Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:43 - ಪರಿಶುದ್ದ ಬೈಬಲ್‌

43 ಆದ್ದರಿಂದ ಮಗನೇ, ನಾನು ಹೇಳಿದಂತೆ ಮಾಡು. ನನ್ನ ಅಣ್ಣನಾದ ಲಾಬಾನನು ಹಾರಾನಿನಲ್ಲಿ ವಾಸವಾಗಿದ್ದಾನೆ. ಅವನ ಬಳಿಗೆ ಹೋಗಿ ಅಡಗಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಆದುದರಿಂದ ಮಗನೇ, ನನ್ನ ಮಾತಿಗೆ ವಿಧೇಯನಾಗು; ನೀನು ಎದ್ದು ಹಾರಾನಿನಲ್ಲಿರುವ ನನ್ನ ಅಣ್ಣನಾದ ಲಾಬಾನನ ಬಳಿಗೆ ಹೊರಟುಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಆದುದರಿಂದ ಮಗನೇ, ನನ್ನ ಮಾತನ್ನು ಕೇಳು; ನೀನು ಎದ್ದು ಖಾರಾನ್ ಊರಿನಲ್ಲಿರುವ ನನ್ನ ಅಣ್ಣ ಲಾಬಾನನ ಬಳಿಗೆ ಓಡಿಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಆದದರಿಂದ ಮಗನೇ, ನನ್ನ ಮಾತನ್ನು ಕೇಳು; ನೀನು ಎದ್ದು ಖಾರಾನ್ ಊರಿನಲ್ಲಿರುವ ನನ್ನಣ್ಣನಾದ ಲಾಬಾನನ ಬಳಿಗೆ ಓಡಿಹೋಗಿ ಕೆಲವು ಕಾಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಆದ್ದರಿಂದ ಈಗ ನನ್ನ ಮಗನೇ, ನನ್ನ ಮಾತಿಗೆ ವಿಧೇಯನಾಗು. ಎದ್ದು ಹಾರಾನಿನಲ್ಲಿರುವ ನನ್ನ ಸಹೋದರ ಲಾಬಾನನ ಬಳಿಗೆ ಓಡಿಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:43
14 ತಿಳಿವುಗಳ ಹೋಲಿಕೆ  

ಆದ್ದರಿಂದ ಮಗನೇ, ನನ್ನ ಮಾತನ್ನು ಕೇಳು ಮತ್ತು ನಾನು ಹೇಳಿದ್ದನ್ನು ಮಾಡು.


ತೆರಹನು ತನ್ನ ಕುಟುಂಬವನ್ನು ಕರೆದುಕೊಂಡು ಬಾಬಿಲೋನಿನ ಊರ್ ಎಂಬ ಸ್ವಂತ ಸ್ಥಳದಿಂದ ಹೊರಟು ಕಾನಾನಿಗೆ ಪ್ರಯಾಣ ಮಾಡಿದನು. ತೆರಹನು ತನ್ನ ಮಗನಾದ ಅಬ್ರಾಮನನ್ನೂ ತನ್ನ ಮೊಮ್ಮಗನೂ ಹಾರಾನನಿಗೆ ಮಗನೂ ಆಗಿರುವ ಲೋಟನನ್ನೂ ಮತ್ತು ತನಗೆ ಸೊಸೆಯೂ ಅಬ್ರಾಮನ ಹೆಂಡತಿಯೂ ಆಗಿರುವ ಸಾರಯಳನ್ನೂ ಕರೆದುಕೊಂಡು ಹಾರಾನ್ ಪಟ್ಟಣಕ್ಕೆ ಹೋಗಿ ಅಲ್ಲೇ ವಾಸಿಸಲು ತೀರ್ಮಾನಿಸಿದನು.


ಅದಕ್ಕೆ ರೆಬೆಕ್ಕಳು ಅವನಿಗೆ, “ಅವನು ನಿನಗೆ ಶಾಪಕೊಟ್ಟರೆ, ಆ ಶಾಪವು ನನಗಾಗಲಿ. ನಾನು ಹೇಳಿದಂತೆ ಮಾಡು. ನನಗೋಸ್ಕರ ಆಡುಗಳನ್ನು ತೆಗೆದುಕೊಂಡು ಬಾ” ಎಂದು ಹೇಳಿದಳು.


ಪೇತ್ರ ಮತ್ತು ಉಳಿದ ಅಪೊಸ್ತಲರು, “ನಾವು ವಿಧೇಯರಾಗಬೇಕಾದದ್ದು ದೇವರಿಗೇ ಹೊರತು ನಿಮಗಲ್ಲ!


‘ರೇಕಾಬನ ಮಗನಾದ ಯೋನಾದಾಬನು ತನ್ನ ಮಕ್ಕಳಿಗೆ ದ್ರಾಕ್ಷಾರಸವನ್ನು ಕುಡಿಯಬೇಡಿರೆಂದು ಹೇಳಿದನು. ಅವನ ಆಜ್ಞೆಯನ್ನು ಪಾಲಿಸಲಾಗಿದೆ. ಇಂದಿನವರೆಗೂ ಯೋನಾದಾಬನ ಸಂತಾನದವರು ತಮ್ಮ ಪೂರ್ವಿಕರ ಆಜ್ಞೆಯನ್ನು ಪಾಲಿಸಿದ್ದಾರೆ. ಅವರು ದ್ರಾಕ್ಷಾರಸವನ್ನು ಕುಡಿಯುವುದಿಲ್ಲ. ನಾನೇ ನಿಮ್ಮ ದೇವರಾದ ಯೆಹೋವನು. ನಾನು ಯೆಹೂದದ ಜನರಾದ ನಿಮಗೆ ಮತ್ತೆಮತ್ತೆ ಸಂದೇಶಗಳನ್ನು ಕೊಟ್ಟಿದ್ದೇನೆ. ಆದರೆ ನೀವು ನನ್ನ ಆಜ್ಞೆಗಳನ್ನು ಪಾಲಿಸಲಿಲ್ಲ.


ತನ್ನ ತಂದೆಯನ್ನು ಗೇಲಿಮಾಡುವವನಾಗಲಿ ವೃದ್ಧ ತಾಯಿಯನ್ನು ಕಡೆಗಣಿಸುವವನಾಗಲಿ ದಂಡನೆ ಹೊಂದುವನು. ಕಾಗೆಗಳೂ ಕ್ರೂರಪಕ್ಷಿಗಳೂ ಅವನ ಕಣ್ಣುಗಳನ್ನು ತಿನ್ನುವಂತಿರುವುದು ಆ ದಂಡನೆ.


ಇದಲ್ಲದೆ ಯಾಕೋಬನು ತನ್ನ ತಂದೆತಾಯಿಗಳಿಗೆ ವಿಧೇಯನಾಗಿ ಪದ್ದನ್‌ಅರಾಮಿಗೆ ಹೋದದ್ದೂ ಏಸಾವನಿಗೆ ಗೊತ್ತಾಯಿತು.


ರೆಬೆಕ್ಕಳಿಗೆ ಒಬ್ಬ ಅಣ್ಣನಿದ್ದನು. ಅವನ ಹೆಸರು ಲಾಬಾನ. ನಡೆದ ಸಂಗತಿಗಳನ್ನೆಲ್ಲ ರೆಬೆಕ್ಕಳು ಅವನಿಗೆ ತಿಳಿಸಿದಳು. ಲಾಬಾನನು ಆಕೆಯ ಮಾತುಗಳನ್ನೆಲ್ಲ ಕೇಳಿದಾಗ ಮತ್ತು ಉಂಗುರವನ್ನು ಮತ್ತು ಕೈಗಳಲ್ಲಿದ್ದ ಬಳೆಗಳನ್ನು ಕಂಡಾಗ ಬಾವಿಯ ಬಳಿಗೆ ಓಡಿಹೋದನು. ಬಾವಿಯ ಬಳಿಯಲ್ಲಿ ಒಂಟೆಗಳ ಹತ್ತಿರ ಆ ಸೇವಕನು ನಿಂತುಕೊಂಡಿದ್ದನು.


ಯಾಕೋಬನು ಬೇರ್ಷೆಬವನ್ನು ಬಿಟ್ಟು ಹಾರಾನಿಗೆ ಹೋದನು.


ಏಸಾವನು ಯಾಕೋಬನನ್ನು ಕೊಲ್ಲಬೇಕೆಂದಿರುವುದು ರೆಬೆಕ್ಕಳಿಗೆ ತಿಳಿಯಿತು. ಆಕೆ ಯಾಕೋಬನನ್ನು ಕರೆಸಿ ಅವನಿಗೆ, “ಕೇಳು, ನಿನ್ನ ಅಣ್ಣನಾದ ಏಸಾವನು ನಿನ್ನನ್ನು ಕೊಲ್ಲಬೇಕೆಂದಿದ್ದಾನೆ.


ಅಂತೆಯೇ ಯಾಕೋಬನು ಪದ್ದನ್‌ಅರಾಮಿಗೆ ಹೊರಟು ರೆಬೆಕ್ಕಳ ಅಣ್ಣನಾದ ಲಾಬಾನನ ಬಳಿಗೆ ಹೋದನು. ಬೆತೂವೇಲನು ಲಾಬಾನನ ಮತ್ತು ರೆಬೆಕ್ಕಳ ತಂದೆ. ರೆಬೆಕ್ಕಳು ಯಾಕೋಬನ ಮತ್ತು ಏಸಾವನ ತಾಯಿ.


ದೇವರು ಯಾಕೋಬನಿಗೆ, “ನೀನು ಬೇತೇಲ್ ಪಟ್ಟಣಕ್ಕೆ ಹೋಗಿ ಅಲ್ಲೇ ವಾಸಿಸು ಮತ್ತು ಆರಾಧನೆಗಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಿಸು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿಹೋಗುತ್ತಿದ್ದಾಗ ದೇವರಾದ ‘ಏಲ್’ ನಿನಗೆ ಅಲ್ಲಿ ಕಾಣಿಸಿಕೊಳ್ಳಲಿಲ್ಲವೇ! ಆತನ ಆರಾಧನೆಗಾಗಿ ಅಲ್ಲಿ ಯಜ್ಞವೇದಿಕೆಯನ್ನು ಕಟ್ಟಿಸು” ಎಂದು ಹೇಳಿದನು.


ಇಸಾಕನು ನಲವತ್ತು ವರ್ಷದವನಾಗಿದ್ದಾಗ ರೆಬೆಕ್ಕಳನ್ನು ಮದುವೆಯಾದನು. ರೆಬೆಕ್ಕಳು ಪದ್ದನ್ ಅರಾಮಿನವಳು. ಆಕೆ ಬೆತೂವೇಲನ ಮಗಳು ಮತ್ತು ಅರಾಮ್ಯನಾದ ಲಾಬಾನನ ತಂಗಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು