Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:20 - ಪರಿಶುದ್ದ ಬೈಬಲ್‌

20 ನೀವು ಅವನಿಗೆ, ‘ಇದು ನಿನಗೆ ಕಳುಹಿಸಿರುವ ಉಡುಗೊರೆ. ಅಲ್ಲದೆ ನಿನ್ನ ಸೇವಕನಾದ ಯಾಕೋಬನು ನಮ್ಮ ಹಿಂದೆ ಬರುತ್ತಿದ್ದಾನೆ’ ಎಂದು ಹೇಳಬೇಕು” ಎಂದು ತಿಳಿಸಿದನು. “ನಾನು ಈ ಜನರನ್ನು ಉಡುಗೊರೆಗಳೊಡನೆ ಮುಂದೆ ಕಳುಹಿಸಿದರೆ, ಒಂದುವೇಳೆ ಏಸಾವನು ನನ್ನನ್ನು ಕ್ಷಮಿಸಿ ನನ್ನನ್ನು ಸ್ವೀಕರಿಸಿಕೊಳ್ಳಬಹುದು” ಎಂಬುದು ಯಾಕೋಬನ ಆಲೋಚನೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯಾಕೋಬನು ತನ್ನೊಳಗೆ, “ನನ್ನ ಮುಂದೆ ಹೋಗುವ ಈ ಕಾಣಿಕೆಯಿಂದ ಏಸಾವನನ್ನು ಸಮಾಧಾನಪಡಿಸುವೆನು. ಆಮೇಲೆ ಅವನನ್ನು ಸಂಧಿಸುವಾಗ, ಒಂದು ವೇಳೆ ನನ್ನನ್ನು ಪ್ರೀತಿಯಿಂದ ಸ್ವೀಕರಿಸುವನೇನೋ” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ‘ನಿಮ್ಮ ದಾಸ ಯಕೋಬನು ನಮ್ಮ ಹಿಂದೆ ಬರುತ್ತಿದ್ದಾರೆ,’ ಎನ್ನಿರಿ” ಎಂದು ಆಜ್ಞಾಪಿಸಿದನು. ಯಕೋಬನು ತನ್ನೊಳಗೆ, “ನನಗೆ ಮುಂಚಿತವಾಗಿ ಹೋಗುವ ಈ ಕಾಣಿಕೆಯಿಂದ ಏಸಾವನನ್ನು ಸಮಾಧಾನಪಡಿಸಿದ ಮೇಲೆ ನಾನು ಅವನನ್ನು ಭೇಟಿ ಆಗುತ್ತೇನೆ. ಆಗ ಒಂದು ವೇಳೆ ನನ್ನನ್ನು ಪ್ರೀತಿಯಿಂದ ಅಂಗೀಕರಿಸುವನು,” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇದೇ ರೀತಿಯಾಗಿ ಮಾತಾಡಿ - ನಿಮ್ಮ ಸೇವಕನಾದ ಯಾಕೋಬನೇ ನಮ್ಮ ಹಿಂದೆ ಬರುತ್ತಾನೆ ಅನ್ನಿರಿ ಎಂದು ಅಪ್ಪಣೆಕೊಟ್ಟನು. ಯಾಕೋಬನು ತನ್ನೊಳಗೆ - ನನ್ನ ಮುಂದೆ ಹೋಗುವ ಈ ಕಾಣಿಕೆಯಿಂದ ಏಸಾವನನ್ನು ಸಮಾಧಾನಪಡಿಸಿದ ಮೇಲೆ ಅವನ ಸನ್ನಿಧಿಗೆ ಸೇರುವೆನು; ಒಂದು ವೇಳೆ ನನ್ನನ್ನು ಪ್ರೀತಿಯಿಂದ ಅಂಗೀಕರಿಸುವನು ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇದಲ್ಲದೆ, ‘ನಿನ್ನ ದಾಸ ಯಾಕೋಬನು ನಮ್ಮ ಹಿಂದೆ ಬರುತ್ತಾನೆಂದು ಹೇಳಬೇಕು,’ ” ಎಂದು ಆಜ್ಞಾಪಿಸಿದನು. ಏಕೆಂದರೆ ನನ್ನ ಮುಂದೆ ಹೋಗುವ ಕಾಣಿಕೆಯಿಂದ ಅವನನ್ನು ಸಮಾಧಾನಪಡಿಸುವೆನು. ತರುವಾಯ ಅವನ ಮುಖವನ್ನು ಕಾಣುವೆನು. ಅವನು ನನ್ನನ್ನು ಅಂಗೀಕರಿಸುವನೇನೋ ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:20
14 ತಿಳಿವುಗಳ ಹೋಲಿಕೆ  

ನಿನ್ನ ಮೇಲೆ ಕೋಪಗೊಂಡಿರುವವನಿಗೆ ಒಂದು ಉಡುಗೊರೆಯನ್ನು ಗುಟ್ಟಾಗಿ ಕೊಡು. ಗುಟ್ಟಾಗಿ ಕೊಟ್ಟ ಉಡುಗೊರೆಯು ಮಹಾ ಕೋಪವನ್ನೂ ಅಡಗಿಸಬಲ್ಲದು.


ಅವನು ತನ್ನೊಂದಿಗೆ ಸಮ್ಮತಿಸದಿರುವ ಜನರಿಗೆ ಸಾತ್ವಿಕ ರೀತಿಯಲ್ಲಿ ಉಪದೇಶ ಮಾಡಬೇಕು. ಅವರು ಸತ್ಯವನ್ನು ಅಂಗೀಕರಿಸಿಕೊಳ್ಳುವಂತೆ ದೇವರು ಅವರ ಹೃದಯಗಳನ್ನು ಪರಿವರ್ತಿಸಬಲ್ಲನು.


ಒಂದುವೇಳೆ ದೇವರು ತನ್ನ ಮನಸ್ಸನ್ನು ಬದಲಾಯಿಸಾನು. ತಾನು ಯೋಚಿಸಿದ್ದನ್ನು ನೆರವೇರಿಸದೆ ಇರುವನೋ ಏನೋ? ಆತನು ತನ್ನ ಯೋಜನೆಯನ್ನು ಹಿಂದೆಗೆದು, ಕೋಪಿಸಿಕೊಳ್ಳದೆ, ನಮ್ಮನ್ನು ಶಿಕ್ಷಿಸದೆ ಇರುವನೋ ಏನೋ! ಆಗ ನಾವು ನಾಶವಾಗದಿರಬಹುದು!


ರಾಜನು ಕೋಪದಿಂದಿರುವಾಗ ಯಾರನ್ನಾದರೂ ಕೊಂದರೂ ಕೊಲ್ಲಬಹುದು. ಆದರೆ ಜ್ಞಾನಿಯು ಆತನ ಕೋಪವನ್ನು ಶಮನಗೊಳಿಸಬಲ್ಲನು.


ಮುಂಗೋಪಿಯು ಜಗಳವನ್ನು ಎಬ್ಬಿಸುವನು. ತಾಳ್ಮೆಯುಳ್ಳವನು ಶಾಂತಿಯನ್ನು ಸ್ಥಾಪಿಸುವನು.


ಏನೇ ಕೊಟ್ಟರೂ, ಎಷ್ಟೇ ಹಣ ಕೊಟ್ಟರೂ ಅವನ ಕೋಪವನ್ನು ತಡೆಯಲಾಗುವುದಿಲ್ಲ.


ಅವನ ಸೇವಕರು ಅವನಿಗೆ, “ಇಸ್ರೇಲಿನ ರಾಜರುಗಳು ಕನಿಕರವುಳ್ಳವರೆಂದು ನಾವು ಕೇಳಿದ್ದೇವೆ. ನಾವು ಗೋಣಿತಟ್ಟುಗಳನ್ನು (ನಮ್ಮ ನಡುಗಳಿಗೆ) ಕಟ್ಟಿಕೊಂಡು, ಹಗ್ಗಗಳನ್ನು ನಮ್ಮ ತಲೆಗಳ ಮೇಲೆ ಹಾಕಿಕೊಂಡು ಇಸ್ರೇಲಿನ ರಾಜನ ಬಳಿಗೆ ಹೋಗೋಣ. ಅವನು ನಮ್ಮ ಜೀವವನ್ನು ಉಳಿಸಬಹುದು” ಎಂದು ಹೇಳಿದರು.


ಹೀಗೆ ನಿಮ್ಮ ದೇಶವನ್ನು ನಾಶಗೊಳಿಸುತ್ತಿರುವ ಗಡ್ಡೆಗಳ, ಇಲಿಗಳ ಮಾದರಿಗಳನ್ನು ಮಾಡಿಸಿರಿ. ಇಸ್ರೇಲರ ದೇವರಿಗೆ ಚಿನ್ನದ ಆ ಮಾದರಿಗಳನ್ನು ಕಾಣಿಕೆಯಾಗಿ ಸಲ್ಲಿಸಿರಿ. ಆಗ ಇಸ್ರೇಲರ ದೇವರು ನಿಮ್ಮನ್ನೂ ನಿಮ್ಮ ದೇವರುಗಳನ್ನೂ ನಿಮ್ಮ ದೇಶವನ್ನೂ ಶಿಕ್ಷಿಸುವುದನ್ನು ನಿಲ್ಲಿಸಬಹುದು.


ಅದಕ್ಕೆ ಅವರ ತಂದೆಯಾದ ಇಸ್ರೇಲನು, “ಇದು ನಿಜವಾಗಿಯೂ ಸತ್ಯವಾಗಿದ್ದರೆ, ನಿನ್ನೊಂದಿಗೆ ಬೆನ್ಯಾಮೀನನನ್ನು ಕರೆದುಕೊಂಡು ಹೋಗು. ಆದರೆ ರಾಜ್ಯಪಾಲನಿಗೆ ಶ್ರೇಷ್ಠವಾದ ಕೆಲವು ಉಡುಗೊರೆಗಳನ್ನು ತೆಗೆದುಕೊಂಡು ಹೋಗಿ. ನಮ್ಮ ನಾಡಿನಲ್ಲಿ ದೊರಕುವ ಜೇನು, ಆಕ್ರೋಡು, ಬಾದಾಮಿ, ಹಾಲುಮಡ್ಡಿ ಮತ್ತು ಗೋಲರಸ ಇವುಗಳನ್ನು ತೆಗೆದುಕೊಳ್ಳಿ.


ಇದೇ ರೀತಿ ಮಾಡುವಂತೆ ಯಾಕೋಬನು ಎರಡನೆಯ ಸೇವಕನಿಗೆ, ಮೂರನೆಯ ಸೇವಕನಿಗೆ ಮತ್ತು ಉಳಿದೆಲ್ಲಾ ಸೇವಕರಿಗೆ ಆಜ್ಞಾಪಿಸಿದನು. ಅವನು ಅವರಿಗೆ, “ನೀವು ಏಸಾವನನ್ನು ಭೇಟಿಯಾದಾಗ ಇದೇ ರೀತಿ ಮಾಡಬೇಕು.


ಯಾಕೋಬನು ಏಸಾವನಿಗೆ ಉಡುಗೊರೆಗಳನ್ನು ಕಳುಹಿಸಿ ಆ ರಾತ್ರಿ ಪಾಳೆಯದಲ್ಲಿ ಉಳಿದುಕೊಂಡನು.


ಪ್ರಮುಖನನ್ನು ಭೇಟಿಯಾಗಬೇಕಿದ್ದರೆ, ಅವನಿಗೆ ಒಂದು ಉಡುಗೊರೆಯನ್ನು ಕೊಡು. ಆಗ ನೀನು ಅವನನ್ನು ಸುಲಭವಾಗಿ ಭೇಟಿಯಾಗಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು