Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:15 - ಪರಿಶುದ್ದ ಬೈಬಲ್‌

15 ಶೆಕೆಮಿನಲ್ಲಿ ದಾರಿತಪ್ಪಿ ಯೋಸೇಫನು ಹೊಲಗಳಲ್ಲಿ ಅಲೆದಾಡುತ್ತಿರಲು ಅವನನ್ನು ಕಂಡ ಒಬ್ಬನು, “ಏನು ಹುಡುಕುತ್ತಿರುವೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವನು ಶೆಕೆಮಿಗೆ ಬಂದು ಅಲ್ಲಿ ಅಡವಿಯೊಳಗೆ ತಿರುಗಾಡುತ್ತಿರುವಾಗ ಒಬ್ಬ ಮನುಷ್ಯನು ಅವನನ್ನು ಕಂಡು, “ಏನು ಹುಡುಕುತ್ತೀ?” ಎಂದು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಜೋಸೆಫನು ಹೊರಟ. ಶೆಕೆಮ್‍ಗೆ ಬಂದು ಅಡವಿಯೊಳಗೆ ತಿರುಗಾಡುತ್ತಿರುವಾಗ ಒಬ್ಬ ಮನುಷ್ಯನನ್ನು ಕಂಡ. ಆ ಮನುಷ್ಯ, “ಏನು ಹುಡುಕುತ್ತಾ ಇದ್ದೀಯಾ?” ಎಂದು ವಿಚಾರಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವನು ಶೆಕೆವಿುಗೆ ಬಂದು ಅಲ್ಲಿ ಅಡವಿಯೊಳಗೆ ತಿರುಗಾಡುತ್ತಿರುವಾಗ ಒಬ್ಬ ಮನುಷ್ಯನು ಅವನನ್ನು ಕಂಡು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಒಬ್ಬಾನೊಬ್ಬ ಮನುಷ್ಯನು ಯೋಸೇಫನು ಹೊಲದಲ್ಲಿ ಅಲೆದಾಡುವುದನ್ನು ಕಂಡು ಅವನಿಗೆ, “ನೀನು ಏನು ಹುಡುಕುತ್ತಿದ್ದೀ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:15
10 ತಿಳಿವುಗಳ ಹೋಲಿಕೆ  

ಅದೇ ಕ್ಷಣದಲ್ಲಿ ಬಾರಾಕನು ಯಾಯೇಲಳ ಗುಡಾರದ ಹತ್ತಿರಕ್ಕೆ ಬಂದನು. ಅವನನ್ನು ಬರಮಾಡಿಕೊಳ್ಳುವುದಕ್ಕಾಗಿ ಯಾಯೇಲಳು ಹೊರಗೆ ಬಂದು, “ಇಲ್ಲಿ ಒಳಗೆ ಬನ್ನಿ. ನೀನು ಹುಡುಕುತ್ತಿರುವ ಮನುಷ್ಯನನ್ನು ತೋರಿಸುತ್ತೇನೆ” ಎಂದಳು. ಬಾರಾಕನು ಯಾಯೇಲಳ ಜೊತೆ ಗುಡಾರವನ್ನು ಪ್ರವೇಶಿಸಿದನು. ಅಲ್ಲಿ ಬಾರಾಕನು ಕಣತಲೆಯಲ್ಲಿ ಗೂಟವನ್ನು ಜಡಿಸಿಕೊಂಡು ನೆಲದ ಮೇಲೆ ಸತ್ತು ಬಿದ್ದಿದ್ದ ಸೀಸೆರನನ್ನು ಕಂಡನು.


ಯೇಸು ಆಕೆಯನ್ನು “ಅಮ್ಮಾ ಏಕೆ ಅಳುತ್ತಿರುವೆ? ನೀನು ಯಾರನ್ನು ಹುಡುಕುತ್ತಿರುವೆ?” ಎಂದು ಕೇಳಿದನು. ಇವನು ತೋಟವನ್ನು ನೋಡಿಕೊಳ್ಳುವವನಿರಬಹುದೆಂದು ಮರಿಯಳು ಯೋಚಿಸಿಕೊಂಡು ಅವನಿಗೆ, “ಅಯ್ಯಾ, ನೀನು ಯೇಸುವನ್ನು ತೆಗೆದುಕೊಂಡು ಹೋದೆಯಾ? ಆತನನ್ನು ಎಲ್ಲಿಟ್ಟಿರುವೆ, ನನಗೆ ಹೇಳು. ನಾನು ಹೋಗಿ ಆತನನ್ನು ತೆಗೆದು ಕೊಳ್ಳುತ್ತೇನೆ” ಎಂದು ಹೇಳಿದಳು.


ಯೇಸು ಅವರಿಗೆ ಮತ್ತೆ “ನೀವು ಯಾರನ್ನು ಹುಡುಕುತ್ತಿದ್ದೀರಿ?” ಎಂದು ಕೇಳಿದನು. ಅವರು, “ನಜರೇತಿನ ಯೇಸುವನ್ನು” ಎಂದು ಹೇಳಿದರು.


ತನಗೆ ಸಂಭವಿಸಲಿದ್ದ ಪ್ರತಿಯೊಂದೂ ಯೇಸುವಿಗೆ ತಿಳಿದಿತ್ತು. ಆತನು ಹೊರಗೆ ಹೋಗಿ, “ನೀವು ಯಾರನ್ನು ಹುಡುಕುತ್ತಿದ್ದೀರಿ?” ಎಂದು ಕೇಳಿದನು.


ಆ ಸಮಯದಲ್ಲಿ ಆತನ ಶಿಷ್ಯರು ಹಿಂತಿರುಗಿ ಬಂದರು. ಯೇಸು ಒಬ್ಬ ಸ್ತ್ರೀಯೊಂದಿಗೆ ಮಾತಾಡುತ್ತಿರುವುದನ್ನು ನೋಡಿ ಅವರು ಆಶ್ಚರ್ಯಗೊಂಡರು. ಆದರೆ, “ನಿನಗೇನು ಬೇಕು?” ಎಂದಾಗಲಿ “ನೀನು ಆಕೆಯೊಂದಿಗೆ ಏಕೆ ಮಾತಾಡುತ್ತಿರುವೆ?” ಎಂದಾಗಲಿ ಅವರಲ್ಲಿ ಒಬ್ಬರೂ ಕೇಳಲಿಲ್ಲ.


ಯೇಸು ಹಿಂತಿರುಗಿ ನೋಡಿ, “ನಿಮಗೇನು ಬೇಕು?” ಎಂದು ಕೇಳಿದನು. ಆ ಇಬ್ಬರು, “ರಬ್ಬಿ, ನೀನು ಎಲ್ಲಿ ಇಳಿದುಕೊಂಡಿರುವೆ?” ಎಂದು ಕೇಳಿದರು. (“ರಬ್ಬಿ” ಅಂದರೆ “ಗುರು” ಎಂದರ್ಥ.)


ಎಲೀಷನು ಅರಾಮ್ಯರ ಸೇನೆಗೆ, “ಇದು ಸರಿಯಾದ ಮಾರ್ಗವಲ್ಲ, ಇದು ಸರಿಯಾದ ನಗರವೂ ಅಲ್ಲ. ನನ್ನನ್ನು ಹಿಂಬಾಲಿಸಿ. ನೀವು ಹುಡುಕುತ್ತಿರುವ ಮನುಷ್ಯನ ಬಳಿಗೆ ನಾನು ನಿಮ್ಮನ್ನು ಕರೆದೊಯ್ಯುತ್ತೇನೆ” ಎಂದು ಹೇಳಿದನು. ನಂತರ ಎಲೀಷನು ಅರಾಮ್ಯರ ಸೇನೆಯನ್ನು ಸಮಾರ್ಯಕ್ಕೆ ನಡೆಸಿಕೊಂಡು ಬಂದನು.


ಮರುದಿನ ಮುಂಜಾನೆ, ಅಬ್ರಹಾಮನು ಸ್ವಲ್ಪ ಆಹಾರವನ್ನು ಮತ್ತು ಸ್ವಲ್ಪ ನೀರನ್ನು ತೆಗೆದು ಹಾಗರಳಿಗೆ ಕೊಟ್ಟನು. ಹಾಗರಳು ಅವುಗಳನ್ನು ತೆಗೆದುಕೊಂಡು ತನ್ನ ಮಗನೊಡನೆ ಅಲ್ಲಿಂದ ಹೊರಟುಹೋದಳು. ಹಾಗರಳು ಆ ಸ್ಥಳವನ್ನು ಬಿಟ್ಟು ಬೇರ್ಷೆಬದ ಮರಳುಗಾಡಿನಲ್ಲಿ ಅಲೆಯತೊಡಗಿದಳು.


ಇಸ್ರೇಲನು, “ನಿನ್ನ ಅಣ್ಣಂದಿರ ಮತ್ತು ಆಡುಕುರಿಗಳ ಕ್ಷೇಮವನ್ನು ವಿಚಾರಿಸಿಕೊಂಡು ಬಂದು ನನಗೆ ತಿಳಿಸು” ಎಂದು ಹೇಳಿ ಅವನನ್ನು ಹೆಬ್ರೋನಿನ ಕಣಿವೆಯಿಂದ ಶೆಕೆಮಿಗೆ ಕಳುಹಿಸಿಕೊಟ್ಟನು.


ಯೋಸೇಫನು, “ನನ್ನ ಅಣ್ಣಂದಿರನ್ನು ಹುಡುಕುತ್ತಿದ್ದೇನೆ. ಅವರು ತಮ್ಮ ಆಡುಕುರಿಗಳನ್ನು ಎಲ್ಲಿ ಮೇಯಿಸುತ್ತಿದ್ದಾರೆ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು