Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:36 - ಪರಿಶುದ್ದ ಬೈಬಲ್‌

36 ಮಿದ್ಯಾನಿನ ವ್ಯಾಪಾರಿಗಳು ಯೋಸೇಫನನ್ನು ಈಜಿಪ್ಟಿನಲ್ಲಿ ಮಾರಿದರು. ಅವರು ಅವನನ್ನು ಫರೋಹನ ಕಾವಲುಗಾರರಿಗೆ ನಾಯಕನಾಗಿದ್ದ ಪೋಟೀಫರನಿಗೆ ಮಾರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ತೆಗೆದುಕೊಂಡು ಹೋಗಿ ಐಗುಪ್ತ ದೇಶದ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು. ಇವನು ಅರಸನ ಮೈಗಾವಲಿನವರ ದಳಪತಿಯೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಮಿದ್ಯಾನ್ಯರು ಜೋಸೆಫನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡುಹೋಗಿ ಫರೋಹನ ಆಸ್ಥಾನದಲ್ಲಿದ್ದ ಪೋಟೀಫರನಿಗೆ ಮಾರಿದರು; ಇವನು, ದೊಡ್ಡ ಉದ್ಯೋಗಸ್ಥನೂ ಮೈಗಾವಲಿನವರ ದಳಪತಿಯೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ವಿುದ್ಯಾನ್ಯರು ಯೋಸೇಫನನ್ನು ಐಗುಪ್ತದೇಶಕ್ಕೆ ತೆಗೆದುಕೊಂಡು ಹೋಗಿ ಫರೋಹನ ಬಳಿಯಲ್ಲಿದ್ದ ದೊಡ್ಡ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು; ಇವನು ಮೈಗಾವಲಿನವರ ದಳವಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಇದರೊಂದಿಗೆ, ಆ ಮಿದ್ಯಾನ್ಯರು ಯೋಸೇಫನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡುಹೋಗಿ ಪೋಟೀಫರನಿಗೆ ಮಾರಿದರು. ಇವನು ಫರೋಹನ ಉದ್ಯೋಗಸ್ಥನೂ ಮೈಗಾವಲಿನ ದಳಪತಿಯೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:36
12 ತಿಳಿವುಗಳ ಹೋಲಿಕೆ  

ಸೆರೆಮನೆಯ ಮುಖ್ಯಾಧಿಕಾರಿಯು ಈ ಇಬ್ಬರು ಕೈದಿಗಳನ್ನು ಯೋಸೇಫನ ವಶಕ್ಕೆ ಒಪ್ಪಿಸಿದನು. ಸ್ವಲ್ಪಕಾಲದವರೆಗೆ ಆ ಇಬ್ಬರು ಸೆರೆಮನೆಯೊಳಗೆ ಇದ್ದರು.


ಮಿದ್ಯಾನಿನ ವ್ಯಾಪಾರಿಗಳು ಸಮೀಪಿಸಿದಾಗ, ಅಣ್ಣಂದಿರು ಯೋಸೇಫನನ್ನು ಬಾವಿಯೊಳಗಿಂದ ಹೊರತೆಗೆದು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು. ವ್ಯಾಪಾರಿಗಳು ಯೋಸೇಫನನ್ನು ಈಜಿಪ್ಟಿಗೆ ಕೊಂಡೊಯ್ದರು.


ಯೆಹೂದ್ಯರಲ್ಲದ ಜನರು ಯೆಹೋವನ ಬಳಿಗೆ ಬರುವರು. ಅವರು, “ಯೆಹೋವನು ನಮ್ಮನ್ನು ತನ್ನ ಜನರೊಂದಿಗೆ ಸ್ವೀಕರಿಸುವದಿಲ್ಲ” ಎಂದು ಹೇಳಬಾರದು. ಕಂಚುಕಿಯು, “ನಾನು ಕೆಲಸಕ್ಕೆ ಬಾರದ ಒಣಗಿದ ಮರ.” ಎಂದು ಹೇಳಬಾರದು.


ಬಾಬಿಲೋನ್ ರಾಜನಾಗಿದ್ದ ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಹತ್ತೊಂಭತ್ತನೆಯ ವರ್ಷದ ಐದನೆಯ ತಿಂಗಳ ಏಳನೆಯ ದಿನದಂದು ಜೆರುಸಲೇಮಿಗೆ ಬಂದನು. ನೆಬೂಜರದಾನ ಎಂಬವನು ನೆಬೂಕದ್ನೆಚ್ಚರನ ರಕ್ಷಕ ದಳದ ಅಧಿಪತಿಯಾಗಿದ್ದನು.


ಔತಣದ ಏಳನೆಯ ದಿವಸದಲ್ಲಿ ರಾಜನು ದ್ರಾಕ್ಷಾರಸ ಕುಡಿದು ಆನಂದಲಹರಿಯಲ್ಲಿದ್ದಾಗ ತನ್ನ ಆಸ್ಥಾನ ಕಂಚುಕಿಯರಾದ ಮೆಹೂಮಾನ್, ಬಿಜತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೀತರ್, ಕರ್ಕಸ್ ಎಂಬ ಏಳು ಮಂದಿಗೆ ಹೋಗಿ ವಷ್ಟಿರಾಣಿಯನ್ನು ತನ್ನ ರಾಜಮುಕುಟವನ್ನು ಧರಿಸಿ ಕರೆತರಲು ಆಜ್ಞಾಪಿಸಿದನು. ವಷ್ಟಿರಾಣಿಯು ಅತ್ಯಂತ ಸುಂದರಿಯಾಗಿದ್ದಳು. ಆಕೆಯ ಸೌಂದರ್ಯವನ್ನು ತನ್ನ ರಾಜ್ಯದ ಅಧಿಕಾರಿಗಳಿಗೆ ತೋರಿಸಬೇಕೆಂಬುದು ಅವನ ಅಪೇಕ್ಷೆಯಾಗಿತ್ತು.


ಆದ್ದರಿಂದ ಅವರನ್ನು ಯೋಸೇಫನಿದ್ದ ಸೆರೆಮನೆಗೆ ಹಾಕಿಸಿದನು. ಪೋಟೀಫರನು ಫರೋಹನ ಕಾವಲುಗಾರ ಅಧಿಕಾರಿಯಾಗಿದ್ದು ಈ ಸೆರೆಮನೆಯ ಜವಾಬ್ದಾರಿಯನ್ನು ಹೊಂದಿದ್ದನು.


ನಮ್ಮ ಜೊತೆಯಲ್ಲಿ ಒಬ್ಬ ಇಬ್ರಿಯ ಯುವಕನಿದ್ದನು. ಅವನು ಕಾವಲುಗಾರರ ಅಧಿಕಾರಿಯ ಸೇವಕನಾಗಿದ್ದನು. ನಾವು ಅವನಿಗೆ ನಮ್ಮ ಕನಸುಗಳನ್ನು ತಿಳಿಸಿದೆವು. ಅವನು ನಮಗೆ ಅವುಗಳನ್ನು ವಿವರಿಸಿ ನಮ್ಮ ಕನಸಿನ ಅರ್ಥವನ್ನು ತಿಳಿಸಿದನು.


ಆದರೆ ದೇವರು ಒಬ್ಬನನ್ನು ಅವರಿಗಿಂತ ಮುಂಚಿತವಾಗಿ ಕಳುಹಿಸಿಕೊಟ್ಟನು. ಗುಲಾಮತನಕ್ಕೆ ಮಾರಲ್ಪಟ್ಟ ಯೋಸೇಫನೇ ಅವನು.


ಬಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನೆಂಬವನು ಜೆರುಸಲೇಮಿನಲ್ಲಿ ಉಳಿದ ಜನರನ್ನು ಹಿಡಿದು ಬಂಧಿಗಳನ್ನಾಗಿ ಮಾಡಿದ್ದನು. ಅವರನ್ನು ಅವನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಈ ಮೊದಲೆ ಅವನಿಗೆ ಶರಣಾಗತರಾದವರನ್ನೂ ಸಹ ನೆಬೂಜರದಾನನು ಬಂಧಿಗಳನ್ನಾಗಿ ಮಾಡಿದನು. ಅವನು ಜೆರುಸಲೇಮಿನ ಉಳಿದವರೆಲ್ಲರನ್ನು ಬಂಧಿಗಳನ್ನಾಗಿ ಮಾಡಿ ಬಾಬಿಲೋನಿಗೆ ತೆಗೆದುಕೊಂಡು ಹೋದನು.


ಅರ್ಯೋಕನು ಅರಸನ ಮೈಗಾವಲಿನವರ ದಳವಾಯಿಯಾಗಿದ್ದನು. ಅವನು ಬಾಬಿಲೋನಿನ ವಿದ್ವಾಂಸರನ್ನು ಕೊಲ್ಲಲು ಹೊರಟಿದ್ದನು. ಆದರೆ ದಾನಿಯೇಲನು ಅವನೊಂದಿಗೆ ಮಾತನಾಡಿದನು. ದಾನಿಯೇಲನು ಅವನ ಸಂಗಡ ವಿವೇಕ ಮತ್ತು ನಮ್ರತೆಯಿಂದ ಮಾತನಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು