Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:40 - ಪರಿಶುದ್ದ ಬೈಬಲ್‌

40 ಹಗಲಿನಲ್ಲಿ ಸೂರ್ಯನಿಂದ ನನ್ನ ಶಕ್ತಿಯನ್ನು ಕುಂದಿಸಿದೆ; ರಾತ್ರಿಯಲ್ಲಿ ಚಳಿಯಿಂದ ನನಗೆ ನಿದ್ರೆಯು ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಹಗಲಿನಲ್ಲಿ ಬಿಸಿಲಿನಿಂದಲೂ, ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು, ನಿದ್ದೆಮಾಡುವುದಕ್ಕಾದರೂ ಅವಕಾಶ ಸಿಗಲಿಲ್ಲ, ನನ್ನ ಸ್ಥಿತಿ ಹೀಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಹಗಲಿನ ಬೇಗೆಯಿಂದಲೂ ಇರುಳಿನ ಚಳಿಯಿಂದಲೂ ಕರಗಿಹೋಗಿದ್ದೆ; ಕಣ್ಣುಗಳಿಗೆ ನಿದ್ರೆ ದೂರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಹಗಲಲ್ಲಿ ಬಿಸಿಲಿನಿಂದಲೂ ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು; ನಿದ್ದೆ ಮಾಡುವದಕ್ಕಾದರೂ ಅವಕಾಶವಾಗಲಿಲ್ಲ; ನನ್ನ ಸ್ಥಿತಿ ಹೀಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ನನ್ನ ಸ್ಥಿತಿ ಹೀಗೆ ಇತ್ತು: ಹಗಲಲ್ಲಿ ಬಿಸಿಲಿನಿಂದಲೂ ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು. ನನ್ನ ಕಣ್ಣುಗಳಿಗೆ ನಿದ್ರೆ ತಪ್ಪಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:40
13 ತಿಳಿವುಗಳ ಹೋಲಿಕೆ  

ನಿಮ್ಮ ಸಭಾನಾಯಕರನ್ನು ನೆನಪು ಮಾಡಿಕೊಳ್ಳಿ. ಅವರು ನಿಮಗೆ ದೇವರ ಸಂದೇಶವನ್ನು ಬೋಧಿಸಿದರು. ಅವರು ಹೇಗೆ ಜೀವಿಸಿದ್ದರು ಮತ್ತು ಹೇಗೆ ಸತ್ತರು ಎಂಬುದನ್ನು ನೆನಪಿಸಿಕೊಳ್ಳಿ. ಅವರ ನಂಬಿಕೆಯನ್ನು ಅನುಸರಿಸಿರಿ.


ಆ ರಾತ್ರಿ, ಕೆಲವು ಕುರುಬರು ಹೊಲಗಳ ಸಮೀಪದಲ್ಲಿ ತಮ್ಮ ಕುರಿಗಳನ್ನು ಕಾಯುತ್ತಿದ್ದರು.


“ಯಾಕೋಬನು ಅರಾಮ್ ದೇಶಕ್ಕೆ ಓಡಿಹೋದನು. ಅಲ್ಲಿ ಇಸ್ರೇಲನು ಒಬ್ಬ ಹೆಂಡತಿಗಾಗಿ ಸೇವೆ ಮಾಡಿದನು. ಇನ್ನೊಂದು ಹೆಂಡತಿಯನ್ನು ಮಾಡಿಕೊಳ್ಳಲಿಕ್ಕೆ ಕುರಿಗಳನ್ನು ಕಾಯ್ದನು.


ಮೋಶೆಯ ಮಾವನ ಹೆಸರು ಇತ್ರೋನನು. ಇತ್ರೋನನು ಮಿದ್ಯಾನಿನ ಯಾಜಕನಾಗಿದ್ದನು. ಮೋಶೆಯು ಇತ್ರೋನನ ಕುರಿಗಳಿಗೆ ಕುರುಬನಾಗಿದ್ದನು. ಒಂದು ದಿನ, ಮೋಶೆಯು ಕುರಿಗಳನ್ನು ಮರುಭೂಮಿಯ ಪಶ್ಚಿಮಭಾಗಕ್ಕೆ ನಡೆಸಿಕೊಂಡು ದೇವರ ಬೆಟ್ಟವೆಂದು ಕರೆಯಲ್ಪಡುವ ಸೀನಾಯಿ ಎಂಬ ಹೋರೇಬ್ ಬೆಟ್ಟಕ್ಕೆ ಹೋದನು.


ಕ್ರೂರ ಮೃಗಗಳು ಕುರಿಯನ್ನು ಕೊಂದಾಗಲೆಲ್ಲಾ ಅದಕ್ಕೆ ಬದಲಾಗಿ ನನ್ನ ಕುರಿಯನ್ನು ನಿನಗೆ ಕೊಟ್ಟೆನು. ಸತ್ತುಹೋದ ಪಶುವನ್ನು ನಿನ್ನ ಮುಂದೆ ತಂದು, ‘ಇದು ನನ್ನ ತಪ್ಪಲ್ಲ’ ಎಂದು ನಿನಗೆ ಹೇಳಲಿಲ್ಲ. ಕಳುವು ಹಗಲಲ್ಲಾಗಿದ್ದರೂ ರಾತ್ರಿಯಲ್ಲಾಗಿದ್ದರೂ ಕಳುವಾದ ಪಶುಗಳಿಗೆ ಪ್ರತಿಯಾಗಿ ಪಶುಗಳನ್ನು ನೀನು ನನ್ನಿಂದ ವಸೂಲಿ ಮಾಡಿದೆ.


ನಾನು ಇಪ್ಪತ್ತು ವರ್ಷ ನಿನಗೆ ಗುಲಾಮನಂತೆ ಸೇವೆ ಮಾಡಿದೆನು. ಮೊದಲ ಹದಿನಾಲ್ಕು ವರ್ಷಗಳಲ್ಲಿ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನು ಪಡೆದುಕೊಳ್ಳುವುದಕ್ಕಾಗಿ ದುಡಿದೆನು. ಕಡೆಯ ಆರು ವರ್ಷಗಳಲ್ಲಿ ನಿನ್ನ ಪಶುಗಳನ್ನು ಪಡೆದುಕೊಳ್ಳುವುದಕ್ಕಾಗಿ ದುಡಿದೆನು. ಆ ಅವಧಿಯಲ್ಲಿ ನೀನು ನನ್ನ ಸಂಬಳವನ್ನು ಹತ್ತು ಸಲ ಬದಲಾಯಿಸಿದೆ.


ಆತನು ನಿಮ್ಮನ್ನು ಭಯಂಕರವಾದ ಆ ಅಡವಿಯಲ್ಲಿ ಮೊದಲು ನಡೆಸಿದನು. ಅಲ್ಲಿ ವಿಷದ ಹಾವುಗಳು, ಚೇಳುಗಳು ಇದ್ದವು. ನೆಲವು ಕಾದಿದ್ದು ಎಲ್ಲಿಯೂ ನೀರು ಸಿಗುತ್ತಿರಲಿಲ್ಲ. ಆದರೆ ನಿಮ್ಮ ದೇವರಾದ ಯೆಹೋವನು ಬಂಡೆಯೊಳಗಿಂದ ನೀರನ್ನು ನಿಮಗೆ ಒದಗಿಸಿದನು.


ಯೆಹೋವನು ಹೇಳುವುದೇನೆಂದರೆ, “ನಾನು ಭೂಮಿಗೂ ಪರ್ವತಗಳಿಗೂ ಒಣಗಿಹೋಗಲು ಆಜ್ಞಾಪಿಸಿದ್ದೇನೆ. ಬೆಳೆ, ಹೊಸ ದ್ರಾಕ್ಷಾರಸ, ಆಲೀವ್ ಎಣ್ಣೆ ಮತ್ತು ಭೂಮಿಯು ಫಲಿಸುವ ಯಾವ ವಸ್ತುವಾಗಲಿ ನಾಶವಾಗುವುದು. ಮತ್ತು ಎಲ್ಲಾ ಮನುಷ್ಯರೂ ಬಲಹೀನರಾಗುವರು; ಪ್ರಾಣಿಗಳೂ ಬಲಹೀನವಾಗುವವು.”


ಆಕೆ ತಾನು ತಯಾರಿಸಿದ ವಸ್ತುಗಳನ್ನು ಒಳ್ಳೆಯ ಲಾಭಕ್ಕೆ ಮಾರುವಳು. ಬಹುಹೊತ್ತಿನವರೆಗೂ ಆಕೆ ಕೆಲಸ ಮಾಡುವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು