Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:7 - ಪರಿಶುದ್ದ ಬೈಬಲ್‌

7 ಯಾಕೋಬನಿಗೆ ಭಯವಾಯಿತು. ಅವನು ತನ್ನೊಡನೆ ಇದ್ದ ಜನರನ್ನು ಎರಡು ಗುಂಪುಗಳನ್ನಾಗಿ ವಿಂಗಡಿಸಿದನು. ಅವನು ಎಲ್ಲಾ ಆಡುಕುರಿಗಳನ್ನೂ ದನಕರುಗಳನ್ನೂ ಒಂಟೆಗಳನ್ನೂ ಎರಡು ಗುಂಪುಗಳನ್ನಾಗಿ ವಿಂಗಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯಾಕೋಬನಿಗೆ ಬಹು ಭಯವೂ ಕಳವಳವೂ ಉಂಟಾದವು. ಅವನು ತನ್ನೊಂದಿಗಿದ್ದ ಜನರನ್ನು, ಕುರಿದನಗಳನ್ನು ಹಾಗೂ ಒಂಟೆಗಳನ್ನು ಎರಡು ಗುಂಪುಗಳಾಗಿ ವಿಭಾಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಯಕೋಬನು ಬಹಳ ದಿಗಿಲುಗೊಂಡನು, ಕಳವಳಗೊಂಡನು; ತನ್ನ ಜನರನ್ನೂ ಕುರಿ, ದನ, ಒಂಟೆಗಳನ್ನೂ ಎರಡು ಪರಿವಾರಗಳಾಗಿ ವಿಂಗಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯಾಕೋಬನಿಗೆ ಬಹು ಭಯವೂ ಕಳವಳವೂ ಉಂಟಾದವು. ಅವನು ತನ್ನೊಂದಿಗಿದ್ದ ಜನರನ್ನೂ ಕುರಿ ದನ ಒಂಟೆಗಳನ್ನೂ ಎರಡು ಪಾಳೆಯ ಮಾಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಯಾಕೋಬನು ಬಹಳವಾಗಿ ಭಯಪಟ್ಟು, ತನ್ನ ಸಂಗಡ ಇದ್ದ ಜನರನ್ನೂ, ಕುರಿಗಳನ್ನೂ, ದನಗಳನ್ನೂ, ಒಂಟೆಗಳನ್ನೂ ಎರಡು ಗುಂಪುಗಳಾಗಿ ವಿಭಾಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:7
22 ತಿಳಿವುಗಳ ಹೋಲಿಕೆ  

ನಾವು ಇಲ್ಲಿಂದ ಹೊರಟು ಬೇತೇಲಿಗೆ ಹೋಗೋಣ; ನಾನು ಕಷ್ಟದಲ್ಲಿದ್ದಾಗ ಸಹಾಯಮಾಡಿದ ದೇವರಿಗಾಗಿ ಒಂದು ಯಜ್ಞವೇದಿಕೆಯನ್ನು ಅಲ್ಲಿ ಕಟ್ಟಿಸುತ್ತೇನೆ. ನಾನು ಹೋದಕಡೆಗಳಲ್ಲೆಲ್ಲಾ ಆ ದೇವರು ನನ್ನೊಂದಿಗೆ ಇದ್ದನು” ಎಂದು ಹೇಳಿದನು.


ಕ್ರಿಸ್ತ ಯೇಸುವಿನಲ್ಲಿ ದೇವರ ಚಿತ್ತಕ್ಕನುಸಾರವಾಗಿ ಜೀವಿಸುವ ಪ್ರತಿಯೊಬ್ಬರೂ ಹಿಂಸೆಗೆ ಒಳಗಾಗುವರು.


ನಮಗೆ ಸಂಕಷ್ಟವಿರುವಾಗಲೆಲ್ಲಾ ಆತನು ನಮ್ಮನ್ನು ಸಂತೈಸುತ್ತಾನೆ; ಸಂಕಷ್ಟಗಳಲ್ಲಿರುವ ಇತರ ಜನರನ್ನು ಸಂತೈಸಲು ಇದರ ಮೂಲಕ ನಾವು ಸಹ ಶಕ್ತರಾಗುತ್ತೇವೆ. ದೇವರು ನಮ್ಮನ್ನು ಸಂತೈಸುವಂತೆಯೇ ನಾವು ಸಹ ಅವರನ್ನು ಸಂತೈಸಬಲ್ಲವರಾಗುತ್ತೇವೆ.


ಯೇಸುವಿನ ಶಿಷ್ಯರನ್ನು ಬಲಗೊಳಿಸಿ, ನಂಬಿಕೆಯಲ್ಲಿ ದೃಢವಾಗಿರಲು ಅವರಿಗೆ ಪ್ರೋತ್ಸಾಹಿಸಿದರು, “ನಾವು ದೇವರ ರಾಜ್ಯಕ್ಕೆ ಅನೇಕ ಕಷ್ಟಗಳ ಮೂಲಕ ಹೋಗಬೇಕಾಗಿದೆ” ಎಂದು ಬೋಧಿಸಿದರು.


“ನೀವು ನನ್ನಲ್ಲಿ ಶಾಂತಿಯನ್ನು ಹೊಂದಿದವರಾಗಿರಬೇಕೆಂದು ನಾನು ನಿಮಗೆ ಈ ಸಂಗತಿಗಳನ್ನೆಲ್ಲಾ ಹೇಳಿದ್ದೇನೆ. ಈ ಲೋಕದಲ್ಲಿ ನಿಮಗೆ ಸಂಕಟವಿದೆ. ಆದರೆ ಧೈರ್ಯದಿಂದಿರಿ! ನಾನು ಈ ಲೋಕವನ್ನು ಸೋಲಿಸಿದ್ದೇನೆ!” ಎಂದು ಹೇಳಿದನು.


“ಕೇಳಿರಿ! ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದ್ದರಿಂದ ನೀವು ಹಾವುಗಳಂತೆ ಸೂಕ್ಷ್ಮ ಬುದ್ದಿಯುಳ್ಳವರಾಗಿರಿ, ಪಾರಿವಾಳಗಳಂತೆ ಯಾವ ಹಾನಿಯನ್ನೂ ಮಾಡದಿರಿ.


ಯೇಸು, “ನೀವು ಭಯಪಡುವುದೇಕೆ? ನಿಮ್ಮಲ್ಲಿ ಸಾಕಷ್ಟು ನಂಬಿಕೆಯಿಲ್ಲ” ಎಂದು ಉತ್ತರಿಸಿ ಎದ್ದುನಿಂತುಕೊಂಡು ಆ ದೊಡ್ಡ ಬಿರುಗಾಳಿಗೂ ಅಲೆಗಳಿಗೂ ಆಜ್ಞಾಪಿಸಿದನು. ಆ ಕೂಡಲೇ ಬಿರುಗಾಳಿ ನಿಂತುಹೋಯಿತು. ಸರೋವರ ಪ್ರಶಾಂತವಾಯಿತು.


ನಮ್ಮ ದೇವರು ಈ ಉದಾಹರಣೆಯ ಮೂಲಕ ಒಂದು ಪಾಠವನ್ನು ಕಲಿಸುತ್ತಾನೆ. ಏನೆಂದರೆ ಆತನು ಜನರನ್ನು ಶಿಕ್ಷಿಸುವಾಗ ನ್ಯಾಯವಾಗಿ ಶಿಕ್ಷಿಸುತ್ತಾನೆ.


ವಿವೇಕವು ನಿನ್ನನ್ನು ಕಾಪಾಡುವುದು; ಬುದ್ಧಿಯು ನಿನಗೆ ಕಾವಲಾಗಿರುವುದು;


ನಾನು ಸುತ್ತಮುತ್ತ ನೋಡಿದರೂ ನನ್ನ ಸ್ನೇಹಿತರಲ್ಲಿ ಯಾರೂ ಕಾಣುತ್ತಿಲ್ಲ. ಓಡಿಹೋಗಲು ನನಗೆ ಯಾವ ಸ್ಥಳವೂ ಇಲ್ಲ. ನನ್ನನ್ನು ರಕ್ಷಿಸಲು ಯಾರೂ ಪ್ರಯತ್ನಿಸುತ್ತಿಲ್ಲ.


ಆಗ ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ಎಲ್ಲಾ ಆಪತ್ತುಗಳಿಂದ ರಕ್ಷಿಸಿದನು.


ನಾನೆಲ್ಲೇ ಇದ್ದರೂ, ಎಷ್ಟೇ ಬಲಹೀನನಾಗಿದ್ದರೂ ಸಹಾಯಕ್ಕಾಗಿ ನಿನಗೇ ಮೊರೆಯಿಡುವೆನು! ಅತ್ಯುನ್ನತವಾದ ಆಶ್ರಯಗಿರಿಗೆ ನನ್ನನ್ನು ಹತ್ತಿಸು.


ಜನರು ನನ್ನನ್ನು ಕುರಿತು ಭಯಂಕರವಾದ ಸಂಗತಿಗಳನ್ನು ಮಾತಾಡಿಕೊಳ್ಳುತ್ತಿದ್ದಾರೆ. ಅವರು ದಂಗೆಯೆದ್ದು ನನ್ನನ್ನು ಕೊಲ್ಲಬೇಕೆಂದುಕೊಂಡಿದ್ದಾರೆ.


ಫರೋಹನೂ ಅವನ ಸೈನ್ಯವೂ ತಮ್ಮ ಕಡೆಗೆ ಬರುತ್ತಿರುವುದನ್ನು ಇಸ್ರೇಲರು ಕಂಡು ಬಹಳ ಭಯಪಟ್ಟರು. ಅವರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಟ್ಟರು.


ಇಂತಿರಲು, ದಯವಿಟ್ಟು ನನ್ನ ಅಣ್ಣನಿಂದ ನನ್ನನ್ನು ಕಾಪಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತಿರುವೆ. ಏಸಾವನಿಂದ ನನ್ನನ್ನು ಕಾಪಾಡು. ಅವನು ಬಂದು ನಮ್ಮೆಲ್ಲರನ್ನೂ ತಾಯಂದಿರನ್ನೂ ಮಕ್ಕಳನ್ನೂ ಕೊಲ್ಲುವನೆಂಬ ಭಯ ನನಗಿದೆ.


ದಯಾವಂತನಿಗೂ ಉದಾರಿಗೂ ಒಳ್ಳೆಯದಾಗುವುದು. ನ್ಯಾಯವಾದ ವ್ಯಾಪಾರಸ್ಥನಿಗೆ ಒಳ್ಳೆಯದಾಗುವುದು.


ಯಾಕೋಬನ ಅಣ್ಣನಾದ ಏಸಾವನು ಸೇಯೀರ್ ಎಂಬ ಸ್ಥಳದಲ್ಲಿ ವಾಸವಾಗಿದ್ದನು. ಈ ಸ್ಥಳವು ಎದೋಮಿನ ಗುಡ್ಡಗಾಡು ಪ್ರದೇಶವಾಗಿತ್ತು. ಯಾಕೋಬನು ತನ್ನ ಸಂದೇಶಕರ ಮೂಲಕ


“ಒಂದುವೇಳೆ ಏಸಾವನು ಬಂದು ಒಂದು ಗುಂಪನ್ನು ನಾಶಗೊಳಿಸಿದರೆ, ಮತ್ತೊಂದು ಗುಂಪು ಓಡಿಹೋಗಿ ತಪ್ಪಿಸಿಕೊಳ್ಳಬಹುದು” ಎಂಬುದು ಅವನ ಆಲೋಚನೆಯಾಗಿತ್ತು.


ಯಾಕೋಬನು ಕಣ್ಣೆತ್ತಿ ನೋಡಿದಾಗ ಏಸಾವನು ನಾನೂರು ಜನರೊಂದಿಗೆ ಬರುವುದನ್ನು ಕಂಡನು. ಯಾಕೋಬನು ತನ್ನ ಕುಟುಂಬವನ್ನು ನಾಲ್ಕು ಗುಂಪುಗಳಾಗಿ ವಿಂಗಡಿಸಿದನು. ಲೇಯಾ ಮತ್ತು ಅವಳ ಮಕ್ಕಳು ಒಂದು ಗುಂಪಿನಲ್ಲಿದ್ದರು. ರಾಹೇಲಳು ಮತ್ತು ಯೋಸೇಫನು ಇನ್ನೊಂದು ಗುಂಪಿನಲ್ಲಿದ್ದರು. ಇಬ್ಬರು ದಾಸಿಯರು ಮತ್ತು ಅವರ ಮಕ್ಕಳು ಎರಡು ಗುಂಪುಗಳಲ್ಲಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು