Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:1 - ಪರಿಶುದ್ದ ಬೈಬಲ್‌

1 ರಾಹೇಲಳು ತನಗೆ ಮಕ್ಕಳಾಗದಿರುವುದನ್ನು ಗಮನಿಸಿದಳು. ರಾಹೇಲಳಿಗೆ ತನ್ನ ಅಕ್ಕ ಲೇಯಳ ಮೇಲೆ ಹೊಟ್ಟೆಕಿಚ್ಚಾಯಿತು. ಆದ್ದರಿಂದ ರಾಹೇಲಳು ಯಾಕೋಬನಿಗೆ, “ನನಗೆ ಮಕ್ಕಳನ್ನು ಕೊಡು, ಇಲ್ಲವಾದರೆ ನಾನು ಸಾಯುವೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ರಾಹೇಲಳು ತಾನು ಯಾಕೋಬನಿಗೆ ಮಕ್ಕಳನ್ನು ಹೆರದೆ ಇರುವುದನ್ನು ನೋಡಿ ತನ್ನ ಅಕ್ಕನ ಮೇಲೆ ಹೊಟ್ಟೆಕಿಚ್ಚುಪಟ್ಟು, ಯಾಕೋಬನಿಗೆ, “ಮಕ್ಕಳನ್ನು ನನಗೆ ಕೊಡು, ಇಲ್ಲದಿದ್ದರೆ ಸಾಯುವೆನು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ರಾಖೇಲಳು ತಾನು ಯಕೋಬನಿಗೆ ಮಕ್ಕಳನ್ನು ಹೆರಲಿಲ್ಲವೆಂದುಕೊಂಡು ತನ್ನ ಅಕ್ಕನ ಮೇಲೆ ಹೊಟ್ಟೆಕಿಚ್ಚು ಪಟ್ಟಳು. ಅಲ್ಲದೆ ಯಕೋಬನಿಗೆ, “ನನಗೆ ಮಕ್ಕಳನ್ನು ಕೊಡು; ಇಲ್ಲದಿದ್ದರೆ ಸಾಯುತ್ತೇನೆ,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ರಾಹೇಲಳು ತಾನು ಮಕ್ಕಳನ್ನು ಹೆರದೆ ಇರುವದನ್ನು ನೋಡಿ ತನ್ನ ಅಕ್ಕನ ಮೇಲೆ ಹೊಟ್ಟೆಕಿಚ್ಚುಪಟ್ಟು ಯಾಕೋಬನಿಗೆ - ಮಕ್ಕಳನ್ನು ನನಗೆ ಕೊಡು; ಇಲ್ಲದಿದ್ದರೆ ಸಾಯುವೆನು ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ರಾಹೇಲಳು ತಾನು ಯಾಕೋಬನಿಗೆ ಮಕ್ಕಳನ್ನು ಹೆರಲಿಲ್ಲ ಎಂದು ತಿಳಿದಾಗ, ಆಕೆಯು ತನ್ನ ಸಹೋದರಿಯ ಮೇಲೆ ಹೊಟ್ಟೆಕಿಚ್ಚು ಪಟ್ಟು ಯಾಕೋಬನಿಗೆ, “ನನಗೆ ಮಕ್ಕಳನ್ನು ಕೊಡು, ಇಲ್ಲದಿದ್ದರೆ ನಾನು ಸಾಯುತ್ತೇನೆ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:1
26 ತಿಳಿವುಗಳ ಹೋಲಿಕೆ  

ಮೂಢನ ಕೋಪವು ಅವನನ್ನೇ ಕೊಲ್ಲುವುದು. ಮೂರ್ಖನ ಹೊಟ್ಟೆಕಿಚ್ಚು ಅವನನ್ನೇ ಕೊಲ್ಲುವುದು.


ಯಾಕೋಬನು ರಾಹೇಲಳನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸುವುದನ್ನು ಯೆಹೋವನು ನೋಡಿದನು. ಆದ್ದರಿಂದ ಯೆಹೋವನು ಲೇಯಳಿಗೆ ಮಕ್ಕಳಾಗುವಂತೆ ಮಾಡಿದನು. ಆದರೆ ರಾಹೇಲಳಿಗೆ ಮಕ್ಕಳಿರಲಿಲ್ಲ.


ಯೋಸೇಫನ ಅಣ್ಣಂದಿರಿಗೆ ಅವನ ಮೇಲೆ ಹೊಟ್ಟೆಕಿಚ್ಚು ಹೆಚ್ಚಾಯಿತು. ಆದರೆ ಯೋಸೇಫನ ತಂದೆಯು ಆ ಕನಸುಗಳ ಬಗ್ಗೆ ಆಶ್ಚರ್ಯಚಕಿತನಾಗಿ ಆಲೋಚಿಸತೊಡಗಿದನು.


ದೇವರ ಇಷ್ಟಾನುಸಾರವಾದ ದುಃಖವು ಹೃದಯವನ್ನೂ ಜೀವಿತವನ್ನೂ ಪರಿವರ್ತಿಸುತ್ತದೆ. ಈ ಪರಿವರ್ತನೆಯು ರಕ್ಷಣೆಗೆ ನಡೆಸುತ್ತದೆ. ಈ ಪರಿವರ್ತನೆಯ ವಿಷಯದಲ್ಲಿ ನಾವು ವ್ಯಸನಪಡಬೇಕಾಗಿಲ್ಲ. ಆದರೆ, ಲೋಕವು ಹೊಂದಿರುವ ದುಃಖವು ಮರಣವನ್ನು ಬರಮಾಡುತ್ತದೆ.


ಪವಿತ್ರ ಗ್ರಂಥವು ಅರ್ಥವಿಲ್ಲದ್ದೆಂದು ಯೋಚಿಸುವಿರಾ? “ದೇವರು ನಮ್ಮಲ್ಲಿ ಇರಿಸಿರುವ ಆತ್ಮದ ಅಪೇಕ್ಷೆಯೇನೆಂದರೆ, ನಾವು ಆತನಿಗೋಸ್ಕರ ಮಾತ್ರ ಇರಬೇಕೆಂದಷ್ಟೆ” ಎಂದು ಪವಿತ್ರ ಗ್ರಂಥವು ಹೇಳುತ್ತದೆ.


ನೀವು ಸ್ವಾರ್ಥಿಗಳೂ ತೀಕ್ಷ್ಣವಾದ ಮತ್ಸರವನ್ನು ಹೃದಯದಲ್ಲಿ ಹೊಂದಿರುವವರೂ ಆಗಿದ್ದರೆ, ನೀವು ಕೊಚ್ಚಿಕೊಳ್ಳುವುದರಲ್ಲಿ ಅರ್ಥವೇ ಇಲ್ಲ. ಏಕೆಂದರೆ ಅದು ಕೇವಲ ಸುಳ್ಳಷ್ಟೇ.


ನೀವಿನ್ನೂ ಆತ್ಮಿಕರಾಗಿಲ್ಲ. ನಿಮ್ಮ ನಡುವೆ ಹೊಟ್ಟೆಕಿಚ್ಚಿದೆ; ವಾಗ್ವಾದಗಳಿವೆ; ಜಗಳಗಳಿವೆ. ನೀವು ಆತ್ಮಿಕರಲ್ಲವೆಂಬುದನ್ನು ಇವು ಸೂಚಿಸುತ್ತವೆ. ನೀವು ಲೋಕದ ಜನರಂತೆಯೇ ವರ್ತಿಸುತ್ತಿದ್ದೀರಿ.


ಮನಶ್ಯಾಂತಿಯುಳ್ಳವನ ದೇಹವು ಆರೋಗ್ಯದಿಂದಿರುವುದು. ಹೊಟ್ಟೆಕಿಚ್ಚು ದೇಹಕ್ಕೆ ಕಾಯಿಲೆಯನ್ನು ಬರಮಾಡುವುದು.


ಮೊದಲು ನಾವು ಸಹ ಅವಿವೇಕಿಗಳಾಗಿದ್ದೆವು. ನಾವು ವಿಧೇಯರಾಗಿರಲಿಲ್ಲ. ನಾವು ಮೋಸಹೋಗಿದ್ದೆವು. ಅನೇಕ ಬಗೆಯ ಆಸೆಗಳಿಗೆ ಮತ್ತು ಭೋಗಗಳಿಗೆ ದಾಸರಾಗಿದ್ದೆವು; ಕೆಟ್ಟದ್ದನ್ನು ಮಾಡುವವರೂ ಹೊಟ್ಟೆಕಿಚ್ಚುಳ್ಳವರೂ ಆಗಿದ್ದೆವು. ಜನರು ನಮ್ಮನ್ನು ದ್ವೇಷಿಸುತ್ತಿದ್ದರು. ನಾವು ಒಬ್ಬರನ್ನೊಬ್ಬರು ದ್ವೇಷಿಸುತ್ತಿದ್ದೆವು.


ಮತ್ಸರ, ಕುಡಿಕತನ ಮತ್ತು ಸ್ವೇಚ್ಫಾಚಾರದ ಕೂಟ, ಮೊದಲಾದವುಗಳೇ. ನಾನು ನಿಮ್ಮನ್ನು ಮೊದಲು ಎಚ್ಚರಿಸಿದಂತೆ ಈಗಲೂ ಎಚ್ಚರಿಸುತ್ತೇನೆ. ಇಂಥವುಗಳನ್ನು ಮಾಡುವ ಜನರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.


(ಯೇಸುವಿನ ಶಿಷ್ಯರು ಆಹಾರಪದಾರ್ಥವನ್ನು ಕೊಂಡುಕೊಂಡು ಬರಲು ಪಟ್ಟಣದೊಳಗೆ ಹೋಗಿದ್ದಾಗ ಇದು ಸಂಭವಿಸಿತು.)


ಆಗ, ಆತನು ಜುದೇಯವನ್ನು ಬಿಟ್ಟು ಮತ್ತೆ ಗಲಿಲಾಯಕ್ಕೆ ಹೋದನು.


ಆಮೇಲೆ ನಾನು, “ಜನರು ಪ್ರಯಾಸಪಟ್ಟು ಕೆಲಸ ಮಾಡುವುದೇಕೆ?” ಎಂದು ಆಲೋಚಿಸಿದೆ. ಜನರು ಏಳಿಗೆ ಹೊಂದಲು ಮತ್ತು ಬೇರೆಯವರಿಗಿಂತ ಹೆಚ್ಚು ಅಭಿವೃದ್ಧಿಯಾಗಲು ಪ್ರಯತ್ನಿಸುವರು; ಅದಕ್ಕೆ ಅವರ ಮತ್ಸರವೇ ಕಾರಣ. ಇದೂ ಗಾಳಿಯನ್ನು ಹಿಂದಟ್ಟಿದ್ದ ಹಾಗೆ ವ್ಯರ್ಥ.


ಅವರು ಮೋಶೆಯ ಮೇಲೆಯೂ ಯೆಹೋವನ ಪವಿತ್ರ ಯಾಜಕನಾದ ಆರೋನನ ಮೇಲೆಯೂ ಹೊಟ್ಟೆಕಿಚ್ಚುಪಟ್ಟರು.


ನಾನು ತಪ್ಪಿತಸ್ಥನೆಂದು ಯಾವನೂ ನಿರೂಪಿಸಲಾರನು. ನಿರೂಪಿಸಬಲ್ಲವನಿದ್ದರೆ ಬಾಯಿ ಮುಚ್ಚಿಕೊಳ್ಳುವೆನು.


ನಾನು ಹುಟ್ಟಿದಾಗಲೇ ಯಾಕೆ ಸಾಯಲಿಲ್ಲ? ತಾಯಿಯ ಗರ್ಭದಿಂದ ಬರುತ್ತಿರುವಾಗಲೇ ನಾನೇಕೆ ಸಾಯಲಿಲ್ಲ?


ನಂತರ ಎಲೀಯನು ಮರಳುಗಾಡಿನಲ್ಲಿ ದಿನವೆಲ್ಲ ನಡೆದನು. ಎಲೀಯನು ಒಂದು ಪೊದೆಯ ಕೆಳಗೆ ಕುಳಿತುಕೊಂಡನು. ಅವನು ಸಾಯಲು ಇಚ್ಛಿಸಿ, “ಯೆಹೋವನೇ, ನನಗೆ ಜೀವನ ಸಾಕಾಗಿದೆ! ಸಾಯಲು ನನಗೆ ಅವಕಾಶ ಮಾಡು. ನಾನು ನನ್ನ ಪೂರ್ವಿಕರಿಗಿಂತಲೂ ಉತ್ತಮನೇನಲ್ಲ” ಎಂದು ಹೇಳಿದನು.


ಆದರೆ ಮೋಶೆಯು, “ನೀನು ನನ್ನ ವಿಷಯದಲ್ಲಿ ಚಿಂತೆಪಡುತ್ತಿರುವುದೇಕೆ? ಯೆಹೋವನ ಜನರೆಲ್ಲರೂ ಪ್ರವಾದಿಗಳಾಗಿರಬೇಕೆಂದು ನಾನು ಬಯಸುತ್ತೇನೆ. ಅವರೆಲ್ಲರ ಮೇಲೆ ಯೆಹೋವನು ತನ್ನ ಆತ್ಮನನ್ನು ಇರಿಸಬೇಕೆಂದು ನಾನು ಬಯಸುತ್ತೇನೆ” ಎಂದು ಉತ್ತರಿಸಿದನು.


ನೀನು ಹೀಗೆಯೇ ನನಗೆ ಮಾಡುವುದಾಗಿದ್ದರೆ ಅದಕ್ಕೆ ಬದಲಾಗಿ ನನ್ನನ್ನು ಕೊಂದುಬಿಡು ಎಂದು ಬೇಡಿಕೊಳ್ಳುತ್ತೇನೆ. ಆಗ ನಾನು ಈ ದುರವಸ್ಥೆಗಳಿಂದ ವಿಮುಕ್ತನಾಗುವೆನು” ಎಂದು ಹೇಳಿದನು.


ಮರಣದ ಸ್ಥಳ, ಮಕ್ಕಳಿಲ್ಲದ ಹೆಂಗಸು, ಸತತವಾಗಿ ನೀರಿನ ಅಗತ್ಯವಿರುವ ಭೂಮಿ ಮತ್ತು ಆರದ ಬೆಂಕಿ!


ಹನ್ನಳು ಬಹು ದುಃಖಿತಳಾಗಿದ್ದುದರಿಂದ ಕಣ್ಣೀರು ಸುರಿಯುತ್ತಿತ್ತು. ಅವಳು ಯೆಹೋವನಿಗೆ ಪ್ರಾರ್ಥಿಸುತ್ತಿದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು