Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 38:23 - ಪರಿಶುದ್ದ ಬೈಬಲ್‌

23 ಅದಕ್ಕೆ ಯೆಹೂದನು, “ಆಕೆ ಆ ವಸ್ತುಗಳನ್ನು ಇಟ್ಟುಕೊಳ್ಳಲಿ. ಜನರು ನಮ್ಮನ್ನು ಕಂಡು ನಗುವುದು ನನಗೆ ಇಷ್ಟವಿಲ್ಲ. ನಾನು ಅವಳಿಗೆ ಆಡನ್ನು ಕೊಡಲು ಪ್ರಯತ್ನಿಸಿದೆ. ಆದರೆ ಅವಳು ನಿನಗೆ ಸಿಕ್ಕಲಿಲ್ಲವಷ್ಟೇ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅದಕ್ಕೆ ಯೆಹೂದನು, “ನಾವು ಅಪಹಾಸ್ಯಕ್ಕೆ ಒಳಗಾಗದ ಹಾಗೆ ಆ ವಸ್ತುಗಳನ್ನು ಅವಳೇ ಇಟ್ಟುಕೊಳ್ಳಲಿ. ನಾನಂತೂ ಹೋತಮರಿಯನ್ನು ಕಳುಹಿಸಿಕೊಟ್ಟೆನು. ಅವಳು ನಿನಗೆ ಸಿಕ್ಕಲಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅದಕ್ಕೆ ಯೆಹೂದನು, “ಇನ್ನು ನಾವು ಪರಿಹಾಸ್ಯಕ್ಕೆ ಗುರಿಯಾದೇವು; ನಾನಿಟ್ಟ ಒತ್ತೆಯನ್ನು ಅವಳೇ ಇಟ್ಟುಕೊಳ್ಳಲಿ; ನಾನಂತೂ ಹೋತಮರಿಯನ್ನು ಕಳಿಸಿದ್ದಾಯಿತು; ನಿನ್ನಿಂದಲು ಅವಳನ್ನು ಕಂಡುಹಿಡಿಯಲಾಗಲಿಲ್ಲ,” ಎಂದು ಸುಮ್ಮನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅದಕ್ಕೆ ಯೆಹೂದನು - ಇನ್ನು ಹಾಸ್ಯಕ್ಕೆ ಗುರಿಯಾದೇವು; ನಾನಿಟ್ಟ ಒತ್ತೆಯನ್ನು ಅವಳೇ ಇಟ್ಟುಕೊಳ್ಳಲಿ; ನಾನಂತೂ ಹೋತಮರಿಯನ್ನು ಕಳುಹಿಸಿಕೊಟ್ಟೆನು; ಅವಳು ನಿನಗೆ ಸಿಕ್ಕಲಿಲ್ಲವಷ್ಟೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ಯೆಹೂದನು, “ನಾವು ಅಪಹಾಸ್ಯಕ್ಕೆ ಒಳಗಾಗದ ಹಾಗೆ ಅವಳು ಅದನ್ನು ತೆಗೆದುಕೊಂಡು ಹೋಗಲಿ, ಈ ಮೇಕೆಯ ಮರಿಯನ್ನು ನಾನು ಕಳುಹಿಸಿದೆನು, ಆದರೆ ಆಕೆಯು ನಿನಗೆ ಸಿಕ್ಕಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 38:23
8 ತಿಳಿವುಗಳ ಹೋಲಿಕೆ  

“ಕೇಳಿರಿ! ನಾನು ಕಳ್ಳನಂತೆ ಬರುತ್ತೇನೆ. ಎಚ್ಚರವಾಗಿದ್ದು ತನ್ನ ಬಟ್ಟೆಗಳನ್ನು ಕಾಪಾಡಿಕೊಳ್ಳುವವನು ಭಾಗ್ಯವಂತನಾಗಿದ್ದಾನೆ. ಆಗ ಅವನು ಬಟ್ಟೆಯಿಲ್ಲದೆ ಹೊರಗೆ ಹೋಗಿ ತನ್ನನ್ನು ನಾಚಿಕೆಗೆ ಗುರಿಪಡಿಸಿಕೊಳ್ಳುವ ಅಗತ್ಯತೆವಿರುವುದಿಲ್ಲ.”


ಆ ಜನರು ಕತ್ತಲೆಯಲ್ಲಿ ಮಾಡುವ ಗುಪ್ತಕಾರ್ಯಗಳ ಬಗ್ಗೆ ಮಾತಾಡುವುದಕ್ಕೂ ನಾಚಿಕೆಯಾಗುತ್ತದೆ.


ರಹಸ್ಯವಾದ ಮತ್ತು ನಾಚಿಕೆಕರವಾದ ಮಾರ್ಗಗಳಿಗೆ ನಾವು ವಿಮುಖರಾಗಿದ್ದೇವೆ. ನಾವು ಕುತಂತ್ರವನ್ನು ಉಪಯೋಗಿಸುವುದೂ ಇಲ್ಲ, ದೇವರ ಉಪದೇಶವನ್ನು ಬದಲಾಯಿಸುವುದೂ ಇಲ್ಲ. ನಾವು ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತೇವೆ. ನಾವು ಯಾರೆಂಬುದನ್ನು ಜನರಿಗೆ ಈ ರೀತಿ ತೋರಿಸಿಕೊಡುತ್ತೇವೆ. ಹೀಗೆ ನಾವು ದೇವರ ಸಮ್ಮುಖದಲ್ಲಿ ಎಂಥಾ ಜನರಾಗಿದ್ದೇವೆ ಎಂಬುದನ್ನು ಅವರು ತಮ್ಮ ಹೃದಯಗಳಲ್ಲಿ ತಿಳಿದುಕೊಳ್ಳಬಲ್ಲರು.


ನೀವು ದುಷ್ಕೃತ್ಯಗಳನ್ನು ಮಾಡಿದಿರಿ. ಈಗ ನೀವು ಆ ಕಾರ್ಯಗಳ ವಿಷಯದಲ್ಲಿ ನಾಚಿಕೆಪಡುತ್ತೀರಿ. ಆ ಕಾರ್ಯಗಳು ನಿಮಗೆ ಸಹಾಯ ಮಾಡಿದವೇ? ಇಲ್ಲ. ಆ ಕಾರ್ಯಗಳು ಆತ್ಮಿಕ ಮರಣವನ್ನು ಮಾತ್ರ ಉಂಟುಮಾಡುತ್ತವೆ.


ಅವನಿಗೆ ಹೊಡೆತಬೀಳುವುದು; ಅವಮಾನವಾಗುವುದು. ಆ ನಾಚಿಕೆಯು ಅವನನ್ನು ಬಿಟ್ಟುಹೋಗುವುದೇ ಇಲ್ಲ.


ನೀನು ಯೆಹೋವನ ಆಜ್ಞೆಯನ್ನು ಏಕೆ ಕಡೆಗಣಿಸಿದೆ? ಆತನು ತಪ್ಪೆಂದು ಹೇಳಿದ ಕಾರ್ಯವನ್ನು ಏಕೆ ಮಾಡಿದೆ? ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ನೀನು ಕೊಲ್ಲಿಸಿದೆ. ಅವನ ಪತ್ನಿಯನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಿದೆ. ಹೌದು, ನೀನು ಅಮ್ಮೋನಿಯರ ಕತ್ತಿಯಿಂದ ಊರೀಯನನ್ನು ಕೊಲ್ಲಿಸಿದೆ.


ಆದ್ದರಿಂದ ಅವನು ಯೆಹೂದನ ಬಳಿಗೆ ಹಿಂತಿರುಗಿ ಬಂದು, “ನಾನು ಆ ವೇಶ್ಯೆಯನ್ನು ಕಂಡುಹಿಡಿಯಲಾಗಲಿಲ್ಲ. ಅದಲ್ಲದೆ ಆ ಸ್ಥಳದ ಗಂಡಸರು ಅಲ್ಲಿ ಒಬ್ಬ ವೇಶ್ಯೆಯೂ ಇಲ್ಲ ಎಂದು ಹೇಳಿದರು” ಅಂದನು.


ಮೂರು ತಿಂಗಳಾದ ಬಳಿಕ, ಯಾರೋ ಒಬ್ಬನು ಯೆಹೂದನಿಗೆ, “ನಿನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಗರ್ಭಿಣಿಯಾಗಿದ್ದಾಳೆ” ಎಂದು ತಿಳಿಸಿದನು. ಆಗ ಯೆಹೂದನು, “ಆಕೆಯನ್ನು ಎಳೆದುಕೊಂಡು ಹೋಗಿ ಸುಟ್ಟುಬಿಡಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು