Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 34:19 - ಪರಿಶುದ್ದ ಬೈಬಲ್‌

19 ದೀನಳ ಅಣ್ಣಂದಿರು ಹೇಳಿದ್ದನ್ನು ಮಾಡಲು ಶೆಕೆಮನು ಸಂತೋಷದಿಂದ ಒಪ್ಪಿಕೊಂಡನು. ಶೆಕೆಮನಿಗೆ ಅವರ ಕುಟುಂಬದಲ್ಲಿ ತುಂಬ ಗೌರವವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆ ಯೌವನಸ್ಥನು ಯಾಕೋಬನ ಮಗಳನ್ನು ಮೆಚ್ಚಿಕೊಂಡಿದ್ದರಿಂದ ಅವರು ಹೇಳಿದಂತೆ ಮಾಡುವುದಕ್ಕೆ ತಡಮಾಡಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತ ಗೌರವವುಳ್ಳವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆ ಯುವಕನು ಯಕೋಬನ ಮಗಳಲ್ಲಿ ಅನುರಕ್ತನಾಗಿದ್ದುದರಿಂದ ಅವರು ಹೇಳಿದಂತೆ ಮಾಡಲು ಹಿಂಜರಿಯಲಿಲ್ಲ; ಅಪ್ಪನ ಮನೆಗೆ ಅವನೇ ಮುಖ್ಯಸ್ಥನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆ ಯೌವನಸ್ಥನು ಯಾಕೋಬನ ಮಗಳಲ್ಲಿ ಅನುರಕ್ತನಾಗಿದ್ದದರಿಂದ ಅವರು ಹೇಳಿದಂತೆ ಮಾಡುವದಕ್ಕೆ ತಡೆಮಾಡಲಿಲ್ಲ. ಅವನೇ ತನ್ನ ತಂದೆಯ ಮನೆಯವರೆಲ್ಲರಲ್ಲಿ ಘನವಂತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆ ಯೌವನಸ್ಥನು ಯಾಕೋಬನ ಮಗಳನ್ನು ಮೆಚ್ಚಿದ್ದರಿಂದ, ಆ ಕಾರ್ಯವನ್ನು ಮಾಡುವುದಕ್ಕೆ ಹಿಂಜರಿಯಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತ ಗೌರವವುಳ್ಳವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 34:19
15 ತಿಳಿವುಗಳ ಹೋಲಿಕೆ  

ಯಾಬೇಚನು ತುಂಬ ಒಳ್ಳೆಯ ವ್ಯಕ್ತಿಯಾಗಿದ್ದನು. ಅವನು ತನ್ನ ಅಣ್ಣತಮ್ಮಂದಿರಿಗಿಂತ ಉತ್ತಮನಾಗಿದ್ದನು. ಅವನ ತಾಯಿ, “ನಾನು ಅವನನ್ನು ಹೆರುವಾಗ ತುಂಬಾ ನೋವನ್ನು ಅನುಭವಿಸಿದ್ದರಿಂದ ನಾನು ಅವನಿಗೆ ಯಾಬೇಚ ಎಂದು ಹೆಸರಿಟ್ಟೆನು” ಎಂದು ಹೇಳಿದಳು.


ಈ ಯೆಹೂದ್ಯರಲ್ಲಿ ಅನೇಕರು ನಂಬಿದರು. ಅತಿ ಪ್ರಮುಖರಾದ ಗ್ರೀಕ್ ಸ್ತ್ರೀಯರು ಮತ್ತು ಪುರುಷರು ನಂಬಿಕೊಂಡರು.


ಆದರೆ ಯೆಹೂದ್ಯರು ಕೆಲವು ಧಾರ್ಮಿಕ ಸ್ತ್ರೀಯರನ್ನೂ ನಗರದ ನಾಯಕರನ್ನೂ ಪ್ರಚೋಧಿಸಿ, ಪೌಲ ಬಾರ್ನಬರ ಮೇಲೆ ಅವರು ಕೋಪಗೊಳ್ಳುವಂತೆಯೂ ಅವರಿಗೆ ವಿರೋಧಿಗಳಾಗುವಂತೆಯೂ ಮಾಡಿ ಪೌಲ ಬಾರ್ನಬರನ್ನು ಪಟ್ಟಣದಿಂದ ಹೊರಗಟ್ಟಿಸಿದರು.


ದೇವರು ತೊರೆದ ಜನಾಂಗವೆಂದೂ ದೇವರು ನಾಶಮಾಡಿದ ದೇಶವೆಂದೂ ನಿನ್ನನ್ನು ಇನ್ನು ಮುಂದೆ ಯಾರೂ ಕರೆಯುವದಿಲ್ಲ. “ದೇವರ ಪ್ರಿಯ ಜನರು” ಎಂದು ನೀನು ಕರೆಯಲ್ಪಡುವಿ. ನಿನ್ನ ದೇಶವು “ದೇವರ ಮದಲಗಿತ್ತಿ” ಎಂದು ಕರೆಯಲ್ಪಡುವದು. ಯಾಕೆಂದರೆ ಯೆಹೋವನು ನಿನ್ನನ್ನು ಪ್ರೀತಿಸುತ್ತಾನೆ; ನಿನ್ನ ದೇಶವು ಆತನಿಗೆ ಸೇರಿದೆ.


ಯೆಹೋವನು ಹೇಳುವುದೇನೆಂದರೆ: “ನನ್ನ ಜನರು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು. ಯಾಕೆಂದರೆ ಅವರು ನಿಜವಾಗಿಯೂ ನನ್ನನ್ನು ಅರಿತಿಲ್ಲ. ಇಸ್ರೇಲಿನಲ್ಲಿ ವಾಸಿಸುವ ಕೆಲವು ಜನರು ಈಗ ಪ್ರಮುಖರಾಗಿದ್ದಾರೆ. ತಮ್ಮ ಸುಖಜೀವಿತದಲ್ಲಿ ಆನಂದಿಸುತ್ತಾರೆ. ಆದರೆ ಆ ಗಣ್ಯವ್ಯಕ್ತಿಗಳೆಲ್ಲಾ ಬಾಯಾರಿಕೆಯಿಂದಲೂ ಹಸಿವೆಯಿಂದಲೂ ನರಳುವರು.


ನನ್ನನ್ನು ನಿನ್ನ ಹೃದಯದ ಮೇಲೆ ಮುದ್ರೆಯನ್ನಾಗಿಯೂ, ನಿನ್ನ ಬೆರಳಿನಲ್ಲಿರುವ ಮುದ್ರೆಯೊತ್ತಿದ ಉಂಗುರದಂತೆಯೂ ಇಟ್ಟುಕೋ. ಪ್ರೀತಿಯು ಮರಣದಷ್ಟೇ ಬಲಿಷ್ಠ; ಕಾಮೋದ್ರೇಕವು ಸಮಾಧಿಯಷ್ಟೇ ಬಲಿಷ್ಠ. ಅದರ ಜ್ವಾಲೆಗಳು ಧಗಧಗಿಸುವ ಬೆಂಕಿ. ಅದು ಅತಿ ತೀಕ್ಷ್ಣವಾದ ಅಗ್ನಿಯೇ.


ಅರಾಮ್ಯರ ರಾಜನ ಸೇನೆಯಲ್ಲಿ ನಾಮಾನನೆಂಬ ಸೇನಾಪತಿಯಿದ್ದನು. ನಾಮಾನನು ಅವನ ರಾಜನಿಗೆ ಬಹಳ ಪ್ರಾಮುಖ್ಯ ವ್ಯಕ್ತಿಯಾಗಿದ್ದನು. ಯೆಹೋವನು ನಾಮಾನನ ಮುಖಾಂತರ ಅರಾಮ್ಯರಿಗೆ ವಿಜಯವನ್ನು ತಂದುಕೊಟ್ಟಿದ್ದರಿಂದ ಅವನು ಪ್ರಮುಖನಾಗಿದ್ದನು. ನಾಮಾನನು ಮಹಾಪುರುಷನೂ ಶಕ್ತಿಶಾಲಿಯೂ ಆದ ಮನುಷ್ಯನಾಗಿದ್ದನು. ಆದರೆ ಅವನು ಕುಷ್ಠರೋಗ ಪೀಡಿತನಾಗಿದ್ದನು.


ಅಹೀಮೆಲೆಕನು, “ದಾವೀದನು ನಿನಗೆ ಬಹಳ ನಂಬಿಗಸ್ತನಾಗಿದ್ದಾನೆ. ದಾವೀದನಷ್ಟು ನಂಬಿಗಸ್ತನು ನಿನ್ನ ಇತರ ಅಧಿಕಾರಿಗಳಲ್ಲಿ ಇಲ್ಲವೇ ಇಲ್ಲ. ದಾವೀದನು ನಿನ್ನ ಸ್ವಂತ ಅಳಿಯ. ದಾವೀದನು ನಿನ್ನ ಅಂಗರಕ್ಷಕ ದಳಪತಿ. ದಾವೀದನನ್ನು ನಿನ್ನ ಸ್ವಂತ ಕುಟುಂಬವೆಲ್ಲ ಗೌರವಿಸುತ್ತದೆ.


ಆದ್ದರಿಂದ ಬಾಲಾಕನು ಅವರಿಗಿಂತಲೂ ಶ್ರೇಷ್ಠರಾದ ಅನೇಕ ನಾಯಕರನ್ನು ಕಳುಹಿಸಿದನು.


ಬಡಕಲಾಗಿದ್ದ ಆ ಹಸುಗಳು ಮೊದಲು ಬಂದ ಲಕ್ಷಣವಾದ ಏಳು ಹಸುಗಳನ್ನು ತಿಂದುಬಿಟ್ಟವು.


ಆದ್ದರಿಂದ ಯಾಕೋಬನು ಅವನೊಂದಿಗೆ ಇದ್ದುಕೊಂಡು ಏಳು ವರ್ಷಗಳವರೆಗೆ ಲಾಬಾನನ ಸೇವೆ ಮಾಡಿದನು. ಆದರೆ ಅವನು ರಾಹೇಲಳನ್ನು ತುಂಬಾ ಪ್ರೀತಿಸುತ್ತಿದ್ದುದರಿಂದ ಆ ಸಮಯವು ಅವನಿಗೆ ತುಂಬಾ ಕಡಿಮೆಯಂತೆ ಕಾಣಿಸಿತು.


ಅವರು ಹೇಳಿದ್ದು ಹಮೋರನಿಗೂ ಶೆಕೆಮನಿಗೂ ಒಳ್ಳೆಯದೆಂದು ತೋಚಿತು.


ಹಮೋರನು ಮತ್ತು ಶೆಕೆಮನು ತಮ್ಮ ನಗರದ ಸಭಾಸ್ಥಳಕ್ಕೆ ಹೋದರು. ಅವರು ಪಟ್ಟಣದ ಗಂಡಸರೊಂದಿಗೆ ಮಾತಾಡಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು