Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 3:3 - ಪರಿಶುದ್ದ ಬೈಬಲ್‌

3 ಆದರೆ ಒಂದು ಮರದ ಹಣ್ಣನ್ನು ಮಾತ್ರ ನಾವು ತಿನ್ನಕೂಡದು. ದೇವರು ನಮಗೆ, ‘ತೋಟದ ಮಧ್ಯದಲ್ಲಿರುವ ಮರದ ಹಣ್ಣನ್ನು ನೀವು ತಿನ್ನಕೂಡದು; ಆ ಮರವನ್ನು ಮುಟ್ಟಕೂಡದು, ಇಲ್ಲವಾದರೆ ನೀವು ಸಾಯುವಿರಿ’ ಎಂದು ಹೇಳಿದ್ದಾನೆ” ಎಂಬುದಾಗಿ ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದರೆ ತೋಟದ ಮಧ್ಯದಲ್ಲಿರುವ ಆ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಬಾರದು, ಮುಟ್ಟಲೂ ಕೂಡದು, ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾನೆ” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದರೆ ಅದರ ನಡುವೆಯಿರುವ ಈ ಮರದ ಹಣ್ಣನ್ನು ಮಾತ್ರ ತಿನ್ನಲೂ ಕೂಡದು, ಮುಟ್ಟಲೂ ಕೂಡದು, ‘ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾರೆ,” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆದರೆ ತೋಟದ ಮಧ್ಯದಲ್ಲಿರುವ ಈ ಮರದ ಫಲದ ವಿಷಯವಾಗಿ - ಇದನ್ನು ತಿನ್ನಲೂ ಕೂಡದು, ಮುಟ್ಟಲೂ ಕೂಡದು; ತಿಂದರೆ ಸಾಯುವಿರಿ ಎಂದು ದೇವರು ಹೇಳಿದ್ದಾನೆ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೆ ತೋಟದ ಮಧ್ಯದಲ್ಲಿರುವ ಈ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಕೂಡದು, ಮುಟ್ಟಲೂ ಕೂಡದು; ತಿಂದರೆ ಸತ್ತು ಹೋಗುವಿರಿ’ ಎಂದು ದೇವರು ಹೇಳಿದ್ದಾರೆ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 3:3
12 ತಿಳಿವುಗಳ ಹೋಲಿಕೆ  

“ಆದ್ದರಿಂದ ಆ ಜನರನ್ನು ಬಿಟ್ಟು ಹೊರಬನ್ನಿರಿ; ಅವರಿಂದ ಬೇರ್ಪಡಿರಿ ಎನ್ನುತ್ತಾನೆ ಪ್ರಭುವು. ಅಶುದ್ಧವಾದ ಯಾವುದನ್ನೂ ಮುಟ್ಟಬೇಡಿ, ಆಗ ನಾನು ನಿಮ್ಮನ್ನು ಸ್ವೀಕರಿಸಿಕೊಳ್ಳುವೆನು.”


ಆದರೆ ಈಗ ನೀನು ನಿನ್ನ ಕೈಚಾಚಿ ಅವನ ಆಸ್ತಿಯನ್ನೆಲ್ಲಾ ನಾಶಮಾಡು. ಆಗ ಅವನು ನಿನ್ನ ಮುಖದೆದುರಿಗೆ ನಿನ್ನನ್ನು ಖಂಡಿತವಾಗಿ ದೂಷಿಸುವನು” ಎಂದು ಉತರಕೊಟ್ಟನು.


ಆಗ ದೇವರು ಅಬೀಮೆಲೆಕನಿಗೆ ಕನಸಿನಲ್ಲಿ, “ಹೌದು, ನೀನು ನಿರಪರಾಧಿಯೆಂದು ನನಗೆ ಗೊತ್ತಿದೆ. ನೀನು ಮಾಡಲಿದ್ದ ತಪ್ಪು ನಿನಗೆ ತಿಳಿದಿರಲಿಲ್ಲವೆಂದೂ ನನಗೆ ಗೊತ್ತಿದೆ. ಆದ್ದರಿಂದಲೇ ನಾನು ನಿನ್ನನ್ನು ಕಾಪಾಡಿದೆ. ನನಗೆ ವಿರೋಧವಾಗಿ ಪಾಪಮಾಡಲು ನಾನು ನಿನಗೆ ಅವಕಾಶ ಕೊಡಲಿಲ್ಲ.


“ಇದನ್ನು ತಿನ್ನಬೇಡ”, “ಅದರ ರುಚಿ ನೋಡಬೇಡ”, “ಅದನ್ನು ಮುಟ್ಟಬೇಡ” ಎಂದು ಹೇಳುವುದೇಕೆ?


“ನನ್ನ ಸ್ನೇಹಿತರೇ, ಕರುಣಿಸಿರಿ, ನೀವಾದರೂ ನನ್ನನ್ನು ಕರುಣಿಸಿರಿ. ದೇವರ ಹಸ್ತವು ನನ್ನನ್ನು ಹೊಡೆದಿದೆ.


ಆದರೆ ನೀನು ಕೈಚಾಚಿ ಅವನ ಮಾಂಸವನ್ನೂ ಮೂಳೆಗಳನ್ನೂ ಹೊಡೆ. ಅವನು ನಿನ್ನ ಮುಖದೆದುರಿಗೆ ನಿನ್ನನ್ನು ಖಂಡಿತವಾಗಿ ದೂಷಿಸುವನು” ಎಂದು ಉತ್ತರಕೊಟ್ಟನು.


ಯೆಹೋವನು ಆ ರಾಜರಿಗೆ, “ನಾನು ಆರಿಸಿಕೊಂಡ ಜನಾಂಗಕ್ಕೆ ಉಪದ್ರವ ಕೊಡಬೇಡಿ; ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿ” ಎಂದು ಹೇಳಿದನು.


ನೀವು ಬರೆದು ಕೇಳಿರುವ ಸಂಗತಿಗಳ ಬಗ್ಗೆ ಈಗ ನಾನು ಚರ್ಚಿಸುತ್ತೇನೆ. ಪುರುಷನು ಮದುವೆ ಮಾಡಿಕೊಳ್ಳದಿರುವುದು ಒಳ್ಳೆಯದೇ ಸರಿ.


ಸ್ತ್ರೀಯು ಸರ್ಪಕ್ಕೆ, “ಇಲ್ಲ! ದೇವರು ಹಾಗೆ ಹೇಳಲಿಲ್ಲ! ತೋಟದಲ್ಲಿರುವ ಮರಗಳ ಹಣ್ಣುಗಳನ್ನು ನಾವು ತಿನ್ನಬಹುದು.


ಅದಕ್ಕೆ ಸರ್ಪವು ಸ್ತ್ರೀಗೆ, “ನೀವು ಸಾಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು