Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 35:16 - ಪರಿಶುದ್ದ ಬೈಬಲ್‌

16 ಯಾಕೋಬನು ಮತ್ತು ಅವನ ಜನರು ಬೇತೇಲಿನಿಂದ ಹೊರಟು ಬೆತ್ಲೆಹೇಮೆಂಬ ಎಫ್ರಾತೂರಿಗೆ ಬರುವುದಕ್ಕಿಂತ ಸ್ವಲ್ಪಮುಂಚೆ ರಾಹೇಲಳಿಗೆ ಹೆರಿಗೆ ಕಾಲ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವರು ಬೇತೇಲಿನಿಂದ ಪ್ರಯಾಣಮಾಡುತ್ತಿರಲು ಎಫ್ರಾತಿಗೆ ಸೇರುವುದಕ್ಕೆ ಇನ್ನೂ ಸ್ವಲ್ಪ ದೂರವಿದ್ದಾಗ ರಾಹೇಲಳು ಪ್ರಸವ ವೇದನೆಯಿಂದ ನರಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆ ಬಳಿಕ ಅವರು ಬೇತೇಲನ್ನು ಬಿಟ್ಟು ಹೊರಟರು. ಎಫ್ರಾತೂರಿಗೆ ಸೇರುವುದಕ್ಕೆ ಇನ್ನು ಸ್ವಲ್ಪ ದೂರವಿದ್ದಾಗ ರಾಖೇಲಳಿಗೆ ಹೆರಿಗೆಯ ಕಾಲ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವರು ಬೇತೇಲಿನಿಂದ ಪ್ರಯಾಣ ಮಾಡುತ್ತಿರಲು ಎಫ್ರಾತೂರಿಗೆ ಸೇರುವದಕ್ಕೆ ಇನ್ನೂ ಸ್ವಲ್ಪ ದೂರವಿದ್ದಾಗ ರಾಹೇಲಳಿಗೆ ಹೆರಿಗೇ ಕಾಲಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಬೇತೇಲಿನಿಂದ ಅವರು ಪ್ರಯಾಣಮಾಡಿ, ಎಫ್ರಾತೂರಿಗೆ ಇನ್ನೂ ಸ್ವಲ್ಪ ದೂರ ಇರುವಾಗ, ರಾಹೇಲಳು ಪ್ರಸವವೇದನೆಯಿಂದ ಕಷ್ಟಪಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 35:16
15 ತಿಳಿವುಗಳ ಹೋಲಿಕೆ  

ಎಫ್ರಾತದ ಬೆತ್ಲೆಹೇಮೇ, ನೀನು ಯೆಹೂದದ ಪ್ರಾಂತ್ಯದಲ್ಲಿ ಅತಿ ಚಿಕ್ಕ ಊರು ಆಗಿರುವೆ. ನಿನ್ನಲ್ಲಿರುವ ಕುಟುಂಬಗಳು ಸ್ವಲ್ಪ ಮಾತ್ರವೇ. ಆದರೆ ಇಸ್ರೇಲನ್ನು ಆಳುವವನು ನನಗೋಸ್ಕರವಾಗಿ ನಿನ್ನಿಂದ ಹೊರಡುವನು. ಆತನ ಪ್ರಾರಂಭವು ಅನಾದಿ ಕಾಲದಿಂದಲೇ ಆಗಿದೆ.


“ರಾಮದಲ್ಲಿ ಬೊಬ್ಬೆಯು ಕೇಳಿಸಿತು. ಅದು ಬಹು ಗೋಳಾಟದ ಮತ್ತು ದುಃಖದ ಬೊಬ್ಬೆಯಾಗಿತ್ತು. ರಾಹೇಲಳು ತನ್ನ ಮಕ್ಕಳಿಗಾಗಿ ಅಳುವಳು; ಅವರು ಸತ್ತುಹೋದದ್ದಕ್ಕಾಗಿ ಸಮಾಧಾನ ಹೊಂದಲೊಲ್ಲಳು.”


ಪದ್ದನ್‌ಅರಾಮಿನಿಂದ ಹಿಂತಿರುಗಿ ಬರುತ್ತಿರುವಾಗ ರಾಹೇಲಳು ಸತ್ತಳು. ಇದು ನನಗೆ ತುಂಬ ದುಃಖವನ್ನು ಉಂಟುಮಾಡಿತು. ನಾವು ಕಾನಾನ್ ದೇಶದಲ್ಲಿ ಎಫ್ರಾತ್ ನಗರದ ಕಡೆಗೆ ಪ್ರಯಾಣ ಮಾಡುತ್ತಿದ್ದೆವು. ಆದ್ದರಿಂದ ನಾನು ಅವಳನ್ನು ಬೆತ್ಲೆಹೇಮೆಂಬ ಎಫ್ರಾತ್ ನಗರದ ರಸ್ತೆಯಲ್ಲಿ ಸಮಾಧಿ ಮಾಡಿದೆನು” ಎಂದು ಹೇಳಿದನು.


ಆದರೆ ಸ್ತ್ರೀಯರು ನಂಬಿಕೆಯಲ್ಲಿ, ಪ್ರೀತಿಯಲ್ಲಿ, ಪರಿಶುದ್ಧತೆಯಲ್ಲಿ ಮತ್ತು ಸರಿಯಾದ ನಡವಳಿಕೆಯಲ್ಲಿ ದೃಢವಾಗಿದ್ದರೆ ಮಕ್ಕಳನ್ನು ಹೆರುವಾಗ ರಕ್ಷಿಸಲ್ಪಡುವರು.


ಜ್ಞಾನಿಗಳು ತನಗೆ ಮೋಸಮಾಡಿದರೆಂಬುದು ತಿಳಿದಾಗ ಹೆರೋದನು ಬಹಳ ಕೋಪಗೊಂಡನು. ಆ ಮಗು ಹುಟ್ಟಿದ ಸಮಯವನ್ನು ಹೆರೋದನು ಜ್ಞಾನಿಗಳಿಂದ ತಿಳಿದುಕೊಂಡಿದ್ದನು. ಆ ಮಗು ಹುಟ್ಟಿ ಎರಡು ವರ್ಷಗಳಾಗಿದ್ದವು. ಆದ್ದರಿಂದ ಹೆರೋದನು ಬೆತ್ಲೆಹೇಮಿನಲ್ಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿದ್ದ ಎರಡು ವರ್ಷದ ಮತ್ತು ಅವರಿಗಿಂತ ಚಿಕ್ಕವರಾದ ಗಂಡುಮಕ್ಕಳನ್ನೆಲ್ಲಾ ಕೊಲ್ಲಬೇಕೆಂದು ಆಜ್ಞಾಪಿಸಿದನು.


ಹೆರೋದನು ರಾಜನಾಗಿದ್ದ ಕಾಲದಲ್ಲಿ ಯೇಸು ಜುದೇಯದ ಬೆತ್ಲೆಹೇಮ್ ಎಂಬ ಊರಲ್ಲಿ ಹುಟ್ಟಿದನು. ಯೇಸು ಹುಟ್ಟಿದ ಮೇಲೆ, ಪೂರ್ವದೇಶದ ಕೆಲವು ಜ್ಞಾನಿಗಳು ಜೆರುಸಲೇಮಿಗೆ ಬಂದರು.


ನಾವು ಅದರ ಬಗ್ಗೆ ಎಫ್ರಾತದಲ್ಲಿ ಕೇಳಿದೆವು. ನಾವು ಒಡಂಬಡಿಕೆಯ ಪೆಟ್ಟಿಗೆಯನ್ನು ಕಿರ್ಯತ್ಯಾರೀಮಿನಲ್ಲಿ ಕಂಡುಕೊಂಡೆವು.


ಅಜೂಬಳು ಸತ್ತ ಮೇಲೆ ಕಾಲೇಬನು ಎಫ್ರಾತಳನ್ನು ಮದುವೆಯಾದನು. ಅವರಿಗೆ ಹೂರ್ ಎಂಬ ಮಗನು ಹುಟ್ಟಿದನು.


ಆಗ ಎಲೀಷನು, “ಸಮಾಧಾನದಿಂದ ಹೋಗು” ಎಂದನು. ನಾಮಾನನು ಎಲೀಷನ ಬಳಿಯಿಂದ ಸ್ವಲ್ಪದೂರ ಹೋದನು.


ಅವನ ಹೆಂಡತಿಯ ಹೆಸರು “ನೊವೊಮಿ.” ಅವನ ಇಬ್ಬರು ಗಂಡುಮಕ್ಕಳ ಹೆಸರುಗಳು: ಮಹ್ಲೋನ್ ಮತ್ತು ಕಿಲ್ಯೋನ್. ಅವರು ಯೆಹೂದಪ್ರಾಂತದ ಎಫ್ರಾತಿಗೆ ಸೇರಿದ ಬೆತ್ಲೆಹೇಮಿನ ನಿವಾಸಿಗಳು. ಇವರು ಮೋವಾಬ್ ಬೆಟ್ಟಪ್ರದೇಶಕ್ಕೆ ಹೋಗಿ ಅಲ್ಲಿಯೇ ನೆಲೆಸಿದರು.


ರಾಹೇಲಳನ್ನು ಬೆತ್ಲೆಹೇಮೆಂಬ ಎಫ್ರಾತಿಗೆ ಹೋಗುವ ದಾರಿಯಲ್ಲಿ ಸಮಾಧಿ ಮಾಡಲಾಯಿತು.


ಬಳಿಕ ದೇವರಾದ ಯೆಹೋವನು ಸ್ತ್ರೀಗೆ, “ನೀನು ಗರ್ಭಿಣಿಯಾಗಿರುವಾಗ ಬಹು ಸಂಕಟಪಡುವೆ. ನೀನು ಮಕ್ಕಳನ್ನು ಹೆರುವಾಗ ಬಹಳ ವೇದನೆಪಡುವೆ. ನೀನು ಗಂಡನನ್ನು ಬಹಳವಾಗಿ ಇಷ್ಟಪಡುವೆ; ಆದರೆ ಅವನು ನಿನ್ನನ್ನು ಆಳುವನು” ಎಂದನು.


ನಗರದ್ವಾರದಲ್ಲಿ ಸೇರಿದ್ದ ಜನರೆಲ್ಲರು ಮತ್ತು ಹಿರಿಯರು ಸಾಕ್ಷಿಗಳಾಗಿದ್ದರು. ಅವರು, “ಈ ಸ್ತ್ರೀಯು ನಿನ್ನ ಮನೆಗೆ ಬರುವಳು. ಯೆಹೋವನು ಅವಳನ್ನು ರಾಹೇಲಳಂತೆಯೂ ಲೇಯಾಳಂತೆಯೂ ಮಾಡಲಿ. ರಾಹೇಲಳು ಮತ್ತು ಲೇಯಾಳು ಇಸ್ರೇಲಿನ ಮನೆಯನ್ನು ಕಟ್ಟಿದರು. ಎಫ್ರಾತಿನಲ್ಲಿ ಪ್ರಭಾವ ಶಾಲಿಯಾಗು! ಬೆತ್ಲೆಹೇಮಿನಲ್ಲಿ ಸುಪ್ರಸಿದ್ಧನಾಗು!


ಅವಳಿಗೆ ಸಹಾಯ ಮಾಡುತ್ತಿದ್ದ ಸ್ತ್ರೀಯರು, “ಚಿಂತಿಸಬೇಡ. ನೀನು ಗಂಡುಮಗುವಿಗೆ ಜನ್ಮ ನೀಡಿರುವೆ” ಎಂದು ಹೇಳಿದರು. ಆದರೆ ಏಲಿಯ ಸೊಸೆಯು ಅವರ ಮಾತಿಗೆ ಉತ್ತರಿಸಲೂ ಇಲ್ಲ, ಲಕ್ಷ್ಯ ಕೊಡಲೂ ಇಲ್ಲ.


ಈ ದಿನ ನನ್ನನ್ನು ಬಿಟ್ಟು ನೀನು ಮುಂದೆ ಸಾಗಿದಾಗ, ಬೆನ್ಯಾಮೀನನ ಮೇರೆಯಲ್ಲಿರುವ ಚೆಲ್ಚಹಿನಲ್ಲಿನ ರಾಹೇಲಳ ಸಮಾಧಿಯ ಬಳಿ ಇಬ್ಬರು ಮನುಷ್ಯರನ್ನು ಸಂಧಿಸುವೆ. ಅವರಿಬ್ಬರೂ ನಿನಗೆ, ‘ನೀನು ಹುಡುಕುತ್ತಿದ್ದ ಕತ್ತೆಗಳು ಒಬ್ಬನಿಗೆ ಸಿಕ್ಕಿವೆ. ನಿನ್ನ ತಂದೆಯು ಕತ್ತೆಗಳ ಬಗ್ಗೆ ಚಿಂತಿಸುವುದನ್ನು ಬಿಟ್ಟು ನಿನ್ನ ಬಗ್ಗೆ ಚಿಂತಿಸುತ್ತಿದ್ದಾನೆ. ನನ್ನ ಮಗನು ಎಲ್ಲಿಗೆ ಹೋದನೋ ಎಂದು ಹಂಬಲಿಸುತ್ತಿದ್ದಾನೆ’ ಎಂದು ಹೇಳುವರು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು