Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 3:10 - ಪರಿಶುದ್ದ ಬೈಬಲ್‌

10 ಅದಕ್ಕೆ ಪುರುಷನು, “ನೀನು ತೋಟದಲ್ಲಿ ತಿರುಗಾಡುತ್ತಿರುವ ಸಪ್ಪಳವನ್ನು ನಾನು ಕೇಳಿದೆನು. ಆದರೆ ನಾನು ಬೆತ್ತಲೆಯಾಗಿದ್ದರಿಂದ ಭಯದಿಂದ ಅಡಗಿಕೊಂಡೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದಕ್ಕೆ ಅವನು, “ನೀನು ತೋಟದಲ್ಲಿ ಸಂಚರಿಸುವ ಸಪ್ಪಳವನ್ನು ನಾನು ಕೇಳಿ, ಬೆತ್ತಲೆಯಾಗಿರುವುದರಿಂದ ಹೆದರಿ ಅಡಗಿಕೊಂಡೆನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅದಕ್ಕೆ ಅವನು, “ತಾವು ತೋಟದಲ್ಲಿ ಸಂಚರಿಸುವ ಸಪ್ಪಳವು ಕೇಳಿಸಿತು; ಬೆತ್ತಲೆಯಾಗಿದ್ದೇನಲ್ಲಾ ಎಂದು ಹೆದರಿ ಅವಿತುಕೊಂಡೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀನು ಎಲ್ಲಿರುತ್ತಿ ಎಂದು ಕೂಗಿ ಕೇಳಲು ಅವನು - ನೀನು ತೋಟದಲ್ಲಿ ಸಂಚರಿಸುವ ಸಪ್ಪಳವನ್ನು ನಾನು ಕೇಳಿ ಬೆತ್ತಲೆಯಾಗಿದ್ದೇನಲ್ಲಾ ಎಂದು ಹೆದರಿ ಅಡಗಿಕೊಂಡೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅದಕ್ಕೆ ಅವನು, “ನಿನ್ನ ಶಬ್ದವನ್ನು ನಾನು ತೋಟದಲ್ಲಿ ಕೇಳಿದೆ. ನಾನು ಬೆತ್ತಲೆಯಾಗಿರುವುದರಿಂದ ಭಯಪಟ್ಟು ಅಡಗಿಕೊಂಡೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 3:10
17 ತಿಳಿವುಗಳ ಹೋಲಿಕೆ  

ಆ ಪುರುಷನು ಮತ್ತು ಅವನ ಹೆಂಡತಿ ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.


ನೀವು ನನ್ನನ್ನು ಜ್ಞಾಪಕ ಮಾಡಿಕೊಳ್ಳಲಿಲ್ಲ. ನನ್ನನ್ನು ಗಮನಕ್ಕೇ ತರಲಿಲ್ಲ. ಹೀಗಿರಲು ನೀವು ಯಾರ ಬಗ್ಗೆ ಚಿಂತಿಸುತ್ತಿದ್ದಿರಿ? ನೀವು ಯಾರಿಗೆ ಭಯಪಡುತ್ತಿದ್ದಿರಿ? ನೀವು ಸುಳ್ಳಾಡಿದ್ದು ಯಾಕೆ? ನೋಡಿ, ನಾನು ಬಹಳ ಸಮಯದಿಂದ ಸುಮ್ಮನಿದ್ದೆನು. ಆದರೆ ನೀವು ನನ್ನನ್ನು ಗೌರವಿಸಲಿಲ್ಲ.


ಪುರುಷರು ನಿನ್ನ ಶರೀರವನ್ನು ನೋಡಿ ನಿನ್ನೊಂದಿಗೆ ಸಂಭೋಗಿಸುವರು. ನೀನು ಮಾಡಿದ ಕೆಟ್ಟಕಾರ್ಯಗಳಿಗಾಗಿ ನೀನು ಶಿಕ್ಷಿಸಲ್ಪಡುವೆ. ಯಾರೂ ನಿನಗೆ ಸಹಾಯಮಾಡಲು ಬರುವದಿಲ್ಲ.


ನಾನು ನಿನ್ನಲ್ಲಿ ಭಯವುಳ್ಳವನಾಗಿದ್ದೇನೆ. ನಾನು ನಿನ್ನ ತೀರ್ಪುಗಳಿಗೆ ಅಂಜಿಕೊಂಡಿದ್ದೇನೆ.


ಆದಕಾರಣ ನಾನು ಆತನ ಸನ್ನಿಧಿಯಲ್ಲಿ ಭಯಭ್ರಾಂತನಾಗಿದ್ದೇನೆ. ಇದನ್ನೆಲ್ಲಾ ಯೋಚಿಸುವಾಗ ಹೆದರಿಕೊಳ್ಳುತ್ತೇನೆ.


ನಾನು ನಿನ್ನ ಪೂರ್ವಿಕರ ದೇವರು, ನಾನು ಅಬ್ರಹಾಮನ ದೇವರು, ನಾನು ಇಸಾಕನ ದೇವರು, ನಾನು ಯಾಕೋಬನ ದೇವರು” ಎಂದು ಹೇಳಿದನು. ದೇವರನ್ನು ನೋಡುವುದಕ್ಕೆ ಭಯಪಟ್ಟು ಮೋಶೆ ತನ್ನ ಮುಖವನ್ನು ಮುಚ್ಚಿಕೊಂಡನು.


ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಕೆಟ್ಟಕಾರ್ಯಗಳನ್ನು ಮಾಡುವವರು ಹೆದರಿಕೆಯಿಂದ ನಡುಗುವರು. ಜನರು, “ನಮ್ಮಲ್ಲಿ ಯಾರು ನಾಶಮಾಡುವ ಈ ಬೆಂಕಿಯ ಜೊತೆ ಜೀವಿಸಬಲ್ಲರು? ನಿತ್ಯಕಾಲಕ್ಕೂ ಸುಡುವ ಈ ಬೆಂಕಿಯ ಬಳಿಯಲ್ಲಿ ಯಾರು ವಾಸಮಾಡಬಲ್ಲರು?” ಎಂದು ಹೇಳುವರು.


“ಕೇಳಿರಿ! ನಾನು ಕಳ್ಳನಂತೆ ಬರುತ್ತೇನೆ. ಎಚ್ಚರವಾಗಿದ್ದು ತನ್ನ ಬಟ್ಟೆಗಳನ್ನು ಕಾಪಾಡಿಕೊಳ್ಳುವವನು ಭಾಗ್ಯವಂತನಾಗಿದ್ದಾನೆ. ಆಗ ಅವನು ಬಟ್ಟೆಯಿಲ್ಲದೆ ಹೊರಗೆ ಹೋಗಿ ತನ್ನನ್ನು ನಾಚಿಕೆಗೆ ಗುರಿಪಡಿಸಿಕೊಳ್ಳುವ ಅಗತ್ಯತೆವಿರುವುದಿಲ್ಲ.”


ಜನರು ಅಂಕೆತಪ್ಪಿ ತಮ್ಮ ಇಷ್ಟಬಂದಂತೆ ಮಾಡುವುದಕ್ಕೆ ಆರೋನನು ಅವರನ್ನು ಬಿಟ್ಟುಬಿಟ್ಟಿರುವುದು ಮೋಶೆಗೆ ತಿಳಿಯಿತು. ಜನರು ಕ್ರಮವಿಲ್ಲದೆ ಸ್ವೇಚ್ಛೆಯಿಂದ ನಡೆಯುತ್ತಿದ್ದರು; ಅವರ ಮೂರ್ಖತನವು ಅವರ ವಿರೋಧಿಗಳಿಗೆ ಎದ್ದುಕಾಣುತ್ತಿತ್ತು!


ಕೂಡಲೇ ಪುರುಷನಲ್ಲಿಯೂ ಸ್ತ್ರೀಯಲ್ಲಿಯೂ ಬದಲಾವಣೆಗಳಾದವು. ಅವರ ಕಣ್ಣುಗಳು ತೆರೆದವು. ಅವರಿಗೆ ಎಲ್ಲವೂ ವಿಚಿತ್ರವಾಗಿ ಕಂಡವು. ತಾವು ಬೆತ್ತಲೆಯಿಂದಿರುವುದನ್ನು ಕಂಡು ಅಂಜೂರದ ಎಲೆಗಳನ್ನು ಕಿತ್ತು ಒಂದಕ್ಕೊಂದು ಜೋಡಿಸಿ ಸುತ್ತಿಕೊಂಡರು.


ದೇವರು ಪುರುಷನಿಗೆ, “ನೀನು ಬೆತ್ತಲೆಯಾಗಿರುವೆ ಎಂದು ನಿನಗೆ ಹೇಳಿದವರು ಯಾರು? ವಿಶೇಷವಾದ ಆ ಮರದ ಹಣ್ಣನ್ನು ನೀನು ತಿಂದೆಯಾ? ಆ ಮರದ ಹಣ್ಣನ್ನು ತಿನ್ನಕೂಡದೆಂದು ನಾನು ನಿನಗೆ ಆಜ್ಞಾಪಿಸಿದ್ದೆನಲ್ಲಾ!” ಎಂದು ಹೇಳಿದನು.


ಆಗ ಅಲ್ಲಿದ್ದ ಜನರು ಗುಡುಗಿನ ಧ್ವನಿಯನ್ನು ಕೇಳಿದರು; ಬೆಟ್ಟದ ಮೇಲೆ ಮಿಂಚುಗಳನ್ನು ನೋಡಿದರು; ಹೊಗೆಯು ಬೆಟ್ಟದಿಂದ ಏರುವುದನ್ನು ಕಂಡರು. ಅವರೆಲ್ಲರೂ ಭಯದಿಂದ ನಡುಗಿದರು; ಬೆಟ್ಟದಿಂದ ದೂರದಲ್ಲಿದ್ದುಕೊಂಡು ಅವುಗಳನ್ನೆಲ್ಲಾ ಗಮನಿಸಿದರು.


ಆಗ ಜನರು ಮೋಶೆಗೆ, “ನೀನು ನಮ್ಮೊಡನೆ ಮಾತಾಡು; ನಾವು ನಿನಗೆ ಕಿವಿಗೊಡುವೆವು. ಆದರೆ ಯೆಹೋವನು ನಮ್ಮೊಡನೆ ಮಾತಾಡದಿರಲಿ. ಇಲ್ಲವಾದರೆ ನಾವು ಸಾಯುವೆವು” ಅಂದರು.


ಆದರೆ ನಮ್ಮ ದೇವರಾದ ಯೆಹೋವನು ಮಾತನಾಡುವುದನ್ನು ನಾವು ಮತ್ತೆ ಕೇಳಿದರೆ ಖಂಡಿತವಾಗಿ ಸಾಯುವೆವು. ಆ ಭಯಂಕರವಾದ ಬೆಂಕಿಯು ನಮ್ಮನ್ನು ದಹಿಸುವುದು. ನಮಗೆ ಸಾಯಲು ಇಷ್ಟವಿಲ್ಲ.


ಬೇರೆಯವರು ತಮ್ಮ ಪಾಪಗಳನ್ನು ಮರೆಮಾಡಲು ಪ್ರಯತ್ನಿಸಬಹುದು. ಆದರೆ ನಾನು ನನ್ನ ಯಾವ ಪಾಪವನ್ನೂ ಮರೆಮಾಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು