ಅದೇ ಕ್ಷಣದಲ್ಲಿ ಬಾರಾಕನು ಯಾಯೇಲಳ ಗುಡಾರದ ಹತ್ತಿರಕ್ಕೆ ಬಂದನು. ಅವನನ್ನು ಬರಮಾಡಿಕೊಳ್ಳುವುದಕ್ಕಾಗಿ ಯಾಯೇಲಳು ಹೊರಗೆ ಬಂದು, “ಇಲ್ಲಿ ಒಳಗೆ ಬನ್ನಿ. ನೀನು ಹುಡುಕುತ್ತಿರುವ ಮನುಷ್ಯನನ್ನು ತೋರಿಸುತ್ತೇನೆ” ಎಂದಳು. ಬಾರಾಕನು ಯಾಯೇಲಳ ಜೊತೆ ಗುಡಾರವನ್ನು ಪ್ರವೇಶಿಸಿದನು. ಅಲ್ಲಿ ಬಾರಾಕನು ಕಣತಲೆಯಲ್ಲಿ ಗೂಟವನ್ನು ಜಡಿಸಿಕೊಂಡು ನೆಲದ ಮೇಲೆ ಸತ್ತು ಬಿದ್ದಿದ್ದ ಸೀಸೆರನನ್ನು ಕಂಡನು.
ಯೇಸು ಆಕೆಯನ್ನು “ಅಮ್ಮಾ ಏಕೆ ಅಳುತ್ತಿರುವೆ? ನೀನು ಯಾರನ್ನು ಹುಡುಕುತ್ತಿರುವೆ?” ಎಂದು ಕೇಳಿದನು. ಇವನು ತೋಟವನ್ನು ನೋಡಿಕೊಳ್ಳುವವನಿರಬಹುದೆಂದು ಮರಿಯಳು ಯೋಚಿಸಿಕೊಂಡು ಅವನಿಗೆ, “ಅಯ್ಯಾ, ನೀನು ಯೇಸುವನ್ನು ತೆಗೆದುಕೊಂಡು ಹೋದೆಯಾ? ಆತನನ್ನು ಎಲ್ಲಿಟ್ಟಿರುವೆ, ನನಗೆ ಹೇಳು. ನಾನು ಹೋಗಿ ಆತನನ್ನು ತೆಗೆದು ಕೊಳ್ಳುತ್ತೇನೆ” ಎಂದು ಹೇಳಿದಳು.
ಆ ಸಮಯದಲ್ಲಿ ಆತನ ಶಿಷ್ಯರು ಹಿಂತಿರುಗಿ ಬಂದರು. ಯೇಸು ಒಬ್ಬ ಸ್ತ್ರೀಯೊಂದಿಗೆ ಮಾತಾಡುತ್ತಿರುವುದನ್ನು ನೋಡಿ ಅವರು ಆಶ್ಚರ್ಯಗೊಂಡರು. ಆದರೆ, “ನಿನಗೇನು ಬೇಕು?” ಎಂದಾಗಲಿ “ನೀನು ಆಕೆಯೊಂದಿಗೆ ಏಕೆ ಮಾತಾಡುತ್ತಿರುವೆ?” ಎಂದಾಗಲಿ ಅವರಲ್ಲಿ ಒಬ್ಬರೂ ಕೇಳಲಿಲ್ಲ.
ಎಲೀಷನು ಅರಾಮ್ಯರ ಸೇನೆಗೆ, “ಇದು ಸರಿಯಾದ ಮಾರ್ಗವಲ್ಲ, ಇದು ಸರಿಯಾದ ನಗರವೂ ಅಲ್ಲ. ನನ್ನನ್ನು ಹಿಂಬಾಲಿಸಿ. ನೀವು ಹುಡುಕುತ್ತಿರುವ ಮನುಷ್ಯನ ಬಳಿಗೆ ನಾನು ನಿಮ್ಮನ್ನು ಕರೆದೊಯ್ಯುತ್ತೇನೆ” ಎಂದು ಹೇಳಿದನು. ನಂತರ ಎಲೀಷನು ಅರಾಮ್ಯರ ಸೇನೆಯನ್ನು ಸಮಾರ್ಯಕ್ಕೆ ನಡೆಸಿಕೊಂಡು ಬಂದನು.
ಮರುದಿನ ಮುಂಜಾನೆ, ಅಬ್ರಹಾಮನು ಸ್ವಲ್ಪ ಆಹಾರವನ್ನು ಮತ್ತು ಸ್ವಲ್ಪ ನೀರನ್ನು ತೆಗೆದು ಹಾಗರಳಿಗೆ ಕೊಟ್ಟನು. ಹಾಗರಳು ಅವುಗಳನ್ನು ತೆಗೆದುಕೊಂಡು ತನ್ನ ಮಗನೊಡನೆ ಅಲ್ಲಿಂದ ಹೊರಟುಹೋದಳು. ಹಾಗರಳು ಆ ಸ್ಥಳವನ್ನು ಬಿಟ್ಟು ಬೇರ್ಷೆಬದ ಮರಳುಗಾಡಿನಲ್ಲಿ ಅಲೆಯತೊಡಗಿದಳು.