Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 28:12 - ಪರಿಶುದ್ದ ಬೈಬಲ್‌

12 ಯಾಕೋಬನಿಗೆ ಒಂದು ಕನಸಾಯಿತು. ಆ ಕನಸಿನಲ್ಲಿ ಒಂದು ಏಣಿ ನೆಲದ ಮೇಲೆ ನಿಂತಿತ್ತು, ಅದರ ತುದಿ ಆಕಾಶವನ್ನು ಮುಟ್ಟಿತ್ತು. ದೇವದೂತರು ಅದರಲ್ಲಿ ಮೇಲೆರುತ್ತಾ ಕೆಳಗಿಳಿಯುತ್ತಾ ಇರುವುದನ್ನು ಯಾಕೋಬನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆ ರಾತ್ರಿ ಅವನು ಒಂದು ಕನಸು ಕಂಡನು. ಆ ಕನಸಿನಲ್ಲಿ ಒಂದು ಏಣಿಯು ಭೂಮಿಯ ಮೇಲೆ ನಿಂತಿತು. ಅದರ ತುದಿ ಆಕಾಶವನ್ನು ಮುಟ್ಟಿತು. ಅದರ ಮೇಲೆ ದೇವ ದೂತರು ಏರುತ್ತಾ ಇಳಿಯುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆ ರಾತ್ರಿ ಅವನಿಗೆ ಒಂದು ಕನಸು ಬಿತ್ತು, ಆ ಕನಸಿನಲ್ಲಿ ಒಂದು ನಿಚ್ಚಣಿಗೆ ನೆಲದ ಮೆಲೆ ನಿಂತಿತ್ತು; ಅದರ ತುದಿ ಆಕಾಶವನ್ನು ಮುಟ್ಟಿತ್ತು. ಅದರ ಮೇಲೆ ದೇವದೂತರು ಹತ್ತುತ್ತಾ ಇಳಿಯುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆ ರಾತ್ರಿ ಅವನು ಕನಸುಕಂಡನು. ಆ ಕನಸಿನಲ್ಲಿ ಒಂದು ನಿಚ್ಚಣಿಗೆ ನೆಲದ ಮೇಲೆ ನಿಂತಿತ್ತು; ಅದರ ತುದಿ ಆಕಾಶವನ್ನು ಮುಟ್ಟಿತ್ತು; ಅದರ ಮೇಲೆ ದೇವದೂತರು ಹತ್ತುತ್ತಾ ಇಳಿಯುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಅವನು ಒಂದು ಕನಸುಕಂಡನು. ಏಣಿಯು ಭೂಮಿಯ ಮೇಲೆ ನಿಂತಿತ್ತು. ಅದರ ತುದಿಯು ಪರಲೋಕಕ್ಕೆ ಮುಟ್ಟಿತ್ತು. ದೇವದೂತರು ಅದರ ಮೇಲೆ ಏರುತ್ತಾ ಇಳಿಯುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 28:12
24 ತಿಳಿವುಗಳ ಹೋಲಿಕೆ  

ಅದಲ್ಲದೆ ಯೇಸು, “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆ ದೇವದೂತರುಗಳು ಏರಿಹೋಗುವುದನ್ನೂ ಕೆಳಗೆ ಇಳಿದುಬರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು.


ದೇವರು, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ, ನಾನು ಅವನಿಗೆ ನನ್ನನ್ನು ದರ್ಶನದಲ್ಲಿ ಗೊತ್ತುಪಡಿಸಿಕೊಳ್ಳುವೆನು ಅಥವಾ ಸ್ವಪ್ನದಲ್ಲಿ ಅವನ ಸಂಗಡ ಮಾತಾಡುವೆನು.


ಈ ಸಂಗತಿಗಳಾದ ಮೇಲೆ, ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ಸಂದೇಶ ಬಂದಿತು. ದೇವರು ಅವನಿಗೆ, “ಅಬ್ರಾಮನೇ ಭಯಪಡಬೇಡ; ನಾನೇ ನಿನಗೆ ಗುರಾಣಿಯಾಗಿದ್ದೇನೆ. ನಾನು ನಿನಗೆ ದೊಡ್ಡ ಪ್ರತಿಫಲವನ್ನು ಕೊಡುತ್ತೇನೆ” ಎಂದು ಹೇಳಿದನು.


ಸಾಯಂಕಾಲವಾಯಿತು, ಸೂರ್ಯ ಮುಳುಗತೊಡಗಿದಾಗ ಅಬ್ರಾಮನಿಗೆ ಗಾಢ ನಿದ್ರೆ ಬಂದಿತು. ಅವನು ನಿದ್ರೆ ಮಾಡುತ್ತಿರುವಾಗ ಕಾರ್ಗತ್ತಲಾಯಿತು.


ದೇವದೂತರೆಲ್ಲರೂ ದೇವರ ಸೇವೆಮಾಡುವ ಆತ್ಮಗಳಾಗಿದ್ದಾರೆ ಮತ್ತು ರಕ್ಷಣೆಯನ್ನು ಹೊಂದಿಕೊಳ್ಳುವ ಜನರ ಸಹಾಯಕ್ಕಾಗಿ ಕಳುಹಿಸಲ್ಪಟ್ಟವರಾಗಿದ್ದಾರೆ.


ಬಾಬಿಲೋನಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನಿಗೆ ಒಂದು ದರ್ಶನವಾಯಿತು. ತನ್ನ ಹಾಸಿಗೆಯ ಮೇಲೆ ಮಲಗಿರುವಾಗ ದಾನಿಯೇಲನು ಈ ದರ್ಶನಗಳನ್ನು ಕಂಡನು. ದಾನಿಯೇಲನು ತನ್ನ ಕನಸಿನಲ್ಲಿ ಕಂಡದ್ದನ್ನು ಬರೆದಿಟ್ಟನು.


ಪೂರ್ವಕಾಲದಲ್ಲಿ ದೇವರು ಪ್ರವಾದಿಗಳ ಮೂಲಕ ನಮ್ಮ ಜನರೊಂದಿಗೆ ಹಲವಾರು ವಿಧದಲ್ಲಿ ಅನೇಕ ಸಲ ಮಾತನಾಡಿದನು.


ನಾನೇ ನಿನ್ನ ಸಂಗಡವಿದ್ದೇನೆ. ಆದ್ದರಿಂದ ಚಿಂತಿಸದಿರು. ನಾನೇ ನಿನ್ನ ದೇವರು, ಆದ್ದರಿಂದ ಭಯಪಡಬೇಡ. ನಿನ್ನನ್ನು ಬಲಪಡಿಸುವೆನು. ನಿನಗೆ ಸಹಾಯ ಮಾಡುವೆನು. ನನ್ನ ನೀತಿಯ ಬಲಗೈಯಿಂದ ನಿನಗೆ ಆಧಾರ ಕೊಡುವೆನು.


ಯೋಸೇಫನು ಹೀಗೆ ಆಲೋಚಿಸಿಕೊಂಡನಂತರ, ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡನು. ಆ ದೂತನು, “ದಾವೀದನ ಮಗನಾದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯಾಗಿ ಸ್ವೀಕರಿಸಲು ಭಯಪಡಬೇಡ. ಆಕೆ ಪವಿತ್ರಾತ್ಮನ ಪ್ರಭಾವದಿಂದ ಗರ್ಭಿಣಿಯಾಗಿದ್ದಾಳೆ.


ಆದರೆ ಅಂದು ರಾತ್ರಿ ದೇವರು ಅಬೀಮೆಲೆಕನೊಡನೆ ಕನಸಿನಲ್ಲಿ ಮಾತಾಡಿ, “ನೀನು ಸಾಯುವೆ. ನೀನು ತೆಗೆದುಕೊಂಡಿರುವ ಆ ಸ್ತ್ರೀಗೆ ಮದುವೆಯಾಗಿದೆ” ಎಂದು ಹೇಳಿದನು.


ಹೆರೋದನು ಸತ್ತನಂತರ, ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡನು. ಯೋಸೇಫನು ಈಜಿಪ್ಟಿನಲ್ಲಿ ಇರುವಾಗಲೇ ಇದು ಸಂಭವಿಸಿತು.


ದೇವರು ಲೋಕವನ್ನೆಲ್ಲಾ ದೃಷ್ಟಿಸಿ ನೋಡಿ ತನ್ನ ನಂಬಿಗಸ್ತರನ್ನು ಕಂಡುಕೊಂಡು ಅವರನ್ನು ಬಲಿಷ್ಠರನ್ನಾಗಿ ಮಾಡುವನು. ಆಸನೇ, ನೀನು ಮೂರ್ಖ ಕೆಲಸ ಮಾಡಿದೆ. ಇಂದಿನಿಂದ ಯಾವಾಗಲೂ ನಿನಗೆ ಯುದ್ಧಗಳಿರುತ್ತವೆ.”


ಎರಡು ವರ್ಷಗಳ ನಂತರ ಫರೋಹನಿಗೆ ಒಂದು ಕನಸಾಯಿತು. ಫರೋಹನು ಕನಸಿನಲ್ಲಿ ನೈಲ್ ನದಿಯ ತೀರದಲ್ಲಿ ನಿಂತಿದ್ದನು.


ನಂತರ ಎಲೀಯನು ಪೊದೆಯ ಕೆಳಗೆ ಮಲಗಿ ನಿದ್ದೆಹೋದನು. ದೂತನೊಬ್ಬನು ಎಲೀಯನ ಹತ್ತಿರಕ್ಕೆ ಬಂದು ಅವನನ್ನು ಸ್ಪರ್ಶಿಸಿ, “ಎದ್ದೇಳು! ಊಟಮಾಡು!” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು