Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 38:25 - ಪರಿಶುದ್ದ ಬೈಬಲ್‌

25 ಆ ಗಂಡಸರು ತಾಮಾರಳನ್ನು ಕೊಲ್ಲಲು ಆಕೆಯ ಬಳಿಗೆ ಹೋದರು. ಆದರೆ ಆಕೆ ತನ್ನ ಮಾವನಿಗೆ, “ನನ್ನನ್ನು ಗರ್ಭಿಣಿ ಮಾಡಿದವನು ಈ ವಸ್ತುಗಳ ಒಡೆಯ. ಈ ವಸ್ತುಗಳನ್ನು ನೋಡು! ಇವು ಯಾರವು? ಈ ಮುದ್ರೆಯೂ ದಾರವೂ ಯಾರವು? ಇದು ಯಾರ ಕೈಕೋಲು?” ಎಂಬ ಸಂದೇಶವನ್ನು ಹೇಳಿ ಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಕೆಯನ್ನು ಹೊರಕ್ಕೆ ತಂದಾಗ, ಆಕೆಯು ತನ್ನ ಮಾವನಿಗೆ, “ಈ ಸಾಮಾನುಗಳನ್ನು ಕಳುಹಿಸಿ, ಇವು ಯಾವ ಮನುಷ್ಯನದೋ, ಅವನಿಂದಲೇ ನಾನು ಗರ್ಭಿಣಿಯಾಗಿದ್ದೇನೆ. ಮುದ್ರೆ, ದಾರ, ಕೋಲು ಇವುಗಳ ಗುರುತನ್ನು ತಿಳಿಯಬಹುದು” ಎಂದು ಕೇಳಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅಂತೆಯೇ ಎಳೆದು ತರುವಾಗ ಆಕೆ ತನ್ನ ಮಾವನಿಗೆ ಒತ್ತೆಯ ವಸ್ತುಗಳನ್ನು ಕಳುಹಿಸುತ್ತಾ, “ಇವು ಯಾವನವೊ ಅವನಿಂದಲೇ ನಾನು ಗರ್ಭಿಣಿಯಾದುದು; ಮುದ್ರೆಯುಂಗುರ, ಅದರ ದಾರ ಮತ್ತು ಕೈಗೋಲು ಇವುಗಳನ್ನು ಗುರುತಿಸಿ ತಿಳಿದುಕೊಳ್ಳಬಹುದು,” ಎಂದು ಹೇಳಿಕಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವರು ಆಕೆಯನ್ನು ಹೊರಕ್ಕೆ ತಂದಾಗ ಆಕೆ ತನ್ನ ಮಾವನಿಗೆ ಆ ಒತ್ತೆಯ ಸಾಮಾನುಗಳನ್ನು ಕಳುಹಿಸಿ - ಇವು ಯಾವನವೋ ಆ ಮನುಷ್ಯನಿಂದಲೇ ನಾನು ಬಸುರಾಗಿದ್ದೇನೆ; ಮುದ್ರೆ, ದಾರ, ಕೋಲು ಇವುಗಳ ಗುರುತನ್ನು ತಿಳಿಯಬಹುದು ಎಂದು ಹೇಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಕೆಯನ್ನು ಹೊರಗೆ ತಂದಾಗ, ಆಕೆಯು ತನ್ನ ಮಾವನಿಗೆ, “ಈ ಒತ್ತೆಯ ಸಾಮಾನುಗಳನ್ನು ಕೊಟ್ಟ ಆ ಮನುಷ್ಯನಿಂದಲೇ ನಾನು ಗರ್ಭಿಣಿಯಾಗಿದ್ದೇನೆ. ಆದ್ದರಿಂದ ಈ ಮುದ್ರೆಯೂ ದಾರವೂ ಕೋಲೂ ಯಾರವೆಂದು ತಿಳಿದುಕೋ,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 38:25
7 ತಿಳಿವುಗಳ ಹೋಲಿಕೆ  

ಯೆಹೂದನು, “ಏನು ಒತ್ತೆಯಿಡಲಿ?” ಎಂದು ಕೇಳಿದನು. ತಾಮಾರಳು, “ನಿನ್ನ ಪತ್ರಗಳ ಮೇಲೆ ಉಪಯೋಗಿಸುವ ನಿನ್ನ ಮುದ್ರೆಯನ್ನೂ ಅದರ ದಾರವನ್ನೂ ಮತ್ತು ನಿನ್ನ ಊರುಗೋಲನ್ನೂ ಕೊಡು” ಎಂದು ಉತ್ತರಿಸಿದಳು. ಯೆಹೂದನು ಅವುಗಳನ್ನು ಆಕೆಗೆ ಕೊಟ್ಟನು. ಯೆಹೂದನು ಆಕೆಯನ್ನು ಕೂಡಿದನು; ಅವಳು ಗರ್ಭಿಣಿಯಾದಳು.


ಬಳಿಕ ಆ ನಿಲುವಂಗಿಯನ್ನು ತಮ್ಮ ತಂದೆಯ ಬಳಿಗೆ ತೆಗೆದುಕೊಂಡು ಹೋಗಿ, “ನಾವು ಈ ನಿಲುವಂಗಿಯನ್ನು ಕಂಡೆವು. ಇದು ಯೋಸೇಫನ ನಿಲುವಂಗಿಯೋ?” ಎಂದು ಕೇಳಿದರು.


ಸತ್ತುಹೋಗಿದ್ದ ಚಿಕ್ಕವರು ಮತ್ತು ದೊಡ್ಡವರು ಸಿಂಹಾಸನದ ಮುಂದೆ ನಿಂತಿದ್ದರು. ಆಗ ಜೀವಬಾಧ್ಯರ ಪುಸ್ತಕವನ್ನು ತೆರೆಯಲಾಯಿತು. ತೆರೆದಿದ್ದ ಇತರ ಪುಸ್ತಕಗಳೂ ಅಲ್ಲಿದ್ದವು. ಸತ್ತುಹೋಗಿದ್ದ ಈ ಜನರಿಗೆ ಅವರು ಮಾಡಿದ್ದ ಕಾರ್ಯಗಳ ಆಧಾರದ ಮೇಲೆ ತೀರ್ಪು ನೀಡಲಾಯಿತು. ಇವುಗಳು ಪುಸ್ತಕಗಳಲ್ಲಿ ಬರೆಯಲ್ಪಟ್ಟಿವೆ.


ಆದ್ದರಿಂದ ಸರಿಯಾದ ಸಮಯಕ್ಕಿಂತ ಮೊದಲೇ ತೀರ್ಪುಮಾಡಬೇಡಿ. ಪ್ರಭುವು ಬರುವ ತನಕ ಕಾದುಕೊಂಡಿರಿ. ಕತ್ತಲೆಯಲ್ಲಿ ಅಡಗಿಕೊಂಡಿರುವವುಗಳ ಮೇಲೆ ಆತನು ಬೆಳಕನ್ನು ಬೆಳಗಿಸುವನು. ಮನುಷ್ಯರ ಹೃದಯಗಳ ರಹಸ್ಯವಾದ ಉದ್ದೇಶಗಳನ್ನು ಆತನು ಬಹಿರಂಗಪಡಿಸುವನು. ಆಗ ಪ್ರತಿಯೊಬ್ಬನಿಗೂ ಬರತಕ್ಕ ಹೊಗಳಿಕೆಯು ದೇವರಿಂದಲೇ ಬರುವುದು.


“ಜನರ ಕೈಗೆ ಸಿಕ್ಕಿಬಿದ್ದಾಗ ಕಳ್ಳನಿಗೆ ನಾಚಿಕೆಯಾಗುತ್ತದೆ. ಅದೇ ರೀತಿಯಲ್ಲಿ ಇಸ್ರೇಲ್ ವಂಶವು ನಾಚಿಕೆಪಡುತ್ತದೆ. ರಾಜರು ಮತ್ತು ನಾಯಕರು ನಾಚಿಕೆಪಡುವರು. ಯಾಜಕರು ಮತ್ತು ಪ್ರವಾದಿಗಳು ನಾಚಿಕೆಪಡುವರು.


ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದ್ದರಿಂದ ನಾನೂ ನಿಮ್ಮಂಥವನೆಂದು ನೀವು ಆಲೋಚಿಸಿಕೊಂಡಿರಿ. ಈಗಲಾದರೋ ನಾನು ಮೌನವಾಗಿರುವುದಿಲ್ಲ! ಎಲ್ಲವನ್ನು ನಿಮಗೆ ವಿವರಿಸಿ ನಿಮ್ಮ ಮುಂದೆಯೇ ನಿಮ್ಮನ್ನು ಟೀಕಿಸುವೆನು!


ಮನುಷ್ಯರ ಅಂತರಂಗದಲ್ಲಿರುವ ರಹಸ್ಯ ಸಂಗತಿಗಳಿಗೆ ದೇವರು ತೀರ್ಪುಮಾಡುವ ದಿನದಂದು ಇವುಗಳೆಲ್ಲಾ ನೆರವೇರುವವು. ದೇವರು ಯೇಸು ಕ್ರಿಸ್ತನ ಮೂಲಕ ಜನರಿಗೆ ತೀರ್ಪು ಮಾಡುತ್ತಾನೆ ಎಂಬುದಾಗಿ ಸುವಾರ್ತೆಯು ತಿಳಿಸುತ್ತದೆ. ನಾನು ಜನರಿಗೆ ತಿಳಿಸುವುದು ಆ ಸುವಾರ್ತೆಯನ್ನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು