Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 26:25 - ಪರಿಶುದ್ದ ಬೈಬಲ್‌

25 ಆದ್ದರಿಂದ ಆ ಸ್ಥಳದಲ್ಲಿ ಇಸಾಕನು ಯಜ್ಞವೇದಿಕೆಯನ್ನು ಕಟ್ಟಿ ಯೆಹೋವನನ್ನು ಆರಾಧಿಸಿದನು. ಇಸಾಕನು ಆ ಸ್ಥಳದಲ್ಲಿ ಪಾಳೆಯಮಾಡಿಕೊಂಡನು; ಅವನ ಸೇವಕರು ಅಲ್ಲಿ ಒಂದು ಬಾವಿಯನ್ನು ತೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇಸಾಕನು ಯಜ್ಞವೇದಿಯನ್ನು ಕಟ್ಟಿಸಿ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿ ಅಲ್ಲಿ ತನ್ನ ಗುಡಾರವನ್ನು ಹಾಕಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಇಸಾಕನು ಒಂದು ಬಲಿಪೀಠವನ್ನು ಕಟ್ಟಿಸಿ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆ ಮಾಡಿ ಆರಾಧಿಸಿ, ಅಲ್ಲಿ ಗುಡಾರ ಹಾಕಿಸಿಕೊಂಡನು. ಅವನ ಕೆಲಸಗಾರರು ಅಲ್ಲಿಯೂ ಒಂದು ಬಾವಿಯನ್ನು ತೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇಸಾಕನು ಯಜ್ಞವೇದಿಯನ್ನು ಕಟ್ಟಿಸಿ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿ ಅಲ್ಲಿ ತನ್ನ ಗುಡಾರವನ್ನು ಹಾಕಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ಇಸಾಕನು ಅಲ್ಲಿ ಬಲಿಪೀಠವನ್ನು ಕಟ್ಟಿ, ಯೆಹೋವ ದೇವರ ಹೆಸರನ್ನು ಹೇಳಿಕೊಂಡು, ತನ್ನ ಗುಡಾರವನ್ನು ಹಾಕಿದನು. ಆಗ ಇಸಾಕನ ಸೇವಕರು ಅಲ್ಲಿ ಒಂದು ಬಾವಿಯನ್ನು ಅಗೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 26:25
11 ತಿಳಿವುಗಳ ಹೋಲಿಕೆ  

ನಾನು ನಿನಗೆ ಕೃತಜ್ಞತಾ ಕಾಣಿಕೆಯನ್ನು ಅರ್ಪಿಸುವೆನು. ಆತನ ಹೆಸರಿನಲ್ಲಿ ಪ್ರಾರ್ಥಿಸುವೆನು.


ಆದ್ದರಿಂದ ಅಬ್ರಾಮನು ತನ್ನ ಗುಡಾರಗಳನ್ನು ಕೀಳಿಸಿ, ದೊಡ್ಡ ಮರಗಳಿರುವ ಮಮ್ರೆಯ ಸಮೀಪಕ್ಕೆ ಹೋಗಿ ವಾಸಿಸತೊಡಗಿದನು. ಇದು ಹೆಬ್ರೋನ್ ನಗರಕ್ಕೆ ಸಮೀಪದಲ್ಲಿತ್ತು. ಆ ಸ್ಥಳದಲ್ಲಿ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಯಜ್ಞವೇದಿಕೆಯನ್ನು ಕಟ್ಟಿದನು.


ಆಗ ಮೋಶೆಯು ಒಂದು ಯಜ್ಞವೇದಿಕೆಯನ್ನು ಕಟ್ಟಿದನು. ಮೋಶೆಯು ಯಜ್ಞವೇದಿಕೆಗೆ, “ಯೆಹೋವನು ನನ್ನ ಧ್ವಜ” ಎಂದು ಹೆಸರಿಟ್ಟನು.


ದೇವರು ಯಾಕೋಬನಿಗೆ, “ನೀನು ಬೇತೇಲ್ ಪಟ್ಟಣಕ್ಕೆ ಹೋಗಿ ಅಲ್ಲೇ ವಾಸಿಸು ಮತ್ತು ಆರಾಧನೆಗಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಿಸು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿಹೋಗುತ್ತಿದ್ದಾಗ ದೇವರಾದ ‘ಏಲ್’ ನಿನಗೆ ಅಲ್ಲಿ ಕಾಣಿಸಿಕೊಳ್ಳಲಿಲ್ಲವೇ! ಆತನ ಆರಾಧನೆಗಾಗಿ ಅಲ್ಲಿ ಯಜ್ಞವೇದಿಕೆಯನ್ನು ಕಟ್ಟಿಸು” ಎಂದು ಹೇಳಿದನು.


ದೇವರನ್ನು ಆರಾಧಿಸುವುದಕ್ಕಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಸಿ ಆ ಸ್ಥಳಕ್ಕೆ “ಇಸ್ರೇಲರ ದೇವರಾದ ಏಲೆಲೋಹೇ” ಎಂದು ಹೆಸರಿಟ್ಟನು.


ದೇವರು ತಿಳಿಸಿದ್ದ ಸ್ಥಳಕ್ಕೆ ಬಂದರು. ಅಲ್ಲಿ ಅಬ್ರಹಾಮನು ಒಂದು ಯಜ್ಞವೇದಿಕೆಯನ್ನು ಕಟ್ಟಿ ಅದರ ಮೇಲೆ ಕಟ್ಟಿಗೆಯನ್ನು ಜೋಡಿಸಿದನು; ಆಮೇಲೆ ಅವನು ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಕಟ್ಟಿ ಯಜ್ಞವೇದಿಕೆಯ ಮೇಲಿದ್ದ ಕಟ್ಟಿಗೆಯ ಮೇಲೆ ಮಲಗಿಸಿದನು.


ಅಬ್ರಾಮನು ಯಜ್ಞವೇದಿಕೆಯನ್ನು ಕಟ್ಟಿದ್ದು ಈ ಸ್ಥಳದಲ್ಲೇ. ಅಬ್ರಾಮನು ಯೆಹೋವನನ್ನು ಆರಾಧಿಸಿದ್ದು ಈ ಸ್ಥಳದಲ್ಲೇ.


ಆಮೇಲೆ ನೋಹನು ಯೆಹೋವನಿಗಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಿ ಶುದ್ಧವಾದ ಕೆಲವು ಪಶುಪಕ್ಷಿಗಳನ್ನು ತೆಗೆದುಕೊಂಡು ಅವುಗಳನ್ನು ದೇವರಿಗೆ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮ ಮಾಡಿದನು.


ಸೇತನು ಒಬ್ಬ ಮಗನನ್ನು ಪಡೆದನು. ಆ ಮಗುವಿಗೆ ಅವನು ಎನೋಷ್ ಎಂದು ಹೆಸರಿಟ್ಟನು. ಆ ಕಾಲದಲ್ಲಿ ಜನರು ಯೆಹೋವನ ಮೇಲೆ ಭರವಸೆ ಇಡಲಾರಂಭಿಸಿದರು.


ಆ ದಿನ, ಇಸಾಕನ ಸೇವಕರು ಬಂದು, ತಾವು ತೋಡಿದ್ದ ಬಾವಿಯ ಬಗ್ಗೆ ಹೇಳುತ್ತಾ, “ಬಾವಿಯಲ್ಲಿ ನಮಗೆ ನೀರಿನ ಸೆಲೆ ಸಿಕ್ಕಿತು” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು