Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 36:15 - ಪರಿಶುದ್ದ ಬೈಬಲ್‌

15 ಏಸಾವನ ವಂಶಸ್ಥರ ಕುಲಪತಿಗಳು: ಏಸಾವನ ಮೊದಲನೆ ಮಗನಾದ ಎಲೀಫಜ. ಎಲೀಫಜನಿಂದ ಬಂದವರು: ತೇಮಾನ್, ಓಮಾರ್, ಚೆಫೋ, ಕೆನೆಜ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಏಸಾವನ ಪುತ್ರರ ಮುಖಂಡರು ಯಾರೆಂದರೆ: ಏಸಾವನ ಚೊಚ್ಚಲ ಮಗನಾದ ಎಲೀಫಜನಿಂದ ಹುಟ್ಟಿದವರು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಕೆನೆಜ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಏಸಾವನ ವಂಶದ ಕುಲನಾಯಕರು: ಏಸಾವನ ಜೇಷ್ಠಪುತ್ರನಾದ ಎಲೀಫಜನಿಂದ ತೇಮಾನ, ಏಮಾರ, ಚೆಫೋ, ಕೆನೆಜ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಏಸಾವನ ವಂಶಸ್ಥರ ಕುಲಪತಿಗಳು. ಏಸಾವನ ಚೊಚ್ಚಲಮಗನಾದ ಎಲೀಫಜನಿಂದ ಹುಟ್ಟಿದವರು ಯಾರಂದರೆ - ತೇಮಾನ ಕುಲಪತಿ, ಓಮಾರಕುಲಪತಿ, ಚೆಫೋಕುಲಪತಿ, ಕೆನಜ್‍ಕುಲಪತಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಏಸಾವನ ಪುತ್ರರ ಮುಖಂಡರು ಯಾರೆಂದರೆ: ಏಸಾವನ ಚೊಚ್ಚಲ ಮಗನಾಗಿರುವ ಎಲೀಫಜನ ಮಕ್ಕಳಾದ ತೇಮಾನ್, ಓಮಾರ್, ಚೆಫೋ, ಕೆನಜ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 36:15
19 ತಿಳಿವುಗಳ ಹೋಲಿಕೆ  

ತೇಮಾನನೇ, ನಿನ್ನ ಯುದ್ಧವೀರರು ಭಯಪಡುವರು. ಏಸಾವಿನ ಪರ್ವತದಲ್ಲಿರುವ ಪ್ರತಿಯೊಬ್ಬನು ನಾಶವಾಗುವನು. ಎಷ್ಟೋ ಮಂದಿ ಹತರಾಗುವರು.


ಯೋಬನ ಮೂವರು ಗೆಳೆಯರು ಯಾರೆಂದರೆ: ತೇಮಾನಿನ ಎಲೀಫಜನು, ಶೂಹದ ಬಿಲ್ದದನು ಮತ್ತು ನಾಮಾಥದ ಚೋಫರನು. ಯೋಬನಿಗೆ ಸಂಭವಿಸಿದ ಆಪತ್ತುಗಳ ಬಗ್ಗೆ ಈ ಮೂವರು ಗೆಳೆಯರು ಕೇಳಿದಾಗ ತಮ್ಮ ಮನೆಯಿಂದ ಹೊರಟು ಒಟ್ಟಾಗಿ ಭೇಟಿಯಾದರು. ಯೋಬನ ಬಳಿಗೆ ಹೋಗಿ ಅನುತಾಪ ಸೂಚಿಸಿ ಸಂತೈಸಲು ಒಪ್ಪಿಕೊಂಡರು.


ತೇಮಾನಿನಿಂದ ಯೆಹೋವನು ಬರುತ್ತಿದ್ದಾನೆ. ಪರಿಶುದ್ಧನಾದವನು ಪಾರಾನ್ ಪರ್ವತದಿಂದ ಬರುತ್ತಿದ್ದಾನೆ. ಯೆಹೋವನ ಮಹಿಮೆಯು ಆಕಾಶಮಂಡಲವನ್ನು ಮುಚ್ಚುತ್ತದೆ. ಅವನ ಸ್ತೋತ್ರವು ಭೂಲೋಕವನ್ನು ತುಂಬುತ್ತದೆ.


ಆದ್ದರಿಂದ ನಾನು ತೇಮಾನಿನಲ್ಲಿ ಬೆಂಕಿಯನ್ನು ಹಾಕುವೆನು. ಆ ಬೆಂಕಿಯು ಬೋಚ್ರದ ಉನ್ನತ ಗೋಪುರಗಳನ್ನು ನಾಶಮಾಡುವದು.”


ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ನಾನು ಎದೋಮನ್ನು ಶಿಕ್ಷಿಸುವೆನು. ಎದೋಮಿನ ಜನರನ್ನೂ ಪ್ರಾಣಿಗಳನ್ನೂ ನಾಶಮಾಡುವೆನು. ತೇಮಾನಿನಿಂದ ಹಿಡಿದು ದೆದಾನ್‌ತನಕ ಆ ದೇಶವನ್ನೆಲ್ಲಾ ನಾಶಮಾಡುವೆನು. ಎದೋಮ್ಯರು ರಣರಂಗದಲ್ಲಿ ಸಾಯುವರು.


ಎದೋಮ್ಯರಿಗೆ ಯೆಹೋವನು ಮಾಡಬೇಕೆಂದಿರುವುದನ್ನು ಕೇಳಿರಿ. ತೇಮಾನ್ಯರ ಬಗ್ಗೆ ಯೆಹೋವನು ಏನು ನಿರ್ಧರಿಸಿದ್ದಾನೆಂಬುದನ್ನು ಕೇಳಿರಿ. ಎದೋಮಿನ ಕುರಿಮರಿಗಳನ್ನು (ಜನರನ್ನು) ಶತ್ರು ಎಳೆದುಕೊಂಡು ಹೋಗುವನು. ಸಂಭವಿಸಿದ ಸಂಗತಿಯನ್ನು ನೋಡಿ ಎದೋಮಿನ ಹುಲ್ಲುಗಾವಲುಗಳು ಬೆದರುವವು.


ಈ ಸಂದೇಶ ಎದೋಮನ್ನು ಕುರಿತದ್ದು. ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ತೇಮಾನ್ ಪಟ್ಟಣನಿವಾಸಿಗಳಲ್ಲಿ ಈಗ ಬುದ್ಧಿ ಉಳಿದಿಲ್ಲವೇ? ಎದೋಮಿನ ವಿವೇಕಿಗಳು ಒಳ್ಳೆಯ ಸಲಹೆಗಳನ್ನು ಕೊಡಲು ಸಮರ್ಥರಾಗಿಲ್ಲವೇ? ಅವರು ತಮ್ಮ ಜ್ಞಾನವನ್ನು ಕಳೆದುಕೊಂಡರೇ?


ಮಹಾದುಷ್ಟನನ್ನು ನಾನು ನೋಡಿದ್ದೇನೆ. ಅವನು ಮಹಾವೃಕ್ಷದಂತೆ ಬಲಿಷ್ಠನಾಗಿದ್ದನು.


ದುಷ್ಟರ ಮಕ್ಕಳು ತಮ್ಮ ತಂದೆತಾಯಿಗಳೊಂದಿಗಿದ್ದು ಬೆಳೆಯುವರು; ದುಷ್ಟರು ತಮ್ಮ ಮೊಮ್ಮಕ್ಕಳನ್ನೂ ನೋಡುವರು.


ಆಗ ತೇಮಾನ್ಯನಾದ ಎಲೀಫಜನು ಹೀಗೆ ಉತ್ತರಿಸಿದನು:


ಯೋಬಾಬ ಅರಸನು ಸತ್ತಾಗ ತೇಮಾನೀಯರ ದೇಶದವನಾದ ಹೂಷಾಮನು ಅರಸನಾದನು.


ಆಗ ಎದೋಮಿನ ಕುಟುಂಬಗಳು ಭಯಭೀತರಾಗುವರು. ಮೋವಾಬಿನ ನಾಯಕರು ಭಯದಿಂದ ನಡುಗುವರು. ಕಾನಾನಿನ ಜನರು ತಮ್ಮ ಧೈರ್ಯವನ್ನು ಕಳೆದುಕೊಳ್ಳುವರು.


ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ್ದ ಒಹೊಲೀಬಾಮಳಲ್ಲಿ ಹುಟ್ಟಿದವರು: ಯಗೂಷ್, ಯೆಳಾಮ ಮತ್ತು ಕೋರಹ. ಈ ಮೂವರು ತಮ್ಮ ಕುಟುಂಬಗಳ ತಂದೆಯಾಗಿದ್ದರು.


ಏಸಾವನಿಗೆ ಮತ್ತು ಆದಾಳಿಗೆ ಎಲೀಫಜನೆಂಬ ಮಗನಿದ್ದನು. ಬಾಸೆಮತಳಿಗೆ ರೆಗೂವೇಲನೆಂಬ ಮಗನಿದ್ದನು.


ಏಸಾವನ ಮೂರನೆ ಹೆಂಡತಿಯು ಅನಾಹನ ಮಗಳಾದ ಒಹೊಲೀಬಾಮ. (ಅನಾಹನು ಸಿಬೆಯೋನನ ಮಗನು.) ಏಸಾವನ ಮತ್ತು ಒಹೊಲೀಬಾಮಳ ಮಕ್ಕಳು: ಯೆಗೂಷ್, ಯಳಾಮ್ ಮತ್ತು ಕೋರಹ.


ಕೋರಹ, ಗತಾಮ ಮತ್ತು ಅಮಾಲೇಕ. ಈ ಕುಲಪತಿಗಳು ಏಸಾವನ ಹೆಂಡತಿಯಾದ ಆದಾಳ ಸಂತತಿಯವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು