Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 35:18 - ಪರಿಶುದ್ದ ಬೈಬಲ್‌

18 ರಾಹೇಲಳು ಮಗನನ್ನು ಹೆರುವಾಗ ಸತ್ತುಹೋದಳು; ಸಾಯುವುದಕ್ಕೆ ಮೊದಲು, ರಾಹೇಲಳು ಆ ಮಗುವಿಗೆ ಬೆನೋನಿ ಎಂದು ಹೆಸರಿಟ್ಟಳು. ಆದರೆ ಯಾಕೋಬನು ಅವನಿಗೆ ಬೆನ್ಯಾಮೀನ್ ಎಂದು ಹೆಸರಿಟ್ಟನು. ಹಾಗೆ ರಾಹೇಳಲು ಮೃತಪಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದರೆ ರಾಹೇಲಳು ಸತ್ತುಹೋದಳು. ಪ್ರಾಣಬಿಡುವಾಗ ಆಕೆಯು ಆ ಮಗುವಿಗೆ, “ಬೆನೋನಿ” ಎಂದು ಹೆಸರಿಟ್ಟಳು. ಆದರೆ ಅದರ ತಂದೆಯು ಅದಕ್ಕೆ, “ಬೆನ್ಯಾಮೀನ” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆದರೆ ರಾಖೇಲಳು ಸತ್ತುಹೋದಳು. ಪ್ರಾಣಹೋಗುತ್ತಿದ್ದಾಗ ಆಕೆ ಆ ಮಗುವಿಗೆ ‘ಬೆನೋನಿ’ ಎಂದು ಹೆಸರಿಟ್ಟಳು. ಅದರ ತಂದೆಯಾದರೋ ಅದಕ್ಕೆ ಬೆನ್ಯಾಮೀನ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆದರೆ ರಾಹೇಲಳು ಸತ್ತುಹೋದಳು; ಪ್ರಾಣಹೋಗುತ್ತಿರುವಾಗ ಆಕೆಯು ಆ ಮಗುವಿಗೆ ಬೆನೋನಿ ಎಂದು ಹೆಸರಿಟ್ಟಳು; ಆದರೆ ಅದರ ತಂದೆಯು ಅದಕ್ಕೆ ಬೆನ್ಯಾಮೀನ್ ಎಂದು ಹೆಸರಿಟ್ಟನು. ಹಾಗೆ ರಾಹೇಲಳು ಮೃತಪಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದರೆ ರಾಹೇಲಳು ಸತ್ತುಹೋದಳು. ಅವಳು ಪ್ರಾಣಬಿಡುವಾಗ, ಮಗನಿಗೆ ಬೆನೋನಿ ಎಂದು ಹೆಸರಿಟ್ಟಳು, ಆದರೆ ಅವನ ತಂದೆ ಅವನಿಗೆ ಬೆನ್ಯಾಮೀನ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 35:18
18 ತಿಳಿವುಗಳ ಹೋಲಿಕೆ  

ಸ್ತೆಫನನಿಗೆ ಕಲ್ಲುಗಳನ್ನು ಎಸೆದರು. ಆದರೆ ಸ್ತೆಫನನು ಪ್ರಾರ್ಥಿಸುತ್ತಾ, “ಪ್ರಭುವಾದ ಯೇಸುವೇ, ನನ್ನ ಆತ್ಮವನ್ನು ಸ್ವೀಕರಿಸಿಕೊ!” ಎಂದನು.


ಆಮೇಲೆ ಯೇಸು, “ತಂದೆಯೇ, ನನ್ನ ಆತ್ಮವನ್ನು ನಿನಗೆ ಒಪ್ಪಿಸುತ್ತೇನೆ” ಎಂದು ಮಹಾಧ್ವನಿಯಿಂದ ಕೂಗಿ ಪ್ರಾಣಬಿಟ್ಟನು.


ಯಾಬೇಚನು ತುಂಬ ಒಳ್ಳೆಯ ವ್ಯಕ್ತಿಯಾಗಿದ್ದನು. ಅವನು ತನ್ನ ಅಣ್ಣತಮ್ಮಂದಿರಿಗಿಂತ ಉತ್ತಮನಾಗಿದ್ದನು. ಅವನ ತಾಯಿ, “ನಾನು ಅವನನ್ನು ಹೆರುವಾಗ ತುಂಬಾ ನೋವನ್ನು ಅನುಭವಿಸಿದ್ದರಿಂದ ನಾನು ಅವನಿಗೆ ಯಾಬೇಚ ಎಂದು ಹೆಸರಿಟ್ಟೆನು” ಎಂದು ಹೇಳಿದಳು.


“ಆದರೆ ದೇವರು ಅವನಿಗೆ, ‘ನೀನು ಬುದ್ಧಿಹೀನ! ಈ ರಾತ್ರಿ ನೀನು ಸಾಯುವೆ! ಈಗ ಹೇಳು, ನೀನು ಕೂಡಿಟ್ಟ ಪದಾರ್ಥಗಳ ಗತಿ ಏನಾಗುವುದು? ಅವು ಯಾರ ಪಾಲಾಗುತ್ತವೆ?’ ಎಂದು ಕೇಳಿದನು.


ಆ ಮಕ್ಕಳು ತಮ್ಮ ತಾಯಂದಿರನ್ನು, “ರೊಟ್ಟಿ ಮತ್ತು ದ್ರಾಕ್ಷಾರಸ ಎಲ್ಲಿದೆ?” ಎಂದು ಕೇಳುತ್ತಿದ್ದಾರೆ. ಅವರು ಅಸುನೀಗುವಾಗ ಈ ಪ್ರಶ್ನೆಯನ್ನು ಕೇಳುತ್ತಿದ್ದಾರೆ. ಅವರು ತಮ್ಮ ತಾಯಂದಿರ ಮಡಿಲಲ್ಲಿಯೇ ಪ್ರಾಣಬಿಡುತ್ತಿದ್ದಾರೆ.


ನೀನು ಆರಿಸಿಕೊಂಡಿರುವಾತನ ಕಡೆಗೆ ಕೈಚಾಚಿ ಸಹಾಯ ಮಾಡು. ನೀನು ಬೆಳೆಸಿದ ಜನರ ಕಡೆಗೆ ಕೈಚಾಚು.


ಯಾಕೆಂದರೆ, ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ. ನಿನ್ನ ಪವಿತ್ರನನ್ನು ಸಮಾಧಿಯಲ್ಲಿ ಕೊಳೆಯಲು ಬಿಡುವುದಿಲ್ಲ.


ಈ ಪಶುಗಳ ರಕ್ತವನ್ನು ತೆಗೆದಿಟ್ಟು ಜನರು ಭೋಜನಮಾಡುವ ಮನೆಗಳ ಬಾಗಿಲಿನ ಎರಡು ನಿಲುವು ಕಂಬಗಳಿಗೂ ಮೇಲಿನ ಪಟ್ಟಿಗಳಿಗೂ ಆ ರಕ್ತವನ್ನು ಹಚ್ಚಬೇಕು.


ನೀವು ರಾಜ್ಯಪಾಲನ ಮುಂದೆ ನಿಂತುಕೊಂಡಾಗ ಸರ್ವಶಕ್ತನಾದ ದೇವರು ನಿಮಗೆ ಸಹಾಯ ಮಾಡುವಂತೆ ನಾನು ಪ್ರಾರ್ಥಿಸುತ್ತೇನೆ. ಬೆನ್ಯಾಮೀನನನ್ನೂ ಸಿಮೆಯೋನನನ್ನೂ ಕಳುಹಿಸಿಕೊಡುವಂತೆ ಮತ್ತು ನೀವು ಸುರಕ್ಷಿತವಾಗಿ ಮರಳಿಬರುವಂತೆ ನಾನು ಪ್ರಾರ್ಥಿಸುತ್ತೇನೆ. ಇಲ್ಲವಾದರೆ, ನನ್ನ ಮಗನನ್ನು ಕಳೆದುಕೊಂಡು ನಾನು ಮತ್ತೆ ದುಃಖಿತನಾಗುವೆ” ಎಂದು ಹೇಳಿದನು.


ಯಾಕೋಬನು, “ನಾನು ನಿಮ್ಮೊಂದಿಗೆ ಬೆನ್ಯಾಮೀನನನ್ನು ಕಳುಹಿಸಿಕೊಡುವುದಿಲ್ಲ. ಅವನ ಸಹೋದರನು ಸತ್ತುಹೋದನು; ನನ್ನ ಹೆಂಡತಿಯಾದ ರಾಹೇಲಳಲ್ಲಿ ಹುಟ್ಟಿದ ಗಂಡುಮಕ್ಕಳಲ್ಲಿ ಇವನೊಬ್ಬನೇ ಉಳಿದಿರುವುದು. ಈಜಿಪ್ಟಿಗೆ ಪ್ರಯಾಣ ಮಾಡುವಾಗ ಇವನಿಗೆ ಅಪಾಯ ಸಂಭವಿಸಿದರೆ ವಯಸ್ಸಾದ ನಾನು ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣವಾಗುವಿರಿ” ಎಂದು ಹೇಳಿದನು.


ಯಾಕೋಬನು ಬೆನ್ಯಾಮೀನನನ್ನು ಕಳುಹಿಸಲಿಲ್ಲ. (ಬೆನ್ಯಾಮೀನನು ಯೋಸೇಫನ ಒಡಹುಟ್ಟಿದ ಒಬ್ಬನೇ ತಮ್ಮನಾಗಿದ್ದನು.) ಬೆನ್ಯಾಮೀನನಿಗೆ ಏನಾದರೂ ಕೇಡಾಗಬಹುದೆಂಬ ಭಯ ಯಾಕೋಬನಿಗಿತ್ತು.


ರಾಹೇಲಳು ತನಗೆ ಮಕ್ಕಳಾಗದಿರುವುದನ್ನು ಗಮನಿಸಿದಳು. ರಾಹೇಲಳಿಗೆ ತನ್ನ ಅಕ್ಕ ಲೇಯಳ ಮೇಲೆ ಹೊಟ್ಟೆಕಿಚ್ಚಾಯಿತು. ಆದ್ದರಿಂದ ರಾಹೇಲಳು ಯಾಕೋಬನಿಗೆ, “ನನಗೆ ಮಕ್ಕಳನ್ನು ಕೊಡು, ಇಲ್ಲವಾದರೆ ನಾನು ಸಾಯುವೆ” ಎಂದು ಹೇಳಿದಳು.


ಆದರೆ ರಾಹೇಲಳು ಈ ಹೆರಿಗೆಯಲ್ಲಿ ತುಂಬ ಕಷ್ಟಪಡಬೇಕಾಯಿತು. ಆಕೆಗೆ ಬಹಳ ನೋವಿತ್ತು. ರಾಹೇಲಳ ದಾದಿಯು ಇದನ್ನು ಕಂಡು, ಆಕೆಗೆ, “ರಾಹೇಲಳೇ, ಭಯಪಡಬೇಡ. ನೀನು ಮತ್ತೊಬ್ಬ ಮಗನಿಗೆ ಜನನ ಕೊಡುತ್ತಿರುವೆ” ಎಂದು ಹೇಳಿದಳು.


ರಾಹೇಲಳನ್ನು ಬೆತ್ಲೆಹೇಮೆಂಬ ಎಫ್ರಾತಿಗೆ ಹೋಗುವ ದಾರಿಯಲ್ಲಿ ಸಮಾಧಿ ಮಾಡಲಾಯಿತು.


ರಾಹೇಲಳ ಗಂಡುಮಕ್ಕಳು: ಯೋಸೇಫ ಮತ್ತು ಬೆನ್ಯಾಮೀನ್.


“ಬೆನ್ಯಾಮೀನನು ಹಸಿದಿರುವ ತೋಳದಂತಿದ್ದಾನೆ. ಅವನು ಮುಂಜಾನೆಯಲ್ಲಿ ಕೊಂದು ತಿನ್ನುವನು. ಅವನು ಸಾಯಂಕಾಲ ಮಿಕ್ಕುಳಿದುದ್ದನ್ನು ಹಂಚಿಕೊಳ್ಳುವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು