Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 35:2 - ಪರಿಶುದ್ದ ಬೈಬಲ್‌

2 ಆದ್ದರಿಂದ ಯಾಕೋಬನು ತನ್ನ ಕುಟುಂಬದವರಿಗೂ ತನ್ನ ಎಲ್ಲಾ ಸೇವಕರಿಗೂ, “ನಿಮ್ಮಲ್ಲಿರುವ ಮರದ ಮತ್ತು ಲೋಹದ ಎಲ್ಲಾ ಅನ್ಯದೇವರುಗಳನ್ನು ನಾಶಮಾಡಿರಿ. ನಿಮ್ಮನ್ನು ಶುದ್ಧಿ ಮಾಡಿಕೊಂಡು ಶುದ್ಧವಾದ ಬಟ್ಟೆಗಳನ್ನು ಧರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ “ನಿಮ್ಮ ಮಧ್ಯಲ್ಲಿರುವ ಅನ್ಯ ದೇವರುಗಳನ್ನು ತೆಗೆದುಹಾಕಿ ನಿಮ್ಮನ್ನು ಶುದ್ಧಪಡಿಸಿಕೊಂಡು, ವಸ್ತ್ರಗಳನ್ನು ಬದಲಾಯಿಸಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ಯಕೋಬನು ತನ್ನ ಮನೆಯವರಿಗೂ ಹಾಗು ತನ್ನ ಸಂಗಡ ಇದ್ದ ಎಲ್ಲರಿಗೂ, “ನಿಮ್ಮಲ್ಲಿ ಇರುವ ಅನ್ಯ ದೇವರುಗಳನ್ನು ತೊರೆದುಬಿಡಿ; ನಿಮ್ಮನ್ನೇ ಶುದ್ಧೀಕರಿಸಿಕೊಂಡು ಮಡಿವಸ್ತ್ರಗಳನ್ನು ಹಾಕಿಕೊಳ್ಳಿ; ನಾವು ಬೇತೇಲಿಗೆ ಹೊರಟುಹೋಗೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ - ನಿಮ್ಮಲ್ಲಿರುವ ಅನ್ಯದೇವರುಗಳನ್ನು ತಳ್ಳಿಬಿಟ್ಟು ನಿಮ್ಮನ್ನು ಶುದ್ಧೀಕರಿಸಿಕೊಂಡು ಮಡಿವಸ್ತ್ರಗಳನ್ನು ಹಾಕಿಕೊಳ್ಳಿರಿ; ನಾವು ಬೇತೇಲಿಗೆ ಹೊರಟುಹೋಗೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಯಾಕೋಬನು ತನ್ನ ಮನೆಯವರಿಗೂ, ತನ್ನ ಸಂಗಡ ಇದ್ದವರೆಲ್ಲರಿಗೂ, “ನಿಮ್ಮ ಮಧ್ಯದಲ್ಲಿರುವ ಅನ್ಯದೇವರುಗಳನ್ನು ತೆಗೆದುಹಾಕಿ ಶುದ್ಧರಾಗಿರಿ, ನೀವು ನಿಮ್ಮ ಬಟ್ಟೆಗಳನ್ನು ಬದಲಾಯಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 35:2
58 ತಿಳಿವುಗಳ ಹೋಲಿಕೆ  

ಮೋಶೆ ಬೆಟ್ಟದಿಂದಿಳಿದು ಹೋದನು. ಅವನು ಜನರ ಬಳಿಗೆ ಹೋಗಿ ವಿಶೇಷ ಸಂದರ್ಶನಕ್ಕಾಗಿ ಅವರನ್ನು ಸಿದ್ಧ ಮಾಡಿದನು. ಜನರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡರು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ಈ ದಿನ ಮತ್ತು ನಾಳೆ ನೀನು ಜನರನ್ನು ಒಂದು ವಿಶೇಷ ಸಂದರ್ಶನಕ್ಕಾಗಿ ಸಿದ್ಧಪಡಿಸಬೇಕು. ಜನರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು


ದೇವರ ಸಮೀಪಕ್ಕೆ ಬನ್ನಿ, ಆಗ ದೇವರು ನಿಮ್ಮ ಸಮೀಪಕ್ಕೆ ಬರುತ್ತಾನೆ. ನೀವು ಪಾಪಿಗಳು, ಆದ್ದರಿಂದ ನಿಮ್ಮ ಜೀವಿತಗಳಿಂದ ಪಾಪಗಳನ್ನು ತೊಳೆದು ಹಾಕಿರಿ. ನೀವು ದೇವರನ್ನು ಮತ್ತು ಈ ಲೋಕವನ್ನು ಏಕಕಾಲದಲ್ಲಿ ಅನುಸರಿಸಲು ಪ್ರಯತ್ನಿಸುತ್ತಿರುವಿರಿ. ನಿಮ್ಮ ಆಲೋಚನೆಗಳನ್ನು ಪರಿಶುದ್ಧಗೊಳಿಸಿರಿ.


ನಾವು ತೊಳೆಯಲ್ಪಟ್ಟವರಾಗಿದ್ದು ಕೆಟ್ಟ ಮನಸ್ಸಾಕ್ಷಿಯಿಂದ ಬಿಡುಗಡೆ ಹೊಂದಿದ್ದೇವೆ. ನಮ್ಮ ದೇಹಗಳನ್ನು ಶುದ್ಧವಾದ ನೀರಿನಿಂದ ತೊಳೆಯಲಾಗಿದೆ. ಆದ್ದರಿಂದ ಪೂರ್ಣನಂಬಿಕೆಯಿಂದಲೂ ಶುದ್ಧವಾದ ಹೃದಯದಿಂದಲೂ ದೇವರ ಬಳಿಗೆ ಬರೋಣ.


ನಿಮ್ಮ ದಂಗೆಕೋರತನದ ಮಾರ್ಗಗಳನ್ನೆಲ್ಲ ತೊರೆದುಬಿಟ್ಟು ನಿಮ್ಮ ಹೃದಯವನ್ನೂ ಸ್ವಭಾವವನ್ನೂ ನೂತನ ಮಾಡಿಕೊಳ್ಳಿರಿ. ಇಸ್ರೇಲ್ ಜನರೇ, ನೀವು ಮರಣವನ್ನು ಬರಮಾಡಿಕೊಳ್ಳುವುದೇಕೆ?


ಆಗ ನಾನು ಶುದ್ಧ ನೀರನ್ನು ನಿಮ್ಮ ಮೇಲೆ ಚಿಮುಕಿಸಿ ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವೆನು. ಆ ವಿಗ್ರಹಗಳ ಹೊಲಸನ್ನು ನಿಮ್ಮಿಂದ ನಾನು ತೊಳೆದುಹಾಕಿ ನಿಮ್ಮನ್ನು ಶುದ್ಧರನ್ನಾಗಿ ಮಾಡುವೆನು.”


ಆಗ ಯೆಹೋಶುವನು, “ಹಾಗಾದರೆ ನಿಮ್ಮಲ್ಲಿರುವ ಸುಳ್ಳುದೇವರುಗಳನ್ನು ಎಸೆದುಬಿಡಿ. ಇಸ್ರೇಲರ ದೇವರಾದ ಯೆಹೋವನ ಕಡೆಗೆ ನಿಮ್ಮ ಮನಸ್ಸನ್ನು ತಿರುಗಿಸಿಕೊಳ್ಳಿರಿ” ಎಂದು ಹೇಳಿದನು.


“ನೀವು ಯೆಹೋವನ ಸೇವೆಮಾಡಲು ಇಷ್ಟಪಡದಿದ್ದರೆ ಯಾರ ಸೇವೆಯನ್ನು ಮಾಡಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆ ಇದ್ದಾಗ ಪೂಜಿಸುತ್ತಿದ್ದ ದೇವರುಗಳ ಸೇವೆಮಾಡುವಿರೋ ಅಥವಾ ಈ ಪ್ರದೇಶದಲ್ಲಿದ್ದ ಅಮೋರಿಯರ ದೇವತೆಗಳ ಸೇವೆಮಾಡುವಿರೋ ಎಂಬುದನ್ನು ನೀವು ಇಂದು ನಿರ್ಧರಿಸಬೇಕು. ಆಯ್ಕೆ ನಿಮಗೆ ಬಿಟ್ಟಿದ್ದು. ಆದರೆ ನಾನು ಮತ್ತು ನನ್ನ ಕುಟುಂಬದವರು ಯೆಹೋವನನ್ನೇ ಸೇವಿಸುತ್ತೇವೆ” ಅಂದನು.


ನಾನು ಅವನೊಡನೆ ವಿಶೇಷವಾದ ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ. ಅವನು ತನ್ನ ಮಕ್ಕಳಿಗೂ ಸಂತತಿಯವರಿಗೂ ನನಗೆ ವಿಧೇಯರಾಗುವಂತೆ ಮತ್ತು ನ್ಯಾಯನೀತಿಗಳಿಂದ ಜೀವಿಸುವಂತೆ ಆಜ್ಞಾಪಿಸಲೆಂದು ನಾನು ಅವನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡೆನು. ಅವರು ಹೀಗೆ ಜೀವಿಸಿದರೆ, ನನ್ನ ವಾಗ್ದಾನಗಳನ್ನೆಲ್ಲಾ ನೆರವೇರಿಸುವೆನು.”


ಪ್ರಿಯ ಸ್ನೇಹಿತರೇ, ನಾವು ದೇವರಿಂದ ಈ ವಾಗ್ದಾನಗಳನ್ನು ಹೊಂದಿದ್ದೇವೆ. ಆದ್ದರಿಂದ ನಮ್ಮನ್ನು ಶುದ್ಧರನ್ನಾಗಿ ಮಾಡಿಕೊಳ್ಳಬೇಕು. ನಮ್ಮ ದೇಹವನ್ನಾಗಲಿ ನಮ್ಮ ಆತ್ಮವನ್ನಾಗಲಿ ಅಶುದ್ಧಗೊಳಿಸುವ ಎಲ್ಲಾ ವಿಧದ ಮಲಿನತೆಯಿಂದ ನಾವು ದೂರವಿರೋಣ. ನಾವು ದೇವರನ್ನು ಗೌರವಿಸುವುದರಿಂದ ಪರಿಶುದ್ಧವಾದ ಬಾಳ್ವೆಯನ್ನು ನಡೆಸಲು ನಾವು ಪ್ರಯತ್ನಿಸಬೇಕು.


ಸಮುವೇಲನು ಇಸ್ರೇಲರಿಗೆ, “ನೀವು ಯೆಹೋವನ ಬಳಿಗೆ ಪೂರ್ಣಮನಸ್ಸಿನಿಂದ ಮತ್ತೆ ಬರುವುದಾದರೆ ನಿಮ್ಮ ಬಳಿಯಿರುವ ಅನ್ಯದೇವರುಗಳನ್ನು ಎಸೆಯಬೇಕು. ನೀವು ಅಷ್ಟೋರೆತ್ ದೇವತೆಯ ವಿಗ್ರಹಗಳನ್ನು ತ್ಯಜಿಸಬೇಕು. ನೀವು ನಿಮ್ಮನ್ನು ಯೆಹೋವನಿಗೆ ಸಂಪೂರ್ಣವಾಗಿ ಒಪ್ಪಿಸಿಕೊಟ್ಟು ಆತನ ಸೇವೆಯನ್ನು ಮಾತ್ರ ಮಾಡಬೇಕು. ಆಗ ಆತನು ನಿಮ್ಮನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ” ಎಂದು ಹೇಳಿದನು.


ದೇವಜನರು ಇತರ ದೇವರುಗಳನ್ನು ಪೂಜಿಸಿ ಯೆಹೋವನನ್ನು ರೇಗಿಸಿದರು. ಅವರು ಅಸಹ್ಯ ವಿಗ್ರಹಗಳನ್ನು ಪೂಜಿಸಿ ಯೆಹೋವನನ್ನು ಸಿಟ್ಟಿಗೆಬ್ಬಿಸಿದರು.


ರಾಹೇಲಳು ಆ ವಿಗ್ರಹಗಳನ್ನು ತನ್ನ ಒಂಟೆಯ ಸಬರದೊಳಗಿಟ್ಟು ಅದರ ಮೇಲೆ ಕುಳಿತುಕೊಂಡಿದ್ದಳು. ಲಾಬಾನನು ಇಡೀ ಗುಡಾರವನ್ನು ಹುಡುಕಿದರೂ ತನ್ನ ವಿಗ್ರಹಗಳನ್ನು ಕಂಡುಕೊಳ್ಳಲಿಲ್ಲ.


ಆ ಸಮಯದಲ್ಲಿ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸಲು ಹೋಗಿದ್ದನು. ಅವನು ಇಲ್ಲದಿದ್ದಾಗ, ರಾಹೇಲಳು ಅವನ ಮನೆಯೊಳಗೆ ಹೋಗಿ, ತನ್ನ ತಂದೆಯ ವಿಗ್ರಹಗಳನ್ನು ಕದ್ದುಕೊಂಡಳು.


ಇತರ ಜನರನ್ನು ರಕ್ಷಿಸಿ. ಆ ಜನರನ್ನು ಬೆಂಕಿಯಿಂದ ಹೊರಕ್ಕೆ ತನ್ನಿರಿ. ನೀವು ಕೆಲವು ಜನರಿಗೆ ಕರುಣೆ ತೋರುವಾಗ ಎಚ್ಚರದಿಂದಿರಿ. ಪಾಪಗಳಿಂದ ಹೊಲಸಾಗಿರುವ ಅವರ ಬಟ್ಟೆಗಳನ್ನು ಸಹ ದ್ವೇಷಿಸಿರಿ.


ಪೂರ್ವಕಾಲದಲ್ಲಿ ನೀವು ದೇವರನ್ನು ತಿಳಿಯದೆ ಸುಳ್ಳು ದೇವರುಗಳಿಗೆ ಗುಲಾಮರಾಗಿದ್ದಿರಿ.


ಅವರಲ್ಲಿ ಕೆಲವರು ಮಾಡಿದಂತೆ ನೀವು ವಿಗ್ರಹಗಳನ್ನು ಪೂಜಿಸಬೇಡಿ. “ಜನರು ತಿನ್ನಲು, ಕುಡಿಯಲು ಕುಳಿತುಕೊಂಡರು; ನೃತ್ಯ ಮಾಡಲು ಎದ್ದುನಿಂತರು” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.


ಆದರೆ ಪೌಲ ಎಂಬುವನು ಏನು ಮಾಡುತ್ತಿದ್ದಾನೆಂಬುದನ್ನು ನೋಡಿರಿ! ಅವನು ಏನು ಹೇಳುತ್ತಿದ್ದಾನೆಂಬುದನ್ನು ಕೇಳಿರಿ! ಪೌಲನು ಅನೇಕ ಜನರ ಮೇಲೆ ಪ್ರಭಾವಬೀರಿ ಅವರನ್ನು ಪರಿವರ್ತಿಸಿದ್ದಾನೆ. ಅವನು ಎಫೆಸದಲ್ಲಿಯೂ ಏಷ್ಯಾ ದೇಶದ ಎಲ್ಲಾ ಕಡೆಗಳಲ್ಲಿಯೂ ಹೀಗೆಯೇ ಮಾಡಿದ್ದಾನೆ. ಮನುಷ್ಯರು ತಯಾರಿಸುವ ದೇವರುಗಳು ನಿಜವಾದ ದೇವರುಗಳಲ್ಲ ಎಂದು ಹೇಳುತ್ತಿದ್ದಾನೆ.


ಅವರು ಕುಡಿಯುವಾಗ ತಮ್ಮ ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸುತ್ತಿದ್ದರು.


“‘ನಾನು ಇಸ್ರೇಲ್ ಜನಾಂಗದವರಿಗೆ, ಅವರಲ್ಲಿದ್ದ ಅಸಹ್ಯವಾದ ಎಲ್ಲಾ ವಿಗ್ರಹಗಳನ್ನು ಬಿಸಾಡಿಬಿಡಲು ಹೇಳಿದೆನು. ಈಜಿಪ್ಟಿನ ಹೊಲಸು ವಿಗ್ರಹಗಳಿಂದ ಹೊಲಸು ಆಗಬಾರದು ಎಂದು ಹೇಳಿದೆನು. “ನಾನು ನಿಮ್ಮ ದೇವರಾದ ಯೆಹೋವನು” ಎಂಬುದಾಗಿ ಹೇಳಿದೆನು.


ಜನರು ನಿಜವಾದ ದೇವರುಗಳನ್ನು ಮಾಡಬಲ್ಲರೇ? ಇಲ್ಲ, ಅವರು ವಿಗ್ರಹಗಳನ್ನು ಮಾಡಬಹುದು. ಆದರೆ ಆ ವಿಗ್ರಹಗಳು ನಿಜವಾದ ದೇವರುಗಳಲ್ಲ.


ನೀನು ಮಾಡಿದ ಭಯಾನಕ ಕೃತ್ಯಗಳನ್ನು ನಾನು ನೋಡಿದ್ದೇನೆ. ನಿನ್ನ ಪ್ರಿಯತಮರ ಜೊತೆಗೆ ನಗುವದನ್ನೂ ಕಾಮದಾಟವಾಡುವದನ್ನೂ ನಾನು ನೋಡಿದ್ದೇನೆ. ನೀನು ವೇಶ್ಯೆಯಂತೆ ನಡೆದುಕೊಳ್ಳಬೇಕೆಂದು ಯೋಚನೆ ಮಾಡಿದ್ದು ನನಗೆ ಗೊತ್ತು. ನೀನು ಹೊಲಗಳಲ್ಲಿಯೂ ಬೆಟ್ಟಗಳಲ್ಲಿಯೂ ಮಾಡಿದ ಅಸಹ್ಯಕೃತ್ಯಗಳನ್ನು ನಾನು ನೋಡಿದ್ದೇನೆ. ಜೆರುಸಲೇಮೇ, ಇದರಿಂದ ನಿನಗೆ ತುಂಬಾ ಕೇಡಾಗುವದು. ನೀನು ಎಷ್ಟು ದಿನ ಹೀಗೆಯೇ ನಿನ್ನ ಪಾಪಕೃತ್ಯಗಳನ್ನು ಮುಂದುವರಿಸುವೆ ಎಂದು ನಾನು ಯೋಚಿಸುತ್ತಿದ್ದೇನೆ.”


“ಯೆಹೂದವೇ, ನಾನು ನಿನ್ನನ್ನು ಏಕೆ ಕ್ಷಮಿಸಬೇಕು? ಒಂದು ಕಾರಣವನ್ನಾದರೂ ಕೊಡು. ನಿನ್ನ ಮಕ್ಕಳು ನನ್ನನ್ನು ತೊರೆದಿದ್ದಾರೆ. ದೇವರುಗಳೇ ಅಲ್ಲದ ವಿಗ್ರಹಗಳಿಗೆ ಅವರು ಹರಕೆ ಹೊತ್ತಿದ್ದಾರೆ. ನಾನು ನಿನ್ನ ಮಕ್ಕಳಿಗೆ ಬೇಕಾದದ್ದನ್ನು ಕೊಟ್ಟೆ. ಆದರೂ ಅವರು ನನಗೆ ನಂಬಿಗಸ್ತರಾಗಿ ಉಳಿಯಲಿಲ್ಲ. ಅವರು ತಮ್ಮ ಹೆಚ್ಚಿನ ಸಮಯವನ್ನು ವೇಶ್ಯೆಯರ ಮನೆಗಳಲ್ಲಿ ಕಳೆದರು.


ನೀವು ಬಾಬಿಲೋನಿನಿಂದ ಹೊರಟುಹೋಗಬೇಕು; ನೀವು ಆ ಸ್ಥಳವನ್ನು ಬಿಟ್ಟುಹೋಗಬೇಕು. ಯಾಜಕರೇ, ಆರಾಧನೆಗೆ ಬೇಕಾದ ಸಾಮಗ್ರಿಗಳನ್ನು ಹೊತ್ತುಕೊಳ್ಳಿರಿ. ನಿಮ್ಮನ್ನು ಶುದ್ಧಿ ಮಾಡಿಕೊಳ್ಳಿರಿ; ಅಶುದ್ಧವಾದ ಯಾವುದನ್ನೂ ಮುಟ್ಟದಿರಿ.


“ನಿಮ್ಮನ್ನು ಶುದ್ಧಿಮಾಡಿಕೊಳ್ಳಿರಿ; ಶುಚಿಪಡಿಸಿಕೊಳ್ಳಿರಿ. ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ; ಅವುಗಳನ್ನು ನೋಡಲು ನನಗೆ ಮನಸ್ಸಿಲ್ಲ. ಕೆಟ್ಟದ್ದನ್ನು ಮಾಡದೆ ಒಳ್ಳೆಯದನ್ನೇ ಮಾಡಿರಿ;


ದೇವರನ್ನು ಆರಾಧಿಸಲು ಹೋಗುವಾಗ ಎಚ್ಚರಿಕೆಯಿಂದಿರಿ. ಮೂಢರಂತೆ ಯಜ್ಞಗಳನ್ನು ಅರ್ಪಿಸುವುದಕ್ಕಿಂತ ದೇವರಿಗೆ ಕಿವಿಗೊಡುವುದೇ ಉತ್ತಮ. ಮೂಢರು ದುಷ್ಕೃತ್ಯಗಳನ್ನು ಮಾಡುತ್ತಲೇ ಇರುವರು; ಆದರೆ ಅವರಿಗೆ ಅದು ಗೊತ್ತೇ ಇಲ್ಲ.


ಹಿಸ್ಸೋಪ್ ಗಿಡದ ಬರಲಿನಿಂದ ನನ್ನನ್ನು ತೊಳೆದು ಶುದ್ಧೀಕರಿಸು; ನಾನು ಹಿಮಕ್ಕಿಂತಲೂ ಬಿಳುಪಾಗುವ ತನಕ ನನ್ನನ್ನು ತೊಳೆ!


ನನ್ನ ದೋಷವನ್ನು ತೊಳೆದುಬಿಡು. ನನ್ನ ಪಾಪವನ್ನು ಪರಿಹರಿಸಿ ನನ್ನನ್ನು ಮತ್ತೆ ಶುದ್ಧೀಕರಿಸು!


ಪ್ರತಿಯೊಂದು ಔತಣಕೂಟದ ದಿನಗಳು ಮುಗಿದ ಮೇಲೆ ಯೋಬನು ಅವರನ್ನು ಶುದ್ಧೀಕರಿಸುತ್ತಿದ್ದನು. ಅದಕ್ಕಾಗಿ ಅವನು ಮುಂಜಾನೆಯಲ್ಲಿಯೇ ಎದ್ದು ತನ್ನ ಪ್ರತಿಯೊಬ್ಬ ಮಕ್ಕಳ ಹೆಸರಿನಲ್ಲಿ ಒಂದೊಂದು ಸರ್ವಾಂಗಹೋಮವನ್ನು ಅರ್ಪಿಸುತ್ತಿದ್ದನು. ಯಾಕೆಂದರೆ, “ಒಂದುವೇಳೆ ನನ್ನ ಮಕ್ಕಳು ಹೃದಯದಲ್ಲಿ ದೇವರನ್ನು ದೂಷಿಸಿ ಪಾಪಮಾಡಿರಬಹುದು” ಎಂಬುದು ಯೋಬನ ಆಲೋಚನೆಯಾಗಿತ್ತು. ತನ್ನ ಮಕ್ಕಳ ಪಾಪಕ್ಷಮೆಗಾಗಿ ಯೋಬನು ಯಾವಾಗಲೂ ಹೀಗೆ ಮಾಡುತ್ತಿದ್ದನು.


ಯಾಕೆಂದರೆ ಜನಾಂಗಗಳಲ್ಲಿರುವ ಬೇರೆ ದೇವರುಗಳೆಲ್ಲಾ ಜಡಮೂರ್ತಿಗಳೇ. ಯೆಹೋವನಾದರೋ ಆಕಾಶಮಂಡಲವನ್ನು ಸೃಷ್ಟಿಸಿದಾತನು.


ಆದರೆ ಅವರೆಲ್ಲರೂ ತಮ್ಮ ಸ್ವಂತ ದೇವರುಗಳನ್ನು ನಿರ್ಮಿಸಿ, ಅವುಗಳನ್ನು ಸಮಾರ್ಯದವರು ನಿರ್ಮಿಸಿದ್ದ ಉನ್ನತಸ್ಥಳಗಳಲ್ಲಿನ ಆಲಯಗಳಲ್ಲಿ ಇರಿಸಿದರು. ಅವರು ಎಲ್ಲೆಲ್ಲಿ ವಾಸಿಸುತ್ತಿದ್ದರೋ ಅಲ್ಲೆಲ್ಲಾ ಹೀಗೆಯೇ ಮಾಡಿದರು.


ಎಲೀಷನು ತನ್ನ ಸಂದೇಶಕನ ಮೂಲಕ ನಾಮಾನನಿಗೆ, “ಹೋಗಿ, ಜೋರ್ಡನ್ ನದಿಯಲ್ಲಿ ಏಳು ಸಲ ಸ್ನಾನಮಾಡು. ಆಗ ನಿನ್ನ ಚರ್ಮರೋಗವು ಗುಣವಾಗುವುದು. ನೀನು ಸಂಪೂರ್ಣ ಶುದ್ಧನಾಗುವೆ” ಎಂದು ತಿಳಿಸಿದನು.


“ನಿನ್ನ ಜನರಾದ ಇಸ್ರೇಲರಂಥವರು ಈ ಲೋಕದಲ್ಲಿ ಬೇರೆ ಯಾರೂ ಇಲ್ಲ, ಅವರು ವಿಶೇಷವಾದ ಜನರು. ಅವರು ಗುಲಾಮರಾಗಿದ್ದರು, ಆದರೆ ಅವರನ್ನು ಈಜಿಪ್ಟಿನಿಂದ ನೀನು ಹೊರತಂದು ಸ್ವತಂತ್ರರನ್ನಾಗಿ ಮಾಡಿರುವೆ. ನೀನು ಅವರನ್ನು ನಿನ್ನ ಜನರನ್ನಾಗಿ ಮಾಡಿಕೊಂಡೆ. ಇಸ್ರೇಲರಿಗಾಗಿ ನೀನು ಉತ್ತಮವಾದ ಮತ್ತು ಮಹತ್ತಾದ ಕಾರ್ಯಗಳನ್ನು ಮಾಡಿದೆ. ನಿನ್ನ ದೇಶಕ್ಕಾಗಿ ನೀನು ಮಹತ್ಕಾರ್ಯಗಳನ್ನು ಮಾಡಿದೆ.


ನೊವೊಮಿಯು ಆಕೆಗೆ, “ನೋಡು, ನಿನ್ನ ಓರಗಿತ್ತಿಯು ಮತ್ತೆ ತನ್ನ ಜನರ ಬಳಿಗೂ ತನ್ನ ದೇವತೆಗಳ ಬಳಿಗೂ ಹೋಗುತ್ತಿದ್ದಾಳೆ. ನೀನೂ ಹಾಗೆಯೇ ಮಾಡು” ಎಂದು ಹೇಳಿದಳು.


ಆಗ ಇಸ್ರೇಲರು ಅನ್ಯದೇವರುಗಳನ್ನು ತೊರೆದು ಯೆಹೋವನನ್ನು ಆರಾಧಿಸಲು ಆರಂಭಿಸಿದರು. ಅವರು ಕಷ್ಟಪಡುತ್ತಿರುವುದನ್ನು ನೋಡಿ ಯೆಹೋವನು ಮರುಕಪಟ್ಟನು.


ನೀವು ಯೆಹೋವನನ್ನು ಬಿಟ್ಟು ಅನ್ಯದೇವರುಗಳ ಸೇವೆಮಾಡಿದರೆ ಆತನು ನಿಮಗೆ ಕೇಡನ್ನು ಬರಮಾಡುವನು. ಯೆಹೋವನು ನಿಮ್ಮನ್ನು ನಾಶಮಾಡುತ್ತಾನೆ. ನಿಮ್ಮ ದೇವರಾದ ಯೆಹೋವನು ನಿಮಗೆ ಒಳ್ಳೆಯವನಾಗಿದ್ದಾನೆ. ಆದರೆ ನೀವು ಆತನಿಗೆ ವಿಮುಖರಾದರೆ ಆತನು ನಿಮ್ಮನ್ನು ನಾಶಮಾಡುತ್ತಾನೆ” ಅಂದನು.


ಆಗ ಯೆಹೋಶುವನು ಅವರೆಲ್ಲರಿಗೆ, “ಇಸ್ರೇಲಿನ ದೇವರಾದ ಯೆಹೋವನು ನಿಮಗೆ ಹೇಳುವುದನ್ನು ನಾನು ನಿಮಗೆ ತಿಳಿಸುತ್ತಿದ್ದೇನೆ: ‘ಬಹಳ ಹಿಂದಿನ ಕಾಲದಲ್ಲಿ ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆಯ ದಡದಲ್ಲಿದ್ದರು, ನಾನು ಅಬ್ರಹಾಮ್ ಮತ್ತು ನಾಹೋರ್ ಎಂಬವರ ತಂದೆಯಾದ “ತೆರಹ” ಮೊದಲಾದ ಜನರ ಬಗ್ಗೆ ಮಾತನಾಡುತ್ತಿದ್ದೇನೆ. ಆ ಸಮಯದಲ್ಲಿ ಅವರು ಬೇರೆ ದೇವರುಗಳನ್ನು ಪೂಜಿಸುತ್ತಿದ್ದರು.


ಇಸ್ರೇಲರಲ್ಲದ ಕೆಲವು ಜನರು ನಮ್ಮೊಂದಿಗೆ ವಾಸಮಾಡಿಕೊಂಡಿದ್ದಾರೆ. ಅವರು ತಮ್ಮ ದೇವರುಗಳನ್ನೇ ಪೂಜಿಸುತ್ತಾರೆ. ಅವರೊಂದಿಗೆ ಸ್ನೇಹ ಮಾಡಬೇಡಿ. ಅವರ ದೇವರುಗಳ ಸೇವೆಯನ್ನಾಗಲಿ ಪೂಜೆಯನ್ನಾಗಲಿ ಮಾಡಬೇಡಿ. ಆ ದೇವರುಗಳ ಹೆಸರುಗಳ ಮೂಲಕ ಬೇಡಿಕೊಳ್ಳಬೇಡಿ. ಅವುಗಳ ಮೇಲೆ ಪ್ರಮಾಣ ಮಾಡಬೇಡಿ. ಅವುಗಳಿಗೆ ಅಡ್ಡಬಿದ್ದು ಪೂಜಿಸಬೇಡಿ.


ಆದರೆ ನೀವು ವಿಧೇಯರಾಗದಿದ್ದರೆ ಶಾಪವನ್ನು ಹೊಂದುವಿರಿ. ನಾನು ನಿಮಗೆ ಕೊಡುವ ಯೆಹೋವನ ನಿಯಮಗಳನ್ನು ಅನುಸರಿಸುವುದನ್ನು ನಿಲ್ಲಿಸಬೇಡಿರಿ. ಅನ್ಯದೇವತೆಗಳನ್ನು ಪೂಜಿಸಬೇಡಿರಿ. ನಾನು ನಿಮಗೆ ಬೋಧಿಸುತ್ತಿರುವುದು ಯೆಹೋವನ ಮಾರ್ಗದ ಕುರಿತೇ ಹೊರತು ಬೇರೆ ದೇವರುಗಳ ಕುರಿತಲ್ಲ.


“ಅವರ ದೇವರುಗಳ ಪ್ರತಿಮೆಗಳನ್ನು ಬೆಂಕಿಯಲ್ಲಿ ಸುಟ್ಟುಬಿಡಬೇಕು. ಅವರ ವಿಗ್ರಹಗಳಲ್ಲಿರುವ ಬೆಳ್ಳಿಬಂಗಾರಗಳನ್ನು ನೀವು ತೆಗೆದುಕೊಳ್ಳಬೇಡಿ. ನೀವು ತೆಗೆದುಕೊಂಡರೆ ಅವು ನಿಮಗೆ ಉರುಲಾಗಿ ನಿಮ್ಮನ್ನೇ ನಾಶಮಾಡುತ್ತವೆ. ಯಾಕೆಂದರೆ ನಿಮ್ಮ ದೇವರಾದ ಯೆಹೋವನು ವಿಗ್ರಹಗಳನ್ನು ದ್ವೇಷಿಸುತ್ತಾನೆ.


ಇತರ ದೇವರುಗಳನ್ನು ಅವಲಂಭಿಸಬಾರದು. ನಿಮ್ಮ ಸುತ್ತಲೂ ಇರುವವರ ದೇವರುಗಳನ್ನು ಪೂಜಿಸಬಾರದು.


‘ನೀವು ನನ್ನ ಹೊರತು ಬೇರೆ ಯಾವ ದೇವರುಗಳನ್ನೂ ಪೂಜಿಸಬಾರದು.


ಏಳನೆಯ ದಿನದಲ್ಲಿ ನಿಮ್ಮ ಬಟ್ಟೆಗಳನ್ನು ಒಗೆದುಕೊಂಡ ನಂತರ ನೀವು ಶುದ್ಧರಾಗುವಿರಿ. ಆಮೇಲೆ ನೀವು ಪಾಳೆಯದೊಳಗೆ ಬರಬಹುದು.”


ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳದೆಯೂ ಸ್ನಾನ ಮಾಡಿಕೊಳ್ಳದೆಯೂ ಹೋದರೆ ಆಗ ಅವನು ಪಾಪಮಾಡಿದ ದೋಷಿಯಾಗಿರುವನು.”


ಯಾವನಾದರೂ ಆ ವ್ಯಕ್ತಿಯ ಹಾಸಿಗೆಯನ್ನು ಮುಟ್ಟಿದರೆ, ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.


“ನೀವು ಈ ಆಜ್ಞೆಗಳಿಗೆಲ್ಲಾ ಜಾಗರೂಕತೆಯಿಂದ ವಿಧೇಯರಾಗಬೇಕು. ಸುಳ್ಳುದೇವರುಗಳನ್ನು ಆರಾಧಿಸಬೇಡಿರಿ. ನೀವು ಅವುಗಳ ಹೆಸರುಗಳನ್ನು ಉಚ್ಚರಿಸಲೂ ಕೂಡದು.


ಇಸ್ರೇಲನು ಸ್ವಲ್ಪಕಾಲದವರೆಗೆ ಅಲ್ಲಿ ಇಳಿದುಕೊಂಡನು. ಅವನು ಅಲ್ಲಿದ್ದಾಗ ರೂಬೇನನು ಇಸ್ರೇಲನ ದಾಸಿಯಾದ ಬಿಲ್ಹಳೊಡನೆ ಮಲಗಿಕೊಂಡನು. ಇಸ್ರೇಲನು ಇದರ ಬಗ್ಗೆ ಕೇಳಿದಾಗ ತುಂಬ ಕೋಪಗೊಂಡನು. ಯಾಕೋಬನಿಗೆ (ಇಸ್ರೇಲ) ಹನ್ನೆರಡು ಗಂಡುಮಕ್ಕಳಿದ್ದರು.


ಆ ದೇಶದ ರಾಜನಾಗಿದ್ದ ಹಮೋರನ ಮಗನಾದ ಶೆಕೆಮನು ದೀನಳನ್ನು ಕಂಡು ಅವಳನ್ನು ಎಳೆದುಕೊಂಡು ಹೋಗಿ ಬಲಾತ್ಕಾರ ಮಾಡಿದನು.


ನೀನು ನಿನ್ನ ಮನೆಗೆ ಹಿಂತಿರುಗಿ ಹೋಗಬೇಕೆಂಬುದು ನಿನ್ನ ಅಪೇಕ್ಷೆ ಎಂದು ನನಗೆ ತಿಳಿದಿದೆ. ಆದ್ದರಿಂದಲೇ ನೀನು ಹೊರಟು ಬಂದೆ. ಆದರೆ ನೀನು ನನ್ನ ಮನೆಯಿಂದ ವಿಗ್ರಹಗಳನ್ನು ಕದ್ದುಕೊಂಡು ಬಂದದ್ದೇಕೆ?” ಎಂದು ಹೇಳಿದನು.


ಸಮುವೇಲನು, “ಹೌದು, ಶುಭಕರವಾಗಿದೆ. ನಾನು ಯೆಹೋವನಿಗೆ ಯಜ್ಞವನ್ನು ಅರ್ಪಿಸಲು ಬಂದಿದ್ದೇನೆ. ನೀವೆಲ್ಲ ಸಿದ್ಧರಾಗಿ ಯಜ್ಞಕಾರ್ಯಕ್ಕಾಗಿ ನನ್ನೊಂದಿಗೆ ಬನ್ನಿ” ಎಂದು ಹೇಳಿದನು. ಸಮುವೇಲನು ಇಷಯನನ್ನೂ ಅವನ ಮಕ್ಕಳನ್ನೂ ಸಿದ್ಧಗೊಳಿಸಿದನು. ನಂತರ ಸಮುವೇಲನು ಅವರನ್ನು ಯಜ್ಞದಲ್ಲಿ ಭಾಗಿಗಳಾಗಲು ಆಹ್ವಾನಿಸಿದನು.


ತರುವಾಯ ಯೆಹೋಶುವನು ಜನರಿಗೆ, “ಈಗ ನೀವು ಯೆಹೋವನ ಮಾತುಗಳನ್ನು ಕೇಳಿದ್ದೀರಿ. ನೀವು ಆತನಲ್ಲಿ ಭಯಭಕ್ತಿಯಿಂದಿರಬೇಕು. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆಯಲ್ಲಿಯೂ ಈಜಿಪ್ಟಿನಲ್ಲಿಯೂ ಪೂಜಿಸುತ್ತಿದ್ದ ಸುಳ್ಳುದೇವರುಗಳನ್ನು ಎಸೆದುಬಿಡಿ. ಈಗ ನೀವು ಯೆಹೋವನ ಸೇವೆಯನ್ನು ಮಾತ್ರ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು