Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:2 - ಪರಿಶುದ್ದ ಬೈಬಲ್‌

2 ಆದ್ದರಿಂದ ಅವನು, “ಇದು ದೇವರ ಪಾಳೆಯ” ಎಂದು ಹೇಳಿ “ಮಹನಯಿಮ್” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯಾಕೋಬನು ಅವರನ್ನು ನೋಡಿದಾಗ, “ಇದು ದೇವರ ಸೇನಾನಿವೇಶ” ಎಂದು ಹೇಳಿ ಆ ಸ್ಥಳಕ್ಕೆ “ಮಹನಯಿಮ್” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ದೇವದೂತರು ಅವನೆದುರಿಗೆ ಬಂದರು. ಯಕೋಬನು ಅವರನ್ನು ನೋಡಿ, “ಇದು ದೇವರ ಪಾಳೆಯ,” ಏಂದು ಹೇಳಿ ಆ ಸ್ಥಳಕ್ಕೆ ‘ಮಹನಯಿಮ್’ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಅವರನ್ನು ನೋಡಿದಾಗ - ಅದು ದೇವರ ಪಾಳೆಯ ಎಂದು ಹೇಳಿ ಆ ಸ್ಥಳಕ್ಕೆ ಮಹನಯಿಮ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯಾಕೋಬನು ಅವರನ್ನು ನೋಡಿದಾಗ, “ಇದು ದೇವರ ಸೈನ್ಯ,” ಎಂದು ಹೇಳಿ, ಆ ಸ್ಥಳಕ್ಕೆ ಮಹನಯಿಮ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:2
17 ತಿಳಿವುಗಳ ಹೋಲಿಕೆ  

ಸೌಲನ ಸೈನ್ಯದಲ್ಲಿ ನೇರನ ಮಗನಾದ ಅಬ್ನೇರನು ಸೇನಾಧಿಪತಿಯಾಗಿದ್ದನು. ಸೌಲನ ಮಗನಾದ ಈಷ್ಬೋಶೆತನನ್ನು ಅಬ್ನೇರನು ಮಹನಯಿಮಿಗೆ ಕರೆದೊಯ್ದನು.


ಗಾದ್ಯರು ಅವರಿಗೆ ಗಿಲ್ಯಾದಿನ ಆಶ್ರಯನಗರವಾದ ರಾಮೋತ್, ಮಹನಯೀಮ್,


ಆ ಮನುಷ್ಯನು, “ನಾನು ಶತ್ರುವಲ್ಲ, ನಾನು ಯೆಹೋವನ ಸೇನಾಧಿಪತಿ. ನಾನು ಈಗಲೇ ನಿನ್ನಲ್ಲಿಗೆ ಬಂದಿದ್ದೇನೆ” ಎಂದು ಉತ್ತರಿಸಿದನು. ಆಗ ಯೆಹೋಶುವನು ನೆಲದವರೆಗೂ ತಲೆಬಾಗಿ ನಮಸ್ಕರಿಸಿ ಅವನಿಗೆ, “ನಾನು ನಿನ್ನ ಸೇವಕ. ನನ್ನ ಒಡೆಯನು ನನಗೆ ಯಾವುದಾದರೂ ಆಜ್ಞೆಯನ್ನು ವಿಧಿಸಬೇಕಾಗಿದೆಯೇ?” ಎಂದು ಕೇಳಿದನು.


ತಕ್ಷಣವೇ ಪರಲೋಕದಿಂದ ದೇವದೂತರು ಬಹು ದೊಡ್ಡ ಗುಂಪಾಗಿ ಬಂದು ಮೊದಲನೆಯ ದೇವದೂತನೊಡನೆ ಸೇರಿಕೊಂಡರು. ಅವರೆಲ್ಲರೂ,


ಎಲ್ಲಾ ದೂತರುಗಳೇ, ಆತನಿಗೆ ಸ್ತೋತ್ರಮಾಡಿರಿ! ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ!


ಯೆಹೋವನ ಭಕ್ತರ ಸುತ್ತಲೂ ಆತನ ದೂತನು ದಂಡಿಳಿಸಿ ಕಾವಲಾಗಿದ್ದು ಕಾಪಾಡುವನು.


“ಗೇರನ ಮಗನಾದ ಶಿಮ್ಮಿಯು ನಿನ್ನೊಡನೆ ಇಲ್ಲಿದ್ದಾನೆಂಬುದನ್ನು ಜ್ಞಾಪಿಸಿಕೊ. ಅವನು ಬಹುರೀಮಿನ ಬೆನ್ಯಾಮೀನ್ ಕುಲದವನು. ನಾನು ಮಹನಯಿಮಿಗೆ ಓಡಿಹೋದ ಆ ದಿನದಂದು ಅವನು ನನ್ನ ವಿರುದ್ಧವಾಗಿ ಬಹಳವಾಗಿ ಶಪಿಸಿದ್ದನ್ನು ಜ್ಞಾಪಿಸಿಕೊ. ನಂತರ ಅವನು ನನ್ನನ್ನು ಜೋರ್ಡನ್ ನದಿಯ ಹತ್ತಿರ ಭೇಟಿಮಾಡಲು ಬಂದನು. ಆದರೆ ನಾನು ಯೆಹೋವನ ಸನ್ನಿಧಿಯಲ್ಲಿ, ‘ಶಿಮ್ಮಿ ನಾನು ನಿನ್ನನ್ನು ಕೊಲ್ಲುವುದಿಲ್ಲ’ ಎಂದು ವಾಗ್ದಾನ ಮಾಡಿದೆನು.


ದಾವೀದನು ಮಹನಯಿಮಿಗೆ ಬಂದನು. ಅಬ್ಷಾಲೋಮನು ಮತ್ತು ಇಸ್ರೇಲರೆಲ್ಲರೂ ಜೋರ್ಡನ್ ನದಿಯನ್ನು ದಾಟಿದರು.


ಆಗ ಅವನು, “ದಾನಿಯೇಲನೇ, ನಾನು ಏಕೆ ಬಂದಿದ್ದೇನೆಂಬುದು ನಿನಗೆ ಗೊತ್ತಿಲ್ಲವೇ? ತಕ್ಷಣ ನಾನು ಪಾರಸಿಯ ರಾಜ್ಯದ ದಿವ್ಯಪಾಲಕನೊಂದಿಗೆ ಹೋರಾಡಲು ಹಿಂದಿರುಗಬೇಕು. ನಾನು ಹೋದಮೇಲೆ ಗ್ರೀಕ್ ರಾಜ್ಯದ ದಿವ್ಯಪಾಲಕನು ಬರುವನು.


ಶೂಲಾಮಿತಳೇ, ಹಿಂತಿರುಗಿ ಬಾ, ಹಿಂತಿರುಗಿ ಬಾ! ಹಿಂತಿರುಗಿ ಬಾ, ಹಿಂತಿರುಗಿ ಬಾ, ನಾವು ನಿನ್ನನ್ನು ನೋಡಬೇಕು! ಮಹನಯಿಮ್ ನೃತ್ಯವನ್ನು ನೋಡುವಂತೆ ಶೂಲಾಮಿತಳನ್ನೇಕೆ ನೀವು ದೃಷ್ಟಿಸಿ ನೋಡುತ್ತಿರುವಿರಿ?


ಆತನ ಸೈನ್ಯಗಳೇ, ಚಿತ್ತವನ್ನು ನೇರವೇರಿಸುವ ಸೇವಕರೇ, ಯೆಹೋವನನ್ನು ಕೊಂಡಾಡಿರಿ.


ನಂತರ ಎಲೀಷನು ಪ್ರಾರ್ಥಿಸುತ್ತಾ, “ಯೆಹೋವನೇ, ನನ್ನ ಸೇವಕನ ಕಣ್ಣುಗಳನ್ನು ತೆರೆದು ಅವನು ನೋಡುವಂತೆ ಮಾಡೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ” ಎಂದು ಹೇಳಿದನು. ಯೆಹೋವನು ಸೇವಕನ ಕಣ್ಣುಗಳನ್ನು ತೆರೆದನು. ಆ ಸೇವಕನು ಪರ್ವತವನ್ನು ತುಂಬಿರುವ ಬೆಂಕಿಯಂತಿರುವ ಕುದುರೆಗಳನ್ನು ಮತ್ತು ರಥಗಳನ್ನು ನೋಡಿದನು. ಅವರೆಲ್ಲ ಎಲೀಷನ ಸುತ್ತಲೂ ಇದ್ದರು!


ಮಹನಯಿಮಿಗೆ ಇದ್ದೋವಿನ ಮಗನಾದ ಅಹೀನಾದಾಬನು ರಾಜ್ಯಪಾಲನಾಗಿದ್ದನು.


ನೇರನ ಮಗನಾದ ಅಬ್ನೇರನೂ ಸೌಲನ ಮಗನಾದ ಈಷ್ಬೋಶೆತನ ಸೇವಕರೂ ಮಹನಯಿಮಯನ್ನು ಬಿಟ್ಟು ಗಿಬ್ಯೋನಿಗೆ ಹೋದರು.


ದಿನದಿಂದ ದಿನಕ್ಕೆ ಹೆಚ್ಚೆಚ್ಚು ಜನರು ಬಂದು ದಾವೀದನನ್ನು ಸೇರಿಕೊಂಡಿದ್ದರಿಂದ ದಾವೀದನ ಸೈನ್ಯವು ಬಲಗೊಂಡಿತು.


ಮಹಿಮಾಸ್ವರೂಪನಾದ ಈ ರಾಜನು ಯಾರು? ಸೇನಾಧೀಶ್ವರನಾದ ಯೆಹೋವನೇ ಆ ರಾಜನು. ಮಹಿಮಾಸ್ವರೂಪನಾದ ರಾಜನು ಆತನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು