Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:22 - ಪರಿಶುದ್ದ ಬೈಬಲ್‌

22 ಆ ರಾತ್ರಿ, ಯಾಕೋಬನು ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ ತನ್ನ ಇಬ್ಬರು ದಾಸಿಯರನ್ನೂ ತನ್ನ ಹನ್ನೊಂದು ಮಂದಿ ಗಂಡುಮಕ್ಕಳನ್ನೂ ಕರೆದುಕೊಂಡು ಹೊರಟು ಯಬ್ಬೋಕ್ ಹೊಳೆಯನ್ನು ದಾಟತಕ್ಕ ಸ್ಥಳಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆ ರಾತ್ರಿ ಅವನು ತನ್ನ ಇಬ್ಬರು ಹೆಂಡತಿಯರನ್ನು, ಇಬ್ಬರು ದಾಸಿಯರನ್ನು ಹಾಗೂ ಹನ್ನೊಂದು ಮಂದಿ ಮಕ್ಕಳನ್ನು ಕರೆದುಕೊಂಡು ಯಬ್ಬೋಕ್ ಹೊಳೆಯನ್ನು ದಾಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆ ರಾತ್ರಿ ಯಕೋಬನು ತನ್ನ ಇಬ್ಬರು ಹೆಂಡತಿಯರನ್ನೂ ಇಬ್ಬರು ದಾಸಿಯರನ್ನೂ ಹನ್ನೊಂದು ಮಂದಿ ಮಕ್ಕಳನ್ನೂ ಕರೆದುಕೊಂಡು ‘ಯಬ್ಬೋಕ್’ ಹೊಳೆಯನ್ನು ದಾಟುವ ಸ್ಥಳದಲ್ಲಿ ದಾಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆ ರಾತ್ರಿ ಅವನು ತನ್ನ ಇಬ್ಬರು ಹೆಂಡರನ್ನೂ ಇಬ್ಬರು ದಾಸಿಯರನ್ನೂ ಹನ್ನೊಂದು ಮಂದಿ ಮಕ್ಕಳನ್ನೂ ಕರೆದುಕೊಂಡು ಯಬ್ಬೋಕ್ ಹೊಳೆಯನ್ನು ದಾಟುವ ಸ್ಥಳದಲ್ಲಿ ದಾಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆ ರಾತ್ರಿಯಲ್ಲಿ ಯಾಕೋಬನು ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ, ತನ್ನ ಇಬ್ಬರು ದಾಸಿಯರನ್ನೂ, ತನ್ನ ಹನ್ನೊಂದು ಮಂದಿ ಪುತ್ರರನ್ನೂ ಕರೆದುಕೊಂಡು ಯಬ್ಬೋಕ್ ಎಂಬ ಹೊಳೆಯ ದಂಡೆಯನ್ನು ದಾಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:22
10 ತಿಳಿವುಗಳ ಹೋಲಿಕೆ  

ರೂಬೇನ್ ಮತ್ತು ಗಾದ್ ಕುಲಗಳವರಿಗೆ ಗಿಲ್ಯಾದಿನಿಂದ ಪ್ರಾರಂಭವಾಗುವ ಪ್ರಾಂತ್ಯವನ್ನು ಕೊಟ್ಟೆನು. ಇದು ಅರ್ನೋನ್ ಕಣಿವೆಯಿಂದಿಡಿದು ಯಬ್ಬೋಕ್ ಹೊಳೆಯ ತನಕ ವಿಸ್ತಾರವಾಗಿದೆ. ಯಬ್ಬೋಕ್ ಹೊಳೆಯು ಅಮ್ಮೋನಿಯರ ಮೇರೆಯಾಗಿದೆ.


ಆದರೆ ಅಮ್ಮೋನಿಯರಿಗೆ ಸೇರಿದ ದೇಶದ ಸಮೀಪಕ್ಕೆ ನಾವು ಹೋಗಲಿಲ್ಲ: ಯಬ್ಬೋಕ್ ನದಿಯ ಬದಿಗೂ ನಾವು ಹೋಗಲಿಲ್ಲ: ಬೆಟ್ಟಪ್ರದೇಶಗಳ ಪಟ್ಟಣಗಳಿಗೂ ನಾವು ಹೋಗಲಿಲ್ಲ: ನಮ್ಮ ದೇವರಾದ ಯೆಹೋವನು ನಮಗೆ ಕೊಡದೆ ಇರುವ ದೇಶಗಳ ಬಳಿಗೆ ನಾವು ಹೋಗಲೇ ಇಲ್ಲ.


ಯಾವನಾದರೂ ಸ್ವಂತ ಜನರನ್ನು ವಿಶೇಷವಾಗಿ ಸ್ವಂತ ಕುಟುಂಬದವರನ್ನು ಪರಿಪಾಲಿಸದೆ ಹೋದರೆ ಅವನು ಸತ್ಯಬೋಧನೆಯನ್ನು ತಿರಸ್ಕರಿಸುವವನಾಗಿದ್ದಾನೆ. ಅವನು ನಂಬದವನಿಗಿಂತ ತುಂಬಾ ಕೀಳಾದವನು.


ಅವರು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನನ್ನು ಸೋಲಿಸಿದರು. ಅವನು ಅರ್ನೋನ್ ನದಿಯ ತೀರದಲ್ಲಿದ್ದ ಅರೋಯೇರ್‌ನಿಂದ ಯಬ್ಬೋಕ್ ನದಿಯವರೆಗಿರುವ ಪ್ರದೇಶವನ್ನು ಆಳುತ್ತಿದ್ದನು. ಅವನ ರಾಜ್ಯವು ಆ ತಗ್ಗು ಪ್ರದೇಶದ ಮಧ್ಯದಿಂದ ಪ್ರಾರಂಭವಾಗುತ್ತಿತ್ತು. ಇದು ಅಮ್ಮೋನಿಯರ ಪ್ರದೇಶಕ್ಕೂ ಮೇರೆಯಾಗಿತ್ತು. ಗಿಲ್ಯಾದಿನ ಅರ್ಧ ಪ್ರದೇಶವು ಸೀಹೋನನ ಆಳ್ವಿಕೆಗೆ ಒಳಗಾಗಿತ್ತು.


ರಾಹೇಲಳು ಮಗನನ್ನು ಹೆರುವಾಗ ಸತ್ತುಹೋದಳು; ಸಾಯುವುದಕ್ಕೆ ಮೊದಲು, ರಾಹೇಲಳು ಆ ಮಗುವಿಗೆ ಬೆನೋನಿ ಎಂದು ಹೆಸರಿಟ್ಟಳು. ಆದರೆ ಯಾಕೋಬನು ಅವನಿಗೆ ಬೆನ್ಯಾಮೀನ್ ಎಂದು ಹೆಸರಿಟ್ಟನು. ಹಾಗೆ ರಾಹೇಳಲು ಮೃತಪಟ್ಟಳು.


ಏಳು ವರ್ಷಗಳಾದ ಮೇಲೆ ಯಾಕೋಬನು ಲಾಬಾನನಿಗೆ, “ನನಗೆ ರಾಹೇಲಳನ್ನು ಮದುವೆ ಮಾಡಿಕೊಡು. ನನ್ನ ಸೇವೆಯ ಕಾಲ ಮುಗಿದುಹೋಯಿತು” ಎಂದು ಹೇಳಿದನು.


ಯಾಕೋಬನು ಏಸಾವನಿಗೆ ಉಡುಗೊರೆಗಳನ್ನು ಕಳುಹಿಸಿ ಆ ರಾತ್ರಿ ಪಾಳೆಯದಲ್ಲಿ ಉಳಿದುಕೊಂಡನು.


ಯಾಕೋಬನು ತನ್ನ ಕುಟುಂಬದವರನ್ನೂ ತನ್ನಲ್ಲಿದ್ದ ಪ್ರತಿಯೊಂದನ್ನೂ ಆಚೆದಡಕ್ಕೆ ಕಳುಹಿಸಿದನು.


ಅಮ್ಮೋನಿಯರ ಅರಸನು ಯೆಫ್ತಾಹನ ದೂತರಿಗೆ, “ಇಸ್ರೇಲರು ಈಜಿಪ್ಟಿನಿಂದ ಬಂದಾಗ ನಮ್ಮ ಪ್ರದೇಶವನ್ನು ತೆಗೆದುಕೊಂಡರು; ಆದ್ದರಿಂದ ಈಗ ನಾವು ಇಸ್ರೇಲರೊಂದಿಗೆ ಯುದ್ಧ ಮಾಡುತ್ತಿದ್ದೇವೆ. ಅವರು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯವರೆಗೂ ಜೋರ್ಡನ್ ನದಿಯವರೆಗಿನ ಭೂಮಿಯನ್ನೂ ತೆಗೆದುಕೊಂಡಿದ್ದಾರೆ. ಈಗ ನಮ್ಮ ಭೂಮಿಯನ್ನು ನಮಗೆ ಶಾಂತಿಯಿಂದ ಹಿಂದಿರುಗಿಸಬೇಕು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು