Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 26:12 - ಪರಿಶುದ್ದ ಬೈಬಲ್‌

12 ಇಸಾಕನು ಆ ಪ್ರದೇಶದಲ್ಲಿ ಬೀಜ ಬಿತ್ತಿದನು; ಅವನಿಗೆ ಅದೇ ವರ್ಷದಲ್ಲಿ ಮಹಾ ಸುಗ್ಗಿಯಾಯಿತು. ಯೆಹೋವನು ಅವನನ್ನು ಹೆಚ್ಚಾಗಿ ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇಸಾಕನು ಆ ದೇಶದಲ್ಲಿ ಬೀಜವನ್ನು ಬಿತ್ತಿ ಅದೇ ವರ್ಷದಲ್ಲಿ ನೂರರಷ್ಟು ಬೆಳೆಯನ್ನು ಕೊಯ್ದನು; ಯೆಹೋವನು ಅವನನ್ನು ಅಭಿವೃದ್ಧಿಪಡಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇಸಾಕನು ಆ ನಾಡಿನಲ್ಲಿ ವ್ಯವಸಾಯ ಮಾಡಿ ಅದೇ ವರ್ಷದಲ್ಲಿ ನೂರ್ಮಡಿ ಬೆಳೆ ಎತ್ತಿದನು. ಸರ್ವೇಶ್ವರ ಸ್ವಾಮಿಯ ಆಶೀರ್ವಾದ ಅವನ ಮೇಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇಸಾಕನು ಆ ದೇಶದಲ್ಲಿ ಬೀಜವನ್ನು ಬಿತ್ತಿ ಅದೇ ವರುಷದಲ್ಲಿ ನೂರರಷ್ಟು ಬೆಳೆಯನ್ನು ಹೊಂದಿದನು; ಯೆಹೋವನು ಅವನನ್ನು ಅಭಿವೃದ್ಧಿಪಡಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇಸಾಕನು ಆ ದೇಶದಲ್ಲಿ ಬಿತ್ತಿದ ವರ್ಷದಲ್ಲಿಯೇ ನೂರರಷ್ಟು ಬೆಳೆಯನ್ನು ಹೊಂದಿದನು. ಯೆಹೋವ ದೇವರು ಅವನನ್ನು ಆಶೀರ್ವದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 26:12
18 ತಿಳಿವುಗಳ ಹೋಲಿಕೆ  

ನಾನು ನಿನ್ನ ಸಂಗಡವಿದ್ದು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಕುಟುಂಬಕ್ಕೂ ಈ ಪ್ರದೇಶಗಳನ್ನೆಲ್ಲ ಕೊಡುವೆನು. ನಾನು ನಿನ್ನ ತಂದೆಯಾದ ಅಬ್ರಹಾಮನಿಗೆ ಪ್ರಮಾಣ ಮಾಡಿದ್ದನ್ನು ನೆರವೇರಿಸುವೆನು.


ಬೇರೆ ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದವು. ಆ ಬೀಜಗಳು ಮೊಳೆತು, ಬೆಳೆದು, ಫಲಬಿಟ್ಟವು. ಕೆಲವು ಗಿಡಗಳು ಮೂವತ್ತರಷ್ಟು ಹೆಚ್ಟಾಗಿ, ಇನ್ನು ಕೆಲವು ಗಿಡಗಳು ಅರವತ್ತರಷ್ಟು ಹೆಚ್ಚಾಗಿ ಮತ್ತು ಬೇರೆ ಕೆಲವು ಗಿಡಗಳು ನೂರರಷ್ಟು ಹೆಚ್ಚಾಗಿ ಫಲಕೊಟ್ಟವು.”


ಆದ್ದರಿಂದ ಮುಂಜಾನೆಯಲ್ಲಿ ಬೀಜಬಿತ್ತಲು ಆರಂಭಿಸು; ಸಾಯಂಕಾಲದ ತನಕ ಕೆಲಸಮಾಡುವುದನ್ನು ನಿಲ್ಲಿಸಬೇಡ, ಯಾಕೆಂದರೆ ಇದು ಸಫಲವಾಗುವುದೋ ಅದು ಸಫಲವಾಗುವುದೋ ಒಂದುವೇಳೆ ಎರಡೂ ಸಫಲವಾಗುವುದೋ ನಿನಗೆ ತಿಳಿಯದು.


ದೇವರೇ, ನಮ್ಮ ದೇವರೇ, ನಮ್ಮನ್ನು ಆಶೀರ್ವದಿಸು. ನಮ್ಮ ಭೂಮಿಯು ಮಹಾಸುಗ್ಗಿಯನ್ನು ಕೊಡಲಿ.


ಯೆಹೋವನು ನನ್ನ ಒಡೆಯನನ್ನು ಪ್ರತಿಯೊಂದರಲ್ಲಿಯೂ ಬಹಳವಾಗಿ ಆಶೀರ್ವದಿಸಿದ್ದಾನೆ. ನನ್ನ ಒಡೆಯನು ಮಹಾವ್ಯಕ್ತಿಯಾಗಿದ್ದಾನೆ. ಯೆಹೋವನು ಅಬ್ರಹಾಮನಿಗೆ ಅನೇಕ ಕುರಿಹಿಂಡುಗಳನ್ನೂ ದನಕರುಗಳ ಮಂದೆಗಳನ್ನೂ ಕೊಟ್ಟಿದ್ದಾನೆ. ಅಬ್ರಹಾಮನಿಗೆ ಬೇಕಾದಷ್ಟು ಬೆಳ್ಳಿಬಂಗಾರಗಳಿವೆ. ಅನೇಕ ಸೇವಕರಿದ್ದಾರೆ. ಅನೇಕ ಒಂಟೆಗಳೂ ಕತ್ತೆಗಳೂ ಇವೆ.


ಅಬ್ರಹಾಮನು ಬಹಳ ವೃದ್ಧನಾದನು. ಯೆಹೋವನು ಅಬ್ರಹಾಮನನ್ನೂ ಅವನು ಮಾಡಿದ ಪ್ರತಿಯೊಂದನ್ನೂ ಆಶೀರ್ವದಿಸಿದನು.


ನಾನು ಬೀಜವನ್ನು ಬಿತ್ತಿದೆನು; ಅಪೊಲ್ಲೋಸನು ನೀರನ್ನು ಹಾಕಿದನು. ಆದರೆ ಬೀಜವನ್ನು ಬೆಳೆಯಿಸಿದವನು ದೇವರೇ.


“ಈ ಜನರು ನೆಮ್ಮದಿಯಿಂದ ಭೂಮಿಯ ಮೇಲೆ ನಡೆಯುವರು. ಅವರ ದ್ರಾಕ್ಷಾಲತೆಗಳು ದ್ರಾಕ್ಷಿಹಣ್ಣನ್ನು ಕೊಡುವವು. ದೇಶವು ಸಮೃದ್ಧಿಯಾದ ಬೆಳೆಯನ್ನು ಕೊಡುವದು. ಆಕಾಶವು ಮಳೆಯನ್ನು ಸುರಿಸುವದು. ಇವೆಲ್ಲವನ್ನು ನಾನು ನನ್ನ ಜನರಿಗೆ ಕೊಡುವೆನು.


ಯೆಹೋವನು ಯೋಬನ ಜೀವಿತದ ಅಂತಿಮ ಸ್ಥಿತಿಯನ್ನು ಮೊದಲನೆ ಸ್ಥಿತಿಗಿಂತಲೂ ಹೆಚ್ಚಾಗಿ ಆಶೀರ್ವದಿಸಿದನು. ಯೋಬನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಒಂದು ಸಾವಿರ ಜೊತೆ ಎತ್ತುಗಳೂ ಒಂದು ಸಾವಿರ ಹೆಣ್ಣು ಕತ್ತೆಗಳೂ ಇದ್ದವು.


ನಾನು ಬಂದಾಗ ನಿನಗೆ ಸ್ವಲ್ಪವಿತ್ತು, ಈಗ ನಿನಗೆ ಬೇಕಾದಷ್ಟಿದೆ. ನಾನು ನಿನಗೋಸ್ಕರ ಮಾಡಿದ್ದನ್ನೆಲ್ಲ ಯೆಹೋವನು ಆಶೀರ್ವದಿಸಿದನು. ನಾನು ನನಗೋಸ್ಕರ ಕೆಲಸ ಮಾಡುವ ಸಮಯವಿದು. ನನ್ನ ಸ್ವಂತ ಮನೆಗೆ ಒದಗಿಸುವ ಸಮಯವಿದು” ಎಂದು ಹೇಳಿದನು.


ಬೇರೆ ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದವು. ಅವು ಬೆಳೆದು ಕಾಳುಬಿಟ್ಟವು. ಕೆಲವು ಗಿಡಗಳು ನೂರರಷ್ಟು, ಕೆಲವು ಗಿಡಗಳು ಅರವತ್ತರಷ್ಟು, ಇನ್ನು ಕೆಲವು ಮೂವತ್ತರಷ್ಟು ಕಾಳುಬಿಟ್ಟವು.


ಹೊಲಗಳು ಯಥೇಚ್ಚವಾಗಿ ಧಾನ್ಯಬೆಳೆಯಲಿ. ಬೆಟ್ಟಗಳು ಬೆಳೆಗಳಿಂದ ತುಂಬಿಹೋಗಲಿ. ಹೊಲಗಳು ಲೆಬನೋನಿನಲ್ಲಿರುವ ಹೊಲಗಳಂತೆ ಫಲವತ್ತಾಗಿರಲಿ. ಬಯಲುಗಳು ಹುಲ್ಲಿನಿಂದ ಆವೃತಿಯಾಗಿರುವಂತೆ ಪಟ್ಟಣಗಳು ಜನರಿಂದ ತುಂಬಿಹೋಗಲಿ.


“ಒಳ್ಳೆಯ ನೆಲದ ಮೇಲೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿ ಅದನ್ನು ಅರ್ಥಮಾಡಿಕೊಂಡ ವ್ಯಕ್ತಿಯೇ ಬೀಜ ಬಿದ್ದ ಒಳ್ಳೆಯ ನೆಲವಾಗಿರುವನು. ಆ ಮನುಷ್ಯನು ಬೆಳೆದು ಕೆಲವು ಸಾರಿ ನೂರರಷ್ಟು ಕೆಲವು ಸಾರಿ ಅರವತ್ತರಷ್ಟು ಮತ್ತು ಕೆಲವು ಸಾರಿ ಮೂವತ್ತರಷ್ಟು ಫಲ ಕೊಡುವನು” ಎಂದು ಹೇಳಿದನು.


ನಾವು ನಿನಗೆ ಕೇಡುಮಾಡಲಿಲ್ಲ. ಅದೇ ರೀತಿಯಲ್ಲಿ ಈಗ ನೀನೂ ನಮಗೆ ಕೇಡುಮಾಡುವುದಿಲ್ಲವೆಂದು ಪ್ರಮಾಣಮಾಡಬೇಕು. ನಾವು ನಿನ್ನನ್ನು ದೂರ ಕಳುಹಿಸಿದರೂ ಸಮಾಧಾನದಿಂದ ಕಳುಹಿಸಿಕೊಟ್ಟೆವು. ಯೆಹೋವನು ನಿನ್ನನ್ನು ಆಶೀರ್ವದಿಸಿದ್ದಾನೆ ಎಂಬುದು ಈಗ ಸ್ಪಷ್ಟವಾಗಿದೆ” ಎಂದು ಹೇಳಿದರು.


ಐಶ್ವರ್ಯವು ಯೆಹೋವನ ಆಶೀರ್ವಾದವೇ. ಶ್ರಮದ ಕೆಲಸವು ಅದನ್ನು ಹೆಚ್ಚಿಸಲಾರದು.


ಅಬ್ರಹಾಮನು ತೀರಿಕೊಂಡ ಮೇಲೆ, ದೇವರು ಇಸಾಕನನ್ನು ಆಶೀರ್ವದಿಸಿದನು; ಇಸಾಕನು ಬೀರ್‌ಲಹೈರೋಯಿಯಲ್ಲಿ ತನ್ನ ಜೀವನವನ್ನು ಮುಂದುವರೆಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು