Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 34:20 - ಪರಿಶುದ್ದ ಬೈಬಲ್‌

20 ಹಮೋರನು ಮತ್ತು ಶೆಕೆಮನು ತಮ್ಮ ನಗರದ ಸಭಾಸ್ಥಳಕ್ಕೆ ಹೋದರು. ಅವರು ಪಟ್ಟಣದ ಗಂಡಸರೊಂದಿಗೆ ಮಾತಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಹಮೋರನೂ ಅವನ ಮಗನಾದ ಶೆಕೆಮನೂ ಊರ ಬಾಗಿಲಿಗೆ ಬಂದು ಊರಿನವರೆಲ್ಲರ ಸಂಗಡ ಮಾತನಾಡಿ ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಎಂತಲೆ ಹಮೋರನು ಮತ್ತು ಅವನ ಮಗ ಶೆಕೆಮನು ಊರಬಾಗಿಲಿಗೆ ಬಂದರು. ಊರಿನವರನ್ನೆಲ್ಲಾ ಸಂಬೋಧಿಸುತ್ತಾ, ಹೀಗೆಂದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಹಮೋರನೂ ಅವನ ಮಗನಾದ ಶೆಕೆಮನೂ ಊರುಬಾಗಿಲಿಗೆ ಹೋಗಿ ಊರಿನವರೆಲ್ಲರ ಸಂಗಡ ಮಾತಾಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಹಮೋರನೂ, ಅವನ ಮಗ ಶೆಕೆಮನೂ ತಮ್ಮ ಪಟ್ಟಣ ದ್ವಾರದ ಬಳಿಗೆ ಬಂದು, ತಮ್ಮ ಪಟ್ಟಣದ ಜನರ ಸಂಗಡ ಮಾತನಾಡಿ ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 34:20
14 ತಿಳಿವುಗಳ ಹೋಲಿಕೆ  

ಬೋವಜನು ನಗರದ್ವಾರದ ಬಳಿಯಲ್ಲಿ ಕುಳಿತುಕೊಂಡನು. ತಾನು ಹೇಳಿದ್ದ ಸಮೀಪಬಂಧುವು ಅಲ್ಲಿಂದ ಹಾದು ಹೋಗುವವರೆಗೂ ಅವನು ಅಲ್ಲಿಯೇ ಕುಳಿತಿದ್ದನು. ಅವನನ್ನು ಕಂಡ ಬೋವಜನು, “ಸ್ನೇಹಿತನೇ ಇಲ್ಲಿ ಬಾ, ಇಲ್ಲಿ ಕುಳಿತುಕೋ” ಎಂದು ಕರೆದನು.


ಆದರೆ ನೀವು ಮಾಡಬೇಕಾದದ್ದೇನೆಂದರೆ, ನಿಮ್ಮ ನೆರೆಯವರ ಸಂಗಡ ಸತ್ಯವನ್ನೇ ಆಡಿರಿ. ನಿಮ್ಮ ನಗರಗಳಲ್ಲಿ ಯಾವುದೇ ತೀರ್ಮಾನಗಳನ್ನು ಮಾಡುವುದಾಗಿದ್ದರೂ ಅವು ನ್ಯಾಯವಾದವುಗಳಾಗಿಯೂ ಸತ್ಯವಾದವುಗಳಾಗಿಯೂ ಸಮಾಧಾನವನ್ನು ತರುವಂಥವುಗಳಾಗಿಯೂ ಇರಲಿ.


ದುಷ್ಟತನವನ್ನು ದ್ವೇಷಿಸಿ ಒಳ್ಳೆಯತನವನ್ನು ಪ್ರೀತಿಸಿರಿ, ನಿಮ್ಮ ನ್ಯಾಯಾಲಯಗಳಲ್ಲಿ ನ್ಯಾಯವನ್ನು ಸ್ಧಾಪಿಸಿರಿ. ಆಗ ಒಂದುವೇಳೆ ಸರ್ವಶಕ್ತನಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ದಯೆತೋರಿಸಬಹುದು.


ಯಾಕೆ ಹೀಗೆ? ಯಾಕೆಂದರೆ ನಿಮ್ಮ ಅನೇಕ ಪಾಪಕೃತ್ಯಗಳನ್ನು ನಾನು ಬಲ್ಲೆನು. ನೀವು ಭಯಂಕರ ಪಾಪಗಳನ್ನು ಮಾಡಿದ್ದೀರಿ. ನ್ಯಾಯವಂತರನ್ನು ಗಾಯಗೊಳಿಸಿದ್ದೀರಿ. ಅನ್ಯಾಯ ಮಾಡಲು ಹಣವನ್ನು ತೆಗೆದುಕೊಂಡಿದ್ದೀರಿ. ಬಡಜನರಿಗೆ ನ್ಯಾಯವನ್ನು ದೊರಕಿಸುವುದಿಲ್ಲ.


ಪ್ರವಾದಿಗಳು ಸಾರ್ವಜನಿಕ ಸ್ಥಳಗಳಿಗೆ ಹೋಗಿ ಜನರು ಮಾಡುವ ದುಷ್ಕೃತ್ಯಗಳನ್ನು ಖಂಡಿಸುವರು. ಜನರು ಪ್ರವಾದಿಗಳನ್ನು ಹಗೆಮಾಡುವರು. ಪ್ರವಾದಿಗಳು ಒಳ್ಳೆಯದನ್ನು ಸರಳವಾದ ಸತ್ಯಗಳನ್ನು ಉಪದೇಶಿಸುವರು. ಆದರೆ ಜನರು ಅವರನ್ನು ದ್ವೇಷಿಸುವರು.


ಜನರು ಆಕೆಯ ಗಂಡನನ್ನು ಗೌರವಿಸುವರು. ಅವನು ದೇಶದ ಹಿರಿಯರುಗಳಲ್ಲಿ ಒಬ್ಬನಾಗಿರುವನು.


“ಆ ದಿನಗಳಲ್ಲಿ ನಾನು ನಗರದ ಹೆಬ್ಬಾಗಿಲಿನ ಬಳಿಗೆ ಹೋಗಿ, ಸಾರ್ವಜನಿಕ ಸಭಾಸ್ಥಳದಲ್ಲಿ ಪಟ್ಟಣದ ಹಿರಿಯರೊಂದಿಗೆ ಕುಳಿತುಕೊಳ್ಳುತ್ತಿದ್ದೆನು.


ಅಬ್ಷಾಲೋಮನು ಹೊತ್ತಾರೆಯಲ್ಲಿಯೇ ಎದ್ದು ದ್ವಾರದ ಹತ್ತಿರದಲ್ಲಿ ನಿಂತುಕೊಳ್ಳುತ್ತಿದ್ದನು. ತೊಂದರೆಯಲ್ಲಿ ಸಿಕ್ಕಿಕೊಂಡಿರುವ ಯಾವನಾದರೂ ತೀರ್ಪಿಗಾಗಿ ರಾಜನಾದ ದಾವೀದನ ಬಳಿಗೆ ಹೋಗುತ್ತಿರುವುದನ್ನು ಅಬ್ಷಾಲೋಮನು ಕಂಡರೆ ಅವನನ್ನು ತನ್ನ ಬಳಿಗೆ ಕರೆಯುತ್ತಿದ್ದನು. ಅಬ್ಷಾಲೋಮನು, “ನೀನು ಯಾವ ನಗರದಿಂದ ಬಂದೆ?” ಎಂದು ಕೇಳುತ್ತಿದ್ದನು. ಆ ಮನುಷ್ಯನು, “ನಾನು ಇಸ್ರೇಲಿನ ಇಂಥ ಕುಲಕ್ಕೆ ಸೇರಿದವನು” ಎಂದು ಉತ್ತರಿಸುತ್ತಿದ್ದನು.


ಆ ಪಾಪಮಾಡಿದವನಿಗೆ ಶಿಕ್ಷೆಯನ್ನು ವಿಧಿಸಬೇಕು. ಪಟ್ಟಣದ ಹೆಬ್ಬಾಗಿಲ ಹೊರಗಿರುವ ಬಯಲಿಗೆ ಆ ತಪ್ಪು ಮಾಡಿದ ಸ್ತ್ರೀಯನ್ನೂ, ಪುರುಷನನ್ನೂ ತೆಗೆದುಕೊಂಡು ಹೋಗಿ ಅಲ್ಲಿ ಅವರನ್ನು ಕಲ್ಲೆಸೆದು ಸಾಯಿಸಬೇಕು.


ಎಫೋನನು ಪಟ್ಟಣದ ಬಾಗಿಲ ಬಳಿಯಲ್ಲಿ ಹಿತ್ತಿಯರೊಂದಿಗೆ ಕುಳಿತುಕೊಂಡಿದ್ದನು. ಕೂಡಲೇ ಅವನು ಅಬ್ರಹಾಮನಿಗೆ,


ನಾನು ನಿನ್ನನ್ನು ಖಂಡಿತವಾಗಿಯೂ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಖಂಡಿತವಾಗಿಯೂ ಹೆಚ್ಚಿಸುವೆನು; ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದ ಮರಳಿನಂತೆಯೂ ಅಸಂಖ್ಯಾತರನ್ನಾಗಿ ಮಾಡುವೆನು. ಅವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.


ದೀನಳ ಅಣ್ಣಂದಿರು ಹೇಳಿದ್ದನ್ನು ಮಾಡಲು ಶೆಕೆಮನು ಸಂತೋಷದಿಂದ ಒಪ್ಪಿಕೊಂಡನು. ಶೆಕೆಮನಿಗೆ ಅವರ ಕುಟುಂಬದಲ್ಲಿ ತುಂಬ ಗೌರವವಿತ್ತು.


“ಈ ಇಸ್ರೇಲರಿಗೆ ನಮ್ಮ ಸ್ನೇಹಿತರಾಗಿರಲು ಇಷ್ಟ; ಇವರು ನಮ್ಮ ದೇಶದಲ್ಲಿ ವಾಸವಾಗಿದ್ದುಕೊಂಡು ನಮ್ಮೊಂದಿಗೆ ಸಮಾಧಾನದಿಂದಿರುವುದು ನಮಗೂ ಇಷ್ಟ; ನಮ್ಮೆಲ್ಲರಿಗೂ ಬೇಕಾಗುವಷ್ಟು ಭೂಮಿ ನಮ್ಮಲ್ಲಿದೆ. ನಾವು ಅವರ ಸ್ತ್ರೀಯರನ್ನು ಮದುವೆಯಾಗವುದಕ್ಕೂ ನಮ್ಮ ಸ್ತ್ರೀಯರನ್ನು ಅವರಿಗೆ ಮದುವೆ ಮಾಡಿಕೊಡುವುದಕ್ಕೂ ಸಂತೋಷಪಡುತ್ತೇವೆ.


ತನ್ನ ಬತ್ತಳಿಕೆಯಲ್ಲಿ ಗಂಡುಮಕ್ಕಳನ್ನು ತುಂಬುವವನು ಭಾಗ್ಯವಂತನಾಗಿದ್ದಾನೆ. ಅವನಿಗೆ ಸೋಲೇ ಇಲ್ಲ. ಅವನ ಗಂಡುಮಕ್ಕಳು ಅವನ ಪರವಾಗಿಯೂ ಅವನ ಶತ್ರುಗಳ ವಿರೋಧವಾಗಿಯೂ ನ್ಯಾಯಸ್ಥ್ಥಾನಗಳಲ್ಲಿ ವಾದಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು