Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 3:7 - ಪರಿಶುದ್ದ ಬೈಬಲ್‌

7 ಕೂಡಲೇ ಪುರುಷನಲ್ಲಿಯೂ ಸ್ತ್ರೀಯಲ್ಲಿಯೂ ಬದಲಾವಣೆಗಳಾದವು. ಅವರ ಕಣ್ಣುಗಳು ತೆರೆದವು. ಅವರಿಗೆ ಎಲ್ಲವೂ ವಿಚಿತ್ರವಾಗಿ ಕಂಡವು. ತಾವು ಬೆತ್ತಲೆಯಿಂದಿರುವುದನ್ನು ಕಂಡು ಅಂಜೂರದ ಎಲೆಗಳನ್ನು ಕಿತ್ತು ಒಂದಕ್ಕೊಂದು ಜೋಡಿಸಿ ಸುತ್ತಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಕೂಡಲೆ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಅಂಜೂರದ ಎಲೆಗಳನ್ನು ಜೋಡಿಸಿ ಉಟ್ಟುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಕೂಡಲೆ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆ ಆಗಿದ್ದೇವೆಂದು ತಿಳಿದು ಅವರು ಅಂಜೂರದ ಎಲೆಗಳನ್ನು ಹೊಲಿದು ಉಟ್ಟುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕೂಡಲೆ ಅವರಿಬ್ಬರ ಕಣ್ಣುಗಳು ತೆರೆದವು; ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಅಂಜೂರದ ಎಲೆಗಳನ್ನು ಹೊಲಿದು ಉಟ್ಟುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು, ಅವರು ಅಂಜೂರದ ಎಲೆಗಳನ್ನು ತೆಗೆದುಕೊಂಡು ತಮಗೆ ತಾವೇ ಉಡುಪುಗಳನ್ನು ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 3:7
13 ತಿಳಿವುಗಳ ಹೋಲಿಕೆ  

ಜೇಡರ ಬಲೆಗಳ ನೂಲಿನಿಂದ ಬಟ್ಟೆ ನೇಯಲಾಗದು. ಆ ಬಲೆಯಿಂದ ನಿಮ್ಮ ಶರೀರವನ್ನು ಮುಚ್ಚಲಾಗುವದಿಲ್ಲ. ಕೆಲವರು ತಮ್ಮ ಕೈಗಳಿಂದ ಇತರರಿಗೆ ಕೇಡುಮಾಡುವರು.


ಆ ಪುರುಷನು ಮತ್ತು ಅವನ ಹೆಂಡತಿ ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.


ನೀವು ಆ ಮರದ ಹಣ್ಣನ್ನು ತಿಂದರೆ ನಿಮಗೆ ಒಳ್ಳೆಯದರ ಮತ್ತು ಕೆಟ್ಟದ್ದರ ಬಗ್ಗೆ ಜ್ಞಾನ ಬರುತ್ತದೆಯೆಂದು ದೇವರಿಗೆ ಗೊತ್ತಿದೆ. ಅಲ್ಲದೆ ನೀವು ದೇವರಿಗೆ ಸರಿಸಮಾನರಾಗುವಿರಿ” ಎಂದು ಹೇಳಿತು.


ಒಬ್ಬ ಮನುಷ್ಯನು ತನಗೆ ಚಿಕ್ಕದಾಗಿರುವ ಹಾಸಿಗೆಯ ಮೇಲೆ ಮಲಗಲು ಪ್ರಯತ್ನಿಸುವನು. ಅವನಲ್ಲಿರುವ ಕಂಬಳಿಯು ಅವನನ್ನು ಪೂರ್ಣವಾಗಿ ಮುಚ್ಚುತ್ತಿರಲಿಲ್ಲ. ಆ ಹಾಸಿಗೆಯೂ, ಆ ಕಂಬಳಿಯೂ ಹೇಗೆ ನಿಷ್ಪ್ರಯೋಜಕವೋ ಹಾಗೆಯೇ ನಿಮ್ಮ ಒಪ್ಪಂದವೂ ನಿಷ್ಪ್ರಯೋಜಕವಾಗಿದೆ.”


ಅವರು ಸಮಾರ್ಯಕ್ಕೆ ಬಂದು ಸೇರಿದಾಗ ಎಲೀಷನು, “ಯೆಹೋವನೇ, ಈ ಜನರ ಕಣ್ಣುಗಳನ್ನು ತೆರೆದುಬಿಡು, ಅವರು ನೋಡಲಿ” ಎಂದು ಹೇಳಿದನು. ಆಗ ಯೆಹೋವನು ಅವರ ಕಣ್ಣುಗಳನ್ನು ತೆರೆದನು. ಅರಾಮ್ಯರ ಸೇನೆಗೆ ತಾವು ಸಮಾರ್ಯ ನಗರದಲ್ಲಿರುವುದು ತಿಳಿದುಬಂತು!


ನೀವು ನೋಡುವ ಸಂಗತಿಗಳು ನಿಮ್ಮನ್ನು ಹುಚ್ಚರನ್ನಾಗಿ ಮಾಡುತ್ತವೆ.


ಆದರೆ ಅವನು ಪಾತಾಳದಲ್ಲಿ ಬಹಳ ಯಾತನೆಪಡುತ್ತಾ ಬಹಳ ದೂರದಲ್ಲಿ ಅಬ್ರಹಾಮನ ಎದೆಗೆ ಒರಗಿಕೊಂಡಿದ್ದ ಲಾಜರನನ್ನು ನೋಡಿ,


ಪುರುಷರು ನಿನ್ನ ಶರೀರವನ್ನು ನೋಡಿ ನಿನ್ನೊಂದಿಗೆ ಸಂಭೋಗಿಸುವರು. ನೀನು ಮಾಡಿದ ಕೆಟ್ಟಕಾರ್ಯಗಳಿಗಾಗಿ ನೀನು ಶಿಕ್ಷಿಸಲ್ಪಡುವೆ. ಯಾರೂ ನಿನಗೆ ಸಹಾಯಮಾಡಲು ಬರುವದಿಲ್ಲ.


ಜೆರುಸಲೇಮ್ ಮಹಾಪಾಪ ಮಾಡಿತು. ಜೆರುಸಲೇಮ್ ಭಯಂಕರ ಪಾಪ ಮಾಡಿದ್ದಕ್ಕಾಗಿ ಅವಳು ಹಾಳುಬಿದ್ದ ನಗರವಾದಳು. ಜನರು ಅವಳನ್ನು ಹೀನೈಸುವಂತಾಗಿದೆ. ಮೊದಲು ಅವಳನ್ನು ಗೌರವಿಸುತ್ತಿದ್ದ ಎಲ್ಲ ಜನ ಈಗ ಅವಳನ್ನು ತಿರಸ್ಕರಿಸುತ್ತಾರೆ. ಏಕೆಂದರೆ ಅವರು ಅವಳ ಬೆತ್ತಲೆ ದೇಹವನ್ನು ನೋಡಿದರು. ಜೆರುಸಲೇಮ್ ನರಳಾಡುತ್ತಿದ್ದಾಳೆ. ಅವಳು ನಾಚಿಕೆಯಿಂದ ತನ್ನ ಮುಖವನ್ನು ತಗ್ಗಿಸಿಕೊಂಡಿದ್ದಾಳೆ.


ನಾವು ದೇಹದ ಯಾವ ಅಂಗಗಳನ್ನು ಅಲ್ಪವಾದುವುಗಳೆಂದು ಎಣಿಸುತ್ತೇವೋ ಆ ಅಂಗಗಳ ಬಗ್ಗೆ ಹೆಚ್ಚು ಎಚ್ಚರಿಕೆ ತೆಗೆದುಕೊಳ್ಳುತ್ತೇವೆ. ನಾವು ನಮ್ಮ ಯಾವ ಅಂಗಗಳನ್ನು ತೋರಿಸಬಯಸುವುದಿಲ್ಲವೋ ಆ ಅಂಗಗಳನ್ನು ವಿಶೇಷವಾದ ರೀತಿಯಲ್ಲಿ ಸಂರಕ್ಷಿಸುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು