Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:12 - ಪರಿಶುದ್ದ ಬೈಬಲ್‌

12 “ದೇವದೂತನು ನನಗೆ, ‘ನೋಡು ಚುಕ್ಕೆಮಚ್ಚೆಗಳಿರುವ ಆಡುಕುರಿಗಳು ಮಾತ್ರ ಸಂಗಮಿಸುತ್ತವೆ. ಹೀಗಾಗುವಂತೆ ನಾನೇ ಮಾಡಿರುವೆನು. ನಿನಗೆ ಲಾಬಾನನು ಮಾಡುತ್ತಿರುವ ಅನ್ಯಾಯಗಳನ್ನೆಲ್ಲ ನಾನು ನೋಡಿರುವೆನು. ಆದ್ದರಿಂದ ಹುಟ್ಟುವ ಮರಿಗಳೆಲ್ಲ ನಿನ್ನದಾಗುವಂತೆ ನಾನೇ ಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆತನು ನನಗೆ, ‘ಲಾಬಾನನು ನಿನ್ನ ವಿಷಯದಲ್ಲಿ ನಡೆದುಕೊಂಡ ರೀತಿಯನ್ನು ನಾನು ನೋಡಿದ್ದೇನೆ, ಆದುದರಿಂದ ನೀನು ಕಣ್ಣೆತ್ತಿ ಕುರಿಗಳೊಂದಿಗೆ ಸಂಗಮಿಸುವ ಆಡುಗಳನ್ನು ನೋಡು. ರೇಖೆಯೂ, ಚುಕ್ಕೆಯೂ, ಮಚ್ಚೆಯೂ ಉಳ್ಳವುಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆತ ನನಗೆ, ‘ಲಾಬಾನನು ನಿನ್ನ ವಿಷಯದಲ್ಲಿ ನಡೆದುಕೊಂಡ ರೀತಿಯನ್ನು ನಾನು ನೋಡಿದ್ದೇನೆ. ಆದುದರಿಂದಲೇ ಮೇಕೆಗಳ ಮೇಲೆ ಹಾರುವ ಹೋತಗಳೆಲ್ಲವು ರೇಖೆ, ಚುಕ್ಕೆ, ಮಚ್ಚೆಗಳುಳ್ಳವುಗಳಾಗಿವೆ, ಕಣ್ಣೆತ್ತಿನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆತನು ನನಗೆ - ಲಾಬಾನನು ನಿನ್ನ ವಿಷಯದಲ್ಲಿ ನಡಕೊಂಡ ರೀತಿಯನ್ನು ನಾನು ನೋಡಿದ್ದೇನೆ; ಆದದರಿಂದ ನೀನು ಕಣ್ಣೆತ್ತಿ ನೋಡು; ಕುರಿಗಳ ಮೇಲೆ ಹಾರುವ ಟಗರುಗಳೆಲ್ಲವೂ ರೇಖೆ ಚುಕ್ಕೆ ಮಚ್ಚೆಗಳುಳ್ಳವುಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವನು ನನಗೆ, ‘ನಿನ್ನ ಕಣ್ಣುಗಳನ್ನೆತ್ತಿ ಕುರಿಗಳನ್ನೇರುವ ಎಲ್ಲಾ ಟಗರುಗಳನ್ನು ನೋಡು. ಅವು ಚುಕ್ಕೆ, ಮಚ್ಚೆ, ರೇಖೆಯೂ ಉಳ್ಳವುಗಳಾಗಿವೆ. ಏಕೆಂದರೆ ಲಾಬಾನನು ನಿನಗೆ ಮಾಡಿದ್ದನ್ನೆಲ್ಲಾ ಕಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:12
13 ತಿಳಿವುಗಳ ಹೋಲಿಕೆ  

ಆಗ ಯೆಹೋವನು, “ನನ್ನ ಜನರು ಈಜಿಪ್ಟಿನಲ್ಲಿ ಅನುಭವಿಸುತ್ತಿರುವ ಕಷ್ಟಗಳನ್ನು ನೋಡಿದ್ದೇನೆ. ಅಧಿಕಾರಿಗಳು ಅವರನ್ನು ಹಿಂಸಿಸುವಾಗ ಅವರು ಇಟ್ಟ ಮೊರೆಯನ್ನು ಕೇಳಿದ್ದೇನೆ. ಅವರ ದುಃಖವನ್ನೆಲ್ಲಾ ಬಲ್ಲೆನು.


ಸೂರ್ಯ ಮುಳುಗುವುದರೊಳಗೆ ಅವನಿಗೆ ಸಲ್ಲಬೇಕಾದ ಕೂಲಿಯನ್ನು ಕೊಟ್ಟುಬಿಡು, ಅವನು ಬಡವನಾಗಿದ್ದಾನೆ. ನೀನು ಕೊಡುವ ಕೂಲಿಯಿಂದಲೇ ಅವನು ತನ್ನ ಹಸಿವನ್ನು ನೀಗಿಸಿಕೊಳ್ಳಬೇಕು. ನೀನು ಅವನ ಕೂಲಿ ಕೊಡದಿದ್ದಲ್ಲಿ ಅವನು ದೇವರಾದ ಯೆಹೋವನಿಗೆ ದೂರು ಹೇಳುವನು. ಆಗ ನೀನು ಪಾಪಮಾಡುವವನಾಗಿರುವೆ.


ಆದರೆ ನನ್ನ ಪೂರ್ವಿಕರ ದೇವರೂ ಅಬ್ರಹಾಮನ ದೇವರೂ ಇಸಾಕನು ಭಯಪಡುವ ದೇವರೂ ನನ್ನ ಸಂಗಡವಿದ್ದನು. ದೇವರು ನನ್ನ ಜೊತೆಯಲ್ಲಿ ಇಲ್ಲದಿದ್ದರೆ ನೀನು ನನ್ನನ್ನು ಬರಿಗೈಲಿ ಕಳುಹಿಸಿಬಿಡುತ್ತಿದ್ದೆ. ಆದರೆ ನನ್ನ ಕಷ್ಟವನ್ನೂ ನಾನು ಮಾಡಿದ ಕೆಲಸವನ್ನೂ ದೇವರು ನೋಡಿದನು. ನಿನ್ನೆಯ ರಾತ್ರಿ ನಾನು ತಪ್ಪಿತಸ್ಥನಲ್ಲವೆಂದು ದೇವರು ನಿನಗೆ ತೋರಿಸಿಕೊಟ್ಟಿದ್ದಾನೆ” ಎಂದು ಹೇಳಿದನು.


ಯಜಮಾನರೇ, ಅದೇರೀತಿಯಲ್ಲಿ ನಿಮ್ಮ ಸೇವಕರಿಗೆ ಒಳ್ಳೆಯವರಾಗಿರಿ. ಅವರಿಗೆ ಹೆದರಿಕೆಯಾಗುವಂಥ ಮಾತುಗಳನ್ನಾಡಬೇಡಿ. ನಿಮಗೂ ಅವರಿಗೂ ಒಡೆಯನಾಗಿರುವಾತನು ಪರಲೋಕದಲ್ಲಿದ್ದಾನೆ ಎಂಬುದು ನಿಮಗೆ ತಿಳಿದಿದೆ. ಆತನು ಪ್ರತಿಯೊಬ್ಬನಿಗೂ ಪಕ್ಷಪಾತವಿಲ್ಲದೆ ನ್ಯಾಯತೀರಿಸುವನು.


ಜನರು ಈಜಿಪ್ಟಿನಲ್ಲಿ ಬಹಳ ಸಂಕಟಪಡುತ್ತಿರುವುದನ್ನು ನಾನು ನೋಡಿದ್ದೇನೆ; ನನ್ನ ಜನರ ಗೋಳಾಟವನ್ನು ನಾನು ಕೇಳಿದ್ದೇನೆ. ನಾನು ಅವರನ್ನು ರಕ್ಷಿಸುವುದಕ್ಕಾಗಿ ಇಳಿದುಬಂದಿದ್ದೇನೆ. ಮೋಶೆಯೇ, ಈಗ ನಾನು ನಿನ್ನನ್ನು ಈಜಿಪ್ಟಿಗೆ ಕಳುಹಿಸುತ್ತಿದ್ದೇನೆ’ ಎಂದು ಹೇಳಿದನು.


ದೇಶದಲ್ಲಿ ಬಡವರಿಂದ ಬಲವಂತ ಸೇವೆಮಾಡಿಸುವುದನ್ನು ಕಂಡು ಅವರಿಗೆ ಅನ್ಯಾಯವಾಗಿದೆಯೆಂದೂ ಹಕ್ಕಿಗೆ ಚ್ಯುತಿಯಾಗಿದೆಯೆಂದೂ ಆಶ್ಚರ್ಯಪಡಬೇಡಿ. ಅವರಿಂದ ಬಲವಂತವಾಗಿ ದುಡಿಸುವ ಅಧಿಪತಿಗೆ ಬಲವಂತದಿಂದ ದುಡಿಸುವ ಮತ್ತೊಬ್ಬ ಅಧಿಪತಿಯಿರುವನು. ಈ ಇಬ್ಬರು ಅಧಿಪತಿಗಳಿಗೂ ಮತ್ತೊಬ್ಬ ಅಧಿಪತಿಯಿರುವನು.


ನಾನು ಎಲ್ಲಿಗೇ ಹೋಗುತ್ತಿದ್ದರೂ ಎಲ್ಲೇ ಮಲಗಿದ್ದರೂ ನಿನಗೆ ತಿಳಿದಿರುತ್ತದೆ. ನನ್ನ ಕಾರ್ಯಗಳೆಲ್ಲಾ ನಿನಗೆ ತಿಳಿದಿದೆ.


ಆದರೆ ಯೆಹೋವನು ಹೇಳುವುದೇನೆಂದರೆ: “ದುಷ್ಟರು ಕುಗ್ಗಿಹೋದವರಿಂದ ಕದ್ದುಕೊಂಡಿದ್ದಾರೆ. ಅಸಹಾಯಕರು ದುಃಖದಿಂದ ನಿಟ್ಟುಸಿರು ಬಿಡುತ್ತಿದ್ದಾರೆ. ಆದ್ದರಿಂದ ನಾನು ಎದ್ದುನಿಂತು, ಆಯಾಸಗೊಂಡಿರುವ ಅವರನ್ನು ಕಾಪಾಡುವೆನು.”


“ನಿಮ್ಮ ನೆರೆಯವನಿಗೆ ಕೆಡುಕುಗಳನ್ನು ಮಾಡಬಾರದು. ನೀವು ಅವನನ್ನು ಸುಲಿಗೆ ಮಾಡಬಾರದು. ನಿಮ್ಮ ಕೂಲಿಯವರ ಕೂಲಿಯನ್ನು ಮರುದಿನದ ಮುಂಜಾನೆಯವರೆಗೆ ಹಿಡಿದಿಟ್ಟುಕೊಳ್ಳಬಾರದು.


ನಾನು ಇಸ್ರೇಲರ ಮೊರೆಯನ್ನು ಕೇಳಿದ್ದೇನೆ. ಈಜಿಪ್ಟಿನವರು ಅವರಿಗೆ ಕೊಡುವ ಹಿಂಸೆಯನ್ನು ನೋಡಿದ್ದೇನೆ.


“ಪ್ರಾಣಿಗಳು ಸಂಗಮಿಸುವಾಗ ನನಗೆ ಒಂದು ಕನಸಾಯಿತು. ಸಂಗಮಿಸುತ್ತಿದ್ದ ಹೋತಗಳೆಲ್ಲ ಚುಕ್ಕೆಗಳನ್ನು ಮತ್ತು ಮಚ್ಚೆಗಳನ್ನು ಹೊಂದಿದ್ದವು.


ಯೆಹೋವನೇ, ಆ ದುಷ್ಟರ ಕ್ರೂರವಾದ ಕಾರ್ಯಗಳನ್ನೂ ದುಷ್ಕೃತ್ಯಗಳನ್ನೂ ನೀನು ಖಂಡಿತವಾಗಿ ನೋಡುವೆ. ಅವುಗಳನ್ನು ನೋಡಿ ಕಾರ್ಯನಿರತನಾಗು. ಅನೇಕ ತೊಂದರೆಗಳಲ್ಲಿ ಸಿಕ್ಕಿಕೊಂಡಿರುವವರು ಸಹಾಯಕ್ಕಾಗಿ ನಿನ್ನ ಬಳಿಗೆ ಬರುವರು. ಅನಾಥರಿಗೆ ಸಹಾಯ ಮಾಡುವವನು ನೀನೇ. ಆದ್ದರಿಂದ ಅವರಿಗೆ ಸಹಾಯಮಾಡು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು