Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:7 - ಪರಿಶುದ್ದ ಬೈಬಲ್‌

7 ನಾವೆಲ್ಲರು ಹೊಲದಲ್ಲಿ ಗೋಧಿಯ ಸಿವುಡುಗಳನ್ನು ಕಟ್ಟುತ್ತಿದ್ದೆವು. ಆಗ ನನ್ನ ಸಿವುಡು ಎದ್ದುನಿಂತಿತು; ನನ್ನ ಸಿವುಡಿನ ಸುತ್ತಲೂ ನಿಮ್ಮ ಸಿವುಡುಗಳೆಲ್ಲಾ ಎದ್ದುನಿಂತುಕೊಂಡು ನನ್ನ ಸಿವುಡಿಗೆ ಅಡ್ಡಬಿದ್ದವು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಕನಸಿನಲ್ಲಿ ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು. ಆಗ ನನ್ನ ಸಿವುಡು ಎದ್ದು ನಿಂತಿತು. ನಿಮ್ಮ ಸಿವುಡುಗಳು ಸುತ್ತಲೂ ಬಂದು ನನ್ನ ಸಿವುಡಿಗೆ ಅಡ್ಡಬಿದ್ದದ್ದನ್ನು ಕಂಡೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಈ ಕನಸಿನಲ್ಲಿ ನಾವು ಹೊಲದಲ್ಲಿ ಬೆಳೆಕೊಯ್ದು ಕಂತೆಗಳನ್ನು ಕಟ್ಟುತ್ತಾ ಇದ್ದೆವು. ಆಗ ನನ್ನ ಕಂತೆ ಎದ್ದುನಿಂತಿತು. ನಿಮ್ಮ ಕಂತೆಗಳು ಸುತ್ತಲೂ ಬಂದು ನನ್ನ ಕಂತೆಗೆ ಅಡ್ಡಬಿದ್ದುದನ್ನು ಕಂಡೆ,” ಎಂದು ಹೇಳಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆ ಕನಸಿನಲ್ಲಿ ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು; ಆಗ ನನ್ನ ಸಿವುಡು ಎದ್ದು ನಿಲ್ಲಲು ನಿಮ್ಮ ಸಿವುಡುಗಳು ಸುತ್ತಲೂ ಬಂದು ನನ್ನ ಸಿವುಡಿಗೆ ಅಡ್ಡಬಿದ್ದದ್ದನ್ನು ಕಂಡೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು. ನನ್ನ ಸಿವುಡು ಎದ್ದುನಿಂತಿತು. ಆಗ ನಿಮ್ಮ ಸಿವುಡುಗಳು ತಿರುಗಿ ನನ್ನ ಸಿವುಡಿಗೆ ಅಡ್ಡಬಿದ್ದವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:7
12 ತಿಳಿವುಗಳ ಹೋಲಿಕೆ  

ಯೆಹೂದ ಮತ್ತು ಅವನ ಸಹೋದರರು ಯೋಸೇಫನ ಮನೆಗೆ ಹಿಂತಿರುಗಿದಾಗ ಯೋಸೇಫನು ಇನ್ನೂ ಅಲ್ಲೇ ಇದ್ದನು. ಸಹೋದರರು ನೆಲದ ಮೇಲೆ ಬಿದ್ದು ತಲೆಬಾಗಿ ನಮಸ್ಕರಿಸಿದರು.


ಯೋಸೇಫನು ಈಜಿಪ್ಟಿನ ರಾಜ್ಯಪಾಲನಾಗಿದ್ದರಿಂದ ಅವನ ಅನುಮತಿಯಿಲ್ಲದೆ ದವಸಧಾನ್ಯಗಳನ್ನು ಕೊಂಡುಕೊಳ್ಳಲು ಯಾರಿಗೂ ಸಾಧ್ಯವಿರಲಿಲ್ಲ. ಯೋಸೇಫನ ಸಹೋದರರು ಬಂದು ಅವನ ಮುಂದೆ ಅಡ್ಡಬಿದ್ದರು.


ಯೋಸೇಫನು ಮನೆಗೆ ಬಂದಾಗ, ಸಹೋದರರು ತಾವು ತಂದಿದ್ದ ಉಡುಗೊರೆಗಳನ್ನು ಅವನಿಗೆ ಕೊಟ್ಟರು. ಬಳಿಕ ಅವರು ನೆಲದವರೆಗೆ ಬಾಗಿ ನಮಸ್ಕರಿಸಿದರು.


ಆಗ ಯೋಸೇಫನು ತನ್ನ ಅಣ್ಣಂದಿರ ಬಗ್ಗೆ ತಾನು ಕಂಡಿದ್ದ ಕನಸುಗಳ ಬಗ್ಗೆ ಜ್ಞಾಪಿಸಿಕೊಂಡು ಅವರಿಗೆ, “ನೀವು ಆಹಾರವನ್ನು ಕೊಂಡುಕೊಳ್ಳಲು ಬಂದಿಲ್ಲ; ನೀವು ಗೂಢಚಾರರು. ನಮ್ಮ ದೇಶದ ದುರ್ಬಲ ಸ್ಥಳಗಳನ್ನು ತಿಳಿದುಕೊಳ್ಳಲು ಬಂದಿರುವಿರಿ” ಎಂದು ಹೇಳಿದನು.


ಕ್ರಿಸ್ತನು ದೇಹಕ್ಕೆ (ಸಭೆಯ) ಶಿರಸ್ಸಾಗಿದ್ದಾನೆ. ಪ್ರತಿಯೊಂದೂ ಆತನಿಂದಲೇ ಬರುತ್ತದೆ. ಮರಣದಿಂದ ಪ್ರಥಮವಾಗಿ ಎದ್ದುಬಂದವನು ಆತನೇ. ಆದ್ದರಿಂದ ಎಲ್ಲಾದರಲ್ಲಿಯೂ ಯೇಸುವೇ ಅತ್ಯಂತ ಪ್ರಾಮುಖ್ಯನಾಗಿದ್ದಾನೆ.


ಆದ್ದರಿಂದ ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಪಾತಾಳದಲ್ಲಿಯೂ ಇರುವ ಪ್ರತಿಯೊಬ್ಬರು ಯೇಸುವಿನ ಹೆಸರಿನಲ್ಲಿ ಅಡ್ಡಬಿದ್ದು,


ನಾವು ಮೊದಲನೆಯ ಸಲ ಬಂದಿದ್ದಾಗ, ನೀವು ನಮಗೆ, ‘ನಿಮಗೆ ತಂದೆಯಾಗಲಿ ತಮ್ಮನಾಗಲಿ ಇರುವನೇ?’ ಎಂದು ಕೇಳಿದಿರಿ.


ಎಲ್ಲಾ ಜನರು ನಿನ್ನ ಸೇವೆಮಾಡಲಿ; ಜನಾಂಗಗಳು ನಿನಗೆ ತಲೆಬಾಗಲಿ. ನೀನು ನಿನ್ನ ಸಹೋದರರ ಮೇಲೆ ಆಡಳಿತ ಮಾಡುವೆ. ನಿನ್ನ ತಾಯಿಯ ಗಂಡುಮಕ್ಕಳು ನಿನಗೆ ತಲೆಬಾಗಿ ವಿಧೇಯರಾಗುವರು. ನಿನ್ನನ್ನು ಶಪಿಸುವ ಪ್ರತಿಯೊಬ್ಬನು ಶಾಪಗ್ರಸ್ಥನಾಗುವನು. ನಿನ್ನನ್ನು ಆಶೀರ್ವದಿಸುವ ಪ್ರತಿಯೊಬ್ಬನು ಆಶೀರ್ವದಿಸಲ್ಪಡುವನು.”


ಯೋಸೇಫನು ಅವರಿಗೆ, “ನನಗೆ ಒಂದು ಕನಸಾಯಿತು.


ಸಹೋದರರು, “ಸ್ವಾಮೀ, ನಮ್ಮ ತಂದೆ ಕ್ಷೇಮವಾಗಿದ್ದಾನೆ. ಅವನು ಇನ್ನೂ ಜೀವಂತವಾಗಿದ್ದಾನೆ” ಎಂದು ಹೇಳಿದನು. ಬಳಿಕ ಅವರು ಮತ್ತೆ ಯೋಸೇಫನಿಗೆ ಅಡ್ಡಬಿದ್ದರು.


ಆಗ ಯೆಹೂದನು ಯೋಸೇಫನ ಬಳಿಗೆ ಹೋಗಿ, “ಸ್ವಾಮಿ, ತಮ್ಮೊಂದಿಗೆ ಬಿಚ್ಚುಮನಸ್ಸಿನಿಂದ ಮಾತನಾಡಲು ದಯವಿಟ್ಟು ಅನುಮತಿಯಾಗಲಿ; ದಯವಿಟ್ಟು ನನ್ನ ಮೇಲೆ ಕೋಪಗೊಳ್ಳಬೇಡಿ. ನೀವು ಸ್ವತಃ ಫರೋಹನಂತೆ ಇರುವಿರೆಂದು ನನಗೆ ತಿಳಿದಿದೆ.


ಸಹೋದರರು ಯೋಸೇಫನ ಬಳಿಗೆ ಹೋಗಿ ಅವನ ಮುಂದೆ ಅಡ್ಡಬಿದ್ದು, “ನಾವು ನಿನ್ನ ಸೇವಕರಾಗಿದ್ದೇವೆ” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು