Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:32 - ಪರಿಶುದ್ದ ಬೈಬಲ್‌

32 ಏಸಾವನು, “ನನಗೆ ಹಸಿವೆಯಿಂದ ಸಾಯುವಂತಾಗಿದೆ. ನಾನು ಸತ್ತುಹೋದರೆ, ನನ್ನ ತಂದೆಯ ಐಶ್ವರ್ಯವೆಲ್ಲ ನನಗೆ ಸಹಾಯ ಮಾಡಲಾರದು. ಆದ್ದರಿಂದ ನಾನು ನನ್ನ ಹಕ್ಕನ್ನು ನಿನಗೆ ಕೊಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಏಸಾವನು, “ಆಗಲಿ” ನನ್ನಂಥ ಸಾಯುವವನಿಗೆ ಚೊಚ್ಚಲತನದಿಂದ ಪ್ರಯೋಜನವೇನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಏಸಾವನು, ‘ಆಗಲಿ, ಮಾರುತ್ತೇನೆ, ಸಾಯುತ್ತಿರುವ ನನಗೆ ಜ್ಯೇಷ್ಠತನದಿಂದ ಪ್ರಯೋನಜವೇನು? ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆಗಲಿ, ನನ್ನಂಥ ಸಾಯುವವನಿಗೆ ಚೊಚ್ಚಲತನದಿಂದ ಪ್ರಯೋಜನವೇನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಏಸಾವನು, “ಇಗೋ, ನಾನು ಸಾಯುತ್ತಿದ್ದೇನೆ, ಜೇಷ್ಠ ಪುತ್ರನ ಹಕ್ಕಿನಿಂದ ನನಗೇನು ಲಾಭ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:32
8 ತಿಳಿವುಗಳ ಹೋಲಿಕೆ  

ನೀವು, “ದೇವರಾದ ಯೆಹೋವನನ್ನು ಆರಾಧಿಸುವುದು ನಿಷ್ಪ್ರಯೋಜಕ. ಆತನ ಕಟ್ಟಳೆಗಳನ್ನು ನಾವು ಅನುಸರಿಸಿದೆವು. ಆದರೆ ಅದರಲ್ಲಿ ನಮಗೇನೂ ಲಾಭವಾಗಲಿಲ್ಲ. ಸಮಾಧಿಯಲ್ಲಿ ಜನರು ರೋದಿಸುವ ಹಾಗೆ ನಮ್ಮ ಪಾಪಗಳಿಗಾಗಿ ನಾವು ರೋದಿಸಿದೆವು. ಆದರೆ ಅದರಿಂದ ನಮಗೇನೂ ಸಹಾಯವಾಗಲಿಲ್ಲ.


ಯಾಕೆಂದರೆ, ‘ದೇವರಿಗೆ ವಿಧೇಯನಾಗಿರುವವನಿಗೆ ಅದರಿಂದ ಯಾವ ಪ್ರಯೋಜನವೂ ಇಲ್ಲ’ ಎಂದು ಅವನೇ ಹೇಳಿದ್ದಾನೆ.


ಅವರು ದೇವರಿಗೆ, ‘ನಮ್ಮಿಂದ ತೊಲಗಿಹೋಗು; ಸರ್ವಶಕ್ತನಾದ ದೇವರು ನಮಗೇನೂ ಮಾಡಲಾರನು!’ ಎಂದು ಹೇಳಿದ್ದರು.


ದುಷ್ಟರು, ‘ಸರ್ವಶಕ್ತನಾದ ದೇವರು ಯಾರು? ನಾವು ಆತನ ಸೇವೆಮಾಡುವ ಅಗತ್ಯವಿಲ್ಲ! ಆತನಿಗೆ ಪ್ರಾರ್ಥಿಸುವುದರಿಂದ ಪ್ರಯೋಜನವೇನೂ ಇಲ್ಲ’ ಎಂದು ಹೇಳುವರು.


“ಕಳೆದುಹೋದ ಎತ್ತು, ಕತ್ತೆ, ಕುರಿ, ಬಟ್ಟೆಬರೆ, ಅಥವಾ ವಸ್ತುವಿನ ವಿಷಯದಲ್ಲಿ ಒಬ್ಬನು, ‘ಇದು ನನ್ನದು’ ಎಂದು ಹೇಳಿದರೆ ಮತ್ತು ಇನ್ನೊಬ್ಬನು, ‘ಇಲ್ಲ, ಇದು ನನ್ನದು’ ಎಂದು ಹೇಳಿದರೆ, ಇವರಿಬ್ಬರೂ ದೇವರ ಸನ್ನಿಧಿಗೆ ಹೋಗಬೇಕು. ತಪ್ಪಿತಸ್ಥನಾರೆಂದು ದೇವರು ತೀರ್ಮಾನಿಸುವನು. ತಪ್ಪಿತಸ್ಥನು ಇನ್ನೊಬ್ಬನಿಗೆ ಕಳೆದುಹೋದ ವಸ್ತುವಿನ ಬೆಲೆಯ ಎರಡರಷ್ಟನ್ನು ಕೊಡಬೇಕು.


ಆದರೆ ಯಾಕೋಬನು, “ನಿನ್ನ ಚೊಚ್ಚಲತನದ ಹಕ್ಕನ್ನು ನೀನು ನನಗೆ ಈ ದಿನ ಮಾರಬೇಕು” ಎಂದು ಹೇಳಿದನು.


ಆದರೆ ಯಾಕೋಬನು, “ನೀನು ಅದನ್ನು ಕೊಡುವುದಾಗಿ ಪ್ರಮಾಣಮಾಡು” ಅಂದನು. ಆದ್ದರಿಂದ ಏಸಾವನು ಯಾಕೋಬನಿಗೆ ಪ್ರಮಾಣ ಮಾಡಿದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕನ್ನು ಯಾಕೋಬನಿಗೆ ಮಾರಿಕೊಂಡನು.


ಏಸಾವನು, “ಅವನ ಹೆಸರು ಯಾಕೋಬ (ಮೋಸಗಾರ). ಅದೇ ಅವನಿಗೆ ಸರಿಯಾದ ಹೆಸರು. ಅವನು ಎರಡು ಸಲ ನನಗೆ ಮೋಸಮಾಡಿದನು. ನನ್ನ ಚೊಚ್ಚಲತನದ ಹಕ್ಕನ್ನು ತೆಗೆದುಕೊಂಡನು. ಈಗ ನನ್ನ ಆಶೀರ್ವಾದವನ್ನೂ ತೆಗೆದುಕೊಂಡನು” ಎಂದು ಹೇಳಿದನು. ನಂತರ ಏಸಾವನು, “ನನಗೋಸ್ಕರ ಯಾವ ಆಶೀರ್ವಾದವೂ ಉಳಿದಿಲ್ಲವೆ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು