Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 33:9 - ಪರಿಶುದ್ದ ಬೈಬಲ್‌

9 ಆದರೆ ಏಸಾವನು, “ತಮ್ಮನೇ, ನೀನು ನನಗೆ ಉಡುಗೊರೆಗಳನ್ನು ಕೊಡಬೇಕಾಗಿಲ್ಲ, ನನಗೆ ಬೇಕಾದಷ್ಟಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಏಸಾವನು ಅದಕ್ಕೆ, “ತಮ್ಮನೇ, ನನಗೆ ಬೇಕಾದಷ್ಟು ಆಸ್ತಿಯುಂಟು, ನಿನ್ನದು ನಿನಗೇ ಇರಲಿ” ಎನ್ನಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಏಸಾವನು, “ತಮ್ಮಾ, ನನಗೆ ಬೇಕಾದಷ್ಟು ಆಸ್ತಿಯುಂಟು; ನಿನ್ನದು ನಿನಗೇ ಇರಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಏಸಾವನು - ತಮ್ಮನೇ, ನನಗೆ ಬೇಕಾದಷ್ಟು ಆಸ್ತಿಯುಂಟು; ನಿನ್ನದು ನಿನಗೇ ಇರಲಿ ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅದಕ್ಕೆ ಏಸಾವನು, “ನನ್ನ ಸಹೋದರನೇ, ನನಗೆ ಸಾಕಷ್ಟು ಇದೆ. ನಿನಗೆ ಇದ್ದದ್ದು ನೀನೇ ಇಟ್ಟುಕೋ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 33:9
13 ತಿಳಿವುಗಳ ಹೋಲಿಕೆ  

ಆಗ ಇಸಾಕನು ಅವನಿಗೆ ಹೀಗೆ ಹೇಳಿದನು: “ನೀನು ಒಳ್ಳೆಯ ಪ್ರದೇಶದಲ್ಲಿ ಜೀವಿಸುವುದಿಲ್ಲ. ನಿನಗೆ ಬೇಕಾದಷ್ಟು ಇಬ್ಬನಿ ಇರುವುದಿಲ್ಲ.


ನನ್ನ ಸಹೋದರನೇ, ದೇವಜನರಿಗೆ ನೀನು ಪ್ರೀತಿಯನ್ನು ತೋರಿಸಿ ಅವರ ಹೃದಯಗಳನ್ನು ಸಂತೈಸಿರುವೆ. ಇದು ನನಗೆ ಹೆಚ್ಚಿನ ಸಂತಸವನ್ನೂ ನೆಮ್ಮದಿಯನ್ನೂ ತಂದುಕೊಟ್ಟಿದೆ.


ಇನ್ನು ಮೇಲೆ ಅವನು ನಿನಗೆ ಕೇವಲ ಗುಲಾಮನಾಗಿರದೆ ಗುಲಾಮನಿಗಿಂತಲೂ ಹೆಚ್ಚಿನ ಪ್ರಿಯ ಸಹೋದರನಾಗಿದ್ದಾನೆ. ಅವನನ್ನು ಬಹಳವಾಗಿ ಪ್ರೀತಿಸುತ್ತೇನೆ. ಆದರೆ ನೀನು ಅವನನ್ನು ಮತ್ತಷ್ಟು ಹೆಚ್ಚಾಗಿ ಪ್ರೀತಿಸುವೆ. ನೀನು ಅವನನ್ನು ಮನುಷ್ಯನೆಂದು ಮತ್ತು ಪ್ರಭುವಿನಲ್ಲಿ ಒಬ್ಬ ಸಹೋದರನೆಂದು ಪ್ರೀತಿಸುವೆ.


ಈ ಸಂಗತಿಗಳನ್ನು ಕೇಳಿದ ಹಿರಿಯರು ದೇವರನ್ನು ಕೊಂಡಾಡಿದರು. ಬಳಿಕ ಅವರು ಪೌಲನಿಗೆ, “ಸಹೋದರನೇ, ವಿಶ್ವಾಸಿಗಳಿಗಾಗಿ ಪರಿವರ್ತನೆಗೊಂಡಿರುವ ಸಾವಿರಾರು ಮಂದಿ ಯೆಹೂದ್ಯರನ್ನು ನೀನು ಇಲ್ಲಿ ಕಾಣಬಹುದು. ಆದರೆ ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯರಾಗುವುದು ಬಹಳ ಮುಖ್ಯವೆಂಬುದು ಇವರ ಆಲೋಚನೆ.


ಆದ್ದರಿಂದ ಅನನೀಯನು ಅಲ್ಲಿಂದ ಹೊರಟು ಯೂದನ ಮನೆಗೆ ಹೋದನು. ಅವನು ಸೌಲನ ಮೇಲೆ ತನ್ನ ಕೈಗಳನ್ನಿಟ್ಟು, “ಸೌಲನೇ, ನನ್ನ ಸಹೋದರನೇ, ಪ್ರಭುವಾದ ಯೇಸು ನನ್ನನ್ನು ಕಳುಹಿಸಿದ್ದಾನೆ. ನೀನು ಇಲ್ಲಿಗೆ ಬರುವಾಗ ದಾರಿಯಲ್ಲಿ ಕಂಡದ್ದು ಆತನನ್ನೇ. ನೀನು ಮತ್ತೆ ದೃಷ್ಟಿಪಡೆಯಬೇಕೆಂತಲೂ ಪವಿತ್ರಾತ್ಮಭರಿತನಾಗಬೇಕೆಂತಲೂ ಯೇಸು ನನ್ನನ್ನು ಕಳುಹಿಸಿದನು” ಎಂದು ಹೇಳಿದನು.


ಸ್ವಂತ ಕುಟುಂಬವನ್ನು ಹೊಂದಿಲ್ಲದವನು ಅಂದರೆ ಅಣ್ಣತಮ್ಮಂದಿರಾಗಲಿ ಮಕ್ಕಳಾಗಲಿ ಇಲ್ಲದವನು ಸಹ ಪ್ರಯಾಸಪಟ್ಟು ದುಡಿಯುವನು. ಅವನಿಗೂ ತನ್ನ ಆಸ್ತಿಯಲ್ಲಿ ತೃಪ್ತಿಯಿಲ್ಲ. ಅವನು ಬಿಡುವಿಲ್ಲದೆ ಪ್ರಯಾಸಪಟ್ಟು ದುಡಿಯುವನು. “ನಾನೇಕೆ ಪ್ರಯಾಸಪಟ್ಟು ದುಡಿಯುತ್ತಿರುವೆ? ನಾನೇಕೆ ಜೀವನದ ಸುಖವನ್ನು ಅನುಭವಿಸುತ್ತಿಲ್ಲ?” ಎಂದು ಅವನು ಆಲೋಚಿಸುವುದೇ ಇಲ್ಲ. ಇದು ಸಹ ಕೆಟ್ಟದ್ದೂ ವ್ಯರ್ಥವಾದದ್ದೂ ಆಗಿದೆ.


ಯೆಹೋವನ ಚಿತ್ತಕ್ಕನುಸಾರವಾಗಿ ಜೀವಿಸುವವನು ತನ್ನ ವೈರಿಗಳೊಡನೆಯೂ ಸಮಾಧಾನದಿಂದಿರುವನು.


ಅಂದಿನಿಂದ ಏಸಾವನು ಯಾಕೋಬನನ್ನು ದ್ವೇಷಿಸಿದನು. ಏಸಾವನು ತನ್ನೊಳಗೆ, “ನನ್ನ ತಂದೆ ಬಹುಬೇಗನೆ ಸತ್ತುಹೋಗುವನು. ಆಗ ನಾನು ಅವನಿಗಾಗಿ ದುಃಖಿಸಿ ಆ ಬಳಿಕ ಯಾಕೋಬನನ್ನು ಕೊಲ್ಲುವೆನು” ಅಂದುಕೊಂಡನು.


ತರುವಾಯ ಯೆಹೋವನು ಕಾಯಿನನಿಗೆ, “ನಿನ್ನ ತಮ್ಮನಾದ ಹೇಬೆಲನೆಲ್ಲಿ?” ಎಂದು ಕೇಳಿದನು. ಅದಕ್ಕೆ ಕಾಯಿನನು, “ನನಗೆ ಗೊತ್ತಿಲ್ಲ. ನನ್ನ ತಮ್ಮನನ್ನು ಕಾಯುವುದಾಗಲಿ ನೋಡಿಕೊಳ್ಳುವುದಾಗಲಿ ನನ್ನ ಕೆಲಸವೇ?” ಎಂದು ಉತ್ತರಕೊಟ್ಟನು.


ಕೆಲವರು ರಕ್ತ ಕುಡಿಯುವ ಜಿಗಣೆಗಳಂತಿದ್ದಾರೆ. ಅವರು, “ನನಗೆ ಕೊಡು, ನನಗೆ ಕೊಡು, ನನಗೆ ಕೊಡು” ಎಂದು ಹೇಳುತ್ತಾರೆ. ಎಂದಿಗೂ ತೃಪ್ತಿಯಾಗದ ಮೂರು ಸಂಗತಿಗಳಿವೆ. ನಿಜವಾಗಿಯೂ ನಾಲ್ಕು ಸಂಗತಿಗಳು ಎಂದಿಗೂ ಸಾಕು ಎನ್ನವು:


ನೀನು ಕತ್ತಿಯಿಂದಲೇ ಜೀವಿಸುವೆ. ನೀನು ನಿನ್ನ ತಮ್ಮನ ಸೇವಕನಾಗಿರುವೆ. ಆದರೆ ನೀನು ಬಿಡುಗಡೆಯಾಗಲು ಹೋರಾಡಿ ಅವನ ಹಿಡಿತದಿಂದ ಪಾರಾಗುವೆ.”


ಯಾಕೋಬನು, “ಇಲ್ಲ! ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ; ನೀನು ನನ್ನನ್ನು ನಿಜವಾಗಿಯೂ ಸ್ವೀಕರಿಸಿಕೊಳ್ಳುವುದಾದರೆ, ನಾನು ಕೊಡುವ ಉಡುಗೊರೆಗಳನ್ನು ದಯವಿಟ್ಟು ಸ್ವೀಕರಿಸಬೇಕು. ನಿನ್ನ ಮುಖವನ್ನು ಮತ್ತೆ ನೋಡಿ ನನಗೆ ತುಂಬ ಸಂತೋಷವಾಗಿದೆ. ದೇವರ ಮುಖವನ್ನೇ ನೋಡಿದಂತಾಯಿತು. ನೀನು ನನ್ನನ್ನು ಸ್ವೀಕರಿಸಿಕೊಂಡದ್ದರಿಂದ ನನಗೆ ತುಂಬ ಸಂತೋಷವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು