Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:8 - ಪರಿಶುದ್ದ ಬೈಬಲ್‌

8 ಅವನ ಅಣ್ಣಂದಿರು, “ನೀನು ರಾಜನಾಗಿ ನಮ್ಮನ್ನು ಆಳುವೆ ಎಂಬುದು ಇದರ ಅರ್ಥವೆಂದು ನಿನ್ನ ಆಲೋಚನೆಯೋ?” ಎಂದು ಪ್ರಶ್ನಿಸಿ ಆ ಕನಸಿನ ನಿಮಿತ್ತ ಅವನನ್ನು ಮತ್ತಷ್ಟು ದ್ವೇಷಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅದಕ್ಕೆ ಅವನ ಅಣ್ಣಂದಿರು ಅವನಿಗೆ, “ನೀನು ನಿಜವಾಗಿ ನಮ್ಮನ್ನು ಆಳುವಿಯಾ? ನೀನು ನಮ್ಮ ಮೇಲೆ ದೊರೆತನ ಮಾಡುವಿಯಾ?” ಎಂದು ಹೇಳಿ ಅವನ ಕನಸುಗಳಿಗಾಗಿಯೂ, ಅದನ್ನು ಅವನು ಅವರಿಗೆ ತಿಳಿಸಿದ್ದಕ್ಕಾಗಿಯು ಮತ್ತಷ್ಟು ಅವನನ್ನು ದ್ವೇಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅದಕ್ಕೆ ಅವನ ಅಣ್ಣಂದಿರು, “ಏನು, ನೀನು ನಿಜವಾಗಿ ನಮ್ಮನ್ನು ಆಳುವೆಯಾ? ನಮ್ಮ ಮೇಲೆ ದೊರೆತನ ಮಾಡುವೆಯಾ?” ಎಂದು ಪ್ರಶ್ನಿಸಿದರು. ಅವನ ಕನಸುಗಳು, ಅವನ ಮಾತುಗಳು ಅವರನ್ನು ಮತ್ತಷ್ಟು ಹಗೆಗಳನ್ನಾಗಿ ಮಾಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅದಕ್ಕೆ ಅವನ ಅಣ್ಣಂದಿರು - ನೀನು ನಿಜವಾಗಿ ನಮ್ಮನ್ನು ಆಳುವಿಯಾ? ನೀನು ನಮ್ಮ ಮೇಲೆ ದೊರೆತನಮಾಡುವಿಯಾ ಎಂದು ಅವನಿಗೆ ಹೇಳಿ ಅವನ ಕನಸುಗಳಿಗಾಗಿಯೂ ಮಾತುಗಳಿಗಾಗಿಯೂ ಮತ್ತಷ್ಟು ಹಗೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಅವನ ಸಹೋದರರು ಅವನಿಗೆ, “ನೀನು ನಮ್ಮನ್ನು ನಿಶ್ಚಯವಾಗಿಯೂ ಆಳುವೆಯೋ? ನಿಜವಾಗಿ ನಮ್ಮ ಮೇಲೆ ದೊರೆತನ ಮಾಡುವಿಯೋ?” ಎಂದು ಹೇಳಿ, ಅವನ ಕನಸು ಮತ್ತು ಅವನ ಮಾತುಗಳಿಗೆ ಅವನನ್ನು ಮತ್ತಷ್ಟೂ ದ್ವೇಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:8
19 ತಿಳಿವುಗಳ ಹೋಲಿಕೆ  

“ಆ ಯೆಹೂದ್ಯರಿಂದ ತಿರಸ್ಕೃತನಾದವನೇ ಈ ಮೋಶೆ. ಅವರು ಅವನಿಗೆ, ‘ನಿನ್ನನ್ನು ನಮ್ಮ ಅಧಿಪತಿ ಎಂದಾಗಲಿ ನ್ಯಾಯಾಧೀಶ ಎಂದಾಗಲಿ ನಿನಗೆ ಯಾರಾದರೂ ಹೇಳಿದರೇ?’ ಎಂದು ಪ್ರಶ್ನಿಸಿದ್ದರು. ಆದರೆ ದೇವರು ಅಧಿಪತಿಯನ್ನಾಗಿಯೂ ವಿಮೋಚಕನನ್ನಾಗಿಯೂ ಕಳುಹಿಸಿದ್ದು ಆ ಮೋಶೆಯನ್ನೇ. ದೇವರು ತನ್ನ ದೂತನ ಮೂಲಕವಾಗಿ ಮೋಶೆಯನ್ನು ಕಳುಹಿಸಿದನು. ಉರಿಯುವ ಪೊದೆಯಲ್ಲಿ ಮೋಶೆಯು ಕಂಡದ್ದು ಈ ದೇವದೂತನನ್ನೇ.


ಆದರೆ ಕೆಲವು ಕಿರುಕುಳಕಾರರು, “ಈ ಮನುಷ್ಯನು ಹೇಗೆ ತಾನೆ ನಮ್ಮನ್ನು ರಕ್ಷಿಸುವನು?” ಎಂದು ಹೇಳಿದರು. ಅವರು ಸೌಲನ ಬಗ್ಗೆ ಕೆಟ್ಟಮಾತುಗಳನ್ನು ಆಡಿದರು; ಅವನನ್ನು ತಿರಸ್ಕರಿಸಿ, ಕಾಣಿಕೆಗಳನ್ನು ತಂದುಕೊಡಲಿಲ್ಲ. ಆದರೆ ಸೌಲನು ಏನೂ ಮಾತನಾಡಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು, ಗಾದ್ ಮತ್ತು ರೂಬೆನ್ ಕುಲದವರಿಗೆ ಕಿರುಕುಳಕೊಡುತ್ತಿದ್ದನು. ನಾಹಾಷನು ಪ್ರತಿ ಮನುಷ್ಯನ ಬಲಗಣ್ಣನ್ನು ಕಿತ್ತುಹಾಕುತ್ತಿದ್ದನು. ನಾಹಾಷನು ಅವರಿಗೆ ಸಹಾಯಮಾಡಲು ಯಾರಿಗೂ ಅವಕಾಶಕೊಡುತ್ತಿರಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು ಜೋರ್ಡನ್ ನದಿಯ ಪೂರ್ವ ಪ್ರದೇಶದಲ್ಲಿ ವಾಸವಾಗಿದ್ದ ಎಲ್ಲ ಇಸ್ರೇಲರ ಬಲಗಣ್ಣನ್ನು ಕಿತ್ತುಹಾಕುತ್ತಿದ್ದನು. ಆದ್ದರಿಂದ ಅಮ್ಮೋನಿಯರಿಂದ ಏಳು ಸಾವಿರ ಮಂದಿ ಇಸ್ರೇಲರು ಯಾಬೇಷ್ ಗಿಲ್ಯಾದಿಗೆ ಓಡಿಹೋದರು.


ಹೀಗಿರಲು ದೇವರ ಮಗನನ್ನು ದ್ವೇಷಿಸುವ ಒಬ್ಬ ವ್ಯಕ್ತಿಯನ್ನು ಏನು ಮಾಡಬೇಕೆಂದು ನೀವು ಆಲೋಚಿಸುವಿರಿ? ನಿಜವಾಗಿಯೂ ಆ ವ್ಯಕ್ತಿಗೆ ಇದಕ್ಕಿಂತಲೂ ತೀವ್ರವಾದ ದಂಡನೆಯನ್ನು ವಿಧಿಸಬೇಕಲ್ಲವೇ? ಹೌದು, ಹೊಸ ಒಡಂಬಡಿಕೆಯ ರಕ್ತಕ್ಕೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ಕ್ರೂರವಾದ ದಂಡನೆಯಾಗಬೇಕು. ಆ ರಕ್ತವು ಅವನನ್ನು ಪವಿತ್ರನನ್ನಾಗಿಸಿತು. ದೇವರಾತ್ಮನ ಕೃಪೆಗೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ತೀವ್ರವಾದ ದಂಡನೆಯಾಗಬೇಕು.


ಆದರೆ ಯೇಸು ಅವರನ್ನು ದೃಷ್ಟಿಸಿ ನೋಡಿ, “ಹಾಗಾದರೆ, ‘ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು’ ಎಂಬ ವಚನದ ಅರ್ಥವೇನು?


ಆದರೆ ಅವನ ದೇಶದ ಜನರು ಅವನನ್ನು ದ್ವೇಷಿಸಿ, ಜನರ ಒಂದು ಗುಂಪನ್ನು ಅವನ ಹಿಂದೆ ಕಳುಹಿಸಿದರು. ಆ ಗುಂಪಿನ ಜನರು ದೂರದೇಶದಲ್ಲಿ, ‘ಇವನು ನಮ್ಮ ರಾಜನಾಗುವುದು ನಮಗೆ ಇಷ್ಟವಿಲ್ಲ!’ ಎಂದು ಹೇಳಿದರು.


ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು.


ದಾವೀದನು ಸೈನಿಕರೊಡನೆ ಮಾತಾಡುತ್ತಿರುವುದನ್ನು ಅವನ ಹಿರಿಯ ಅಣ್ಣ ಎಲೀಯಾಬನು ಕೇಳಿಸಿಕೊಂಡನು. ಎಲೀಯಾಬನು ದಾವೀದನ ಮೇಲೆ ಕೋಪಗೊಂಡು ಅವನಿಗೆ, “ನೀನು ಇಲ್ಲಿಗೆ ಬಂದದ್ದೇಕೆ? ಅಲ್ಲಿದ್ದ ಕೆಲವು ಕುರಿಗಳನ್ನು ಯಾರ ಬಳಿ ಬಿಟ್ಟಿರುವೆ? ನೀನು ಇಲ್ಲಿಗೆ ಏಕೆ ಬಂದಿರುವೆಯೆಂಬುದು ನನಗೆ ಗೊತ್ತು. ನಿನಗೆ ಹೇಳಿದ್ದನ್ನು ನೀನು ಮಾಡುವುದಿಲ್ಲ. ನೀನು ಕೇವಲ ಯುದ್ಧವನ್ನು ನೋಡುವುದಕ್ಕಾಗಿಯೇ ಇಲ್ಲಿಗೆ ಬಂದಿರುವೆ” ಎಂದು ಗದರಿಸಿದನು.


ಅದಕ್ಕೆ ಆ ಮನುಷ್ಯನು, “ನಿನ್ನನ್ನು ನಮ್ಮ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿದವರು ಯಾರು? ನಿನ್ನೆ ಆ ಈಜಿಪ್ಟಿನವನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿರುವಿಯೋ?” ಎಂದು ಉತ್ತರಿಸಿದನು. ಆಗ ಮೋಶೆಗೆ ಭಯವಾಯಿತು. ಮೋಶೆಯು ತನ್ನೊಳಗೆ, “ನಾನು ಮಾಡಿದ್ದು ಪ್ರತಿಯೊಬ್ಬರಿಗೂ ತಿಳಿದಿದೆ” ಅಂದುಕೊಂಡನು.


ನನ್ನ ತಂದೆತಾಯಿಗಳಿಗೆ ಅನೇಕಾನೇಕ ಒಳ್ಳೆಯ ಸಂಗತಿಗಳು ಸಂಭವಿಸಿದವು. ನಿನ್ನ ತಂದೆಯಾದ ನಾನು ಅದಕ್ಕಿಂತಲೂ ಹೆಚ್ಚು ಆಶೀರ್ವಾದ ಹೊಂದಿಕೊಂಡೆನು. ನಿನ್ನ ಸಹೋದರರು ನಿನ್ನನ್ನು ದೂರಮಾಡಲು ಪ್ರಯತ್ನಿಸಿದರು. ಆದರೆ ಈಗ ನನ್ನ ಎಲ್ಲಾ ಆಶೀರ್ವಾದಗಳು ನಿನ್ನ ಮೇಲೆ ಎತ್ತರವಾದ ಬೆಟ್ಟದೋಪಾದಿಯಲ್ಲಿ ರಾಶಿಯಂತಿವೆ.”


ತಮ್ಮ ತಂದೆಗೆ ಯೋಸೇಫನ ಮೇಲೆ ಹೆಚ್ಚು ಪ್ರೀತಿಯಿರುವುದನ್ನು ಗಮನಿಸಿದ ಯೋಸೇಫನ ಅಣ್ಣಂದಿರು ಯೋಸೇಫನನ್ನು ದ್ವೇಷಿಸತೊಡಗಿ ಅವನೊಡನೆ ಸ್ನೇಹಭಾವದಿಂದ ಮಾತಾಡುತ್ತಿರಲಿಲ್ಲ.


ಅಂದಿನಿಂದ ಏಸಾವನು ಯಾಕೋಬನನ್ನು ದ್ವೇಷಿಸಿದನು. ಏಸಾವನು ತನ್ನೊಳಗೆ, “ನನ್ನ ತಂದೆ ಬಹುಬೇಗನೆ ಸತ್ತುಹೋಗುವನು. ಆಗ ನಾನು ಅವನಿಗಾಗಿ ದುಃಖಿಸಿ ಆ ಬಳಿಕ ಯಾಕೋಬನನ್ನು ಕೊಲ್ಲುವೆನು” ಅಂದುಕೊಂಡನು.


ಆಮೇಲೆ ಯೋಸೇಫನಿಗೆ ಮತ್ತೊಂದು ಕನಸಾಯಿತು. ಯೋಸೇಫನು ಈ ಕನಸಿನ ಬಗ್ಗೆಯೂ ತನ್ನ ಅಣ್ಣಂದಿರಿಗೆ ತಿಳಿಸಿದನು. ಯೋಸೇಫನು ಅವರಿಗೆ, “ನನಗೆ ಮತ್ತೊಂದು ಕನಸಾಯಿತು. ಸೂರ್ಯ, ಚಂದ್ರ ಮತ್ತು ಹನ್ನೊಂದು ನಕ್ಷತ್ರಗಳು ನನಗೆ ಅಡ್ಡಬೀಳುವುದನ್ನು ಕಂಡೆನು” ಎಂದು ಹೇಳಿದನು.


ಸಹೋದರರು ಅವನಿಗೆ, “ಇಲ್ಲ! ಸ್ವಾಮೀ, ನಿಮ್ಮ ಸೇವಕರಾದ ನಾವು ಆಹಾರವನ್ನು ಕೊಂಡುಕೊಳ್ಳಲು ಬಂದಿದ್ದೇವೆ.


ಆಗ ಯೆಹೂದನು ಯೋಸೇಫನ ಬಳಿಗೆ ಹೋಗಿ, “ಸ್ವಾಮಿ, ತಮ್ಮೊಂದಿಗೆ ಬಿಚ್ಚುಮನಸ್ಸಿನಿಂದ ಮಾತನಾಡಲು ದಯವಿಟ್ಟು ಅನುಮತಿಯಾಗಲಿ; ದಯವಿಟ್ಟು ನನ್ನ ಮೇಲೆ ಕೋಪಗೊಳ್ಳಬೇಡಿ. ನೀವು ಸ್ವತಃ ಫರೋಹನಂತೆ ಇರುವಿರೆಂದು ನನಗೆ ತಿಳಿದಿದೆ.


ಸಹೋದರರು ಯೋಸೇಫನ ಬಳಿಗೆ ಹೋಗಿ ಅವನ ಮುಂದೆ ಅಡ್ಡಬಿದ್ದು, “ನಾವು ನಿನ್ನ ಸೇವಕರಾಗಿದ್ದೇವೆ” ಎಂದು ಹೇಳಿದರು.


ಭೂಮಿಯು ಒಳ್ಳೆಯದನ್ನು ಯೋಸೇಫನಿಗೆ ಕೊಡಲಿ. ಯೋಸೇಫನು ತನ್ನ ಸಹೋದರರಿಂದ ಬೇರ್ಪಡಿಸಿಕೊಂಡಿರುವನು. ಆದ್ದರಿಂದ ಉರಿಯುವ ಪೊದೆಯಲ್ಲಿರುವ ಯೆಹೋವನು ಉತ್ತಮವಾದವುಗಳನ್ನು ಯೋಸೇಫನಿಗೆ ಕೊಡಲಿ.


ಹೆಂಗಸರ ಈ ಹಾಡಿನಿಂದ ಸೌಲನು ಬಹಳವಾಗಿ ವ್ಯಸನಗೊಂಡನು ಮತ್ತು ರೋಷಗೊಂಡನು. “ದಾವೀದನು ಲಕ್ಷಾಂತರ ಶತ್ರುಗಳನ್ನು ಕೊಂದನು ಎಂದು ಇವರು ಹಾಡುತ್ತಾರಲ್ಲಾ, ಇವನಿಗೆ ರಾಜ್ಯವೊಂದನ್ನು ಬಿಟ್ಟು ಬೇರೆ ಏನು ಕಡಿಮೆಯಾಯಿತು?” ಎಂದು ಆಲೋಚಿಸತೊಡಗಿದನು. “ಸೌಲನು ಸಾವಿರಾರು ಶತ್ರುಗಳನ್ನು ಕೊಂದನು” ಎಂದು ಹಾಡಿದ ಹೆಂಗಸರ ಮಾತುಗಳಿಂದ ಸೌಲನು ಚಿಂತೆಗೀಡಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು