Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 3:18 - ಪರಿಶುದ್ದ ಬೈಬಲ್‌

18 ಭೂಮಿಯು ನಿನಗೋಸ್ಕರ ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸುವುದು. ಹೊಲದಲ್ಲಿ ಬೆಳೆಯುವ ಬೆಳೆಯನ್ನು ನೀನು ತಿನ್ನುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ಭೂಮಿಯಲ್ಲಿ ಮುಳ್ಳುಗಿಡಗಳೂ ಕಳೆಗಳೂ ಬಹಳವಾಗಿ ಬೆಳೆಯುವವು, ಹೊಲದ ಬೆಳೆಗಳು ನಿನಗೆ ಆಹಾರವಾಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಬೆಳಸುವುದದು ಅತುಳ ಕಳೆಯನ್ನು, ಮುಳ್ಳುಗಿಡಗಳನ್ನು ತಿನ್ನಬೇಕಾಗುವುದು ನೀನು ಬೈಲಿನ ಬೆಳೆಯನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆ ಭೂವಿುಯಲ್ಲಿ ಮುಳ್ಳುಗಿಡಗಳೂ ಕಳೆಗಳೂ ಬಹಳವಾಗಿ ಹುಟ್ಟುವವು. ಹೊಲದ ಬೆಳೆಯನ್ನು ಅನುಭವಿಸುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಭೂಮಿಯಲ್ಲಿ ಮುಳ್ಳುಗಿಡಗಳೂ ಕಳ್ಳಿಗಳೂ ಬೆಳೆಯುವುವು. ನೀನು ಹೊಲದ ಬೆಳೆಯನ್ನು ಉಣ್ಣುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 3:18
20 ತಿಳಿವುಗಳ ಹೋಲಿಕೆ  

ಬೇರೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು. ಮುಳ್ಳುಗಿಡಗಳು ಬೆಳೆದು ಒಳ್ಳೆಯ ಗಿಡಗಳು ಬೆಳೆಯುವುದನ್ನು ತಡೆದುಬಿಟ್ಟವು.


ಒಂದುಸಾವಿರ ದ್ರಾಕ್ಷಾಲತೆಗಳಿರುವ ತೋಟಗಳಿರುತ್ತವೆ. ಪ್ರತಿಯೊಂದು ದ್ರಾಕ್ಷಾಲತೆಯು ಒಂದುಸಾವಿರ ಬೆಳ್ಳಿನಾಣ್ಯಗಳಷ್ಟು ಬೆಲೆಬಾಳುವಂಥದ್ದಾಗಿರುತ್ತದೆ. ಆದರೆ ಅಂಥ ತೋಟಗಳು ಹಣಜಿಗಳಿಂದಲೂ ಮುಳ್ಳುಗಿಡಗಳಿಂದಲೂ ತುಂಬಿಕೊಂಡಿರುವವು.


ಹಸಿದಿರುವವರು ಆ ಮೂರ್ಖನ ಬೆಳೆಗಳನ್ನು ತಿಂದುಬಿಟ್ಟರು. ಅವರು ಬೇಲಿಗಳ ಮಧ್ಯದಲ್ಲಿ ಬೆಳೆಯುತ್ತಿರುವ ಧಾನ್ಯವನ್ನು ಸಹ ತಿಂದುಬಿಟ್ಟರು. ದುರಾಶೆಯುಳ್ಳವರು ಅವರ ಆಸ್ತಿಯನ್ನೆಲ್ಲಾ ಕಸಿದುಕೊಂಡರು.


ಆದರೆ ಅದು ಮುಳ್ಳುಗಿಡಗಳನ್ನೂ ಕಳೆಯನ್ನೂ ಬೆಳೆಸಿದರೆ ನಿಷ್ಪ್ರಯೋಜಕವಾಗಿ ದೇವರ ಶಾಪಕ್ಕೆ ಗುರಿಯಾಗುತ್ತದೆ. ಆ ಭೂಮಿಯನ್ನು ಬೆಂಕಿಯಿಂದ ಸುಟ್ಟು ನಾಶಮಾಡಲಾಗುವುದು.


ಯೆಹೂದ ಜನಾಂಗದ ಜನರಿಗೂ ಜೆರುಸಲೇಮ್ ನಗರದ ಜನರಿಗೂ ಯೆಹೋವನು ಹೀಗೆ ಹೇಳುತ್ತಾನೆ: “ನಿಮ್ಮ ಹೊಲಗಳಲ್ಲಿ ನೇಗಿಲು ಹೊಡೆದಿಲ್ಲ, ಆ ಹೊಲಗಳನ್ನು ನೇಗಿಲು ಹೊಡೆದು ಸ್ವಚ್ಛಮಾಡಿರಿ. ಮುಳ್ಳುಗಳಲ್ಲಿ ಬೀಜಗಳನ್ನು ಬಿತ್ತಬೇಡಿರಿ.


ನನ್ನ ಜನರ ದೇಶಕ್ಕಾಗಿ ಕೂಗಿರಿ. ಯಾಕೆಂದರೆ ಅದರಲ್ಲಿ ಕೇವಲ ಹಣಜಿಯೂ ಮುಳ್ಳುಗಿಡಗಳೂ ಬೆಳೆಯುತ್ತವೆ. ಒಂದು ಕಾಲದಲ್ಲಿ ಸಂತೋಷಭರಿತವಾಗಿದ್ದ ಪಟ್ಟಣಕ್ಕಾಗಿಯೂ ಎಲ್ಲಾ ಮನೆಗಳಿಗಾಗಿಯೂ ಅಳಿರಿ.


ನಾನು ಅದನ್ನು ಬೆಂಗಾಡಾಗಿ ಮಾಡುವೆನು. ಅದರಲ್ಲಿರುವ ಸಸಿಗಳನ್ನು ಯಾರೂ ಲಕ್ಷಿಸರು. ತೋಟದಲ್ಲಿ ಯಾರೂ ಕೆಲಸ ಮಾಡುವದಿಲ್ಲ. ಮುಳ್ಳುಗಳೂ ಹಣಜಿಗಳೂ ಅಲ್ಲಿ ಬೆಳೆಯುವವು. ಅಲ್ಲಿ ಮಳೆಗರೆಯದಂತೆ ಮೋಡಗಳಿಗೆ ಆಜ್ಞಾಪಿಸುವೆನು.”


ವಕ್ರಬುದ್ಧಿಯುಳ್ಳವರು ಅನೇಕ ಆಪತ್ತುಗಳಿಗೆ ಸಿಕ್ಕಿಕ್ಕೊಂಡಿದ್ದಾರೆ. ಆದರೆ ತನ್ನ ಆತ್ಮದ ಬಗ್ಗೆ ಚಿಂತಿಸುವವನು ಆ ಆಪತ್ತುಗಳಿಂದ ದೂರವಿರುವನು.


ಇವುಗಳಲ್ಲಿ ನಾನು ಯಾವುದನ್ನಾದರೂ ಮಾಡಿದ್ದರೆ, ಗೋಧಿ ಮತ್ತು ಬಾರ್ಲಿಗಳ ಬದಲಾಗಿ ನನ್ನ ಹೊಲಗಳಲ್ಲಿ ಮುಳ್ಳುಗಳೂ ಕಳೆಗಳೂ ಬೆಳೆಯಲಿ.” ಹೀಗೆ ಯೋಬನ ಮಾತುಗಳು ಮುಗಿದವು.


ನಿಮ್ಮ ದೇವರಾದ ಯೆಹೋವನು ಶತ್ರುಗಳನ್ನು ಸೋಲಿಸಲು ನಿಮಗೆ ಸಹಾಯ ಮಾಡುವುದಿಲ್ಲ, ಅವರು ನಿಮಗೆ ಉರುಲಿನಂತಾಗುತ್ತಾರೆ. ಹೊಗೆ ಮತ್ತು ಧೂಳು ನಿಮ್ಮ ಕಣ್ಣಿಗೆ ನೋವನ್ನುಂಟು ಮಾಡುವಂತೆ ಅವರು ನಿಮಗೆ ನೋವನ್ನುಂಟು ಮಾಡುತ್ತಾರೆ; ಈ ಒಳ್ಳೆಯ ದೇಶದಿಂದ ನಿಮ್ಮನ್ನು ಬಲಾತ್ಕಾರದಿಂದ ಹೊರಗಟ್ಟಲಾಗುವುದು. ನಿಮ್ಮ ದೇವರಾದ ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿದ್ದಾನೆ. ಆದರೆ ಯೆಹೋವನ ಆಜ್ಞೆಯನ್ನು ಪಾಲಿಸದಿದ್ದಲ್ಲಿ ನೀವು ಇದನ್ನು ಕಳೆದುಕೊಳ್ಳಬೇಕಾಗುತ್ತದೆ.


ಜನರು ಗೋಧಿಯನ್ನು ಬಿತ್ತುವರು; ಆದರೆ ಅವರು ಕೇವಲ ಮುಳ್ಳಿನ ರಾಶಿಯನ್ನು ಕೊಯ್ಯುವರು. ಅವರು ತುಂಬ ದಣಿಯುವವರೆಗೆ ಕಷ್ಟಪಟ್ಟು ಕೆಲಸ ಮಾಡುವರು. ಆದರೆ ಆ ಎಲ್ಲಾ ಕೆಲಸದ ಪ್ರತಿಫಲವಾಗಿ ಅವರಿಗೆ ಏನೂ ಸಿಗುವದಿಲ್ಲ. ಅವರು ತಮ್ಮ ಬೆಳೆಗಳಿಂದ ನಾಚಿಕೆಪಟ್ಟುಕೊಳ್ಳುವರು. ಯೆಹೋವನ ರೋಷವು ಹಾಗೆಲ್ಲ ಮಾಡುವುದು.”


ಆ ಹೊಲಗಳಲ್ಲಿ ಮುಳ್ಳುಗಿಡಗಳೂ ಉಪಯೋಗವಿಲ್ಲದ ಸಸಿಗಳೂ ಬೆಳೆಯುತ್ತಿದ್ದವು. ಹೊಲಗಳ ಸುತ್ತಲೂ ಇದ್ದ ಗೋಡೆ ಒಡೆದುಹೋಗಿತ್ತು; ಕುಸಿದು ಬೀಳುತ್ತಿತ್ತು.


ನೀನು ಬೆಳಕನ್ನು ನಿಲುವಂಗಿಯಂತೆ ಧರಿಸಿಕೊಂಡಿರುವೆ ನೀನು ಆಕಾಶಮಂಡಲವನ್ನು ಪರದೆಯಂತೆ ಹರಡಿರುವೆ.


ಜನರಿಗೆ ಜನ್ಮನೀಡುವಾತನೂ ನೀನೇ; ಅವರನ್ನು ಮತ್ತೆ ಧೂಳನ್ನಾಗಿ ಮಾಡುವಾತನೂ ನೀನೇ.


“ನಾನು ತಾಯಿಯ ಗರ್ಭದಿಂದ ಜನಿಸಿದಾಗ ಏನೂ ಇಲ್ಲದವನಾಗಿದ್ದೆನು; ಈ ಲೋಕವನ್ನು ಬಿಟ್ಟು ಹೋಗುವಾಗಲೂ ಏನೂ ಇಲ್ಲದವನಾಗಿಯೇ ಹೋಗುವೆನು. ಯೆಹೋವನೇ ಕೊಟ್ಟನು, ಯೆಹೋವನೇ ತೆಗೆದುಕೊಂಡನು. ಆತನ ನಾಮಕ್ಕೆ ಸ್ತೋತ್ರವಾಗಲಿ!” ಎಂದು ಹೇಳಿದನು.


ಒಬ್ಬನು ಯಾವ ಬಗೆಯ ಆಹಾರವನ್ನಾದರೂ ತಿನ್ನಬಹುದೆಂದು ಭಾವಿಸುತ್ತಾನೆ. ಆದರೆ ನಂಬಿಕೆಯಲ್ಲಿ ಬಲಹೀನನಾಗಿರುವ ವ್ಯಕ್ತಿಯು ತಾನು ತರಕಾರಿಗಳನ್ನು ಮಾತ್ರ ತಿನ್ನಬಹುದೆಂದು ಭಾವಿಸುತ್ತಾನೆ.


ಆಮೇಲೆ ದೇವರಾದ ಯೆಹೋವನು ಪುರುಷನಿಗೆ, “ವಿಶೇಷವಾದ ಆ ಮರದ ಹಣ್ಣನ್ನು ತಿನ್ನಕೂಡದೆಂದು ನಾನು ನಿನಗೆ ಆಜ್ಞಾಪಿಸಿದ್ದೆ. ಆದರೆ ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ಆ ಮರದ ಹಣ್ಣನ್ನು ತಿಂದೆ. ನಿನ್ನ ದೆಸೆಯಿಂದ ನಾನು ಭೂಮಿಯನ್ನು ಶಪಿಸುವೆನು. ಭೂಮಿಯು ಫಲಿಸುವ ಆಹಾರಕ್ಕಾಗಿ ನೀನು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಕಷ್ಟಪಟ್ಟು ದುಡಿಯಲೇಬೇಕು.


ನಿನ್ನ ಮುಖದಲ್ಲಿ ಬೆವರು ಹರಿಯುವ ತನಕ ನೀನು ಆಹಾರಕ್ಕಾಗಿ ಕಷ್ಟಪಟ್ಟು ದುಡಿಯುವೆ. ನೀನು ಸಾಯುವ ದಿನದವರೆಗೆ ಕಷ್ಟಪಟ್ಟು ಕೆಲಸ ಮಾಡುವೆ. ಆಮೇಲೆ ನೀನು ಮಣ್ಣಾಗುವೆ. ನಾನು ನಿನ್ನನ್ನು ನಿರ್ಮಿಸಲು ಮಣ್ಣನ್ನು ಉಪಯೋಗಿಸಿದೆ. ನೀನು ಸತ್ತಾಗ ಮತ್ತೆ ಮಣ್ಣೇ ಆಗುವೆ” ಎಂದನು.


ದೇಶವು ಕಾಡಾಗುವುದರಿಂದ ಜನರು ಬಿಲ್ಲುಬಾಣಗಳೊಡನೆ ಸಂಚರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು