ ಸ್ವಾಮಿಯನ್ನು ವಿಚಾರಿಸಲು ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಕೆಯ ಗರ್ಭದಲ್ಲಿ ಶಿಶುಗಳು ಒಂದನ್ನೊಂದು ನೂಕಿಕೊಂಡಾಗ ಆಕೆಯು - ಹೀಗಾದರೆ ನಾನು ಯಾಕೆ ಬದುಕಬೇಕು ಎಂದು ಹೇಳಿ ಇದರ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವದಕ್ಕೆ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವಳ ಗರ್ಭದಲ್ಲಿ ಶಿಶುಗಳು ಒಂದನ್ನೊಂದು ನೂಕಿಕೊಂಡಾಗ ಆಕೆಯು, “ನನಗೆ ಏಕೆ ಹೀಗಾಗುತ್ತಿದೆ?” ಎಂದು ಕೇಳಿ, ಯೆಹೋವ ದೇವರ ಬಳಿಗೆ ವಿಚಾರಿಸುವುದಕ್ಕೆ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:22
7 ತಿಳಿವುಗಳ ಹೋಲಿಕೆ  

(ಹಿಂದಿನ ಕಾಲದಲ್ಲಿ ಇಸ್ರೇಲರು ಪ್ರವಾದಿಯನ್ನು “ದರ್ಶಿ” ಎಂದು ಕರೆಯುತ್ತಿದ್ದರು. ದೇವರಿಂದ ಏನಾದರೂ ಕೇಳಬೇಕಾಗಿದ್ದರೆ, “ದರ್ಶಿಯ ಬಳಿಗೆ ಹೋಗೋಣ” ಎನ್ನುತ್ತಿದ್ದರು.)


ನೀವು ಅವುಗಳಿಗೆ ಅದೇ ರೀತಿಯ ಕಾಣಿಕೆಗಳನ್ನರ್ಪಿಸುತ್ತೀರಿ. ಆ ಸುಳ್ಳು ದೇವರುಗಳಿಗೆ ನೀವು ನಿಮ್ಮ ಮಕ್ಕಳನ್ನು ಬೆಂಕಿಯ ಮೂಲಕ ಆಹುತಿ ಮಾಡುತ್ತೀರಿ. ಈ ಹೊತ್ತಿನ ದಿನದ ತನಕವೂ ಆ ಹೊಲಸು ವಿಗ್ರಹಗಳ ಮೂಲಕ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳುತ್ತಿದ್ದೀರಿ. ನೀವು ನನ್ನ ಬಳಿಗೆ ಬಂದು ನನ್ನ ಸಲಹೆಗಳನ್ನು ಕೇಳಲು ನಿಮ್ಮನ್ನು ನಾನು ಸ್ವಾಗತಿಸಬೇಕೋ? ನಾನು ಒಡೆಯನಾದ ಯೆಹೋವನು. ನನ್ನ ಜೀವದಾಣೆ, ನಾನು ನಿಮಗೆ ಉತ್ತರಿಸುವುದಿಲ್ಲ; ನಿಮಗೆ ಸಲಹೆಗಳನ್ನೂ ಕೊಡುವದಿಲ್ಲ.


ನಂತರ ದಾವೀದನು ಯೆಹೋವನಲ್ಲಿ, “ನಮ್ಮ ಕುಟುಂಬಗಳನ್ನು ಅಪಹರಿಸಿದ ಜನರನ್ನು ನಾನು ಅಟ್ಟಿಸಿಕೊಂಡು ಹೋಗಬೇಕೇ? ನಾನು ಅವರನ್ನು ಸೆರೆಹಿಡಿಯುವೆನೇ?” ಎಂದು ಪ್ರಾರ್ಥಿಸಿದನು. ಯೆಹೋವನು, “ಅವರನ್ನು ಅಟ್ಟಿಸಿಕೊಂಡು ಹೋಗು. ಅವರನ್ನು ನೀನು ಸೆರೆಹಿಡಿಯಬಹುದು. ನಿಮ್ಮ ಕುಟುಂಬಗಳನ್ನು ನೀವು ರಕ್ಷಿಸಬಹುದು” ಎಂದು ಉತ್ತರಿಸಿದನು.


ಸೌಲನು ಯೆಹೋವನಿಗೆ ಪ್ರಾರ್ಥನೆ ಮಾಡಿದನು. ಆದರೆ ಯೆಹೋವನು ಅವನಿಗೆ ಉತ್ತರ ನೀಡಲಿಲ್ಲ. ದೇವರು ಕನಸುಗಳಲ್ಲಿಯೂ ಸೌಲನೊಡನೆ ಮಾತನಾಡಲಿಲ್ಲ. ದೇವರು ಅವನಿಗೆ ಊರೀಮಿನಿಂದಾಗಲಿ ಪ್ರವಾದಿಗಳಿಂದಾಗಲಿ ಉತ್ತರಕೊಡಲಿಲ್ಲ.


ಆಗ ಅವರು ಯೆಹೋವನನ್ನು, “ಸೌಲನು ಇಲ್ಲಿಗೆ ಬರುವನೋ?” ಎಂದು ಕೇಳಿದರು. ಯೆಹೋವನು, “ಸೌಲನು ಸರಕುಗಳ ಹಿಂದೆ ಅಡಗಿಕೊಂಡಿದ್ದಾನೆ” ಎಂದು ಹೇಳಿದನು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಇಸ್ರೇಲ್ ಜನರು ನನ್ನ ಬಳಿಗೆ ಬಂದು ಹೀಗೆ ಮಾಡಬೇಕೆಂದು ನನ್ನನ್ನು ಕೇಳಿಕೊಳ್ಳಲು ಅವಕಾಶ ಕೊಡುವೆನು. ನಾನು ಅವರನ್ನು ಅಭಿವೃದ್ಧಿಪಡಿಸಿ ಅವರ ಸಂಖ್ಯೆಯನ್ನು ಕುರಿಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು.


ದಾವೀದನಿಗಾಗಿ ನಾನು ದೇವರಲ್ಲಿ ಪ್ರಾರ್ಥಿಸಿದ್ದು ಅದು ಮೊದಲನೆಯ ಸಲವಂತೂ ಅಲ್ಲವೇ ಅಲ್ಲ. ನನ್ನ ಮೇಲಾಗಲಿ ನನ್ನ ಬಂಧುಗಳ ಮೇಲಾಗಲಿ ತಪ್ಪು ಹೊರಿಸಬೇಡ. ನಾವೆಲ್ಲ ನಿನ್ನ ಸೇವಕರು. ಈಗ ಏನು ನಡೆಯುತ್ತಿದೆಯೋ ಅದು ನನಗೆ ಸ್ವಲ್ಪವೂ ತಿಳಿದಿಲ್ಲ” ಎಂದು ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು