Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:24 - ಪರಿಶುದ್ದ ಬೈಬಲ್‌

24 ನೀರಿಲ್ಲದ ಒಂದು ಬಾವಿಯೊಳಗೆ ತಳ್ಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವನನ್ನು ಹಿಡಿದು ಆ ಗುಂಡಿಯೊಳಗೆ ಹಾಕಿದರು. ಆ ಗುಂಡಿ ನೀರಿಲ್ಲದೆ ಬರಿದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅವನನ್ನು ಹಿಡಿದು ಬಾವಿಯೊಳಗೆ ಹಾಕಿದರು. ಆ ಬಾವಿ ನೀರಿಲ್ಲದೆ ಬರಿದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವನನ್ನು ಹಿಡಿದು ಆ ಗುಂಡಿಯೊಳಗೆ ಹಾಕಿದರು. ಆ ಗುಂಡಿ ನೀರಿಲ್ಲದೆ ಬರಿದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅವನನ್ನು ತೆಗೆದುಕೊಂಡು ಗುಂಡಿಯಲ್ಲಿ ಹಾಕಿದರು. ಆ ಗುಂಡಿ ನೀರಿಲ್ಲದೆ ಬರಿದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:24
12 ತಿಳಿವುಗಳ ಹೋಲಿಕೆ  

ಆಗ ಆ ಅಧಿಕಾರಿಗಳು ಯೆರೆಮೀಯನನ್ನು ಹಿಡಿದು ಮಲ್ಕೀಯನ ಬಾವಿಯೊಳಗೆ ಹಾಕಿದರು. (ಮಲ್ಕೀಯನು ರಾಜವಂಶದವನಾಗಿದ್ದನು.) ಆ ಬಾವಿಯು ಕಾರಾಗೃಹದ ಅಂಗಳದಲ್ಲಿತ್ತು. ಆ ಅಧಿಕಾರಿಗಳು ಹಗ್ಗಗಳನ್ನು ಕಟ್ಟಿ ಯೆರೆಮೀಯನನ್ನು ಬಾವಿಯಲ್ಲಿ ಇಳಿಬಿಟ್ಟರು. ಆ ಬಾವಿಯಲ್ಲಿ ಸ್ವಲ್ಪವೂ ನೀರಿರಲಿಲ್ಲ. ಕೇವಲ ಕೇಸರಿತ್ತು. ಯೆರೆಮೀಯನು ಕೆಸರಿನಲ್ಲಿ ಮುಳುಗಿಹೋದನು.


ಜೆರುಸಲೇಮೇ, ನಾವು ನಿನ್ನ ಒಡಂಬಡಿಕೆಗೆ ಮುದ್ರೆ ಹಾಕಲು ರಕ್ತವನ್ನು ಉಪಯೋಗಿಸಿದೆವು. ಆದ್ದರಿಂದ ನೆಲದ ಹೊಂಡದೊಳಗಿಂದ ಜನರನ್ನು ಬಿಡುಗಡೆ ಮಾಡಿದ್ದೇನೆ.


ನಮಗೆ ರಾಜನು ಬಹಳ ಮುಖ್ಯವಾಗಿದ್ದನು. ಅವನು ನಮಗೆ ಉಸಿರಿನಷ್ಟೇ ಅಮೂಲ್ಯವಾಗಿದ್ದನು. ಆದರೆ ಅವರು ರಾಜನನ್ನೇ ಸೆರೆಹಿಡಿದರು. ಯೆಹೋವನೇ, ಆ ರಾಜನನ್ನು ಆರಿಸಿಕೊಂಡಿದ್ದನು. “ನಾವು ಅವನ ನೆರಳಿನಲ್ಲಿ ಬದುಕುತ್ತೇವೆ. ಅವನು ನಮ್ಮನ್ನು ಜನಾಂಗಗಳವರಿಂದ ಸಂರಕ್ಷಿಸುವನು” ಎಂದು ನಾವು ರಾಜನ ಬಗ್ಗೆ ಹೇಳಿಕೊಂಡಿದ್ದೆವು.


ಸ್ನೇಹಿತರು ನನ್ನನ್ನು ತೊರೆದುಬಿಟ್ಟರು. ಹೊಲೆಯಾದ ಮನುಷ್ಯನಂತೆ ಅವರೆಲ್ಲರೂ ನನ್ನನ್ನು ದೂರ ಮಾಡಿದ್ದಾರೆ. ನನ್ನನ್ನು ಮನೆಯೊಳಗೆ ದೊಬ್ಬಿ ಬೀಗ ಹಾಕಿದ್ದಾರೆ; ನಾನು ಹೊರಗೆ ಹೋಗಲಾರೆನು.


ನೀನು ನನ್ನನ್ನು ಪಾತಾಳಕ್ಕೆ ದಬ್ಬಿರುವೆ; ನನ್ನನ್ನು ಕತ್ತಲೆಯ ಸ್ಥಳಕ್ಕೆ ನೂಕಿರುವೆ.


ಆತನು ನನ್ನನ್ನು ನಾಶನದ ಗುಂಡಿಯೊಳಗಿಂದ ಎತ್ತಿದನು. ಆತನು ನನ್ನನ್ನು ಕೆಸರಿನ ಸ್ಥಳದಿಂದ ಮೇಲೆತ್ತಿ ಬಂಡೆಯ ಮೇಲಿರಿಸಿದನು; ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು.


ನಾನು ನಿರಪರಾಧಿಯಾಗಿದ್ದರೂ ಅವರು ನನಗೆ ಬಲೆಯೊಡ್ಡಿದ್ದಾರೆ. ನಿಷ್ಕಾರಣವಾಗಿ ಅವರು ನನಗೆ ಬಲೆಯೊಡ್ಡಿದ್ದಾರೆ.


ಯೋಸೇಫನು ಬಂದಾಗ ಅವನ ಅಣ್ಣಂದಿರು ಅವನನ್ನು ಹಿಡಿದು ಅವನ ನಿಲುವಂಗಿಯನ್ನು ಹರಿದುಹಾಕಿ


ಯೋಸೇಫನು ಬಾವಿಯೊಳಗಿದ್ದಾಗ, ಅವನ ಅಣ್ಣಂದಿರು ಊಟಕ್ಕೆ ಕುಳಿತುಕೊಂಡರು. ಅವರು ಕಣ್ಣೆತ್ತಿ ನೋಡಿದಾಗ ಗಿಲ್ಯಾದಿನಿಂದ ಈಜಿಪ್ಟಿಗೆ ಹೋಗುತ್ತಿದ್ದ ವ್ಯಾಪಾರಿಗಳನ್ನು ಕಂಡರು. ಅವರ ಒಂಟೆಗಳು ಅನೇಕ ಬಗೆಯ ಸಾಂಬಾರ ಪದಾರ್ಥಗಳನ್ನು ಮತ್ತು ಬೆಲೆಬಾಳುವ ವಸ್ತುಗಳನ್ನು ಹೊತ್ತುಕೊಂಡು ಹೋಗುತ್ತಿದ್ದವು.


ಅವರು ಒಬ್ಬರಿಗೊಬ್ಬರು, “ನಾವು ನಮ್ಮ ತಮ್ಮನಾದ ಯೋಸೇಫನಿಗೆ ಮಾಡಿದ ಕೆಟ್ಟಕಾರ್ಯಕ್ಕಾಗಿ ಈ ಶಿಕ್ಷೆಯನ್ನು ಅನುಭವಿಸುತ್ತಿದ್ದೇವೆ. ಪ್ರಾಣಸಂಕಟದಲ್ಲಿದ್ದ ಅವನು ತನ್ನನ್ನು ಕಾಪಾಡುವಂತೆ ನಮ್ಮನ್ನು ಬೇಡಿಕೊಂಡರೂ ನಾವು ಅವನ ಮೊರೆಯನ್ನು ತಿರಸ್ಕರಿಸಿದೆವು. ಆದ್ದರಿಂದ ಈಗ ಪ್ರಾಣಸಂಕಟಕ್ಕೀಡಾಗಿದ್ದೇವೆ” ಎಂದು ಮಾತಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು