Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:11 - ಪರಿಶುದ್ದ ಬೈಬಲ್‌

11 ನೀನು ನಿನ್ನ ತಮ್ಮನನ್ನು ಕೊಂದುಹಾಕಿದೆ. ನಿನ್ನ ಕೈಗಳಿಂದ ಸುರಿಸಿದ ಅವನ ರಕ್ತವನ್ನು ಕುಡಿಯಲು ಭೂಮಿಯು ಬಾಯಿ ತೆರೆಯಿತು. ಆದ್ದರಿಂದ ಈಗ ಅದು ಶಾಪಗ್ರಸ್ತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಈಗ ನೀನು ನಿನ್ನ ಕೈಯಿಂದ ಸುರಿಸಿದ, ನಿನ್ನ ತಮ್ಮನ ರಕ್ತದಿಂದ ನೆನೆದ ಈ ಭೂಮಿಯಿಂದ ನಿನಗೆ ಶಾಪ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಿನ್ನ ಕೈ ಸುರಿಸಿದ ನಿನ್ನ ತಮ್ಮನ ರಕ್ತವನ್ನು ಕುಡಿದ ಈ ನೆಲದಿಂದಾಗಿ ನೀನು ಶಾಪಗ್ರಸ್ತನು; ತಿರಸ್ಕೃತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀನು ಸುರಿಸಿದ ನಿನ್ನ ತಮ್ಮನ ರಕ್ತವನ್ನು ಕುಡಿದ ಈ ಭೂವಿುಯನ್ನು ಬಿಟ್ಟುಹೋಗಬೇಕೆಂದು ನಿನಗೆ ಶಾಪ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನೀನು ಈಗ ಶಾಪಗ್ರಸ್ತನಾಗಿದ್ದಿ. ನೀನು ಸುರಿಸಿದ ನಿನ್ನ ತಮ್ಮನ ರಕ್ತವನ್ನು ಸ್ವೀಕರಿಸಲು ಬಾಯಿತೆರೆದಿರುವ ಭೂಮಿಯಿಂದ ತಿರಸ್ಕಾರವಾಗಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:11
11 ತಿಳಿವುಗಳ ಹೋಲಿಕೆ  

ಆದರೆ ನೀತಿವಂತರಾಗಲು ಧರ್ಮಶಾಸ್ತ್ರವನ್ನು ಅವಲಂಬಿಸಿಕೊಂಡಿರುವವರು ಶಾಪಗ್ರಸ್ತರಾಗಿದ್ದಾರೆ. ಏಕೆಂದರೆ ಪವಿತ್ರ ಗ್ರಂಥವು ಹೇಳುವಂತೆ, “ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಯಮಗಳನ್ನೆಲ್ಲಾ ಕೈಕೊಂಡು ನಡೆಯಬೇಕು. ಅವುಗಳಿಗೆ ಎಂದಾದರೂ ಅವಿಧೇಯನಾದವನು ಶಾಪಗ್ರಸ್ತನಾಗಿದ್ದಾನೆ.”


“ಭೂಮಿಯೇ, ನನಗಾಗಿರುವ ಕೆಡುಕುಗಳನ್ನು ಮರೆಮಾಡಬೇಡ. ನ್ಯಾಯಕ್ಕಾಗಿ ನಾನಿಡುವ ಮೊರೆ ನಿಂತುಹೋಗಲು ಅವಕಾಶ ಕೊಡಬೇಡ.


ಆಗ ದೇವರಾದ ಯೆಹೋವನು ಹಾವಿಗೆ, “ನೀನು ಮಾಡಿದ ಈ ಕೆಟ್ಟಕಾರ್ಯದಿಂದ ನಿನಗೂ ಕೇಡುಗಳಾಗುತ್ತವೆ. ಬೇರೆಲ್ಲಾ ಪ್ರಾಣಿಗಳಿಗಿಂತಲೂ ನಿನಗೆ ಹೀನಸ್ಥಿತಿ ಉಂಟಾಗುವುದು. ನೀನು ಹೊಟ್ಟೆಯಿಂದಲೇ ತೆವಳಿಕೊಂಡು ನಿನ್ನ ಜೀವಮಾನವೆಲ್ಲಾ ಮಣ್ಣನ್ನೇ ತಿನ್ನುವೆ.


ಆದರೆ ಭೂಮಿಯು ಆ ಸ್ತ್ರೀಗೆ ಸಹಾಯ ಮಾಡಲು ತನ್ನ ಬಾಯನ್ನು ತೆರೆದು, ಘಟಸರ್ಪದ ಬಾಯಿಂದ ಹೊರಬಂದ ನದಿಯನ್ನು ಕುಡಿದುಬಿಟ್ಟಿತು.


ಇಗೋ, ಈ ಲೋಕದ ಜನರು ಮಾಡಿದ ಪಾಪಕೃತ್ಯಗಳಿಗೆ ನ್ಯಾಯತೀರಿಸಲು ಯೆಹೋವನು ತನ್ನ ಸ್ಥಳದಿಂದ ಎದ್ದಿದ್ದಾನೆ. ಭೂಮಿಯು ತನ್ನಲ್ಲಿರುವ ರಕ್ತವನ್ನು ತೋರಿಸುವದು. ಭೂಮಿಯು ಇನ್ನುಮುಂದೆ ಸತ್ತವರನ್ನು ಮರೆಮಾಡುವುದಿಲ್ಲ.


ನೀನು ನನ್ನನ್ನು ನನ್ನ ದೇಶದಿಂದ ಬಲವಂತವಾಗಿ ಹೊರಡಿಸುತ್ತಿರುವೆ. ನಿನ್ನನ್ನು ನೋಡುವುದಕ್ಕಾಗಲಿ ನಿನ್ನ ಸಮೀಪದಲ್ಲಿ ಇರುವುದಕ್ಕಾಗಲಿ ನನಗೆ ಸಾಧ್ಯವಿರುವುದಿಲ್ಲ! ನನಗೆ ಮನೆಯೂ ಇಲ್ಲ! ನಾನು ಭೂಮಿಯ ಮೇಲೆ ಸ್ಥಳದಿಂದ ಸ್ಥಳಕ್ಕೆ ಬಲವಂತವಾಗಿ ಅಲೆದಾಡಬೇಕಾಗುವುದು. ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.


ಲೆಮೆಕನು, “ನಾವು ರೈತರಾಗಿ ಕಷ್ಟಪಟ್ಟು ಕೆಲಸ ಮಾಡುತ್ತೇವೆ, ಯಾಕೆಂದರೆ ದೇವರು ಭೂಮಿಯನ್ನು ಶಪಿಸಿದನು. ಆದರೆ ಈ ಮಗನು ನಮಗೆ ವಿಶ್ರಾಂತಿ ಕೊಡುವನು” ಎಂದು ಹೇಳಿ ಆ ಮಗುವಿಗೆ ನೋಹ ಎಂದು ಹೆಸರಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು