Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:27 - ಪರಿಶುದ್ದ ಬೈಬಲ್‌

27 ಆ ಬಾಲಕರು ಬೆಳೆದು ದೊಡ್ಡವರಾದರು. ಏಸಾವನು ಚತುರ ಬೇಟೆಗಾರನಾದನು. ಹೊಲದಲ್ಲಿರುವುದು ಅವನಿಗೆ ಪ್ರಿಯವಾಗಿತ್ತು. ಆದರೆ ಯಾಕೋಬನು ಸಾಧು ಮನುಷ್ಯನಾಗಿದ್ದನು. ಅವನು ತನ್ನ ಗುಡಾರದಲ್ಲಿರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆ ಹುಡುಗರಿಬ್ಬರೂ ಬೆಳೆದಾಗ ಅವರಲ್ಲಿ ಏಸಾವನು ಬೇಟೆಯಾಡುವುದರಲ್ಲಿ ನಿಪುಣನಾಗಿದ್ದನು; ಅವನು ಅರಣ್ಯವಾಸಿ. ಯಾಕೋಬನು ಸಾಧು ಮನುಷ್ಯನಾಗಿ ಗುಡಾರಗಳಲ್ಲೇ ವಾಸಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆ ಹುಡುಗರಿಬ್ಬರು ಬೆಳೆದರು. ಏಸಾವನು ಚೂಟಿಯಾದ ಬೇಟೆಗಾರನಾದ, ವನವಾಸಿಯಾದ, ಯಕೋಬನು ಸಾಧುಮನುಷ್ಯ, ಅವನದು ಗುಡಾರಗಳಲ್ಲಿ ವಾಸ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆ ಹುಡುಗರಿಬ್ಬರೂ ಬೆಳೆದಾಗ ಅವರಲ್ಲಿ ಏಸಾವನೆಂಬವನು ಬೇಟೆಯಾಡುವದರಲ್ಲಿ ಜಾಣನಾದನು; ಅವನು ಅರಣ್ಯವಾಸಿ. ಯಾಕೋಬನು ಸಾಧುಮನುಷ್ಯನಾಗಿ ಗುಡಾರಗಳಲ್ಲೇ ವಾಸಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆ ಹುಡುಗರು ಬೆಳೆದಾಗ ಏಸಾವನು ಬೇಟೆಯಾಡುವುದರಲ್ಲಿ ಜಾಣನಾಗಿದ್ದು, ಅಡವಿಯ ಮನುಷ್ಯನಾದನು. ಯಾಕೋಬನು ಗುಡಾರಗಳಲ್ಲಿ ವಾಸಮಾಡುವ ಸಾಧು ಮನುಷ್ಯನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:27
14 ತಿಳಿವುಗಳ ಹೋಲಿಕೆ  

ದೇವರು ಕೊಡುವುದಾಗಿ ವಾಗ್ದಾನ ಮಾಡಿದ್ದ ದೇಶದಲ್ಲಿ ಅವನು ಪ್ರವಾಸಿಗನಂತೆ ವಾಸಮಾಡಿದ್ದು ನಂಬಿಕೆಯಿಂದಲೇ. ಅದೇ ವಾಗ್ದಾನಕ್ಕೆ ಸಹ ಭಾದ್ಯರಾಗಿದ್ದ ಇಸಾಕನೂ ಯಾಕೋಬನೂ ಅವನಂತೆಯೇ ಡೇರೆಗಳಲ್ಲಿ ವಾಸಿಸಿದರು.


ದೇವರು ಆ ಮಗುವಿನ ಸಂಗಡವಿದ್ದ ಕಾರಣ ಆ ಮಗುವು ಬೆಳೆದು ದೊಡ್ಡವನಾದನು; ಕಾಡಿನಲ್ಲಿ ವಾಸವಾಗಿದ್ದು ಚತುರ ಬಿಲ್ಲುಗಾರನಾದನು.


ಯೆಹೋವನ ಮುಂದೆ ಅವನು ಚತುರ ಬೇಟೆಗಾರನಾಗಿದ್ದನು. ಆದ್ದರಿಂದ ಜನರು ಬೇರೆಯವರನ್ನು ಅವನಿಗೆ ಹೋಲಿಸಿ, “ಅವನು ನಿಮ್ರೋದನಂತೆ, ಯೆಹೋವನ ಮುಂದೆ ಚತುರ ಬೇಟೆಗಾರ” ಎಂದು ಹೇಳುತ್ತಿದ್ದರು.


ಇದು ನೋಹನ ಚರಿತ್ರೆ. ಅವನು ತನ್ನ ಜೀವಮಾನವೆಲ್ಲಾ ನೀತಿವಂತನಾಗಿದ್ದನು; ಯಾವಾಗಲೂ ದೇವರನ್ನೇ ಅನುಸರಿಸುತ್ತಿದ್ದನು.


ಪವಿತ್ರರನ್ನೂ ಯಥಾರ್ಥರನ್ನೂ ಗಮನಿಸು. ಶಾಂತಿಪ್ರಿಯರು ಅನೇಕ ಸಂತಾನಗಳನ್ನು ಹೊಂದಿಕೊಳ್ಳುವರು.


ಆಗ ಯೆಹೋವನು, “ನನ್ನ ಸೇವಕನಾದ ಯೋಬನ ಬಗ್ಗೆ ಆಲೋಚಿಸಿದೆಯಾ? ಭೂಮಿಯ ಮೇಲೆ ಅವನಂತೆ ಯಾರೂ ಇಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದಾನೆ; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದಾನೆ” ಎಂದು ಹೇಳಿದನು.


ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದನು; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದನು.


ನೀವು ಅವನಿಗೆ, ‘ನಾವು ಕುರುಬರು. ನಮ್ಮ ಜೀವಮಾನವೆಲ್ಲಾ ನಾವು ಪಶುಗಳನ್ನು ಸಾಕುವುದರ ಮೂಲಕ ಜೀವನ ಮಾಡಿದೆವು. ನಮಗಿಂತ ಮೊದಲು ನಮ್ಮ ಪೂರ್ವಿಕರು ಸಹ ಇದೇ ರೀತಿ ಜೀವಿಸಿದರು’ ಎಂದು ಹೇಳಿರಿ. ಆಗ ಅವನು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲು ನಿಮಗೆ ಅವಕಾಶ ಮಾಡಿಕೊಡುತ್ತಾನೆ. ಈಜಿಪ್ಟಿನ ಜನರು ಕುರುಬರನ್ನು ಇಷ್ಟಪಡುವುದಿಲ್ಲ. ಆದ್ದರಿಂದ ನೀವು ಗೋಷೆನಿನಲ್ಲಿ ವಾಸಿಸುವುದು ಒಳ್ಳೆಯದು” ಎಂದು ಹೇಳಿದನು.


ನೀನು ಕತ್ತಿಯಿಂದಲೇ ಜೀವಿಸುವೆ. ನೀನು ನಿನ್ನ ತಮ್ಮನ ಸೇವಕನಾಗಿರುವೆ. ಆದರೆ ನೀನು ಬಿಡುಗಡೆಯಾಗಲು ಹೋರಾಡಿ ಅವನ ಹಿಡಿತದಿಂದ ಪಾರಾಗುವೆ.”


ಅದಕ್ಕೆ ಯೆಹೋವನು, “ನನ್ನ ಸೇವಕನಾದ ಯೋಬನನ್ನು ಗಮನಿಸಿದೆಯಾ? ಭೂಮಿಯ ಮೇಲೆ ಅವನಂತೆ ಯಾರೂ ಇಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದಾನೆ; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದಾನೆ. ನಿಷ್ಕಾರಣವಾಗಿ ಅವನನ್ನು ನಾಶಪಡಿಸುವಂತೆ ನೀನು ನನ್ನನ್ನು ಒತ್ತಾಯಪಡಿಸಿದೆ. ಆದರೆ ಅವನು ನನಗೆ ಇನ್ನೂ ನಂಬಿಗಸ್ತನಾಗಿದ್ದಾನೆ” ಎಂದು ಹೇಳಿದನು.


ನೀವೆಂದೂ ಮನೆಯನ್ನು ಕಟ್ಟಿಕೊಳ್ಳಬಾರದು, ಬೀಜಗಳನ್ನು ಬಿತ್ತಬಾರದು, ದ್ರಾಕ್ಷಿತೋಟಗಳನ್ನು ಬೆಳಸಬಾರದು. ನೀವು ಅವುಗಳಲ್ಲಿ ಒಂದನ್ನು ಕೂಡ ಎಂದಿಗೂ ಮಾಡಬಾರದು. ನೀವು ಕೇವಲ ಗುಡಾರಗಳಲ್ಲಿ ವಾಸಿಸಬೇಕು. ಆಗ ನೀವು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ವಲಸೆಹೋಗುವ ದೇಶದಲ್ಲಿ ಬಹಳ ಕಾಲದವರೆಗೆ ಇರಬಲ್ಲಿರಿ’ ಎಂದು ಆಜ್ಞಾಪಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು