Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 3:6 - ಪರಿಶುದ್ದ ಬೈಬಲ್‌

6 ಸ್ತ್ರೀಗೆ ಆ ಮರ ಸುಂದರವಾಗಿ ಕಂಡಿತು. ಅದರ ಹಣ್ಣು ಆಕೆಗೆ ತಿನ್ನಲು ಯೋಗ್ಯವಾಗಿ ಕಂಡಿತು. ಆ ಮರ ತನ್ನನ್ನು ಜ್ಞಾನಿಯನ್ನಾಗಿ ಮಾಡುತ್ತದೆಯೆಂದು ಆಕೆ ಉತ್ಸಾಹಗೊಂಡಳು. ಆದ್ದರಿಂದ ಸ್ತ್ರೀಯು ಆ ಮರದ ಹಣ್ಣನ್ನು ಕಿತ್ತುಕೊಂಡು ತಿಂದಳು; ತನ್ನೊಂದಿಗಿದ್ದ ಗಂಡನಿಗೂ ಸ್ವಲ್ಪ ಹಣ್ಣನ್ನು ಕೊಟ್ಟಳು. ಅವನು ಸಹ ಅದನ್ನು ತಿಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ಆ ಮಹಿಳೆ, “ಈ ಮರದ ಹಣ್ಣು ಊಟಕ್ಕೆ ಎಷ್ಟು ಚೆನ್ನಾಗಿದೆ, ನೋಟಕ್ಕೆ ಎಷ್ಟು ರಮಣೀಯವಾಗಿದೆ. ಜ್ಞಾನಾರ್ಜನೆಗೆ ಎಷ್ಟು ಆಕರ್ಷಣೀಯವಾಗಿದೆ” ಎಂದು ತಿಳಿದು, ಅದನ್ನು ತೆಗೆದುಕೊಂಡು ತಿಂದಳು; ಸಂಗಡವಿದ್ದ ಗಂಡನಿಗೂ ಕೊಟ್ಟಳು; ಅವನೂ ತಿಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಗ ಸ್ತ್ರೀಯು - ಆ ಮರದ ಹಣ್ಣು ತಿನ್ನುವದಕ್ಕೆ ಉತ್ತಮವಾಗಿಯೂ ನೋಡುವದಕ್ಕೆ ರಮ್ಯವಾಗಿಯೂ ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು. ಸಂಗಡ ಇದ್ದ ಗಂಡನಿಗೂ ಕೊಡಲು ಅವನೂ ತಿಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಸ್ತ್ರೀಯು, ಆ ಮರದ ಹಣ್ಣು ಆಹಾರಕ್ಕೆ ಒಳ್ಳೆಯದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು, ಆ ಹಣ್ಣನ್ನು ತೆಗೆದುಕೊಂಡು ತಿಂದಳು. ತನ್ನ ಸಂಗಡ ಇದ್ದ ಗಂಡನಿಗೂ ಕೊಟ್ಟಳು, ಅವನೂ ತಿಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 3:6
19 ತಿಳಿವುಗಳ ಹೋಲಿಕೆ  

ಈ ಲೋಕದಲ್ಲಿರುವ ಕೆಟ್ಟವುಗಳು ಇಂತಿವೆ: ನಮ್ಮ ಪಾಪಸ್ವಭಾವವನ್ನು ತಣಿಸಲು ಮಾಡಲಿಚ್ಛಿಸುವ ಕಾರ್ಯಗಳು, ನಾವು ನೋಡುವ ಪಾಪಪೂರಿತವಾದದ್ದನ್ನು ಪಡೆಯಲಿಚ್ಛಿಸುವುದು, ಮತ್ತು ನಮ್ಮಲ್ಲಿರುವ ವಸ್ತುಗಳಲ್ಲಿಯೇ ದುರಹಂಕಾರಪಡುವುದು. ಆದರೆ ಇವುಗಳಲ್ಲಿ ಯಾವುದೂ ತಂದೆಯಿಂದ ಬರುವುದಿಲ್ಲ. ಇವುಗಳೆಲ್ಲ ಈ ಲೋಕದಿಂದ ಬರುತ್ತವೆ.


ಅಲ್ಲದೆ ಸೈತಾನನಿಂದ ವಂಚಿಸಲ್ಪಟ್ಟದ್ದು ಆದಾಮನಲ್ಲ. ಸ್ತ್ರೀಯು ವಂಚನೆಗೆ ಬಲಿಯಾಗಿ ಪಾಪಿಯಾದಳು.


ಅವನು ಸಾಯಂಕಾಲ ತನ್ನ ಹಾಸಿಗೆಯಿಂದ ಮೇಲೆದ್ದು ಅರಮನೆಯ ಮಾಳಿಗೆಯ ಮೇಲಕ್ಕೆ ಹೋಗಿ ತಿರುಗಾಡುತ್ತಿದ್ದನು. ದಾವೀದನು ಮಾಳಿಗೆಯ ಮೇಲಿರುವಾಗ, ಒಬ್ಬ ಹೆಂಗಸು ಸ್ನಾನ ಮಾಡುತ್ತಿರುವುದನ್ನು ನೋಡಿದನು. ಅವಳು ಅತ್ಯಂತ ಸುಂದರಳಾಗಿದ್ದಳು.


ನಾವು ಜೆರಿಕೊ ನಗರವನ್ನು ಮತ್ತು ಅದರಲ್ಲಿದ್ದ ಎಲ್ಲ ವಸ್ತುಗಳನ್ನು ಸ್ವಾಧೀನಪಡಿಸಿಕೊಂಡು ಕೊಳ್ಳೆ ಹೊಡೆಯುತ್ತಿದ್ದಾಗ, ಬಾಬಿಲೋನಿನ ಒಂದು ಸುಂದರವಾದ ನಿಲುವಂಗಿಯನ್ನೂ ಸುಮಾರು ಐದು ಪೌಂಡಿನಷ್ಟು ಬೆಳ್ಳಿಯನ್ನೂ ಒಂದು ಪೌಂಡಿಗಿಂತಲೂ ಹೆಚ್ಚು ಬಂಗಾರವನ್ನೂ ಕಂಡೆನು. ಈ ವಸ್ತುಗಳನ್ನು ನನಗಾಗಿ ಇಟ್ಟುಕೊಳ್ಳಬೇಕೆಂದು ತುಂಬ ಆಶೆಯಾಯಿತು. ಅದಕ್ಕಾಗಿ ನಾನು ಅವುಗಳನ್ನು ತೆಗೆದುಕೊಂಡೆ. ಅವುಗಳನ್ನು ನನ್ನ ಗುಡಾರದಲ್ಲಿ ಹುಗಿದಿಟ್ಟಿದ್ದೇನೆ. ಬೆಳ್ಳಿಯು ನಿಲುವಂಗಿಯ ಕೆಳಗಡೆ ಇದೆ” ಎಂದು ಒಪ್ಪಿಕೊಂಡನು.


ಆದರೆ ಜನರು ಆದಾಮನಂತೆ ಒಡಂಬಡಿಕೆಯನ್ನು ಮುರಿದುಹಾಕಿದರು. ಅವರ ದೇಶದಲ್ಲಿ ಅವರು ನನಗೆ ದ್ರೋಹಿಗಳಾದರು.


ಈ ಹೆಣ್ಣುಮಕ್ಕಳ ಸೌಂದರ್ಯವನ್ನು ಕಂಡ ದೇವಪುತ್ರರು ತಮಗೆ ಬೇಕಾದ ಸ್ತ್ರೀಯರನ್ನು ಆರಿಸಿಕೊಂಡು ಮದುವೆಯಾದರು. ಈ ಸ್ತ್ರೀಯರು ಮಕ್ಕಳನ್ನು ಹೆತ್ತರು. ಆ ಕಾಲದಲ್ಲಿ ಮತ್ತು ಆ ಕಾಲದ ನಂತರ ನೆಫೇಲಿಯರು ಆ ನಾಡಿನಲ್ಲಿ ವಾಸವಾಗಿದ್ದರು. ಅವರು ಪ್ರಸಿದ್ಧರಾದ ಪರಾಕ್ರಮಶಾಲಿಗಳಾಗಿದ್ದರು. ಬಳಿಕ ಯೆಹೋವನು, “ಜನರು ಕೇವಲ ಮಾನವರಷ್ಟೆ; ನನ್ನ ಆತ್ಮವು ಅವರಿಂದ ಯಾವಾಗಲೂ ತೊಂದರೆಗೆ ಗುರಿಯಾಗಕೂಡದು. ಅವರು 120 ವರ್ಷ ಬದುಕುವಂತೆ ಮಾಡುವೆನು” ಅಂದುಕೊಂಡನು.


ಆತನು ಹೇಳಿದ್ದೇನೆಂದರೆ: “ನರಪುತ್ರನೇ, ನಾನು ಬಲಿಷ್ಠವಾದ ಆಲಯವನ್ನು ಜನರಿಂದ ತೆಗೆದುಬಿಡುವೆನು. ಆ ಸುಂದರ ಸ್ಥಳವು ಅವರಿಗೆ ಆನಂದವನ್ನು ಕೊಡುತ್ತಿದೆ. ಆ ಸ್ಥಳವನ್ನು ನೋಡಲು ಅವರು ಆತುರಪಡುವರು. ಆದರೆ ನಾನು ಆಲಯವನ್ನೂ ಮತ್ತು ಅವರ ಮಕ್ಕಳನ್ನೂ ಆ ಜನರಿಂದ ತೆಗೆದುಬಿಡುವೆನು. ಆ ದಿನದಂದು, ಪಾರಾದವನು ನಿನ್ನ ಬಳಿಗೆ ಬಂದು ನಾಶನದ ಕುರಿತಾದ ಕೆಟ್ಟ ಸುದ್ದಿಯನ್ನು ನಿನಗೆ ತಿಳಿಸುವನು.


“ನರಪುತ್ರನೇ, ನೀನು ನಿನ್ನ ಹೆಂಡತಿಯನ್ನು ಬಹಳವಾಗಿ ಪ್ರೀತಿಸುತ್ತಿ. ಆದರೆ ನಾನು ಆಕೆಯನ್ನು ನಿನ್ನಿಂದ ತೆಗೆದು ಬಿಡುವೆನು. ನಿನ್ನ ಹೆಂಡತಿಯು ಫಕ್ಕನೆ ತೀರಿಹೋಗುವಳು. ಆದರೆ ನೀನು ನಿನ್ನ ದುಃಖವನ್ನು ಪ್ರದರ್ಶಿಸಬಾರದು. ನೀನು ಗಟ್ಟಿಯಾಗಿ ರೋಧಿಸಬಾರದು. ಅಳಬೇಡ ಅಥವಾ ಕಣ್ಣೀರು ಸುರಿಸಬೇಡ.


ಆದರೆ ಒಬ್ಬನು ಪರಸ್ತ್ರೀಯನ್ನು ನೋಡಿ ಅವಳೊಂದಿಗೆ ಲೈಂಗಿಕ ಸಂಪರ್ಕ ಹೊಂದಲು ಬಯಸಿದರೆ, ಅವನು ಆಗಲೇ ತನ್ನ ಮನಸ್ಸಿನಲ್ಲಿ ಅವಳೊಂದಿಗೆ ವ್ಯಭಿಚಾರವನ್ನು ಮಾಡಿದ್ದಾನೆಂದು ನಾನು ನಿಮಗೆ ಹೇಳುತ್ತೇನೆ.


ಆತನು ಹೇಳಿದ್ದೇನೆಂದರೆ: ಇಸ್ರೇಲ್ ಜನರಿಗೆ ಹೇಳು: ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ಇಗೋ, ನನ್ನ ಪವಿತ್ರಾಲಯವನ್ನು ಹಾಳುಮಾಡುವೆನು. ನೀವು ಆ ಸ್ಥಳದ ಬಗ್ಗೆ ಹೆಮ್ಮೆಯುಳ್ಳವರಾಗಿದ್ದು ಸ್ತುತಿಗೀತೆಗಳನ್ನು ಹಾಡುತ್ತೀರಿ. ಅದು ಶಕ್ತಿ ದೊರಕುವ ಸ್ಥಳ. ನೀವು ಆ ಆಲಯವನ್ನು ನೋಡುತ್ತಾ ಆನಂದಿಸುತ್ತೀರಿ; ಅದನ್ನು ಬಹಳವಾಗಿ ಪ್ರೀತಿಸುತ್ತೀರಿ. ಆದರೆ ನಾನು ಅದನ್ನು ಕೆಡವಿಬಿಡುವೆನು. ನೀವು ಬಿಟ್ಟುಹೋಗುವ ನಿಮ್ಮ ಮಕ್ಕಳು ಯುದ್ಧದಲ್ಲಿ ಸಾಯುವರು.


ಸ್ವಲ್ಪ ಕಾಲದನಂತರ, ಯೋಸೇಫನ ಒಡೆಯನ ಹೆಂಡತಿಯು ಯೋಸೇಫನ ಮೇಲೆ ಆಸೆಪಟ್ಟಳು. ಒಂದು ದಿನ ಆಕೆ ಅವನಿಗೆ, “ನನ್ನೊಂದಿಗೆ ಮಲಗಿಕೊ” ಎಂದು ಹೇಳಿದಳು.


ಆಮೇಲೆ ದೇವರಾದ ಯೆಹೋವನು ಪುರುಷನಿಗೆ, “ವಿಶೇಷವಾದ ಆ ಮರದ ಹಣ್ಣನ್ನು ತಿನ್ನಕೂಡದೆಂದು ನಾನು ನಿನಗೆ ಆಜ್ಞಾಪಿಸಿದ್ದೆ. ಆದರೆ ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ಆ ಮರದ ಹಣ್ಣನ್ನು ತಿಂದೆ. ನಿನ್ನ ದೆಸೆಯಿಂದ ನಾನು ಭೂಮಿಯನ್ನು ಶಪಿಸುವೆನು. ಭೂಮಿಯು ಫಲಿಸುವ ಆಹಾರಕ್ಕಾಗಿ ನೀನು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಕಷ್ಟಪಟ್ಟು ದುಡಿಯಲೇಬೇಕು.


ಅದಕ್ಕೆ ಪುರುಷನು, “ನೀನು ನನಗಾಗಿ ಕೊಟ್ಟ ಸ್ತ್ರೀಯು ಆ ಮರದ ಹಣ್ಣನ್ನು ನನಗೆ ಕೊಟ್ಟಳು; ಆದ್ದರಿಂದ ನಾನು ತಿಂದೆ” ಅಂದನು.


“ಯುವತಿಯನ್ನು ಕಾಮದಾಶೆಯಿಂದ ನೋಡುವುದಿಲ್ಲವೆಂದು ನನ್ನ ಕಣ್ಣುಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇನೆ.


ಸಂಸೋನನ ಹೆಂಡತಿಯು ಔತಣದ ಏಳು ದಿನಗಳೆಲ್ಲಾ ಅಳುತ್ತಿದ್ದಳು. ಆದ್ದರಿಂದ ಏಳನೆಯ ದಿನ ಅವನು ಒಗಟಿನ ಅರ್ಥವನ್ನು ಅವಳಿಗೆ ಹೇಳಿದನು. ಅವಳು ಪೀಡಿಸಿದ್ದರಿಂದ ಅವನು ಹೇಳಿದನು. ಆಗ ಅವಳು ತನ್ನ ಜನರಲ್ಲಿಗೆ ಹೋಗಿ ಆ ಒಗಟಿನ ಅರ್ಥವನ್ನು ತಿಳಿಸಿದಳು.


ಆದ್ದರಿಂದ ಆ ಪ್ರವಾದಿಯ ಮನೆಗೆ ದೇವಮನುಷ್ಯನು ಹೋಗಿ, ಅವನ ಸಂಗಡ ಅನ್ನಪಾನಗಳನ್ನು ತೆಗೆದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು