ಕಾಯಿನ ಮತ್ತು ಹೇಬೆಲರಿಬ್ಬರೂ ದೇವರಿಗೆ ಯಜ್ಞಗಳನ್ನು ಅರ್ಪಿಸಿದರು. ಆದರೆ ಹೇಬೆಲನಲ್ಲಿ ನಂಬಿಕೆಯಿದ್ದುದರಿಂದ ಅವನು ದೇವರಿಗೆ ಉತ್ತಮವಾದ ಯಜ್ಞವನ್ನು ಅರ್ಪಿಸಿದನು. ಅವನು ಅರ್ಪಿಸಿದ ವಸ್ತುಗಳಿಂದ ತನಗೆ ಸಂತೋಷವಾಯಿತೆಂದು ದೇವರೇ ಹೇಳಿದನು. ಅವನಲ್ಲಿ ನಂಬಿಕೆಯಿದ್ದುದರಿಂದ ದೇವರು ಅವನನ್ನು ಒಳ್ಳೆಯ ಮನುಷ್ಯನೆಂದು ಕರೆದನು. ಹೇಬೆಲನು ಸತ್ತುಹೋದನು, ಆದರೂ ತನ್ನ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ.
ಇದರಿಂದ ಮೋಶೆ ಬಹಳ ಕೋಪಗೊಂಡನು. ಅವನು ಯೆಹೋವನಿಗೆ, “ನಾನು ಈ ಜನರಿಗೆ ಎಂದೂ ತೊಂದರೆ ಮಾಡಲಿಲ್ಲ. ಅವರಿಂದ ನಾನು ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ. ಯೆಹೋವನೇ, ಅವರ ಕಾಣಿಕೆಯನ್ನು ಸ್ವೀಕರಿಸಬೇಡ” ಎಂದು ಮನವಿ ಮಾಡಿದನು.
ಯಾಕೋಬನು, ರಾಹೇಲಳಿಗೆ ಮತ್ತು ಲೇಯಾಳಿಗೆ, “ನಿಮ್ಮ ತಂದೆ ನನ್ನ ಮೇಲೆ ಕೋಪದಿಂದಿರುವುದನ್ನು ನಾನು ಗಮನಿಸಿದ್ದೇನೆ. ಮೊದಲು ಅವನು ನನ್ನೊಂದಿಗೆ ಸ್ನೇಹದಿಂದಿದ್ದನು. ಆದರೆ ಈಗ ಅವನು ಸ್ನೇಹದಿಂದಿಲ್ಲ. ಆದರೆ ನನ್ನ ತಂದೆಯ ದೇವರು ನನ್ನೊಂದಿಗಿದ್ದಾನೆ.
ಅವರಿಗೆ ದುರ್ಗತಿಯಾಗುವುದು. ಈ ಜನರು ಕಾಯಿನನ ಮಾರ್ಗವನ್ನು ಅನುಸರಿಸುತ್ತಾರೆ. ಇವರು ದ್ರವ್ಯ ಸಂಪಾದನೆಗಾಗಿ, ಬಿಳಾಮನ ತಪ್ಪುಮಾರ್ಗದಲ್ಲಿ ನಡೆಯಲು ತಮ್ಮನ್ನೇ ಒಪ್ಪಿಸಿಕೊಟ್ಟಿದ್ದಾರೆ. ಕೋರಹನು ಮಾಡಿದಂತೆ ಈ ಜನರೂ ದೇವರ ವಿರುದ್ಧವಾಗಿ ಹೋರಾಡುತ್ತಿದ್ದಾರೆ. ಅವರು ಕೋರಹನಂತೆ ನಾಶವಾಗುತ್ತಾರೆ.
ಆದರೆ ಯೆಹೋವನು ಸಮುವೇಲನಿಗೆ, “ಎಲೀಯಾಬನ ಎತ್ತರವನ್ನಾಗಲಿ ರೂಪವನ್ನಾಗಲಿ ಪರಿಗಣಿಸಬೇಡ. ಯಾಕೆಂದರೆ ನಾನು ಅವನನ್ನು ತಿರಸ್ಕರಿಸಿದ್ದೇನೆ. ಮನುಷ್ಯರಾದರೋ ಹೊರತೋರಿಕೆಯನ್ನು ಪರಿಗಣಿಸುತ್ತಾರೆ; ಯೆಹೋವನಾದರೋ ಹೊರತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ” ಎಂದು ಹೇಳಿದನು.
ಜನರ ಮುಖಭಾವವೇ ಅವರ ದುಷ್ಕೃತ್ಯಗಳನ್ನು ಎತ್ತಿತೋರಿಸುವವು. ಅವರು ತಮ್ಮ ಪಾಪಗಳಿಗಾಗಿ ಹೆಚ್ಚಳಪಡುವರು. ಅವರು ಸೊದೋಮಿನ ಜನರಂತಿದ್ದಾರೆ. ತಮ್ಮ ಪಾಪಗಳನ್ನು ಯಾರು ನೋಡಿದರೂ ಅವರಿಗೆ ಚಿಂತೆಯಿಲ್ಲ. ಇದು ನಿಜವಾಗಿಯೂ ಭಯಂಕರವಾದದ್ದು. ಅವರು ತಮಗೆ ಬಹಳ ಸಂಕಟಗಳನ್ನು ಬರಮಾಡಿಕೊಂಡಿದ್ದಾರೆ.
ಆಮೇಲೆ ನಾನು, “ಜನರು ಪ್ರಯಾಸಪಟ್ಟು ಕೆಲಸ ಮಾಡುವುದೇಕೆ?” ಎಂದು ಆಲೋಚಿಸಿದೆ. ಜನರು ಏಳಿಗೆ ಹೊಂದಲು ಮತ್ತು ಬೇರೆಯವರಿಗಿಂತ ಹೆಚ್ಚು ಅಭಿವೃದ್ಧಿಯಾಗಲು ಪ್ರಯತ್ನಿಸುವರು; ಅದಕ್ಕೆ ಅವರ ಮತ್ಸರವೇ ಕಾರಣ. ಇದೂ ಗಾಳಿಯನ್ನು ಹಿಂದಟ್ಟಿದ್ದ ಹಾಗೆ ವ್ಯರ್ಥ.