Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:48 - ಪರಿಶುದ್ದ ಬೈಬಲ್‌

48 ಲಾಬಾನನು ಯಾಕೋಬನಿಗೆ, “ಈ ಕಲ್ಲುಗಳ ಕುಪ್ಪೆಯು ನಮ್ಮಿಬ್ಬರಿಗೂ ನಮ್ಮ ಒಪ್ಪಂದವನ್ನು ಜ್ಞಾಪಕಕ್ಕೆ ತರುತ್ತದೆ” ಎಂದು ಹೇಳಿದನು. ಆದಕಾರಣ ಯಾಕೋಬನು ಆ ಸ್ಥಳಕ್ಕೆ ಗಲೀದ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಆಗ ಲಾಬಾನನು, “ಈ ಹೊತ್ತು ನಿನಗೂ ನನಗೂ ಆದ ಒಡಂಬಡಿಕೆಗೆ ಈ ಗುಡ್ಡೆಯೇ ಸಾಕ್ಷಿ” ಎಂದು ಹೇಳಿದುದರಿಂದ ಅದಕ್ಕೆ ಗಲೇದ್ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಲಾಬಾನನು ಯಕೋಬನಿಗೆ, “ಈ ದಿನ ನಿನಗೂ ನನಗೂ ಆದ ಒಪ್ಪಂದಕ್ಕೆ ಈ ಕುಪ್ಪೆಯೇ ಸಾಕ್ಷಿ” ಎಂದು ಹೇಳಿದ ಕಾರಣ ಅದಕ್ಕೆ ‘ಗೆಲೇದ್’ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಈ ಹೊತ್ತು ನಿನಗೂ ನನಗೂ ಆದ ಒಡಂಬಡಿಕೆಗೆ ಈ ಕುಪ್ಪೆಯೇ ಸಾಕ್ಷಿ ಎಂದು ಹೇಳಿದ್ದರಿಂದ ಅದಕ್ಕೆ ಗಲೇದೆಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಆಗ ಲಾಬಾನನು, “ಈ ಕುಪ್ಪೆಯು ಈ ಹೊತ್ತು ನಿನಗೂ ನನಗೂ ಸಾಕ್ಷಿಯಾಗಿದೆ,” ಎಂದನು. ಆದ್ದರಿಂದ ಅದಕ್ಕೆ ಗಲೇದ್ ಎಂದೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:48
10 ತಿಳಿವುಗಳ ಹೋಲಿಕೆ  

ಆಗ ಯೆಹೋಶುವನು ಜನರೆಲ್ಲರಿಗೆ, “ನಾವು ಇಂದು ಹೇಳಿದ ಎಲ್ಲವನ್ನು ಜ್ಞಾಪಕದಲ್ಲಿಟ್ಟುಕೊಳ್ಳಲು ಈ ಕಲ್ಲು ನಿಮಗೆ ಸಾಕ್ಷಿಯಾಗಿರುವುದು. ಇಂದು ಯೆಹೋವನು ನಮ್ಮೊಡನೆ ಮಾತನಾಡುತ್ತಿದ್ದಾಗ ಈ ಕಲ್ಲು ಇಲ್ಲಿಯೇ ಇತ್ತು. ಅದಕ್ಕಾಗಿ ಈ ಕಲ್ಲು ಇಂದು ನಡೆದ ಸಂಗತಿಯನ್ನು ನೆನಪಿನಲ್ಲಿಡಲು ನಮಗೆ ಸಹಾಯಕವಾಗುವುದು. ನೀವು ನಿಮ್ಮ ದೇವರಾದ ಯೆಹೋವನಿಗೆ ವಿಮುಖರಾದರೆ ಈ ಕಲ್ಲೇ ನಿಮಗೆ ವಿರೋಧವಾಗಿ ಸಾಕ್ಷಿ ಹೇಳುವುದು” ಎಂದು ಹೇಳಿದನು.


ರೂಬೇನ್ ಮತ್ತು ಗಾದ್ ಕುಲಗಳವರಿಗೆ ಗಿಲ್ಯಾದಿನಿಂದ ಪ್ರಾರಂಭವಾಗುವ ಪ್ರಾಂತ್ಯವನ್ನು ಕೊಟ್ಟೆನು. ಇದು ಅರ್ನೋನ್ ಕಣಿವೆಯಿಂದಿಡಿದು ಯಬ್ಬೋಕ್ ಹೊಳೆಯ ತನಕ ವಿಸ್ತಾರವಾಗಿದೆ. ಯಬ್ಬೋಕ್ ಹೊಳೆಯು ಅಮ್ಮೋನಿಯರ ಮೇರೆಯಾಗಿದೆ.


ನಾವು ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಎಂಬ ಊರನ್ನು ಮತ್ತು ಆ ಕಣಿವೆಯ ಮಧ್ಯದಲ್ಲಿದ್ದ ಇನ್ನೊಂದು ಊರನ್ನು ವಶಪಡಿಸಿಕೊಂಡೆವು. ಅರ್ನೋನ್ ಕಣಿವೆ ಮತ್ತು ಗಿಲ್ಯಾದ್‌ಗಳ ನಡುವೆ ಇರುವ ಎಲ್ಲಾ ಪಟ್ಟಣಗಳನ್ನು ಸೋಲಿಸಲು ಯೆಹೋವನು ಅವಕಾಶ ಮಾಡಿಕೊಟ್ಟನು. ಯಾವ ಪಟ್ಟಣವೂ ನಮಗೆ ಅಸಾಧ್ಯವಾಗಿ ಕಂಡುಬರಲಿಲ್ಲ.


ಆದ್ದರಿಂದ ಲಾಬಾನನು ತನ್ನ ಜನರನ್ನು ಕರೆದುಕೊಂಡು ಯಾಕೋಬನನ್ನು ಬೆನ್ನಟ್ಟಿದನು. ಏಳು ದಿನಗಳಾದ ಮೇಲೆ ಲಾಬಾನನು ಯಾಕೋಬನನ್ನು ಬೆಟ್ಟದ ಸೀಮೆಯಾದ ಗಿಲ್ಯಾದಿನಲ್ಲಿ ಕಂಡನು.


ಅಬ್ರಹಾಮನು “ಆ ಬಾವಿಯನ್ನು ತೋಡಿಸಿದವನು ನಾನೇ ಎಂಬುದಕ್ಕೆ ಸಾಕ್ಷಿಯಾಗಿ ನೀನು ಈ ಕುರಿಗಳನ್ನು ನನ್ನಿಂದ ಸ್ವೀಕರಿಸಿಕೊಳ್ಳಬೇಕು” ಎಂದು ಉತ್ತರಿಸಿದನು.


ನೀವು ಆರಾಧಿಸುವ ದೇವರನ್ನೇ ನಾವೂ ಆರಾಧಿಸುತ್ತೇವೆಂಬುದನ್ನು ನಮ್ಮ ಜನರಿಗೆ ತೋರಿಸಿಕೊಡುವುದೇ ಈ ಯಜ್ಞವೇದಿಕೆಯ ನಿಜವಾದ ಉದ್ದೇಶವಾಗಿದೆ. ನಾವು ಯೆಹೋವನನ್ನು ಆರಾಧಿಸುತ್ತೇವೆ. ನಾವು ಸರ್ವಾಂಗಹೋಮಗಳನ್ನು, ಸಮಾಧಾನಯಜ್ಞಗಳನ್ನು ಯೆಹೋವನ ಸಾನ್ನಿಧ್ಯದಲ್ಲಿ ಸಮರ್ಪಿಸುತ್ತೇವೆ ಎಂಬುದಕ್ಕೆ ಈ ಯಜ್ಞವೇದಿಕೆಯು ನಿಮಗೂ ನಮಗೂ ಮತ್ತು ನಮ್ಮ ಮುಂದಿನ ಪೀಳಿಗೆಗಳಿಗೂ ಸಾಕ್ಷಿಯಾಗಿರುತ್ತದೆ. ನಾವು ಸಹ ನಿಮ್ಮಂತೆಯೇ ಇಸ್ರೇಲಿನ ಜನರೆಂಬುದನ್ನು ದೊಡ್ಡವರಾದ ಮೇಲೆ ನಿಮ್ಮ ಮಕ್ಕಳಿಗೆ ತಿಳಿದಿರಲಿ ಎಂಬುದು ನಮ್ಮ ಇಚ್ಛೆ.


ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳಿಗೆ ‘ನೀವು ಇಸ್ರೇಲಿಗೆ ಸಂಬಂಧಪಟ್ಟವರಲ್ಲ’ ಎಂದು ಹೇಳಿದರೆ, ನಮ್ಮ ಮಕ್ಕಳು ‘ಇಲ್ಲಿ ನೋಡಿ! ಗತಿಸಿಹೋದ ನಮ್ಮ ಪೂರ್ವಿಕರು ಒಂದು ಯಜ್ಞವೇದಿಕೆಯನ್ನು ಕಟ್ಟಿದ್ದಾರೆ. ಆ ಯಜ್ಞವೇದಿಕೆಯು ಪವಿತ್ರ ಗುಡಾರದಲ್ಲಿರುವ ಯಜ್ಞವೇದಿಕೆಯಂತಿದೆ. ನಾವು ಈ ಯಜ್ಞವೇದಿಕೆಯನ್ನು ಸರ್ವಾಂಗಹೋಮಗಳಿಗಾಗಲಿ ಯಜ್ಞಗಳಿಗಾಗಲಿ ಬಳಸುವುದಿಲ್ಲ. ನಾವು ಇಸ್ರೇಲಿಗೆ ಸೇರಿದವರೆಂಬುದಕ್ಕೆ ಈ ಯಜ್ಞವೇದಿಕೆ ಸಾಕ್ಷಿಯಾಗಿದೆ’ ಎಂದು ಹೇಳುವರು.


ರೂಬೇನ್ಯರು ಮತ್ತು ಗಾದ್ಯರು, “ಯೆಹೋವನೇ ದೇವರು ಎಂಬುದಕ್ಕೆ ಈ ಯಜ್ಞವೇದಿಕೆಯೇ ಸಾಕ್ಷಿ” ಎಂದು ಅದಕ್ಕೆ “ಏದ್” ಎಂದು ಹೆಸರಿಟ್ಟರು.


ತೋಲನ ಮರಣದ ತರುವಾಯ ಯೆಹೋವನು ಮತ್ತೊಬ್ಬ ನ್ಯಾಯಾಧೀಶನನ್ನು ಕಳುಹಿಸಿದನು. ಅವನ ಹೆಸರು ಯಾಯೀರ. ಯಾಯೀರನು ಗಿಲ್ಯಾದ್ ಪ್ರದೇಶದಲ್ಲಿ ವಾಸವಾಗಿದ್ದನು. ಯಾಯೀರನು ಇಪ್ಪತ್ತೆರಡು ವರ್ಷ ಇಸ್ರೇಲರ ನ್ಯಾಯಾಧೀಶನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು