Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:24 - ಪರಿಶುದ್ದ ಬೈಬಲ್‌

24 ಎಲ್ಲರನ್ನೂ ಹೊಳೆ ದಾಟಿಸಿದ ಮೇಲೆ ಕೊನೆಯವನಾಗಿ ತಾನೊಬ್ಬನೇ ಹೊಳೆದಾಟಲು ನಿಂತಿದ್ದಾಗ ಒಬ್ಬ ಪುರುಷನು ಬಂದು ಸೂರ್ಯೋದಯದವರೆಗೂ ಹೋರಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯಾಕೋಬನು ಒಂಟಿಯಾಗಿ ಹಿಂದೆ ನಿಂತಿರಲು ಯಾರೋ ಒಬ್ಬ ಪುರುಷನು ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಯಕೋಬನು ಒಂಟಿಗನಾಗಿ ಹಿಂದೆ ನಿಂತಿದ್ದನು, ಯಾರೋ ಒಬ್ಬ ಪುರುಷ ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಯಾಕೋಬನು ಒಂಟಿಗನಾಗಿ ಹಿಂದೆ ನಿಂತಿರಲು ಯಾರೋ ಒಬ್ಬ ಪುರುಷನು ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಗ ಯಾಕೋಬನು ಒಬ್ಬನೇ ಉಳಿದಾಗ, ಒಬ್ಬ ಮನುಷ್ಯನು ಉದಯವಾಗುವವರೆಗೆ ಅವನ ಸಂಗಡ ಹೋರಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:24
23 ತಿಳಿವುಗಳ ಹೋಲಿಕೆ  

ನಮ್ಮ ಹೋರಾಟವು ಜನರ ವಿರುದ್ಧವಲ್ಲ. ನಾವು ಅಂಧಕಾರದ ಅಧಿಪತಿಗಳಿಗೂ ಅಧಿಕಾರಿಗಳಿಗೂ ಮತ್ತು ಈ ಲೋಕದ ಕತ್ತಲೆಯ ಶಕ್ತಿಗಳಿಗೂ ಆಕಾಶಮಂಡಲದ ದುಷ್ಟಶಕ್ತಿಗಳಿಗೂ ವಿರುದ್ಧವಾಗಿ ಹೋರಾಡುತ್ತಿದ್ದೇವೆ.


“ಸ್ವರ್ಗಕ್ಕೆ ನಡೆಸುವ ಕಿರಿದಾದ ಬಾಗಿಲಿನ ಮೂಲಕ ಹೋಗಲು ಪ್ರಯಾಸಪಡಿರಿ! ಅನೇಕ ಜನರು ಅದರ ಮೂಲಕ ಹೋಗಲು ಪ್ರಯತ್ನಿಸುತ್ತಾರೆ. ಆದರೆ ಅವರಿಂದ ಆಗುವುದಿಲ್ಲ.


ಆಗ ಆ ಪುರುಷನು, “ಇನ್ನು ಮೇಲೆ ನಿನ್ನ ಹೆಸರು ‘ಯಾಕೋಬ’ ಎಂದಿರುವುದಿಲ್ಲ. ಇಂದಿನಿಂದ ನಿನ್ನ ಹೆಸರು ‘ಇಸ್ರೇಲ್’ ಎಂದಾಗುವುದು. ನಾನೇ ನಿನಗೆ ಈ ಹೆಸರನ್ನು ಕೊಟ್ಟಿದ್ದೇನೆ; ಯಾಕೆಂದರೆ ನೀನು ದೇವರೊಡನೆಯೂ ಮನುಷ್ಯರೊಡನೆಯೂ ಹೋರಾಡಿದೆ; ಆದರೂ ನೀನು ಸೋಲಲಿಲ್ಲ” ಎಂದು ಹೇಳಿದನು.


ನೀವು ಪವಿತ್ರಾತ್ಮನ ಸಹಾಯದಿಂದ ಯಾವಾಗಲೂ ದೇವರಲ್ಲಿ ಪ್ರಾರ್ಥಿಸುತ್ತಾ ಸಕಲವಿಧವಾದ ವಿಜ್ಞಾಪನೆಗಳನ್ನು ಮಾಡಿರಿ ಮತ್ತು ನಿಮಗೆ ಅಗತ್ಯವಾದವುಗಳಿಗಾಗಿ ಬೇಡಿಕೊಳ್ಳಿರಿ. ಇದಕ್ಕಾಗಿ ಯಾವಾಗಲೂ ಸಿದ್ಧರಾಗಿರಿ. ಪ್ರಾರ್ಥನೆಯನ್ನು ಬಿಟ್ಟುಕೊಡಬೇಡಿರಿ. ದೇವಜನರೆಲ್ಲರಿಗೋಸ್ಕರ ಯಾವಾಗಲೂ ಪ್ರಾರ್ಥಿಸಿರಿ.


ಆದ್ದರಿಂದ ಯಾಕೋಬನು, “ಈ ಸ್ಥಳದಲ್ಲಿ ನಾನು ದೇವರನ್ನು ಮುಖಾಮುಖಿಯಾಗಿ ನೋಡಿದರೂ ನನ್ನ ಜೀವ ಉಳಿಯಿತು” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.


ಯೇಸುವಿಗೆ ತುಂಬಾ ವೇದನೆಯಿತ್ತು. ಆತನು ಪ್ರಾರ್ಥನೆಯಲ್ಲಿ ಕಷ್ಟಪಟ್ಟು ಹೋರಾಡಿದನು. ಆತನ ಮುಖದಲ್ಲಿ ಬೆವರು ರಕ್ತದೋಪಾದಿಯಲ್ಲಿ ತೊಟ್ಟಿಕ್ಕತೊಡಗಿತು.


ರಾಹೇಲಳು, “ನನ್ನ ಅಕ್ಕನೊಂದಿಗೆ ಕಷ್ಟಪಟ್ಟು ಹೋರಾಡಿ ಗೆದ್ದಿದ್ದೇನೆ” ಎಂದು ಹೇಳಿ ಆ ಮಗುವಿಗೆ ನಫ್ತಾಲಿ ಎಂದು ಹೆಸರಿಟ್ಟಳು.


ಮೊದಲನೆಯ ಮನುಷ್ಯನು ಭೂಮಿಯ ಧೂಳಿನಿಂದ ಬಂದನು. ಆದರೆ ಎರಡನೆಯ ಮನುಷ್ಯನು (ಕ್ರಿಸ್ತನು) ಪರಲೋಕದಿಂದ ಬಂದನು.


ಎಪಫ್ರನು ಸಹ ವಂದನೆ ತಿಳಿಸಿದ್ದಾನೆ. ಅವನು ಯೇಸು ಕ್ರಿಸ್ತನ ಸೇವಕನು. ಅವನು ನಿಮ್ಮವರಲ್ಲಿ ಒಬ್ಬನಾಗಿದ್ದಾನೆ. ಅವನು ಯಾವಾಗಲೂ ನಿಮಗಾಗಿ ಪ್ರಾರ್ಥಿಸುತ್ತಾನೆ. ನೀವು ಆತ್ಮಿಕತೆಯಲ್ಲಿ ಬೆಳೆಯುತ್ತಾ ಸಂಪೂರ್ಣತೆಯನ್ನು ಮುಟ್ಟಬೇಕೆಂತಲೂ ದೇವರ ಚಿತ್ತವನ್ನು ಪೂರ್ಣವಾಗಿ ತಿಳಿದುಕೊಂಡು ದೃಢವಾಗಿರಬೇಕೆಂತಲೂ ಪ್ರಾರ್ಥಿಸುತ್ತಾನೆ.


ನನ್ನ ಪ್ರಿಯನು ನೆಲದಾವರೆಗಳ ಮಧ್ಯದಲ್ಲಿ ಮೇಯಿಸುವನು. ನನ್ನ ಪ್ರಿಯನೇ, ಹೊರಡು, ಬೆತೇರ್ ಬೆಟ್ಟಗಳ ಮೇಲೆ ಸಾರಂಗದಂತೆಯೂ ಪ್ರಾಯದ ಜಿಂಕೆಯಂತೆಯೂ ಇರು!


ನನ್ನನ್ನು ಎಲ್ಲಾ ತೊಂದರೆಗಳಿಂದ ಕಾಪಾಡಿದ ದೂತನೇ ಆತನು. ಈ ಹುಡುಗರನ್ನು ಆಶೀರ್ವದಿಸಬೇಕೆಂದು ನಾನು ಆತನಲ್ಲಿ ಪ್ರಾರ್ಥಿಸುವೆನು. ಇಂದಿನಿಂದ ಈ ಮಕ್ಕಳು ನನ್ನ ಹೆಸರನ್ನೇ ಹೊಂದಿಕೊಳ್ಳುವರು. ನನ್ನ ಪೂರ್ವಿಕರಾದ ಅಬ್ರಹಾಮ್ ಮತ್ತು ಇಸಾಕರ ಹೆಸರನ್ನು ಇವರು ಹೊಂದಿಕೊಳ್ಳುವರು. ಇವರು ಭೂಮಿಯ ಮೇಲೆ ಬೆಳೆದು ದೊಡ್ಡ ಕುಟುಂಬಗಳಾಗುವಂತೆಯೂ ದೊಡ್ಡ ಜನಾಂಗಗಳಾಗುವಂತೆಯೂ ನಾನು ಪ್ರಾರ್ಥಿಸುವೆನು.”


ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.


ನಿಮಗೆ ಸಹಾಯ ಮಾಡಲು ನಾನು ಬಹಳವಾಗಿ ಮಾಡುತ್ತಿರುವ ಪ್ರಯತ್ನ ನಿಮಗೆ ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ ಇದಲ್ಲದೆ ಲವೊದಿಕೀಯದಲ್ಲಿರುವವರಿಗೆ ಮತ್ತು ನನ್ನನ್ನು ಎಂದೂ ನೋಡಿಲ್ಲದವರಿಗೆ ಸಹ ಸಹಾಯ ಮಾಡಲು ಪ್ರಯತ್ನಿಸುತ್ತಿದ್ದೇನೆ.


ಸಹೋದರ ಸಹೋದರಿಯರೇ, ನೀವು ನನಗೋಸ್ಕರ ದೇವರಲ್ಲಿ ಪ್ರಾರ್ಥಿಸುವುದರ ಮೂಲಕ ನನ್ನ ಸೇವೆಗೆ ಸಹಾಯ ಮಾಡಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನಮ್ಮ ಪ್ರಭುವಾದ ಯೇಸುವಿನ ನಿಮಿತ್ತವಾಗಿಯೂ ಪವಿತ್ರಾತ್ಮನು ನಮಗೆ ಕೊಡುವ ಪ್ರೀತಿಯ ನಿಮಿತ್ತವಾಗಿಯೂ ನೀವು ಪ್ರಾರ್ಥಿಸಿರಿ.


ಹೀಗಿದ್ದಲ್ಲಿ ರಾಜನು ಮಳೆಯಲ್ಲಿ ಆಶ್ರಯ ಸ್ಥಳವಾಗಿಯೂ ಗಾಳಿಯಲ್ಲಿ ಮರೆಯಂತೆಯೂ ಮರುಭೂಮಿಯಲ್ಲಿ ಒರತೆಯಂತೆಯೂ ಬೆಂಗಾಡಿನಲ್ಲಿ ಬಂಡೆಯ ನೆರಳಿನಂತೆಯೂ ಇರುವನು.


ಆದ್ದರಿಂದ ಹಗಲಿನ ಬೆಳಕು ಪ್ರಕಾಶಿಸುವುದಕ್ಕಿಂತ ಸ್ವಲ್ಪ ಮೊದಲು, ಮೋಶೆಯು ತನ್ನ ಕೈಯನ್ನು ಸಮುದ್ರದ ಮೇಲೆ ಚಾಚಿದನು. ನೀರು ತನ್ನ ಸರಿಯಾದ ಮಟ್ಟಕ್ಕೆ ಹಿಂತಿರುಗಿತು. ಈಜಿಪ್ಟಿನವರು ನೀರಿನಿಂದ ಓಡಿಹೋಗಲು ಬಹಳವಾಗಿ ಪ್ರಯತ್ನಿಸಿದರು. ಆದರೆ ಯೆಹೋವನು ಈಜಿಪ್ಟಿನವರನ್ನು ಸಮುದ್ರದಲ್ಲಿ ಕೆಡವಿಬಿಟ್ಟನು.


ಅಬ್ರಹಾಮನು ದೃಷ್ಟಿಸಿ ನೋಡಿದಾಗ ತನ್ನ ಮುಂದೆ ಮೂವರು ಪುರುಷರು ನಿಂತಿರುವುದನ್ನು ಕಂಡನು. ಕೂಡಲೇ ಅವರ ಬಳಿಗೆ ಓಡಿಹೋಗಿ ಅವರಿಗೆ ಸಾಷ್ಟಾಂಗನಮಸ್ಕಾರ ಮಾಡಿ ಅವರಿಗೆ,


ಯಾಕೋಬನು ತನ್ನ ಕುಟುಂಬದವರನ್ನೂ ತನ್ನಲ್ಲಿದ್ದ ಪ್ರತಿಯೊಂದನ್ನೂ ಆಚೆದಡಕ್ಕೆ ಕಳುಹಿಸಿದನು.


ಯಾಕೋಬನನ್ನು ಸೋಲಿಸಲು ತನಗೆ ಸಾಧ್ಯವಾಗದಿರುವುದನ್ನು ಗಮನಿಸಿದ ಆ ಪುರುಷನು ಯಾಕೋಬನ ತೊಡೆಯನ್ನು ಮುಟ್ಟಿದನು. ಆಗ ಯಾಕೋಬನ ಕೀಲು ತಪ್ಪಿತು.


ಯೆಹೋಶುವನು ಜೆರಿಕೊವಿನ ಸಮೀಪದಲ್ಲಿದ್ದಾಗ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಅವನ ಎದುರಿಗೆ ನಿಂತಿರುವುದನ್ನು ಕಂಡನು. ಆ ಮನುಷ್ಯನ ಕೈಯಲ್ಲಿ ಒಂದು ಖಡ್ಗವಿತ್ತು. ಯೆಹೋಶುವನು ಆ ಮನುಷ್ಯನ ಹತ್ತಿರಹೋಗಿ, “ನೀನು ನಮ್ಮ ಜನರ ಸ್ನೇಹಿತನೋ ಅಥವಾ ನೀನು ನಮ್ಮ ಶತ್ರುಗಳಲ್ಲಿ ಒಬ್ಬನೋ?” ಎಂದು ಕೇಳಿದನು.


ನಾನೊಬ್ಬನೇ ಅಲ್ಲಿದ್ದೆ. ನಾನು ಆ ದರ್ಶನವನ್ನು ನೋಡುತ್ತಲೇ ಇದ್ದೆ. ಅದರಿಂದ ನನಗೆ ಭಯವಾಯಿತು. ನಾನು ದುರ್ಬಲನಾದೆ. ನನ್ನ ಮುಖವು ಸತ್ತವರ ಮುಖದಂತೆ ಬಿಳುಪೇರಿತು; ನಾನು ನಿಸ್ಸಹಾಯಕನಾದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು