Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 34:27 - ಪರಿಶುದ್ದ ಬೈಬಲ್‌

27 ಯಾಕೋಬನ ಗಂಡುಮಕ್ಕಳು ಪಟ್ಟಣದೊಳಗೆ ಹೋಗಿ ಅಲ್ಲಿದ್ದ ಪ್ರತಿಯೊಂದನ್ನು ತೆಗೆದುಕೊಂಡರು. ತಮ್ಮ ತಂಗಿಗೆ ಶೆಕೆಮನು ಮಾಡಿದ ಮಾನಭಂಗದಿಂದ ಅವರು ಇನ್ನೂ ಕೋಪದಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವರು ಹತವಾದ ನಂತರ ಯಾಕೋಬನ ಮಕ್ಕಳು ಬಂದು, ಇವರು ನಮ್ಮ ತಂಗಿಯನ್ನು ಮಾನಭಂಗಪಡಿಸಿದ್ದಾರೆ ಎಂದು ಹೇಳಿ ಊರನ್ನು ಸೂರೆಮಾಡಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಯಕೋಬನ ಇತರ ಮಕ್ಕಳು ಹತರಾದವರ ಬಳಿಗೆ ಬಂದು, ‘ತಂಗಿಯನ್ನು ಅವಮಾನ ಪಡಿಸಿದವರು ಇವರೇ ಅಲ್ಲವೆ’, ಎಂದುಕೊಂಡು ಆ ಊರನ್ನೇ ಸೂರೆಮಾಡಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವರು ಹತವಾದನಂತರ ಯಾಕೋಬನ ಮಕ್ಕಳು ಬಂದು - ಇವರು ನಮ್ಮ ತಂಗಿಯನ್ನು ಅವಮಾನಪಡಿಸಿದರಲ್ಲಾ ಎಂದು ಹೇಳಿ ಊರನ್ನು ಸೂರೆಮಾಡಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವರು ತಮ್ಮ ಸಹೋದರಿಯನ್ನು ಕೆಡಿಸಿದ್ದರಿಂದ ಯಾಕೋಬನ ಮಕ್ಕಳು ಬಂದು ಆ ಊರನ್ನೇ ಕೊಳ್ಳೆಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 34:27
13 ತಿಳಿವುಗಳ ಹೋಲಿಕೆ  

ಹಣದಾಸೆಯು ಎಲ್ಲಾ ವಿಧವಾದ ಕೆಟ್ಟತನಕ್ಕೆ ಮೂಲವಾಗುತ್ತದೆ. ಕೆಲವು ಜನರು ಹೆಚ್ಚುಹೆಚ್ಚು ಹಣವನ್ನು ಗಳಿಸಿಕೊಳ್ಳುವುದಕ್ಕಾಗಿ ಸತ್ಯೋಪದೇಶವನ್ನು ತೊರೆದುಬಿಟ್ಟಿದ್ದಾರೆ. ಆದರೆ ಅವರು ತಮ್ಮನ್ನು ತಾವೇ ಹೆಚ್ಚು ವೇದನೆಗೆ ಗುರಿಪಡಿಸಿಕೊಂಡಿದ್ದಾರೆ.


ಅದೇ ಸಮಯದಲ್ಲಿ ಇತರ ಸಂಸ್ಥಾನಗಳಲ್ಲಿದ್ದ ಯೆಹೂದ್ಯರು ತಾವು ಬಲಹೊಂದುವಂತೆ ಒಟ್ಟಾಗಿ ಸೇರಿ ಒಗ್ಗಟ್ಟಿನಲ್ಲಿದ್ದು ತಮ್ಮ ವೈರಿಗಳನ್ನು ಸಂಪೂರ್ಣವಾಗಿ ನಿರ್ನಾಮ ಮಾಡಿದರು. ಹೀಗೆ ಒಟ್ಟು ಎಪ್ಪತ್ತೈದು ಸಾವಿರ ಜನರು ಹತಿಸಲ್ಪಟ್ಟರು. ಆದರೆ ಅವರ ಆಸ್ತಿಯನ್ನು ಸೂರೆ ಮಾಡಲಿಲ್ಲ.


ಇವರು ಹಾಮಾನನ ಹತ್ತು ಗಂಡುಮಕ್ಕಳಾಗಿದ್ದರು. ಹಾಮಾನನು ಹಮ್ಮೆದಾತನ ಮಗನೂ ಯೆಹೂದ್ಯರ ಶತ್ರುವೂ ಆಗಿದ್ದನು. ಯೆಹೂದ್ಯರು ಅವರನ್ನು ಹತಿಸಿದ್ದು ಮಾತ್ರವೇ, ಹೊರತು ಅವರ ಸೊತ್ತುಗಳನ್ನು ಅಪಹರಿಸಲಿಲ್ಲ.


ನಾವು ಜೆರಿಕೊ ನಗರವನ್ನು ಮತ್ತು ಅದರಲ್ಲಿದ್ದ ಎಲ್ಲ ವಸ್ತುಗಳನ್ನು ಸ್ವಾಧೀನಪಡಿಸಿಕೊಂಡು ಕೊಳ್ಳೆ ಹೊಡೆಯುತ್ತಿದ್ದಾಗ, ಬಾಬಿಲೋನಿನ ಒಂದು ಸುಂದರವಾದ ನಿಲುವಂಗಿಯನ್ನೂ ಸುಮಾರು ಐದು ಪೌಂಡಿನಷ್ಟು ಬೆಳ್ಳಿಯನ್ನೂ ಒಂದು ಪೌಂಡಿಗಿಂತಲೂ ಹೆಚ್ಚು ಬಂಗಾರವನ್ನೂ ಕಂಡೆನು. ಈ ವಸ್ತುಗಳನ್ನು ನನಗಾಗಿ ಇಟ್ಟುಕೊಳ್ಳಬೇಕೆಂದು ತುಂಬ ಆಶೆಯಾಯಿತು. ಅದಕ್ಕಾಗಿ ನಾನು ಅವುಗಳನ್ನು ತೆಗೆದುಕೊಂಡೆ. ಅವುಗಳನ್ನು ನನ್ನ ಗುಡಾರದಲ್ಲಿ ಹುಗಿದಿಟ್ಟಿದ್ದೇನೆ. ಬೆಳ್ಳಿಯು ನಿಲುವಂಗಿಯ ಕೆಳಗಡೆ ಇದೆ” ಎಂದು ಒಪ್ಪಿಕೊಂಡನು.


“ಈಗ ಹೋಗಿ ಜನರನ್ನು ಶುದ್ಧಗೊಳಿಸು, ನೀನು ಜನರಿಗೆ, ‘ನೀವು ನಿಮ್ಮನ್ನು ಶುದ್ಧಿಗೊಳಿಸಿಕೊಳ್ಳಿರಿ, ನಾಳೆಗಾಗಿ ಸಿದ್ಧರಾಗಿರಿ, ಇಸ್ರೇಲಿನ ದೇವರಾದ ಯೆಹೋವನು ನಾಶಪಡಿಸಬೇಕೆಂದು ಆಜ್ಞಾಪಿಸಿದ ವಸ್ತುಗಳನ್ನು ಕೆಲ ಜನರು ಇಟ್ಟುಕೊಂಡಿದ್ದಾರೆಂದು ಹೇಳುತ್ತಾನೆ. ನೀವು ಆ ವಸ್ತುಗಳನ್ನು ಬಿಸಾಡುವವರೆಗೆ ನಿಮಗೆ ನಿಮ್ಮ ಶತ್ರುಗಳನ್ನು ಸೋಲಿಸಲು ಎಂದಿಗೂ ಸಾಧ್ಯವಿಲ್ಲ.


ಇಸ್ರೇಲರು ಯೆಹೋವನ ಆಜ್ಞೆಗೆ ವಿಧೇಯರಾಗಲಿಲ್ಲ. ಯೆಹೂದ ಕುಲದವನೂ ಕರ್ಮೀಯ ಮಗನೂ ಜಬ್ದೀಯ ಮೊಮ್ಮಗನೂ ಜೆರಹನ ಗೋತ್ರದವನೂ ಆದ ಆಕಾನ ಎಂಬವನು ನಾಶಮಾಡಬೇಕಾದ ವಸ್ತುಗಳಲ್ಲಿ ಕೆಲವನ್ನು ಇಟ್ಟುಕೊಂಡಿದ್ದನು. ಅದಕ್ಕಾಗಿ ಯೆಹೋವನು ಇಸ್ರೇಲಿನವರ ಮೇಲೆ ತುಂಬಾ ಕೋಪಗೊಂಡನು.


ಅದಕ್ಕೆ ಆ ಮನುಷ್ಯನು, “ನಿನ್ನನ್ನು ನಮ್ಮ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿದವರು ಯಾರು? ನಿನ್ನೆ ಆ ಈಜಿಪ್ಟಿನವನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿರುವಿಯೋ?” ಎಂದು ಉತ್ತರಿಸಿದನು. ಆಗ ಮೋಶೆಗೆ ಭಯವಾಯಿತು. ಮೋಶೆಯು ತನ್ನೊಳಗೆ, “ನಾನು ಮಾಡಿದ್ದು ಪ್ರತಿಯೊಬ್ಬರಿಗೂ ತಿಳಿದಿದೆ” ಅಂದುಕೊಂಡನು.


ಆದರೆ ದೀನಳ ಅಣ್ಣಂದಿರು, “ನಮ್ಮ ತಂಗಿಯನ್ನು ಆ ಜನರು ಸೂಳೆಯಂತೆ ಉಪಯೋಗಿಸಿಕೊಳ್ಳಲು ನಾವು ಬಿಡಬೇಕೇ? ಇಲ್ಲ, ನಮ್ಮ ತಂಗಿಗೆ ಆ ಜನರು ಮಾಡಿದ್ದು ತಪ್ಪು” ಎಂದು ಹೇಳಿದರು.


ಆ ದೇಶದ ರಾಜನಾಗಿದ್ದ ಹಮೋರನ ಮಗನಾದ ಶೆಕೆಮನು ದೀನಳನ್ನು ಕಂಡು ಅವಳನ್ನು ಎಳೆದುಕೊಂಡು ಹೋಗಿ ಬಲಾತ್ಕಾರ ಮಾಡಿದನು.


ದೀನಳ ಅಣ್ಣಂದಿರಾದ ಸಿಮೆಯೋನನು ಮತ್ತು ಲೇವಿಯು ಹಮೋರನನ್ನೂ ಅವನ ಮಗನಾದ ಶೆಕೆಮನನ್ನೂ ಕೊಂದುಹಾಕಿ ದೀನಳನ್ನು ಶೆಕಮನ ಮನೆಯಿಂದ ಕರೆದುಕೊಂಡು ಬಂದರು.


ಹೀಗೆ ದೀನಳ ಅಣ್ಣಂದಿರು ಅವರ ದನಕುರಿಗಳನ್ನೂ ಕತ್ತೆಗಳನ್ನೂ ಪಟ್ಟಣದಲ್ಲಿಯೂ ಹೊಲದಲ್ಲಿಯೂ ಇದ್ದ ಆಸ್ತಿಯೆಲ್ಲವನ್ನೂ ತೆಗೆದುಕೊಂಡರು.


ಆದ್ದರಿಂದ ಅವರಿಗೆ ಅಡವಿಯಿಂದ ಮತ್ತು ಬಯಲಿನಿಂದ ಸೌದೆಯನ್ನು ತೆಗೆಯುವ ಅವಶ್ಯಕತೆ ಇರುವದಿಲ್ಲ. ಅವರು ಸತ್ತ ಸೈನಿಕರಿಂದ ಬೆಲೆಬಾಳುವ ವಸ್ತುಗಳನ್ನು ದೋಚುವರು. ತಮ್ಮಿಂದ ದೋಚಿದ ಸೈನಿಕರಿಂದ ಅವರು ದೋಚುವರು.” ಇದು ಒಡೆಯನಾದ ಯೆಹೋವನ ನುಡಿ.


ಆದ್ದರಿಂದ ಯೆಹೋವನು ಹೇಳುವುದೇನೆಂದರೆ, “ಆ ದೇಶಕ್ಕೆ ಒಬ್ಬ ಶತ್ರುವು ಬರುವನು. ಅವನು ನಿಮ್ಮ ಬಲವನ್ನೇ ಮುರಿಯುವನು. ನೀವು ಉನ್ನತ ಬುರುಜುಗಳಲ್ಲಿ ಅಡಿಗಿಸಿಟ್ಟಿದ್ದ ವಸ್ತುಗಳನ್ನು ಕಿತ್ತುಕೊಳ್ಳುವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು