Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 35:4 - ಪರಿಶುದ್ದ ಬೈಬಲ್‌

4 ಆದ್ದರಿಂದ ಅವರು ತಮ್ಮಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ವಾಲೆಗಳನ್ನೂ ಯಾಕೋಬನಿಗೆ ಕೊಟ್ಟರು. ಯಾಕೋಬನು ಅವುಗಳನ್ನೆಲ್ಲಾ ಶೆಕೆಮ್ ಪಟ್ಟಣದ ಸಮೀಪದಲ್ಲಿರುವ ಏಲಾವೃಕ್ಷದ ಬುಡದಲ್ಲಿ ಹೂಳಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಅವರು ತಮ್ಮಲ್ಲಿದ್ದ ಎಲ್ಲಾ ಅನ್ಯ ದೇವರುಗಳನ್ನು, ತಮ್ಮ ಕಿವಿಯಲ್ಲಿದ್ದ ಓಲೆಗಳನ್ನು ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮ್ ಪಟ್ಟಣದ ಹತ್ತಿರವಿರುವ ಏಲಾ ಮರದ ಕೆಳಗೆ ಹೂಣಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅಂತೆಯೆ ಅವರು ತಮ್ಮಲ್ಲಿದ್ದ ಎಲ್ಲ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ಮುರುವುಗಳನ್ನೂ ಯಕೋಬನಿಗೆ ಒಪ್ಪಿಸಿಬಿಟ್ಟರು. ಅವನು ಅವುಗಳನ್ನು ಶೆಕೆಮ್ ಪಟ್ಟಣದ ಹತ್ತಿರ ಇದ್ದ ಒಂದು ಓಕ್ ಮರದ ಬುಡದಡಿಯಲ್ಲಿ ಹೂಳಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಗ ಅವರು ತಮ್ಮಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ಮುರುವುಗಳನ್ನೂ ಯಾಕೋಬನಿಗೆ ಒಪ್ಪಿಸಲು ಅವನು ಅವುಗಳನ್ನು ಶೆಕೆಮ್ ಪಟ್ಟಣದ ಹತ್ತಿರವಿರುವ ಏಲಾವೃಕ್ಷದ ಬುಡದಲ್ಲಿ ಹೂಳಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಅವರು ತಮ್ಮ ಬಳಿಯಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ, ತಮ್ಮ ಕಿವಿಗಳಲ್ಲಿದ್ದ ಮುರುವುಗಳನ್ನೂ ತೆಗೆದು, ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮ್ ಊರಿಗೆ ಸಮೀಪವಾಗಿದ್ದ ಏಲಾ ಮರದ ಕೆಳಗೆ ಹೂಳಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 35:4
13 ತಿಳಿವುಗಳ ಹೋಲಿಕೆ  

ತರುವಾಯ ಶೆಕೆಮಿನ ಎಲ್ಲ ಹಿರಿಯರೂ ಮಿಲ್ಲೋ ಕೋಟೆಯವರೂ ಒಂದೆಡೆ ಬಂದರು. ಅವರೆಲ್ಲರೂ ಶೆಕೆಮಿನಲ್ಲಿದ್ದ ಜ್ಞಾಪಕಸ್ತಂಭದ ಬಳಿ ಇರುವ ದೊಡ್ಡ ಮರದ ಕೆಳಗೆ ಸೇರಿ ಅಬೀಮೆಲೆಕನನ್ನು ತಮ್ಮ ಅರಸನನ್ನಾಗಿ ಮಾಡಿದರು.


ನಿಮ್ಮಲ್ಲಿ ಬೆಳ್ಳಿಬಂಗಾರಗಳ ವಿಗ್ರಹಗಳಿವೆ. ಆ ಸುಳ್ಳುದೇವರುಗಳು ನಿಮ್ಮನ್ನು ಹೊಲೆಯನ್ನಾಗಿ ಮಾಡಿವೆ. ನೀವು ಅವುಗಳ ಸೇವೆಯನ್ನು ನಿಲ್ಲಿಸುವಿರಿ. ಅವು ಹೊಲಸು ವಸ್ತುಗಳೋ ಎಂಬಂತೆ ಅವುಗಳನ್ನೆತ್ತಿ ಬಿಸಾಡಿಬಿಡುವಿರಿ.


“ಅವರ ದೇವರುಗಳ ಪ್ರತಿಮೆಗಳನ್ನು ಬೆಂಕಿಯಲ್ಲಿ ಸುಟ್ಟುಬಿಡಬೇಕು. ಅವರ ವಿಗ್ರಹಗಳಲ್ಲಿರುವ ಬೆಳ್ಳಿಬಂಗಾರಗಳನ್ನು ನೀವು ತೆಗೆದುಕೊಳ್ಳಬೇಡಿ. ನೀವು ತೆಗೆದುಕೊಂಡರೆ ಅವು ನಿಮಗೆ ಉರುಲಾಗಿ ನಿಮ್ಮನ್ನೇ ನಾಶಮಾಡುತ್ತವೆ. ಯಾಕೆಂದರೆ ನಿಮ್ಮ ದೇವರಾದ ಯೆಹೋವನು ವಿಗ್ರಹಗಳನ್ನು ದ್ವೇಷಿಸುತ್ತಾನೆ.


ಬಳಿಕ ಮೋಶೆಯು ಆ ಬಸವನ ಮೂರ್ತಿಯನ್ನು ಬೆಂಕಿಯಲ್ಲಿ ಕರಗಿಸಿ ಅದರ ಚಿನ್ನವನ್ನು ಧೂಳಿನಂತೆ ಅರೆದು ನೀರಿಗೆ ಹಾಕಿ ಆ ನೀರನ್ನು ಇಸ್ರೇಲರಿಗೆ ಕುಡಿಸಿದನು.


“ಆಕೆಯು ಬಾಳನ ಸೇವೆಮಾಡಿದ್ದುದರಿಂದ ನಾನು ಆಕೆಯನ್ನು ಶಿಕ್ಷಿಸುವೆನು. ಬಾಳನಿಗೆ ಆಕೆ ಧೂಪ ಹಾಕಿದಳು. ಆಕೆ ವಸ್ತ್ರಾಭರಣಗಳಿಂದ ಭೂಷಿತಳಾಗಿ ಮೂಗುತಿಯನ್ನು ಧರಿಸಿಕೊಂಡು ತನ್ನ ಪ್ರೇಮಿಗಳ ಬಳಿಗೆ ಹೋದಳು. ನನ್ನನ್ನು ಮರೆತುಬಿಟ್ಟಳು.” ಇದು ಯೆಹೋವನು ಹೇಳಿದ ಮಾತು.


ಆ ಸಮಯದಲ್ಲಿ ಜನರು ತಮ್ಮ ಬೆಳ್ಳಿಬಂಗಾರಗಳ ವಿಗ್ರಹಗಳನ್ನೆತ್ತಿ ಬಿಸಾಡಿಬಿಡುವರು. ಈ ವಿಗ್ರಹಗಳನ್ನು ಜನರು ಪೂಜಿಸುವದಕ್ಕಾಗಿ ಮಾಡಿಕೊಂಡರು. ಬಾವಲಿಗಳೂ, ಇಲಿಗಳೂ ವಾಸಿಸುವ ಸಂದುಗಳಲ್ಲಿ ಈ ವಿಗ್ರಹಗಳನ್ನು


“ಆ ಜನಾಂಗಗಳ ಯಜ್ಞವೇದಿಕೆಗಳನ್ನೆಲ್ಲಾ ನೀವು ಕೆಡವಿಹಾಕಿ ನೆಲಸಮಮಾಡಬೇಕು. ಅವರ ಸ್ಮಾರಕ ಕಲ್ಲುಗಳನ್ನು ಒಡೆದು ಚೂರುಚೂರು ಮಾಡಬೇಕು. ಅವರ ಅಶೇರಸ್ತಂಭಗಳನ್ನು ಕತ್ತರಿಸಿಹಾಕಬೇಕು; ಅವುಗಳ ಪ್ರತಿಮೆಗಳನ್ನು ಸುಟ್ಟುಹಾಕಬೇಕು.


ಅಬ್ರಾಮನು ಕಾನಾನ್ ದೇಶದಲ್ಲಿ ಪ್ರಯಾಣವನ್ನು ಮುಂದುವರಿಸಿದನು. ಅವನು ಶೆಕೆಮ್ ನಗರವನ್ನು ತಲುಪಿ, ಅಲ್ಲಿಂದ ಮೋರೆ ಎಂಬ ದೊಡ್ಡ ಓಕ್ ಮರವಿದ್ದ ಸ್ಥಳಕ್ಕೆ ಬಂದನು. ಆ ಕಾಲದಲ್ಲಿ ಕಾನಾನ್ಯರು ಆ ದೇಶದಲ್ಲಿ ವಾಸವಾಗಿದ್ದರು.


ನಾವು ಇಲ್ಲಿಂದ ಹೊರಟು ಬೇತೇಲಿಗೆ ಹೋಗೋಣ; ನಾನು ಕಷ್ಟದಲ್ಲಿದ್ದಾಗ ಸಹಾಯಮಾಡಿದ ದೇವರಿಗಾಗಿ ಒಂದು ಯಜ್ಞವೇದಿಕೆಯನ್ನು ಅಲ್ಲಿ ಕಟ್ಟಿಸುತ್ತೇನೆ. ನಾನು ಹೋದಕಡೆಗಳಲ್ಲೆಲ್ಲಾ ಆ ದೇವರು ನನ್ನೊಂದಿಗೆ ಇದ್ದನು” ಎಂದು ಹೇಳಿದನು.


ಯಾಕೋಬನು ಮತ್ತು ಅವನ ಗಂಡುಮಕ್ಕಳು ಆ ಸ್ಥಳದಿಂದ ಹೊರಟರು. ಆ ಪ್ರದೇಶದಲ್ಲಿದ್ದ ಜನರು ಅವರನ್ನು ಹಿಂಬಾಲಿಸಿ ಕೊಲ್ಲಬೇಕೆಂದಿದ್ದರು. ಆದರೆ ಅವರು ಭಯಪಟ್ಟು ಯಾಕೋಬನನ್ನು ಹಿಂಬಾಲಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು