Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:2 - ಪರಿಶುದ್ದ ಬೈಬಲ್‌

2 ಯಾಕೋಬನಿಗೆ ರಾಹೇಲಳ ಮೇಲೆ ಕೋಪವಾಯಿತು. ಅವನು ಆಕೆಗೆ, “ನಾನು ದೇವರಲ್ಲ. ನಿನಗೆ ಮಕ್ಕಳಾಗದಂತೆ ಮಾಡಿರುವವನು ದೇವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯಾಕೋಬನು ರಾಹೇಲಳ ಮೇಲೆ ಕೋಪಗೊಂಡು, “ದೇವರು ನಿನಗೆ ಮಕ್ಕಳನ್ನು ಕೊಡದೆ ಹೋದ ಮೇಲೆ ಕೊಡಲಿಕ್ಕೆ ನನ್ನಿಂದಾದೀತೋ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಯಕೋಬನು ಆಕೆಯ ಮೇಲೆ ಸಿಟ್ಟುಗೊಂಡು, "ನಾನೇನು ದೇವರೋ? ಅವರೇ ಅಲ್ಲವೆ ನಿನಗೆ ಮಕ್ಕಳನ್ನು ಕೊಡದೆ ಇರುವುದು?” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಆಕೆಯ ಮೇಲೆ ಕೋಪಗೊಂಡು - ದೇವರು ನಿನಗೆ ಮಕ್ಕಳನ್ನು ಕೊಡದೆಹೋದ ಮೇಲೆ ಕೊಡಲಿಕ್ಕೆ ನನ್ನಿಂದಾದೀತೋ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅದಕ್ಕೆ ಯಾಕೋಬನು ರಾಹೇಲಳ ಮೇಲೆ ಕೋಪಿಸಿಕೊಂಡು, “ನಿನಗೆ ಗರ್ಭ ಫಲವನ್ನು ಕೊಡುವ ದೇವರ ಸ್ಥಾನದಲ್ಲಿ ನಾನಿದ್ದೇನೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:2
17 ತಿಳಿವುಗಳ ಹೋಲಿಕೆ  

ಸಾರಯಳು ಅಬ್ರಾಮನಿಗೆ, “ಯೆಹೋವನು ನನಗೆ ಮಕ್ಕಳನ್ನು ಪಡೆಯುವ ಅವಕಾಶವನ್ನು ಕೊಡಲಿಲ್ಲ. ಆದ್ದರಿಂದ ನನ್ನ ಸೇವಕಿಯಾದ ಹಾಗರಳ ಬಳಿಗೆ ಹೋಗು. ಆಕೆಯಲ್ಲಿ ಹುಟ್ಟುವ ಮಗುವನ್ನು ನನ್ನ ಮಗುವಂತೆ ಸ್ವೀಕರಿಸಿಕೊಳ್ಳುವೆನು” ಎಂದು ಹೇಳಿದಳು. ಅಬ್ರಾಮನು ತನ್ನ ಹೆಂಡತಿಯಾದ ಸಾರಯಳಿಗೆ ವಿಧೇಯನಾದನು.


ಮಕ್ಕಳು ಯೆಹೋವನ ಕೊಡುಗೆ. ತಾಯಿಯ ಗರ್ಭಫಲವು ಆತನ ಬಹುಮಾನ.


ಇಸ್ರೇಲಿನ ರಾಜನು ಪತ್ರವನ್ನು ಓದಿದಾಗ, ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು, “ನಾನು ದೇವರೇನು? ಇಲ್ಲ! ಹುಟ್ಟು ಮತ್ತು ಸಾವುಗಳ ಮೇಲೆ ನನಗೆ ಯಾವ ಶಕ್ತಿಯೂ ಇಲ್ಲ. ಹೀಗಿರುವಾಗ ಅರಾಮ್ಯರ ರಾಜನು ಕುಷ್ಠರೋಗಪೀಡಿತನಾದ ಮನುಷ್ಯನನ್ನು ನನ್ನ ಬಳಿಗೆ ಗುಣಪಡಿಸಲು ಏಕೆ ಕಳುಹಿಸಿದನು? ಇದರ ಬಗ್ಗೆ ನೀವೇ ಯೋಚಿಸಿರಿ. ಇದು ಒಂದು ಕುತಂತ್ರವೆಂಬುದು ನಿಮಗೇ ತಿಳಿಯುತ್ತದೆ. ಅರಾಮ್ಯರ ರಾಜನು ಯುದ್ಧವನ್ನು ಆರಂಭಿಸಲು ಪ್ರಯತ್ನಿಸುತ್ತಿದ್ದಾನೆ!” ಎಂದು ಹೇಳಿದನು.


ಎಲ್ಕಾನನು ಹನ್ನಳಿಗೆ ಯಾವಾಗಲೂ ಎರಡು ಭಾಗವನ್ನು ಕೊಡುತ್ತಿದ್ದನು. ಯೆಹೋವನು ಹನ್ನಳಿಗೆ ಮಕ್ಕಳನ್ನು ಕೊಡದೇ ಇದ್ದರೂ, ಎಲ್ಕಾನನು ಎರಡು ಭಾಗವನ್ನು ಕೊಡುತ್ತಿದ್ದನು. ಎಲ್ಕಾನನು ಹನ್ನಳನ್ನು ಬಹಳವಾಗಿ ಪ್ರೀತಿಸುತ್ತಿದ್ದ ಕಾರಣ ಹೀಗೆ ಮಾಡುತ್ತಿದ್ದನು.


ಆಗ ಯೋಸೇಫನು ಅವರಿಗೆ, “ಭಯಪಡಬೇಡಿ. ನಾನು ದೇವರಲ್ಲ; ನಿಮ್ಮನ್ನು ಶಿಕ್ಷಿಸಲು ನನಗೆ ಅಧಿಕಾರವಿಲ್ಲ.


ಕೋಪಗೊಂಡರೂ ಪಾಪ ಮಾಡಬೇಡಿ ಮತ್ತು ದಿನವೆಲ್ಲಾ ಕೋಪದಿಂದಿರಬೇಡಿ.


ಯೇಸು ಕೋಪಗೊಂಡು ಜನರ ಕಡೆಗೆ ನೋಡಿದನು. ಅವರ ಮೊಂಡುತನವನ್ನು ಕಂಡು ಆತನಿಗೆ ದುಃಖವಾಯಿತು. ಯೇಸು ಆ ಮನುಷ್ಯನಿಗೆ, “ನಿನ್ನ ಕೈ ಚಾಚು” ಎಂದು ಹೇಳಿದನು. ಅವನು ತನ್ನ ಕೈಯನ್ನು ಯೇಸುವಿನತ್ತ ಚಾಚಿದನು. ಕೂಡಲೇ ಅವನ ಕೈ ವಾಸಿಯಾಯಿತು.


ಆದರೆ ನಾನು ನಿಮಗೆ ಹೇಳುವುದೇನೆಂದರೆ ಯಾರ ಮೇಲೂ ಕೋಪಗೊಳ್ಳಬೇಡಿ. ಪ್ರತಿಯೊಬ್ಬನೂ ನಿಮ್ಮ ಸಹೋದರ. ನೀವು ಬೇರೆಯವರ ಮೇಲೆ ಕೋಪಗೊಂಡರೆ ನ್ಯಾಯತೀರ್ಪಿಗೆ ಗುರಿಯಾಗುವಿರಿ. ನೀವು ಯಾರಿಗಾದರೂ ಕೆಟ್ಟ ಮಾತುಗಳನ್ನಾಡಿದರೆ, ಯೆಹೂದ್ಯರ ನ್ಯಾಯಸಭೆಯ ವಿಚಾರಣೆಗೆ ಗುರಿಯಾಗುವಿರಿ. ನೀವು ಯಾರನ್ನಾದರೂ ‘ಮೂರ್ಖ’ ಎಂದು ಕರೆದರೆ, ಅಗ್ನಿನರಕಕ್ಕೆ ಸೇರುವ ಅಪಾಯದಲ್ಲಿದ್ದೀರಿ.


ಆತನು ಬಂಜೆಗೆ ಮಕ್ಕಳನ್ನು ಅನುಗ್ರಹಿಸಿ ಸಂತೋಷಪಡಿಸುವನು. ಯೆಹೋವನಿಗೆ ಸ್ತೋತ್ರವಾಗಲಿ!


ಮೋಶೆಯು ಪಾಳೆಯದ ಹತ್ತಿರಕ್ಕೆ ಬಂದನು. ಅವನು ಚಿನ್ನದ ಬಸವನನ್ನೂ ಜನರ ನರ್ತನವನ್ನೂ ನೋಡಿ ಬಹುಕೋಪಗೊಂಡು ಕಲ್ಲಿನ ಹಲಿಗೆಗಳನ್ನು ನೆಲದ ಮೇಲೆ ಬಿಸಾಡಿಬಿಟ್ಟನು; ಅವು ಚೂರುಚೂರಾಗಿ ಒಡೆದುಹೋದವು.


ಆಗ ಯಾಕೋಬನು ತುಂಬಾ ಕೋಪಗೊಂಡು, “ನಾನು ಯಾವ ತಪ್ಪು ಮಾಡಿದೆ? ಯಾವ ನಿಯಮವನ್ನು ನಾನು ಉಲ್ಲಂಘಿಸಿರುವೆ? ನನ್ನನ್ನು ಬೆನ್ನಟ್ಟಿಕೊಂಡು ಬಂದು ತಡೆಯಲು ನಿನಗೆ ಯಾವ ಹಕ್ಕಿದೆ?


ಯಾಕೋಬನು ರಾಹೇಲಳನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸುವುದನ್ನು ಯೆಹೋವನು ನೋಡಿದನು. ಆದ್ದರಿಂದ ಯೆಹೋವನು ಲೇಯಳಿಗೆ ಮಕ್ಕಳಾಗುವಂತೆ ಮಾಡಿದನು. ಆದರೆ ರಾಹೇಲಳಿಗೆ ಮಕ್ಕಳಿರಲಿಲ್ಲ.


ಇಸಾಕನ ಹೆಂಡತಿ ಮಕ್ಕಳನ್ನು ಪಡೆಯಲಾಗಲಿಲ್ಲ. ಆದ್ದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಯೆಹೋವನಲ್ಲಿ ಪ್ರಾರ್ಥಿಸಿದನು. ಯೆಹೋವನು ಇಸಾಕನ ಪ್ರಾರ್ಥನೆಯನ್ನು ಕೇಳಿ ರೆಬೆಕ್ಕಳಿಗೆ ಗರ್ಭಧಾರಣೆಯನ್ನು ಅನುಗ್ರಹಿಸಿದನು.


ಹರ್ಷೋದ್ಗಾರದಿಂದ ಹೀಗೆಂದಳು: “ದೇವರು ನಿನ್ನನ್ನು (ಮರಿಯ) ಬೇರೆಲ್ಲಾ ಸ್ತ್ರೀಯರಿಗಿಂತ ಹೆಚ್ಚಾಗಿ ಆಶೀರ್ವದಿಸಿದ್ದಾನೆ. ನಿನ್ನಲ್ಲಿ ಜನಿಸಲಿರುವ ಮಗುವನ್ನು ದೇವರು ಆಶೀರ್ವದಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು