Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 26:1 - ಪರಿಶುದ್ದ ಬೈಬಲ್‌

1 ಅಬ್ರಹಾಮನ ಕಾಲದಲ್ಲಿ ಬಂದಿದ್ದ ಕ್ಷಾಮದಂತೆ ಮತ್ತೊಂದು ಕ್ಷಾಮವು ಕಾನಾನ್ ದೇಶಕ್ಕೆ ಬಂದಿತು. ಆದ್ದರಿಂದ ಇಸಾಕನು ಫಿಲಿಷ್ಟಿಯರ ರಾಜನಾದ ಅಬೀಮೆಲೆಕನ ಬಳಿಗೆ ಹೋದನು. ಅಬೀಮೆಲೆಕನು ಗೆರಾರ್ ನಗರದಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಬ್ರಹಾಮನ ಕಾಲದಲ್ಲಿ ಬಂದ ಮೊದಲನೆಯ ಬರಗಾಲವಲ್ಲದೆ ಇನ್ನೊಂದು ಬರಗಾಲವು ಕಾನಾನ್ ದೇಶಕ್ಕೆ ಬಂದಿತು. ಆಗ ಇಸಾಕನು ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಗೆರಾರಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಹಿಂದೆ ಅಬ್ರಹಾಮನ ಕಾಲದಲ್ಲಿ ಬಂದಿದ್ದ ಬರಗಾಲವು ಮತ್ತೊಮ್ಮೆ ಕಾನಾನ್ ನಾಡಿಗೆ ಬಂದಿತು. ಇಸಾಕನು ಫಿಲಿಷ್ಟಿಯರ ಅರಸ ಅಬೀಮೆಲೆಕನನ್ನು ಕಾಣಲು ಗೆರಾರಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಬ್ರಹಾಮನ ಕಾಲದಲ್ಲಿ ಬಂದ ಮೊದಲನೆಯ ಬರವಲ್ಲದೆ ಇನ್ನೂ ಒಂದು ಬರವು ಕಾನಾನ್‍ದೇಶಕ್ಕೆ ಬಂತು. ಆಗ ಇಸಾಕನು ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಗೆರಾರಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅಬ್ರಹಾಮನ ದಿನಗಳಲ್ಲಿ ಬಂದ ಮೊದಲನೆಯ ಬರವಲ್ಲದೆ, ದೇಶದಲ್ಲಿ ಮತ್ತೊಂದು ಬರವು ಬಂದಿತು. ಆಗ ಇಸಾಕನು ಗೆರಾರಿನಲ್ಲಿದ್ದ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 26:1
10 ತಿಳಿವುಗಳ ಹೋಲಿಕೆ  

ಈ ಕಾಲದಲ್ಲಿ ಭೂಮಿಯು ಒಣಗಿಹೋಗಿತ್ತು; ಮಳೆ ಇರಲಿಲ್ಲ. ಅಲ್ಲಿ ಆಹಾರವನ್ನು ಬೆಳೆಯಲು ಸಾಧ್ಯವಿರಲಿಲ್ಲ. ಆದ್ದರಿಂದ ಅಬ್ರಾಮನು ವಾಸಿಸುವುದಕ್ಕಾಗಿ ಈಜಿಪ್ಟಿಗೆ ಹೋದನು.


ಅಬ್ರಹಾಮನು ತೀರಿಕೊಂಡ ಮೇಲೆ, ದೇವರು ಇಸಾಕನನ್ನು ಆಶೀರ್ವದಿಸಿದನು; ಇಸಾಕನು ಬೀರ್‌ಲಹೈರೋಯಿಯಲ್ಲಿ ತನ್ನ ಜೀವನವನ್ನು ಮುಂದುವರೆಸಿದನು.


ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಕುದಿಸಿದ ಅಲಸಂಧಿ ಗುಗ್ಗರಿಯನ್ನೂ ಕೊಟ್ಟನು. ಏಸಾವನು ತಿಂದು ಕುಡಿದು ಅಲ್ಲಿಂದ ಹೊರಟುಹೋದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕುಗಳ ಮೇಲೆ ತನಗೆ ಚಿಂತೆಯಿಲ್ಲದಿರುವುದನ್ನು ತೋರಿಸಿಕೊಂಡನು.


ಕಾನಾನಿನಲ್ಲಿ ಬರಗಾಲ ಭೀಕರವಾಗಿತ್ತು. ಆದ್ದರಿಂದ ದವಸಧಾನ್ಯಗಳನ್ನು ಕೊಂಡುಕೊಳ್ಳಲು ಅನೇಕ ಜನರು ಕಾನಾನಿನಿಂದ ಈಜಿಪ್ಟಿಗೆ ಹೋದರು; ಇಸ್ರೇಲನ ಗಂಡುಮಕ್ಕಳೂ ಅವರೊಂದಿಗೆ ಹೋದರು.


ಬರಗಾಲವು ದೇಶದಲ್ಲಿ ತುಂಬ ಭೀಕರವಾಗಿತ್ತು.


ತರುವಾಯ ಯೆಹೋವನು ಮೋಶೆಗೆ, “ನೀನು ಮತ್ತು ಈಜಿಪ್ಟಿನಿಂದ ನೀನು ಕರೆದುಕೊಂಡು ಬಂದ ಜನರು ಈ ಸ್ಥಳವನ್ನು ಬಿಡಬೇಕು. ನಾನು ಅಬ್ರಹಾಮನಿಗೆ, ಇಸಾಕನಿಗೆ ಮತ್ತು ಯಾಕೋಬನಿಗೆ ವಾಗ್ದಾನ ಮಾಡಿದ ದೇಶಕ್ಕೆ ಹೋಗಿ. ನಾನು ಅವರಿಗೆ ‘ನಿಮ್ಮ ನಂತರ ಜೀವಿಸುವ ನಿಮ್ಮ ಸಂತತಿಯವರಿಗೆ ಆ ದೇಶವನ್ನು ಕೊಡುವೆನು’ ಎಂದು ನಾನು ಅವರಿಗೆ ವಾಗ್ದಾನ ಮಾಡಿದ್ದೇನೆ.


ನ್ಯಾಯಾಧೀಶರು ಆಳುತ್ತಿದ್ದಾಗ ದೇಶದಲ್ಲಿ ಬರಗಾಲ ಬಂತು. ಆಗ ಎಲೀಮೆಲೆಕನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿ ಮತ್ತು ಇಬ್ಬರು ಗಂಡುಮಕ್ಕಳೊಡನೆ ಯೆಹೂದಪ್ರಾಂತದ ಬೆತ್ಲೆಹೇಮ್ ನಗರವನ್ನು ಬಿಟ್ಟು ಮೋವಾಬ್ ಬೆಟ್ಟಪ್ರದೇಶಕ್ಕೆ ಹೋದನು.


ದಾವೀದನ ಕಾಲದಲ್ಲಿ ಒಮ್ಮೆ ಮೂರು ವರ್ಷಗಳವರೆಗೆ ಬರಗಾಲವಿತ್ತು. ದಾವೀದನು ಯೆಹೋವನಲ್ಲಿ ಪ್ರಾರ್ಥಿಸಿದನು. ಆಗ ಯೆಹೋವನು, “ಸೌಲನು ಮತ್ತು ಕೊಲೆಗಾರರಾದ ಅವನ ಕುಟುಂಬದವರು ಈ ಬರಗಾಲಕ್ಕೆ ಕಾರಣ. ಸೌಲನು ಗಿಬ್ಯೋನ್ಯರನ್ನು ಕೊಂದದ್ದರಿಂದ ಈಗಿನ ಬರಗಾಲವು ಬಂದಿದೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು