Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 39:3 - ಪರಿಶುದ್ದ ಬೈಬಲ್‌

3 ಯೆಹೋವನು ಯೋಸೇಫನ ಸಂಗಡವಿದ್ದು ಅವನನ್ನು ಎಲ್ಲಾ ಕೆಲಸಕಾರ್ಯಗಳಲ್ಲಿ ಯಶಸ್ವಿಯಾಗುವಂತೆ ಮಾಡುತ್ತಿರುವುದನ್ನು ಪೋಟೀಫರನು ಗಮನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನು ಯೋಸೇಫನ ಸಂಡಗವಿದ್ದು ಅವನು ಮಾಡುವ ಕೆಲಸವನ್ನೆಲ್ಲಾ ಸಫಲವಾಗುವಂತೆ ಮಾಡುತ್ತಾನೆಂದು ಅವನ ದಣಿಯು ತಿಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಜೋಸೆಫನ ಸಂಗಡ ಸರ್ವೇಶ್ವರ ಇದ್ದು ಅವನು ಮಾಡುವ ಕೆಲಸವನ್ನೆಲ್ಲ ಫಲಕಾರಿಯಾಗಿ ಮಾಡುತ್ತಾರೆಂಬುದು ಅವನ ದಣಿಗೆ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನು ಯೋಸೇಫನ ಸಂಗಡವಿದ್ದು ಅವನು ಮಾಡುವ ಕೆಲಸವನ್ನೆಲ್ಲಾ ಸಫಲವಾಗುವಂತೆ ಮಾಡುತ್ತಾನೆಂದು ಅವನ ದಣಿಯು ತಿಳಿದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರು ಅವನ ಸಂಗಡ ಇದ್ದಾನೆಂದೂ ಅವನು ಮಾಡಿದ್ದನ್ನೆಲ್ಲಾ ಯೆಹೋವ ದೇವರು ಅವನ ಕೈಯಿಂದ ಅಭಿವೃದ್ಧಿಮಾಡಿದನೆಂದೂ ಅವನ ಯಜಮಾನನಿಗೆ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 39:3
28 ತಿಳಿವುಗಳ ಹೋಲಿಕೆ  

ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಹುಲುಸಾಗಿ ಬೆಳೆದಿರುವ ಮರದಂತಿರುವನು. ಆ ಮರವು ತಕ್ಕಕಾಲದಲ್ಲಿ ಫಲಿಸುವುದು; ಬಾಡದ ಎಲೆಗಳಿಂದ ಯಾವಾಗಲೂ ತುಂಬಿರುವುದು; ಅಂತೆಯೇ ಅವನ ಕಾರ್ಯಗಳೆಲ್ಲಾ ಸಫಲವಾಗುವವು.


ಲಾಬಾನನು ಅವನಿಗೆ, “ನಾನು ಹೇಳುವುದನ್ನು ಕೇಳು; ಯೆಹೋವನು ನಿನ್ನ ನಿಮಿತ್ತವಾಗಿ ನನ್ನನ್ನು ಆಶೀರ್ವದಿಸಿದ್ದಾನೆಂದು ನನಗೆ ತಿಳಿದಿದೆ.


ಅದೇ ರೀತಿಯಲ್ಲಿ ನೀವು ಜನರಿಗೆ ಬೆಳಕಾಗಿರಬೇಕು. ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ.


ಜೆಕರ್ಯನು ಜೀವಿಸುತ್ತಿದ್ದಾಗ ಉಜ್ಜೀಯನು ದೇವರನ್ನು ಅನುಸರಿಸಿದನು. ಅವನು ಉಜ್ಜೀಯನಿಗೆ ದೇವರಿಗೆ ಹೇಗೆ ಭಯಪಡಬೇಕು, ದೇವರನ್ನು ಹೇಗೆ ಗೌರವಿಸಬೇಕೆಂದು ಕಲಿಸಿಕೊಟ್ಟನು. ಉಜ್ಜೀಯನು ದೇವರಿಗೆ ವಿಧೇಯನಾಗಿ ಬಾಳಿದಾಗ ಯೆಹೋವ ದೇವರು ಅವನಿಗೆ ಯಶಸ್ಸನ್ನು ದಯಪಾಲಿಸಿದನು.


ಯೆಹೋವನು ದಾವೀದನ ಜೊತೆಗಿದ್ದನು. ಆದ್ದರಿಂದ ದಾವೀದನು ಎಲ್ಲದರಲ್ಲೂ ಯಶ್ವಸಿಯಾದನು.


ಆಮೇಲೆ ಅಬೀಮೆಲೆಕನು ಮತ್ತು ಫೀಕೋಲನು ಅಬ್ರಹಾಮನೊಡನೆ ಮಾತಾಡಿದರು. ಫೀಕೋಲನು ಅಬೀಮೆಲೆಕನ ಸೈನ್ಯಾಧಿಕಾರಿಯಾಗಿದ್ದನು. ಅಬೀಮೆಲೆಕನು ಅಬ್ರಹಾಮನಿಗೆ, “ನೀನು ಮಾಡುವ ಪ್ರತಿಯೊಂದರಲ್ಲೂ ದೇವರು ನಿನ್ನೊಡನೆ ಇದ್ದಾನೆ.


ಅವರು ಅವನಿಗೆ, “ನಿನ್ನ ಜೊತೆಯಲ್ಲಿ ಯೆಹೋವನು ಇದ್ದಾನೆಂಬುದು ಈಗ ನಮಗೆ ತಿಳಿಯಿತು. ನಾವು ಒಂದು ಒಪ್ಪಂದ ಮಾಡಿಕೊಳ್ಳಬೇಕೆಂಬುದು ನಮ್ಮ ಆಲೋಚನೆ. ನೀನು ನಮಗೆ ಒಂದು ಪ್ರಮಾಣ ಮಾಡಬೇಕಾಗಿದೆ.


ಆಲಿಸು! ಅಲ್ಲಿ ಸೈತಾನನ ಗುಂಪಿಗೆ ಸೇರಿದವರಿದ್ದಾರೆ. ಆ ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅದು ಸುಳ್ಳು. ಅವರು ನಿಜವಾದ ಯೆಹೂದ್ಯರಲ್ಲ. ಆ ಜನರು ನಿನ್ನ ಮುಂದೆ ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ನಮಸ್ಕರಿಸುವಂತೆ ಮಾಡುತ್ತೇನೆ. ನಾನು ಪ್ರೀತಿಸಿದ ಜನರು ನೀವೇ ಎಂಬುದನ್ನು ಆಗ ಅವರು ತಿಳಿದುಕೊಳ್ಳುತ್ತಾರೆ.


ನಿಮ್ಮಲ್ಲಿ ಪ್ರತಿಯೊಬ್ಬನು ತನಗಾದ ಅಭಿವೃದ್ಧಿಗೆ ತಕ್ಕಂತೆ ನಿಮ್ಮಿಂದ ಸಾಧ್ಯವಾದಷ್ಟು ಹಣವನ್ನು ಪ್ರತಿವಾರದ ಮೊದಲನೆಯ ದಿನವೇ ಪ್ರತ್ಯೇಕಿಸಿ, ವಿಶೇಷವಾದ ಸ್ಥಳವೊಂದರಲ್ಲಿ ಇಟ್ಟಿರಬೇಕು. ಆಗ ನಾನು ನಿಮ್ಮಲ್ಲಿಗೆ ಬಂದ ನಂತರ ಹಣವನ್ನು ಸಂಗ್ರಹಿಸುವ ಅವಶ್ಯಕತೆಯಿರುವುದಿಲ್ಲ.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಆ ಸಮಯದಲ್ಲಿ ಬೇರೆಬೇರೆ ಭಾಷೆಗಳನ್ನು ಮಾತಾಡುವ ಅನೇಕ ವಿದೇಶಿಯರು ಯೆಹೂದ್ಯನೊಬ್ಬನ ಬಳಿಗೆ ಬಂದು, ಅವನ ಬಟ್ಟೆಯ ಅಂಚನ್ನು ಹಿಡಿದು, ‘ದೇವರು ನಿಮ್ಮೊಂದಿಗಿದ್ದಾನೆಂದು ನಾವು ಕೇಳಿದ್ದೇವೆ. ನಿಮ್ಮೊಂದಿಗೆ ನಾವೂ ಬಂದು ಆತನನ್ನು ಆರಾಧಿಸಬಹುದೋ?’” ಎಂದು ಕೇಳುವರು.


ನಾನು ಅವರಿಗೆ, “ಪರಲೋಕದ ದೇವರು ನಮ್ಮ ಕಾರ್ಯವನ್ನು ಸಫಲಪಡಿಸುವನು. ನಾವು ಆತನ ಸೇವಕರು ಮತ್ತು ನಾವು ಈ ಪಟ್ಟಣವನ್ನು ತಿರಿಗಿ ಕಟ್ಟುತ್ತೇವೆ. ನೀವು ನಮ್ಮ ಸಹಾಯಕ್ಕಾಗಿ ಬರುವುದು ಬೇಡ. ನಿಮ್ಮಲ್ಲಿ ಯಾರ ಕುಟುಂಬಗಳವರೂ ಈ ಜೆರುಸಲೇಮಿನಲ್ಲಿ ವಾಸಿಸಲಿಲ್ಲ ಮತ್ತು ಈ ಪ್ರಾಂತ್ಯದಲ್ಲಿ ನಿಮಗೆ ಸ್ವಂತ ಭೂಮಿಯೂ ಇಲ್ಲ. ಆದ್ದರಿಂದ ನಿಮಗೆ ಈ ಪ್ರಾಂತ್ಯದಲ್ಲಿ ಯಾವ ಹಕ್ಕೂ ಇಲ್ಲ” ಎಂದು ಹೇಳಿದೆನು.


ಯೆಹೋವನು ಮೋಶೆಗೆ ಕೊಟ್ಟಿರುವ ಕಟ್ಟಳೆಗಳನ್ನು ನೀನು ಜಾಗ್ರತೆಯಾಗಿ ಅನುಸರಿಸಿ ನಡೆದರೆ ನಿನಗೆ ಯಶಸ್ಸು ಪ್ರಾಪ್ತವಾಗುವುದು. ಸ್ಥಿರಚಿತ್ತನಾಗಿರು; ಧೈರ್ಯದಿಂದಿರು; ಹೆದರಬೇಡ; ಕಳವಳಪಡಬೇಡ.


ಯೆಹೋವನು ದಾವೀದನೊಂದಿಗಿರುವುದನ್ನೂ ತನ್ನ ಮಗಳಾದ ಮೀಕಲಳು ದಾವೀದನನ್ನು ಪ್ರೀತಿಸುತ್ತಿರುವುದನ್ನೂ ಸೌಲನು ಗಮನಿಸಿದನು.


ಯೆಹೋವನು ಯೋಸೇಫನ ಸಂಗಡವಿದ್ದು ಅವನ ಎಲ್ಲಾ ಕೆಲಸಕಾರ್ಯಗಳನ್ನು ಯಶಸ್ವಿಗೊಳಿಸುತ್ತಿದ್ದದ್ದರಿಂದ ಮುಖ್ಯಾಧಿಕಾರಿಯು ಎಲ್ಲಾ ವಿಷಯಗಳನ್ನು ಯೋಸೇಫನಿಗೆ ವಹಿಸಿ ನಿಶ್ಚಿಂತೆಯಾಗಿದ್ದನು.


ನಾನು ಬಂದಾಗ ನಿನಗೆ ಸ್ವಲ್ಪವಿತ್ತು, ಈಗ ನಿನಗೆ ಬೇಕಾದಷ್ಟಿದೆ. ನಾನು ನಿನಗೋಸ್ಕರ ಮಾಡಿದ್ದನ್ನೆಲ್ಲ ಯೆಹೋವನು ಆಶೀರ್ವದಿಸಿದನು. ನಾನು ನನಗೋಸ್ಕರ ಕೆಲಸ ಮಾಡುವ ಸಮಯವಿದು. ನನ್ನ ಸ್ವಂತ ಮನೆಗೆ ಒದಗಿಸುವ ಸಮಯವಿದು” ಎಂದು ಹೇಳಿದನು.


ಆ ರಾತ್ರಿ ಯೆಹೋವನು ಇಸಾಕನಿಗೆ ಪ್ರತ್ಯಕ್ಷನಾಗಿ, “ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು. ಭಯಪಡಬೇಡ, ನಾನು ನಿನ್ನ ಸಂಗಡವಿದ್ದೇನೆ. ನಾನು ನಿನ್ನನ್ನು ಆಶೀರ್ವದಿಸುವೆನು. ನಾನು ನಿನ್ನ ಕುಟುಂಬವನ್ನು ಉನ್ನತ ಸ್ಥಿತಿಗೆ ತರುವೆನು. ನನ್ನ ಸೇವಕನಾದ ಅಬ್ರಹಾಮನಿಗಾಗಿಯೇ ಇದನ್ನು ಮಾಡುತ್ತೇನೆ” ಎಂದು ಹೇಳಿದನು.


ದೇವರು ಆ ಮಗುವಿನ ಸಂಗಡವಿದ್ದ ಕಾರಣ ಆ ಮಗುವು ಬೆಳೆದು ದೊಡ್ಡವನಾದನು; ಕಾಡಿನಲ್ಲಿ ವಾಸವಾಗಿದ್ದು ಚತುರ ಬಿಲ್ಲುಗಾರನಾದನು.


ಆದರೆ ಯೆಹೋವನ ಸಹಾಯದಿಂದ ಯೋಸೇಫನು ಏಳಿಗೆಯಾಗಿ ತನ್ನ ಯಜಮಾನನಾದ ಈಜಿಪ್ಟಿನ ಪೋಟೀಫರನ ಮನೆಯಲ್ಲಿ ಸೇವಕನಾದನು.


ಯೆಹೋವನು ಹಿಜ್ಕೀಯನೊಂದಿಗಿದ್ದನು. ಹಿಜ್ಕೀಯನು ತಾನು ಮಾಡಿದ್ದರಲ್ಲೆಲ್ಲಾ ಜಯಗಳಿಸಿದನು. ಹಿಜ್ಕೀಯನು ಅಶ್ಶೂರದ ರಾಜನೊಂದಿಗಿದ್ದ ಸಂಬಂಧವನ್ನು ಕಡಿದುಹಾಕಿದನು. ಅಶ್ಶೂರದ ರಾಜನ ಸೇವೆಯನ್ನು ಹಿಜ್ಕೀಯನು ನಿಲ್ಲಿಸಿದನು.


ಆದ್ದರಿಂದ ನೀನು ನನ್ನೊಡನೆ ಮತ್ತು ನನ್ನ ಮಕ್ಕಳೊಡನೆ ನ್ಯಾಯವಾಗಿ ನಡೆದುಕೊಳ್ಳುವುದಾಗಿ ದೇವರ ಮೇಲೆ ಪ್ರಮಾಣಮಾಡು. ನನಗೂ ಮತ್ತು ನೀನು ವಾಸಿಸುತ್ತಿರುವ ಈ ನಾಡಿಗೂ ದಯೆತೋರುವುದಾಗಿ ನೀನು ಪ್ರಮಾಣಮಾಡು. ನಾನು ನಿನಗೆ ದಯೆತೋರಿದಂತೆ ನೀನೂ ನನಗೆ ದಯೆತೋರುವುದಾಗಿ ಪ್ರಮಾಣಮಾಡು” ಎಂದು ಹೇಳಿದನು.


ಆದರೆ ಯೆಹೋವನು ಯೋಸೇಫನ ಸಂಗಡವಿದ್ದು ಕರುಣೆತೋರಿದನು. ಸ್ವಲ್ಪಕಾಲವಾದ ಮೇಲೆ ಸೆರೆಮನೆಯ ಮುಖ್ಯಾಧಿಕಾರಿಯು ಯೋಸೇಫನನ್ನು ಪ್ರೀತಿಸತೊಡಗಿದನು.


ನಿಮ್ಮ ದೇವರಾದ ಯೆಹೋವನು ಪ್ರತಿಯೊಂದು ವಿಷಯದಲ್ಲಿ ನಿಮ್ಮನ್ನು ಆಶೀರ್ವದಿಸಿದ್ದನ್ನು ನೆನಪಿಗೆ ತಂದುಕೊಳ್ಳಿರಿ. ಈ ಮಹಾ ಮರುಭೂಮಿಯ ಮೂಲಕ ನೀವು ನಡೆದುಹೋದದ್ದರ ಬಗ್ಗೆಯೂ ಆತನಿಗೆ ತಿಳಿದಿದೆ. ಕಳೆದ ನಲವತ್ತು ವರ್ಷಗಳಿಂದ ದೇವರು ನಿಮ್ಮೊಂದಿಗಿದ್ದು ನಿಮ್ಮನ್ನು ನಡಿಸಿದ್ದಾನೆ. ನಿಮಗೆ ಬೇಕಾದವುಗಳನ್ನೆಲ್ಲಾ ಒದಗಿಸಿರುತ್ತಾನೆ.’


ನೆನಪಿಡು, ನೀನು ಸ್ಥಿರಚಿತ್ತನಾಗಿರಬೇಕೆಂತಲೂ ಧೈರ್ಯಶಾಲಿಯಾಗಿರಬೇಕೆಂತಲೂ ನಾನು ನಿನಗೆ ಆಜ್ಞಾಪಿಸುತ್ತೇನೆ. ಆದ್ದರಿಂದ ಹೆದರಬೇಡ, ಯಾಕೆಂದರೆ ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನೇ ನಿನ್ನ ಸಂಗಡ ಇರುವನು” ಎಂದು ಹೇಳಿದನು.


ಯೆಹೋವನು ಸಮುವೇಲನ ಸಂಗಡವಿದ್ದನು; ಸಮುವೇಲನು ಬೆಳೆದು ದೊಡ್ಡವನಾದನು; ಸಮುವೇಲನ ಯಾವ ಸಂದೇಶವೂ ಸುಳ್ಳಾಗದಂತೆ ಯೆಹೋವನು ನೋಡಿಕೊಂಡನು.


ಹಿಂದೆ ಫೀನೆಹಾಸನು ದ್ವಾರಪಾಲಕರ ನಾಯಕನಾಗಿದ್ದನು. ಫೀನೆಹಾಸನು ಎಲ್ಲಾಜಾರನ ಮಗ. ದೇವರು ಫೀನೆಹಾಸನೊಂದಿಗಿದ್ದನು.


ದೇವರಾದ ಯೆಹೋವನು ದಾವೀದನ ಮಗನಾದ ಸೊಲೊಮೋನನೊಂದಿಗೆ ಇದ್ದುದರಿಂದ ಸೊಲೊಮೋನನು ಬಹು ಬಲಿಷ್ಠನಾದ ಅರಸನಾಗಿ ಪ್ರಖ್ಯಾತನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು