Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 38:1 - ಪರಿಶುದ್ದ ಬೈಬಲ್‌

1 ಆ ಕಾಲದಲ್ಲಿ ಯೆಹೂದನು ತನ್ನ ಸಹೋದರರನ್ನು ಬಿಟ್ಟು ಹೀರಾ ಎಂಬುವನೊಂದಿಗೆ ವಾಸಿಸಲು ಹೋದನು. ಅವನು ಅದುಲ್ಲಾಮ್ ಊರಿನವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ಕಾಲದಲ್ಲಿ ಯೆಹೂದನು ತನ್ನ ಅಣ್ಣತಮ್ಮಂದಿರನ್ನು ಬಿಟ್ಟು ಗಟ್ಟಾ ಇಳಿದು ಅದುಲ್ಲಾಮಿನ ಊರಿನವನಾದ ಹೀರಾ ಎಂಬುವವನ ಹತ್ತಿರ ಉಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇತ್ತ ಯೆಹೂದನು ತನ್ನ ಅಣ್ಣತಮ್ಮಂದಿರನ್ನು ಬಿಟ್ಟು ಅದುಲ್ಲಾಮ್ ಊರಿನವನಾದ ಹೀರಾ ಎಂಬವನ ಬಳಿ ವಾಸಮಾಡಲು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆ ಕಾಲದಲ್ಲಿ ಯೆಹೂದನು ತನ್ನ ಅಣ್ಣತಮ್ಮಂದಿರನ್ನು ಬಿಟ್ಟು ಗಟ್ಟಾ ಇಳಿದು ಅದುಲ್ಲಾಮೂರಿನವನಾದ ಹೀರಾ ಎಂಬವನ ಹತ್ತಿರ ಇದ್ದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆ ಕಾಲದಲ್ಲಿ ಯೆಹೂದನು ತನ್ನ ಸಹೋದರರ ಬಳಿಯಿಂದ ಹೊರಟು, ಅದುಲ್ಲಾಮೂರಿನವನಾದ ಹೀರಾನ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 38:1
12 ತಿಳಿವುಗಳ ಹೋಲಿಕೆ  

ಒಂದು ದಿನ ಎಲೀಷನು ಶೂನೇಮಿಗೆ ಹೋದನು. ಪ್ರಮುಖಳಾದ ಸ್ತ್ರೀಯೊಬ್ಬಳು ಶೂನೇಮಿನಲ್ಲಿ ವಾಸಿಸುತ್ತಿದ್ದಳು. ಆ ಸ್ತ್ರೀಯು ತನ್ನ ಮನೆಯಲ್ಲಿ ಊಟಮಾಡಿಕೊಂಡು ಹೋಗುವಂತೆ ಎಲೀಷನನ್ನು ಕೇಳಿಕೊಂಡಳು. ಅಂದಿನಿಂದ ಎಲೀಷನು ಆ ಸ್ಥಳದ ಮೂಲಕ ಹೋಗುವಾಗಲೆಲ್ಲಾ ಅವಳ ಮನೆಯಲ್ಲಿ ಊಟಮಾಡುತ್ತಿದ್ದನು.


ದಾವೀದನು ಗತ್ ಊರನ್ನು ಬಿಟ್ಟು ಅದುಲ್ಲಾಮ್ ಗವಿಗೆ ಓಡಿಹೋದನು. ದಾವೀದನು ಅದುಲ್ಲಾಮಿನಲ್ಲಿರುವುದು ಅವನ ಅಣ್ಣಂದಿರಿಗೂ ಬಂಧುಗಳಿಗೂ ತಿಳಿಯಿತು. ಅವರು ದಾವೀದನನ್ನು ನೋಡಲು ಅಲ್ಲಿಗೆ ಹೋದರು.


ಮಾರೇಷದಲ್ಲಿ ವಾಸಿಸುವ ಜನರೇ, ನಿಮಗೆ ವಿರುದ್ಧವಾಗಿ ನಾನು ಒಬ್ಬ ವ್ಯಕ್ತಿಯನ್ನು ಕರೆತರುವೆನು. ಅವನು ನಿಮ್ಮ ಬಳಿಯಲ್ಲಿರುವ ವಸ್ತುಗಳನ್ನು ಕಿತ್ತುಕೊಳ್ಳುವನು. ಇಸ್ರೇಲಿನ ಮಹಿಮೆಯು (ದೇವರ) ಅದುಲ್ಲಾಮಿಗೆ ಬರುವದು.


ಜ್ಞಾನಿಗಳೊಂದಿಗೆ ಸ್ನೇಹದಿಂದಿರಿ. ಆಗ ನೀವೂ ಜ್ಞಾನಿಗಳಾಗುವಿರಿ. ಆದರೆ ನೀವು ಜ್ಞಾನಹೀನರನ್ನು ನಿಮ್ಮ ಸ್ನೇಹಿತರನ್ನಾಗಿ ಆಯ್ದುಕೊಂಡರೆ, ನಿಮಗೆ ತೊಂದರೆ ಉಂಟಾಗುವುದು.


ಯರ್ಮೂತ್, ಅದುಲ್ಲಾಮ್, ಸೋಕೋ, ಅಜೇಕಾ,


ನಿಮ್ಮ ಮೂರ್ಖ ಮಾರ್ಗಗಳನ್ನು ತೊರೆದುಬಿಡಿ. ಆಗ ನಿಮಗೆ ಜೀವವು ದೊರೆಯುವುದು. ವಿವೇಕಮಾರ್ಗದಲ್ಲಿ ಮುಂದೆ ಸಾಗಿರಿ” ಎಂದು ಆಕೆ ಹೇಳಿದಳು.


ಸುಗ್ಗಿಯ ಕಾಲದ ಒಂದು ಸಮಯದಲ್ಲಿ ಮೂವತ್ತು ಮಂದಿ ಶೂರರಲ್ಲಿ ಮೂವರು ದಾವೀದನ ಬಳಿಗೆ ಬಂದರು. ಈ ಮೂವರು ಅದುಲ್ಲಾಮ್ ಗವಿಗೆ ಬಂದರು. ಫಿಲಿಷ್ಟಿಯರ ಸೈನ್ಯವು ರೆಫಾಯೀಮ್ ಕಣಿವೆಯಲ್ಲಿ ತನ್ನ ಪಾಳೆಯವನ್ನು ಮಾಡಿಕೊಂಡಿತ್ತು.


ಸೀಸೆರನು ಬರುವುದನ್ನು ಯಾಯೇಲಳು ಕಂಡಳು. ಆದ್ದರಿಂದ ಅವನನ್ನು ಬರಮಾಡಿಕೊಳ್ಳಲು ಹೊರಗೆ ಬಂದಳು. ಯಾಯೇಲಳು ಸೀಸೆರನಿಗೆ, “ಸ್ವಾಮೀ, ನನ್ನ ಗುಡಾರದೊಳಗೆ ಬನ್ನಿ, ಭಯಪಡಬೇಡಿ” ಎಂದು ಕರೆದಳು. ಆದ್ದರಿಂದ ಸೀಸೆರನು ಗುಡಾರದೊಳಗೆ ಹೋದನು. ಅವಳು ಸೀಸೆರನ ಮೇಲೆ ಕಂಬಳಿಯನ್ನು ಹೊದಿಸಿದಳು.


ಲಿಬ್ನದ ಅರಸ ಅದುಲ್ಲಾಮದ ಅರಸ


ಆಮೇಲೆ ಬಹುದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ತೀರಿಕೊಂಡಳು. ಯೆಹೂದನು ತನ್ನ ದುಃಖದ ಸಮಯ ತೀರಿದ ಮೇಲೆ ಅದುಲ್ಲಾಮ್ಯದವನಾದ ತನ್ನ ಸ್ನೇಹಿತ ಹೀರಾನೊಂದಿಗೆ ತನ್ನ ಕುರಿಗಳ ಉಣ್ಣೆ ಕತ್ತರಿಸುವುದಕ್ಕಾಗಿ ತಿಮ್ನಾ ಊರಿಗೆ ಹೋದನು.


ಯೆಹೂದನು ಮಾತು ಕೊಟ್ಟಿದ್ದಂತೆಯೇ ಒಂದು ಆಡುಮರಿಯನ್ನು ತನ್ನ ಸ್ನೇಹಿತನಾದ ಹೀರಾನ ಮೂಲಕ ಏನಯಿಮಿಗೆ ಕಳುಹಿಸಿ ಆ ಮುದ್ರೆಯನ್ನೂ ಊರುಗೋಲನ್ನೂ ತೆಗೆದುಕೊಂಡು ಬರುವಂತೆ ಅವನಿಗೆ ತಿಳಿಸಿದನು. ಆದರೆ ಅವನು ಅವಳನ್ನು ಕಂಡುಹಿಡಿಯಲಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು