Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:23 - ಪರಿಶುದ್ದ ಬೈಬಲ್‌

23 ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು: “ಆದಾ, ಚಿಲ್ಲಾ, ನನ್ನ ಮಾತನ್ನು ಕೇಳಿ! ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಕೇಳಿ. ಒಬ್ಬನು ನನಗೆ ಗಾಯ ಮಾಡಿದ, ಆದ್ದರಿಂದ ನಾನು ಅವನನ್ನು ಕೊಂದೆ, ಒಬ್ಬ ಯುವಕನು ನನ್ನನ್ನು ಹೊಡೆದ, ಆದ್ದರಿಂದ ನಾನು ಅವನನ್ನು ಕೊಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು; “ಆದಾ, ಚಿಲ್ಲಾ, ನನ್ನ ಮಾತಿಗೆ ಕಿವಿಕೊಡಿರಿ; ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಗಮನಿಸಿರಿ. ನನಗೆ ಗಾಯ ಮಾಡಿದ ಒಬ್ಬ ಮನುಷ್ಯನನ್ನು ಕೊಂದೆನು; ನನ್ನನ್ನು ಹೊಡೆದ ಒಬ್ಬ ಪ್ರಾಯಸ್ಥನನ್ನು ಹತಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು: ಆದಾ, ಚಿಲ್ಲಾ, ಕೇಳಿ ನಾನು ಹೇಳುವುದನ್ನು ಲೆಮೆಕನ ಸತಿಯರೇ, ಆಲಿಸಿ ನನ್ನ ಮಾತನ್ನು ನಾ ಹತಮಾಡಿದೆ ನನಗೆ ಗಾಯ ಮಾಡಿದವನನ್ನು ನಾ ಕೊಂದೆ ನನ್ನನ್ನು ಹೊಡೆದಾ ಪ್ರಾಯದವನನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು - ಆದಾ, ಚಿಲ್ಲಾ, ನನ್ನ ಮಾತಿಗೆ ಕಿವಿಗೊಡಿರಿ; ಲೆಮೆಕನ ಹೆಂಡತಿಯರೇ, ನಾನು ಹೇಳುವದನ್ನು ಕೇಳಿರಿ. ನನಗೆ ಗಾಯಮಾಡಿದ ಒಬ್ಬ ಮನುಷ್ಯನನ್ನು ಕೊಂದೆನು; ನನ್ನನ್ನು ಹೊಡೆದ ಒಬ್ಬ ಪ್ರಾಯಸ್ಥನನ್ನು ಹತಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು: “ಆದಾ, ಚಿಲ್ಲಾ, ನನ್ನ ಮಾತನ್ನು ಕೇಳಿರಿ. ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಗಮನಿಸಿರಿ. ನನಗೆ ಗಾಯಮಾಡಿದ ಒಬ್ಬ ಮನುಷ್ಯನನ್ನು ಕೊಂದೆನು. ನನ್ನನ್ನು ಹೊಡೆದ ಯುವಕನನ್ನು ಹತ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:23
7 ತಿಳಿವುಗಳ ಹೋಲಿಕೆ  

ಆಗ ಬಿಳಾಮನು ಈ ಸಂಗತಿಗಳನ್ನು ಹೇಳಿದನು, “ಬಾಲಾಕನೇ, ಎದ್ದುನಿಂತು ನಾನು ಹೇಳುವುದನ್ನು ಕೇಳು. ಚಿಪ್ಪೋರನ ಮಗನಾದ ಬಾಲಾಕನೇ, ಕೇಳು:


ಜನರು ನಿಮಗೆ ಮಾಡುವ ಕೆಟ್ಟಕಾರ್ಯಗಳನ್ನು ಮರೆತುಬಿಡಿರಿ. ನಿಮ್ಮ ಜನರಲ್ಲಿ ಒಬ್ಬನಾಗಿರುವವನ ಮೇಲೆ ಸೇಡನ್ನು ತೀರಿಸಿಕೊಳ್ಳಲು ಪ್ರಯತ್ನಿಸಬೇಡಿರಿ; ದ್ವೇಷವನ್ನೂ ಇಟ್ಟುಕೊಳ್ಳಬೇಡಿ. ನಿಮ್ಮ ನೆರೆಯವನನ್ನು ನಿಮ್ಮಂತೆಯೇ ಪ್ರೀತಿಸಿರಿ. ನಾನೇ ಯೆಹೋವನು!


“ನೀವು ಯಾರನ್ನೂ ಕೊಲೆ ಮಾಡಬಾರದು.


ಶೆಕೆಮಿನ ಹಿರಿಯರು ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ ಸಮಾಚಾರವನ್ನು ಯೋತಾಮನು ಕೇಳಿದನು. ಕೂಡಲೇ ಅವನು ಹೋಗಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತುಕೊಂಡನು. ಯೋತಾಮನು ಜನರಿಗೆ ಈ ಕಥೆಯನ್ನು ಕೂಗಿಕೂಗಿ ಹೇಳಿದನು: “ಶೆಕೆಮಿನ ಹಿರಿಯರೇ, ನನ್ನ ಮಾತನ್ನು ಕೇಳಿರಿ; ಆಗ ಯೆಹೋವನು ನಿಮ್ಮ ಮಾತನ್ನು ಕೇಳುವನು.


ಚಿಲ್ಲಾಳಿಗೆ ತೂಬಲ್‌ಕಾಯಿನ ಎಂಬ ಮಗನು ಹುಟ್ಟಿದನು. ಕಬ್ಬಿಣ ಮತ್ತು ತಾಮ್ರಗಳಿಂದ ಉಪಕರಣ ಮಾಡುತ್ತಿದ್ದವರಿಗೆ ತೂಬಲ್‌ಕಾಯಿನನೇ ಮೂಲಪಿತೃ. ತೂಬಲ್‌ಕಾಯಿನನ ತಂಗಿ ನಯಮಾ.


ಅವರ ದುಷ್ಕೃತ್ಯಗಳಿಗಾಗಿ ನಾನು ಅವರನ್ನು ಶಿಕ್ಷಿಸುವೆನು. ಅವರು ಜಾರಿ ಕೆಟ್ಟಕಾರ್ಯಗಳನ್ನು ಮಾಡಿದಾಗ ನಾನು ಅವರನ್ನು ಶಿಕ್ಷಿಸುವೆನು. ಅವರ ಮಹಾಸಂಕಟ ಕಾಲವು ಹತ್ತಿರವೇ ಇದೆ. ಅವರಿಗೋಸ್ಕರ ಸಿದ್ಧವಾಗಿರುವ ಶಿಕ್ಷೆಯು ಬೇಗನೆ ಬರುತ್ತದೆ.’


ಯೆಹೋವನೇ, ನೀನು ಸೇಡು ತೀರಿಸಿಕೊಳ್ಳುವ ದೇವರು! ಸೇಡು ತೀರಿಸಿಕೊಳ್ಳುವ ದೇವರೇ ಪ್ರತ್ಯಕ್ಷನಾಗು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು