ಆದಿಕಾಂಡ 4:10 - ಪರಿಶುದ್ದ ಬೈಬಲ್10 ಅದಕ್ಕೆ ಯೆಹೋವನು, “ನೀನು ಮಾಡಿದ್ದೇನು? ನೀನು ನಿನ್ನ ತಮ್ಮನನ್ನೇ ಕೊಲೆಮಾಡಿದೆ! ಅವನ ರಕ್ತವು ಭೂಮಿಯ ಕಡೆಯಿಂದ ನನ್ನನ್ನು ಕೂಗುತಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅದಕ್ಕೆ ಯೆಹೋವನು, “ನೀನು ಏನು ಮಾಡಿದೆ? ನಿನ್ನ ತಮ್ಮನ ರಕ್ತವು ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಗ ಸರ್ವೇಶ್ವರ, “ನೀನು ಎಂಥ ಕೃತ್ಯ ಎಸಗಿದೆ? ಪ್ರತೀಕಾರಕ್ಕಾಗಿ ನೆಲದಿಂದ ನಿನ್ನ ತಮ್ಮನ ರಕ್ತ ಕೂಗಿ ನನಗೆ ಮೊರೆಯಿಡುತ್ತಿದೆ, ಕೇಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅದಕ್ಕೆ ಯೆಹೋವನು - ನೀನು ಏನು ಮಾಡಿದಿ? ನಿನ್ನ ತಮ್ಮನ ರಕ್ತವು ಭೂವಿುಯ ಕಡೆಯಿಂದ ನನ್ನನ್ನು ಕೂಗುತ್ತದೆ, ಕೇಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅದಕ್ಕೆ ಯೆಹೋವ ದೇವರು, “ನೀನು ಏನು ಮಾಡಿದೆ? ನಿನ್ನ ತಮ್ಮನ ರಕ್ತವು ಭೂಮಿಯಿಂದ ನನ್ನನ್ನು ಕೂಗುತ್ತಿದೆ. ಅಧ್ಯಾಯವನ್ನು ನೋಡಿ |
ಕಾಯಿನ ಮತ್ತು ಹೇಬೆಲರಿಬ್ಬರೂ ದೇವರಿಗೆ ಯಜ್ಞಗಳನ್ನು ಅರ್ಪಿಸಿದರು. ಆದರೆ ಹೇಬೆಲನಲ್ಲಿ ನಂಬಿಕೆಯಿದ್ದುದರಿಂದ ಅವನು ದೇವರಿಗೆ ಉತ್ತಮವಾದ ಯಜ್ಞವನ್ನು ಅರ್ಪಿಸಿದನು. ಅವನು ಅರ್ಪಿಸಿದ ವಸ್ತುಗಳಿಂದ ತನಗೆ ಸಂತೋಷವಾಯಿತೆಂದು ದೇವರೇ ಹೇಳಿದನು. ಅವನಲ್ಲಿ ನಂಬಿಕೆಯಿದ್ದುದರಿಂದ ದೇವರು ಅವನನ್ನು ಒಳ್ಳೆಯ ಮನುಷ್ಯನೆಂದು ಕರೆದನು. ಹೇಬೆಲನು ಸತ್ತುಹೋದನು, ಆದರೂ ತನ್ನ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ.
ಆಗ ಯೆಹೋವನ ಪ್ರವಾದಿಯವರಲ್ಲೊಬ್ಬನು ಅಲ್ಲಿದ್ದನು. ಅವನ ಹೆಸರು ಓದೇದ್. ಓದೇದನು ಸಮಾರ್ಯಕ್ಕೆ ಬರುತ್ತಿದ್ದ ಇಸ್ರೇಲ್ ಸೈನ್ಯದವರನ್ನು ಎದುರುಗೊಂಡು ಅವರಿಗೆ, “ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಯೆಹೂದದ ಜನರು ಸೋತುಹೋಗುವಂತೆ ಮಾಡಿದನು. ಯಾಕೆಂದರೆ ಆತನು ಅವರ ಮೇಲೆ ಸಿಟ್ಟಿಗೆದ್ದಿದ್ದನು. ನೀವು ಯೆಹೂದದ ಜನರನ್ನು ನಿಷ್ಕರುಣೆಯಿಂದ ಕೊಂದುಹಾಕಿದಿರಿ. ಈಗ ದೇವರು ನಿಮ್ಮ ಮೇಲೆ ಕೋಪಗೊಂಡಿದ್ದಾನೆ.