Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:1 - ಪರಿಶುದ್ದ ಬೈಬಲ್‌

1 ಒಂದು ದಿನ ಲಾಬಾನನ ಗಂಡುಮಕ್ಕಳು ಮಾತಾಡುತ್ತಿರುವುದನ್ನು ಯಾಕೋಬನು ಕೇಳಿಸಿಕೊಂಡನು. ಅವರು, “ನಮ್ಮ ತಂದೆ ಹೊಂದಿದ್ದ ಪ್ರತಿಯೊಂದನ್ನೂ ಯಾಕೋಬನು ತೆಗೆದುಕೊಂಡು ಐಶ್ವರ್ಯವಂತನಾಗಿದ್ದಾನೆ; ಅವನು ನಮ್ಮ ತಂದೆಯ ಐಶ್ವರ್ಯವನ್ನೆಲ್ಲ ತೆಗೆದುಕೊಂಡಿದ್ದಾನೆ” ಎಂದು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ನಮ್ಮ ತಂದೆಯ ಆಸ್ತಿಯೆಲ್ಲಾ ಯಾಕೋಬನ ಪಾಲಾಯಿತು, ನಮ್ಮ ತಂದೆಯ ಆಸ್ತಿಯಿಂದಲೇ ಅವನಿಗೆ ಇಷ್ಟೊಂದು ಐಶ್ವರ್ಯವುಂಟಾಯಿತು” ಎಂಬುದಾಗಿ ಲಾಬಾನನ ಮಕ್ಕಳು ಹೇಳಿಕೊಳ್ಳುವ ಮಾತುಗಳು ಯಾಕೋಬನ ಕಿವಿಗೆ ಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಲಾಬಾನನ ಮಕ್ಕಳು, “ನಮ್ಮ ತಂದೆಯ ಆಸ್ತಿಪಾಸ್ತಿಯೆಲ್ಲ ಯಕೋಬನ ಪಾಲಾಯಿತು. ನಮ್ಮ ತಂದೆಯ ಆಸ್ತಿಯಿಂದಲೇ ಅವನು ಇಷ್ಟು ಐಶ್ವರ್ಯವನ್ನು ಶೇಖರಿಸಿದ್ದು,” ಎಂದು ಆಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಮ್ಮ ತಂದೆಯ ಆಸ್ತಿಯೆಲ್ಲಾ ಯಾಕೋಬನ ಪಾಲಾಯಿತು; ನಮ್ಮ ತಂದೆಯ ಆಸ್ತಿಯಿಂದಲೇ ಅವನಿಗೆ ಇಷ್ಟು ಐಶ್ವರ್ಯವುಂಟಾಯಿತು ಎಂಬದಾಗಿ ಲಾಬಾನನ ಮಕ್ಕಳು ಹೇಳಿಕೊಳ್ಳುವ ಮಾತುಗಳು ಯಾಕೋಬನ ಕಿವಿಗೆ ಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಲಾಬಾನನ ಮಕ್ಕಳು, “ನಮ್ಮ ತಂದೆಗೆ ಇದ್ದವುಗಳನ್ನೆಲ್ಲಾ ಯಾಕೋಬನು ತೆಗೆದುಕೊಂಡು, ನಮ್ಮ ತಂದೆಗಿದ್ದವುಗಳಿಂದ ಈ ಘನತೆಯನ್ನೆಲ್ಲಾ ಪಡೆದಿದ್ದಾನೆ,” ಎಂದು ಹೇಳುವ ಮಾತುಗಳನ್ನು ಯಾಕೋಬನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:1
23 ತಿಳಿವುಗಳ ಹೋಲಿಕೆ  

ಆಮೇಲೆ ನಾನು, “ಜನರು ಪ್ರಯಾಸಪಟ್ಟು ಕೆಲಸ ಮಾಡುವುದೇಕೆ?” ಎಂದು ಆಲೋಚಿಸಿದೆ. ಜನರು ಏಳಿಗೆ ಹೊಂದಲು ಮತ್ತು ಬೇರೆಯವರಿಗಿಂತ ಹೆಚ್ಚು ಅಭಿವೃದ್ಧಿಯಾಗಲು ಪ್ರಯತ್ನಿಸುವರು; ಅದಕ್ಕೆ ಅವರ ಮತ್ಸರವೇ ಕಾರಣ. ಇದೂ ಗಾಳಿಯನ್ನು ಹಿಂದಟ್ಟಿದ್ದ ಹಾಗೆ ವ್ಯರ್ಥ.


ಪವಿತ್ರ ಗ್ರಂಥವು ಹೇಳುವುದೇನೆಂದರೆ, “ಜನರೆಲ್ಲರೂ ಹುಲ್ಲಿನಂತಿದ್ದಾರೆ. ಅವರ ವೈಭವವೆಲ್ಲವೂ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿಹೋಗುವುದು, ಹೂವು ಉದುರಿಹೋಗುವುದು,


ಮೊದಲು ನಾವು ಸಹ ಅವಿವೇಕಿಗಳಾಗಿದ್ದೆವು. ನಾವು ವಿಧೇಯರಾಗಿರಲಿಲ್ಲ. ನಾವು ಮೋಸಹೋಗಿದ್ದೆವು. ಅನೇಕ ಬಗೆಯ ಆಸೆಗಳಿಗೆ ಮತ್ತು ಭೋಗಗಳಿಗೆ ದಾಸರಾಗಿದ್ದೆವು; ಕೆಟ್ಟದ್ದನ್ನು ಮಾಡುವವರೂ ಹೊಟ್ಟೆಕಿಚ್ಚುಳ್ಳವರೂ ಆಗಿದ್ದೆವು. ಜನರು ನಮ್ಮನ್ನು ದ್ವೇಷಿಸುತ್ತಿದ್ದರು. ನಾವು ಒಬ್ಬರನ್ನೊಬ್ಬರು ದ್ವೇಷಿಸುತ್ತಿದ್ದೆವು.


ದುರ್ಬೋಧಕನು ಗರ್ವದಿಂದ ತುಂಬಿದವನಾಗಿರುತ್ತಾನೆ ಮತ್ತು ಅವನಿಗೆ ಏನೂ ಅರ್ಥವಾಗುವುದಿಲ್ಲ. ಅವನು ಕುತರ್ಕ ವಾಗ್ವಾದ ಮಾಡುವುದರಲ್ಲಿ ಆಸಕ್ತನಾಗಿದ್ದಾನೆ. ಇದರಿಂದ ಹೊಟ್ಟೆಕಿಚ್ಚು, ಜಗಳ, ನಿಂದನೆ ಮತ್ತು ದುಸ್ಸಂಶಯಗಳು ಉಂಟಾಗುತ್ತವೆ.


ಬಳಿಕ ಸೈತಾನನು ಯೇಸುವನ್ನು ಎತ್ತರವಾದ ಬೆಟ್ಟದ ತುದಿಗೆ ಕರೆದುಕೊಂಡು ಹೋಗಿ ಲೋಕದ ಎಲ್ಲಾ ರಾಜ್ಯಗಳನ್ನು ಮತ್ತು ಅವುಗಳ ವೈಭವವನ್ನು ತೋರಿಸಿ,


“ಜ್ಞಾನೋಕ್ತಿಗಳನ್ನು ಉಲ್ಲೇಖಿಸಲು ಇಚ್ಛಿಸುವ ಪ್ರತಿಯೊಬ್ಬನು ನಿನ್ನ ವಿರುದ್ಧವಾಗಿ ಇದನ್ನು ಉಲ್ಲೇಖಿಸುವನು: ‘ತಾಯಿಯಂತೆ ಮಗಳು.’


ಯೆಹೋವನು ಹೇಳುತ್ತಾನೆ, “ಜ್ಞಾನಿಗಳು ತಮ್ಮ ಜ್ಞಾನದ ಬಗ್ಗೆ ಜಂಬಕೊಚ್ಚಿಕೊಳ್ಳಬಾರದು. ಬಲಶಾಲಿಗಳು ತಮ್ಮ ಬಲದ ಬಗ್ಗೆ ಬಡಾಯಿಕೊಚ್ಚಿಕೊಳ್ಳಬಾರದು. ಶ್ರೀಮಂತರು ತಮ್ಮ ಸಂಪತ್ತಿನ ಬಗ್ಗೆ ಜಂಬಕೊಚ್ಚಿಕೊಳ್ಳಬಾರದು.


ಬಳಿಕ ಅವರು ಸತ್ತು ಪಾತಾಳಕ್ಕೆ ಇಳಿದುಹೋಗುವರು. ಪಾತಾಳವು ತನ್ನ ಬಾಯನ್ನು ಅಗಲವಾಗಿ ತೆರೆದು ಅವರನ್ನೆಲ್ಲಾ ನುಂಗಿಬಿಡುವುದು.”


ಕೋಪವು ಕ್ರೂರ; ಅದು ಪ್ರವಾಹದಂತೆ ನಾಶಕರ. ಹೊಟ್ಟೆಕಿಚ್ಚು ಅದಕ್ಕಿಂತಲೂ ನಾಶಕರ.


ಮನಶ್ಯಾಂತಿಯುಳ್ಳವನ ದೇಹವು ಆರೋಗ್ಯದಿಂದಿರುವುದು. ಹೊಟ್ಟೆಕಿಚ್ಚು ದೇಹಕ್ಕೆ ಕಾಯಿಲೆಯನ್ನು ಬರಮಾಡುವುದು.


ನನ್ನ ಪ್ರಾಣವು ಅಪಾಯದಲ್ಲಿದೆ. ನನ್ನ ಶತ್ರುಗಳು ನನ್ನನ್ನು ಮುತ್ತಿಕೊಂಡಿದ್ದಾರೆ. ಅವರು ಸಿಂಹಗಳಂತಿದ್ದಾರೆ. ಅವರ ಹಲ್ಲುಗಳು ಬಾಣಗಳಂತಿವೆ; ಅವರ ನಾಲಿಗೆಗಳು ಹರಿತವಾದ ಖಡ್ಗಗಳಂತಿವೆ.


ಯೆಹೋವನೇ, ಈ ಲೋಕಕ್ಕಾಗಿಯೇ ಜೀವಿಸುವ ಜನರಿಂದ ನನ್ನನ್ನು ತಪ್ಪಿಸಿ ಕಾಪಾಡು. ನಿನ್ನ ಸಹಾಯಕ್ಕಾಗಿ ಮೊರೆಯಿಡುವ ಅನೇಕರು ಕೊರತೆಯಲ್ಲಿದ್ದಾರೆ. ಅವರಿಗೆ ಆಹಾರವನ್ನು ಹೇರಳವಾಗಿ ದಯಪಾಲಿಸು. ಅವರ ಮಕ್ಕಳಿಗೂ ಮೊಮ್ಮಕ್ಕಳಿಗೂ ಬೇಕಾದದ್ದನ್ನೆಲ್ಲಾ ಒದಗಿಸಿಕೊಡು.


ನಾನು ಅಪರಿಚಿತರಿಗೆ ಯಾವಾಗಲೂ ಊಟ ಕೊಟ್ಟದ್ದು ನನ್ನ ಮನೆಯಲ್ಲಿರುವ ಎಲ್ಲರಿಗೂ ಗೊತ್ತಿದೆ.


ತನ್ನ ಸಂಪತ್ತಿನ ವಿಷಯ ಕೊಚ್ಚಿಗೊಂಡನು. ತನ್ನ ಸ್ನೇಹಿತರಲ್ಲಿ ತನ್ನ ಮಕ್ಕಳ ವಿಚಾರವಾಗಿ ಹೆಗ್ಗಳಿಕೆಯಿಂದ ಮಾತಾಡುತ್ತಿದ್ದನು. ಮಾತ್ರವಲ್ಲದೆ ಅರಸನು ತನ್ನನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ ಇತರ ಎಲ್ಲಾ ನಾಯಕರುಗಳ ಮೇಲೆ ನೇಮಿಸಿದನು.


ಆದ್ದರಿಂದ ಈಜಿಪ್ಟಿನಲ್ಲಿರುವ ಮಹಾ ಐಶ್ವರ್ಯವನ್ನೂ ನೀವು ಇಲ್ಲಿ ನೋಡಿರುವ ಪ್ರತಿಯೊಂದನ್ನೂ ನನ್ನ ತಂದೆಗೆ ತಿಳಿಸಿ ಬೇಗನೆ ಅವನನ್ನು ಕರೆದುಕೊಂಡು ಬನ್ನಿ” ಎಂದು ಹೇಳಿದನು.


ಹೀಗೆ ಯಾಕೋಬನು ತುಂಬ ಐಶ್ವರ್ಯವಂತನಾದನು. ಅವನಿಗೆ ದೊಡ್ಡ ಮಂದೆಗಳಿದ್ದವು. ಅನೇಕ ಸೇವಕರಿದ್ದರು; ಒಂಟೆಗಳಿದ್ದವು ಮತ್ತು ಕತ್ತೆಗಳಿದ್ದವು.


ಲಾಬಾನನು ಮೊದಲಿನಂತೆ ಸ್ನೇಹದಿಂದ ಇಲ್ಲದಿರುವುದನ್ನು ಸಹ ಯಾಕೋಬನು ಗಮನಿಸಿದನು.


ಲಾಬಾನನು ಯಾಕೋಬನಿಗೆ, “ಈ ಸ್ತ್ರೀಯರು ನನ್ನ ಮಕ್ಕಳು. ಅವರ ಮಕ್ಕಳು ನನಗೆ ಸೇರಿದವರು; ಈ ಪಶುಗಳು ನನ್ನವು. ನೀನು ಇಲ್ಲಿ ನೋಡುವ ಪ್ರತಿಯೊಂದೂ ನನಗೆ ಸೇರಿದ್ದು. ಆದರೆ ನನ್ನ ಹೆಣ್ಣುಮಕ್ಕಳನ್ನಾಗಲಿ ಅವರ ಮಕ್ಕಳನ್ನಾಗಲಿ ತೆಗೆದುಕೊಳ್ಳಲು ಸಾಧ್ಯವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು