Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 34:2 - ಪರಿಶುದ್ದ ಬೈಬಲ್‌

2 ಆ ದೇಶದ ರಾಜನಾಗಿದ್ದ ಹಮೋರನ ಮಗನಾದ ಶೆಕೆಮನು ದೀನಳನ್ನು ಕಂಡು ಅವಳನ್ನು ಎಳೆದುಕೊಂಡು ಹೋಗಿ ಬಲಾತ್ಕಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದೇಶಾಧಿಪತಿಯಾಗಿರುವ ಹಿವ್ವಿಯನಾದ ಹಮೋರನ ಮಗ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಮಾನಭಂಗಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಹಿವ್ವಿಯನಾದ ಹಮೋರನ ಮಗನೂ ಆ ನಾಡಿಗೆ ಒಡೆಯನೂ ಆದ ಶೆಕೆಮನು ಆಕೆಯನ್ನು ನೋಡಿ, ಎತ್ತಿಕೊಂಡು ಹೋಗಿ, ಆಕೆಯನ್ನು ಜತೆಗೂಡಿ ಮಾನಭಂಗ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದೇಶಾಧಿಪತಿಯಾಗಿರುವ ಹಿವ್ವಿಯನಾದ ಹಮೋರನ ಮಗ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಕೂಡಿ ಮಾನಭಂಗ ಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದೇಶದ ಪ್ರಭುವಾಗಿದ್ದ ಹಿವ್ವಿಯನಾದ ಹಮೋರನ ಮಗ ಶೆಕೆಮನು ಆಕೆಯನ್ನು ತೆಗೆದುಕೊಂಡುಹೋಗಿ ಮಾನಭಂಗ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 34:2
23 ತಿಳಿವುಗಳ ಹೋಲಿಕೆ  

“ಒಂದುವೇಳೆ ನಾನು ಪರಸ್ತ್ರೀಯಲ್ಲಿ ಮರುಳುಗೊಂಡಿದ್ದರೆ, ನನ್ನ ನೆರೆಯವನ ಹೆಂಡತಿಯೊಂದಿಗೆ ವ್ಯಭಿಚಾರ ಮಾಡಲು ಅವನ ಮನೆಯ ಬಾಗಿಲಲ್ಲಿ ಕಾದುಕೊಂಡಿದ್ದರೆ,


ಆದರೆ ಒಬ್ಬನು ಪರಸ್ತ್ರೀಯನ್ನು ನೋಡಿ ಅವಳೊಂದಿಗೆ ಲೈಂಗಿಕ ಸಂಪರ್ಕ ಹೊಂದಲು ಬಯಸಿದರೆ, ಅವನು ಆಗಲೇ ತನ್ನ ಮನಸ್ಸಿನಲ್ಲಿ ಅವಳೊಂದಿಗೆ ವ್ಯಭಿಚಾರವನ್ನು ಮಾಡಿದ್ದಾನೆಂದು ನಾನು ನಿಮಗೆ ಹೇಳುತ್ತೇನೆ.


ಜ್ಞಾನಿಗಳೊಂದಿಗೆ ಸ್ನೇಹದಿಂದಿರಿ. ಆಗ ನೀವೂ ಜ್ಞಾನಿಗಳಾಗುವಿರಿ. ಆದರೆ ನೀವು ಜ್ಞಾನಹೀನರನ್ನು ನಿಮ್ಮ ಸ್ನೇಹಿತರನ್ನಾಗಿ ಆಯ್ದುಕೊಂಡರೆ, ನಿಮಗೆ ತೊಂದರೆ ಉಂಟಾಗುವುದು.


“ಯುವತಿಯನ್ನು ಕಾಮದಾಶೆಯಿಂದ ನೋಡುವುದಿಲ್ಲವೆಂದು ನನ್ನ ಕಣ್ಣುಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇನೆ.


ಸಂಸೋನನು ತಿಮ್ನಾ ನಗರಕ್ಕೆ ಹೋದನು. ಅವನು ಅಲ್ಲಿ ಒಬ್ಬ ಫಿಲಿಷ್ಟಿಯರ ತರುಣಿಯನ್ನು ನೋಡಿದನು.


ಅವನು ಸಾಯಂಕಾಲ ತನ್ನ ಹಾಸಿಗೆಯಿಂದ ಮೇಲೆದ್ದು ಅರಮನೆಯ ಮಾಳಿಗೆಯ ಮೇಲಕ್ಕೆ ಹೋಗಿ ತಿರುಗಾಡುತ್ತಿದ್ದನು. ದಾವೀದನು ಮಾಳಿಗೆಯ ಮೇಲಿರುವಾಗ, ಒಬ್ಬ ಹೆಂಗಸು ಸ್ನಾನ ಮಾಡುತ್ತಿರುವುದನ್ನು ನೋಡಿದನು. ಅವಳು ಅತ್ಯಂತ ಸುಂದರಳಾಗಿದ್ದಳು.


ಅವನು ಹುಡುಗಿಯ ತಂದೆಗೆ ಇಪ್ಪತ್ತು ತೊಲೆ ಬೆಳ್ಳಿಯನ್ನು ಕೊಟ್ಟು ಆಕೆಯನ್ನು ತನ್ನ ಹೆಂಡತಿಯನ್ನಾಗಿ ತೆಗೆದುಕೊಳ್ಳಬೇಕು. ಅವನು ಆಕೆಯನ್ನು ಮದುವೆಗಿಂತ ಮುಂಚೆ ಕೂಡಿದ್ದರಿಂದ ಅವನು ಆಕೆಯನ್ನು ಎಂದಿಗೂ ಬಿಟ್ಟುಬಿಡಬಾರದು.


ನಗರದ ಬಾಗಿಲಿನ ಬಳಿಯಿರುವ ಸಾರ್ವಜನಿಕ ಸ್ಥಳಕ್ಕೆ ನೀವು ಅವರಿಬ್ಬರನ್ನು ಕರೆದುಕೊಂಡು ಬಂದು ಅವರಿಬ್ಬರನ್ನೂ ಕಲ್ಲೆಸೆದು ಕೊಲ್ಲಬೇಕು. ನೀವು ಆ ಪುರುಷನನ್ನು ಕೊಲ್ಲಬೇಕು. ಏಕೆಂದರೆ ಅವನು ಮತ್ತೊಬ್ಬನ ಹೆಂಡತಿಯನ್ನು ಲೈಂಗಿಕವಾಗಿ ಹಿಂಸಿಸಿದನು. ನೀವು ಆ ಸ್ತ್ರೀಯನ್ನು ಕೊಲ್ಲಬೇಕು; ಯಾಕೆಂದರೆ ಆಕೆಯು ನಗರದಲ್ಲಿದ್ದರೂ ಸಹಾಯಕ್ಕಾಗಿ ಕೂಗಿಕೊಳ್ಳಲಿಲ್ಲ. ಆ ಕೆಡುಕನ್ನು ನೀವು ನಿಮ್ಮ ಜನರಿಂದ ತೆಗೆದುಹಾಕಬೇಕು.


ಆಕೆಯನ್ನು ನೀನು ಮೆಚ್ಚದಿದ್ದರೆ ವಿವಾಹವಿಚ್ಛೇದನೆ ಮಾಡಿ ಆಕೆಯನ್ನು ಸ್ವತಂತ್ರಳಾಗುವಂತೆ ಬಿಟ್ಟುಬಿಡಬಹುದು. ಆದರೆ ನೀನು ಆಕೆಯನ್ನು ಮಾರಬಾರದು. ಆಕೆಯನ್ನು ಗುಲಾಮಳಂತೆ ನೋಡಬಾರದು. ಯಾಕೆಂದರೆ ನೀನು ಆಕೆಯೊಂದಿಗೆ ಲೈಂಗಿಕ ಸಂಬಂಧವನ್ನಿಟ್ಟುಕೊಂಡಿದ್ದಿಯಲ್ಲಾ.


ಯಾಕೋಬನು ನೂರು ಬೆಳ್ಳಿನಾಣ್ಯಗಳನ್ನು ಕೊಟ್ಟು ಶೆಕೆಮನ ತಂದೆಯಾದ ಹಮೋರನ ಕುಟುಂಬದಿಂದ ಆ ಹೊಲವನ್ನು ಕೊಂಡುಕೊಂಡನು.


ಅಬ್ರಹಾಮನು ಗೆರಾರಿನಲ್ಲಿದ್ದಾಗ ಸಾರಳು ತನಗೆ ತಂಗಿಯಾಗಬೇಕೆಂದು ಹೇಳಿಕೊಂಡನು. ಗೆರಾರಿನ ರಾಜನಾಗಿದ್ದ ಅಬೀಮೆಲೆಕನು ಇದನ್ನು ಕೇಳಿ ಸಾರಳನ್ನು ಪಡೆದುಕೊಳ್ಳಲು ಬಯಸಿದನು. ಬಳಿಕ ಅವನು ಕೆಲವು ಸೇವಕರನ್ನು ಕಳುಹಿಸಿ ಆಕೆಯನ್ನು ಕರೆಯಿಸಿಕೊಂಡನು.


ಈ ಹೆಣ್ಣುಮಕ್ಕಳ ಸೌಂದರ್ಯವನ್ನು ಕಂಡ ದೇವಪುತ್ರರು ತಮಗೆ ಬೇಕಾದ ಸ್ತ್ರೀಯರನ್ನು ಆರಿಸಿಕೊಂಡು ಮದುವೆಯಾದರು. ಈ ಸ್ತ್ರೀಯರು ಮಕ್ಕಳನ್ನು ಹೆತ್ತರು. ಆ ಕಾಲದಲ್ಲಿ ಮತ್ತು ಆ ಕಾಲದ ನಂತರ ನೆಫೇಲಿಯರು ಆ ನಾಡಿನಲ್ಲಿ ವಾಸವಾಗಿದ್ದರು. ಅವರು ಪ್ರಸಿದ್ಧರಾದ ಪರಾಕ್ರಮಶಾಲಿಗಳಾಗಿದ್ದರು. ಬಳಿಕ ಯೆಹೋವನು, “ಜನರು ಕೇವಲ ಮಾನವರಷ್ಟೆ; ನನ್ನ ಆತ್ಮವು ಅವರಿಂದ ಯಾವಾಗಲೂ ತೊಂದರೆಗೆ ಗುರಿಯಾಗಕೂಡದು. ಅವರು 120 ವರ್ಷ ಬದುಕುವಂತೆ ಮಾಡುವೆನು” ಅಂದುಕೊಂಡನು.


ಶೆಕೆಮನಿಗೆ ದೀನಳ ಮೇಲೆ ಪ್ರೀತಿಯುಂಟಾಗಿ ಆಕೆಯನ್ನು ಮದುವೆ ಮಾಡಿಕೊಳ್ಳಲು ಇಷ್ಟಪಟ್ಟನು. ಅವನು ತನ್ನನ್ನು ಮದುವೆಯಾಗಬೇಕೆಂದು ಆಕೆಯ ಸಂಗಡ ಮನವೊಲಿಸುವ ಮಾತುಗಳನ್ನಾಡಿದನು.


ಆದರೆ ಯಾಕೋಬನು ಸಿಮೆಯೋನನಿಗೆ ಮತ್ತು ಲೇವಿಗೆ, “ನೀವು ನನ್ನನ್ನು ಅಪಾಯಕ್ಕೆ ಗುರಿಮಾಡಿದಿರಿ. ಈ ದೇಶದಲ್ಲಿರುವ ಎಲ್ಲಾ ಕಾನಾನ್ಯರು ಮತ್ತು ಪೆರಿಜೀಯರು ನನ್ನನ್ನು ದ್ವೇಷಿಸಿ ನನಗೆ ವಿರೋಧವಾಗುವರು. ನನಗಿರುವ ಜನರು ಕೆಲವರೇ. ಈ ದೇಶದಲ್ಲಿರುವ ಜನರು ಒಟ್ಟಾಗಿ ಸೇರಿಕೊಂಡು ನನಗೆ ವಿರೋಧವಾಗಿ ಹೋರಾಡಿದರೆ ನಾನೂ ನನ್ನ ಜನರೆಲ್ಲರೂ ನಾಶವಾಗುವೆವು” ಎಂದು ಹೇಳಿದನು.


ಆಗ ಎಬೆದನ ಮಗನಾದ ಗಾಳನು, “ನಾವು ಶೆಕೆಮಿನ ಜನರು. ನಾವು ಅಬೀಮೆಲೆಕನ ಆಜ್ಞೆಗಳನ್ನು ಏಕೆ ಪಾಲಿಸಬೇಕು? ಅವನು ತನ್ನನ್ನು ಯಾರೆಂದು ತಿಳಿದುಕೊಂಡಿದ್ದಾನೆ? ಅಬೀಮೆಲೆಕನು ಯೆರುಬ್ಬಾಳನ ಮಕ್ಕಳಲ್ಲಿ ಒಬ್ಬನು. ಅದು ಸರಿಯಲ್ಲವೇ? ಅಬೀಮೆಲೆಕನು ಜೆಬುಲನನ್ನು ತನ್ನ ಪುರಾಧಿಕಾರಿಯನ್ನಾಗಿ ನೇಮಿಸಿರುವುದೂ ನಿಜವಲ್ಲವೇ? ನಾವು ಅಬೀಮೆಲೆಕನ ಆಜ್ಞೆ ಪಾಲಿಸುವುದು ಬೇಡ. ನಾವು ನಮ್ಮ ಜನರಾದ ಹಮೋರನ ಸಂತತಿಯವರ ಆಜ್ಞೆಯನ್ನೇ ಪಾಲಿಸೋಣ. (ಹಮೋರನು ಶೆಕೆಮನ ತಂದೆ.)


ಯಾಕೋಬನ ಗಂಡುಮಕ್ಕಳು ಪಟ್ಟಣದೊಳಗೆ ಹೋಗಿ ಅಲ್ಲಿದ್ದ ಪ್ರತಿಯೊಂದನ್ನು ತೆಗೆದುಕೊಂಡರು. ತಮ್ಮ ತಂಗಿಗೆ ಶೆಕೆಮನು ಮಾಡಿದ ಮಾನಭಂಗದಿಂದ ಅವರು ಇನ್ನೂ ಕೋಪದಲ್ಲಿದ್ದರು.


ಹಿವ್ವಿಯರಾದ ಅವರಿಗೆ ಇಸ್ರೇಲಿನ ಜನರು, “ಒಂದುವೇಳೆ ನೀವು ನಮ್ಮನ್ನು ಮೋಸಗೊಳಿಸಲು ಪ್ರಯತ್ನಿಸುತ್ತಿರಬಹುದು. ಒಂದುವೇಳೆ ನೀವು ನಮ್ಮ ಹತ್ತಿರದಲ್ಲಿಯೇ ವಾಸಮಾಡುತ್ತಿರಬಹುದು; ನೀವು ಎಲ್ಲಿಯವರು ಎಂಬುದು ನಮಗೆ ಗೊತ್ತಾಗುವವರೆಗೆ ನಾವು ನಿಮ್ಮ ಸಂಗಡ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಲು ಸಾಧ್ಯವಿಲ್ಲ” ಎಂದು ಉತ್ತರಕೊಟ್ಟರು.


ದಾವೀದನು ತನಗಾಗಿ ಬತ್ಷೆಬೆಳನ್ನು ಕರೆತರಲು ಸಂದೇಶಕರನ್ನು ಕಳುಹಿಸಿದನು. ಅವಳು ದಾವೀದನ ಬಳಿಗೆ ಬಂದಾಗ ಅವನು ಅವಳೊಡನೆ ಲೈಂಗಿಕ ಸಂಬಂಧವನ್ನು ಹೊಂದಿದನು. ತನ್ನ ಮಾಸಿಕ ಮುಟ್ಟು ನಿಂತಮೇಲೆ ತನ್ನನ್ನು ಶುದ್ಧಪಡಿಸಿಕೊಳ್ಳಲು ಆಕೆ ಸ್ನಾನಮಾಡಿಕೊಂಡ ಮೇಲೆ ಇದು ಸಂಭವಿಸಿತು.


ಆದರೆ ತಾಮಾರಳ ಮಾತುಗಳನ್ನು ಅಮ್ನೋನನು ಕೇಳಲಿಲ್ಲ. ಅವನು ತಾಮಾರಳಿಗಿಂತ ಬಲಶಾಲಿಯಾಗಿದ್ದುದರಿಂದ ಅವಳ ಮೇಲೆ ಬಲಾತ್ಕಾರ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು