Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 40:12 - ಪರಿಶುದ್ದ ಬೈಬಲ್‌

12 ಅದಕ್ಕೆ ಯೋಸೇಫನು, “ನಾನು ಕನಸಿನ ಅರ್ಥವನ್ನು ನಿನಗೆ ತಿಳಿಸುವೆನು. ಆ ಮೂರು ಕವಲುಗಳು ಎಂದರೆ ಮೂರು ದಿನಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದಕ್ಕೆ ಯೋಸೇಫನು, “ಆ ಕನಸಿನ ಅರ್ಥವೇನೆಂದರೆ, ಆ ಮೂರು ದ್ರಾಕ್ಷಾಲತೆಯ ಕೊಂಬೆಗಳೇ ಮೂರು ದಿನಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅದಕ್ಕೆ ಜೋಸೆಫನು, “ಆ ಕನಸಿನ ಅರ್ಥ ಇದು: ಆ ಮೂರು ಕೊಂಬೆಗಳು ಮೂರು ದಿನಗಳು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅದಕ್ಕೆ ಯೋಸೇಫನು - ಆ ಕನಸಿನ ಅರ್ಥವೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅದಕ್ಕೆ ಯೋಸೇಫನು, “ಅದರ ಅರ್ಥ ಏನೆಂದರೆ, ಆ ಮೂರು ಕೊಂಬೆಗಳು ಮೂರು ದಿನಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 40:12
13 ತಿಳಿವುಗಳ ಹೋಲಿಕೆ  

ಆ ಮನುಷ್ಯನ ಸ್ನೇಹಿತನು ಕನಸಿನ ಅರ್ಥವನ್ನು ತಿಳಿದುಕೊಂಡು ಅವನಿಗೆ, “ನಿನ್ನ ಕನಸು ಇಸ್ರೇಲಿನ ಯೋವಾಷನ ಮಗನಾದ ಗಿದ್ಯೋನನ ಕುರಿತಾಗಿದೆ. ಗಿದ್ಯೋನನು ಮಿದ್ಯಾನ್ಯರ ಇಡೀ ಸೈನ್ಯವನ್ನು ಸೋಲಿಸುವಂತೆ ದೇವರು ಮಾಡುತ್ತಾನೆ” ಎಂದನು.


ನಮ್ಮ ಜೊತೆಯಲ್ಲಿ ಒಬ್ಬ ಇಬ್ರಿಯ ಯುವಕನಿದ್ದನು. ಅವನು ಕಾವಲುಗಾರರ ಅಧಿಕಾರಿಯ ಸೇವಕನಾಗಿದ್ದನು. ನಾವು ಅವನಿಗೆ ನಮ್ಮ ಕನಸುಗಳನ್ನು ತಿಳಿಸಿದೆವು. ಅವನು ನಮಗೆ ಅವುಗಳನ್ನು ವಿವರಿಸಿ ನಮ್ಮ ಕನಸಿನ ಅರ್ಥವನ್ನು ತಿಳಿಸಿದನು.


ಯೋಸೇಫನು, “ಕನಸಿನ ಅರ್ಥವನ್ನು ನಾನು ನಿನಗೆ ತಿಳಿಸುತ್ತೇನೆ. ಮೂರು ಬುಟ್ಟಿಗಳ ಅರ್ಥ ಮೂರು ದಿನಗಳು.


ಆದ್ದರಿಂದ ಹಾಗರಳು ಅರೇಬಿಯಾದಲ್ಲಿರುವ ಸೀನಾಯಿ ಪರ್ವತದಂತಿದ್ದಾಳೆ. ಯೆಹೂದ್ಯರ ನಗರವಾದ ಜೆರುಸಲೇಮಿಗೆ ಆಕೆಯು ಅನುರೂಪವಾಗಿದ್ದಾಳೆ. ಈ ನಗರವು ಗುಲಾಮಗಿರಿಯಲ್ಲಿದೆ ಮತ್ತು ಅದರ ಜನರೆಲ್ಲರೂ ಧರ್ಮಶಾಸ್ತ್ರಕ್ಕೆ ಗುಲಾಮರಾಗಿದ್ದಾರೆ.


ತಮ್ಮೊಂದಿಗಿದ್ದ ಆತ್ಮಿಕ ಬಂಡೆಯ ನೀರನ್ನು ಕುಡಿದರು. ಆ ಬಂಡೆಯೇ ಕ್ರಿಸ್ತನು.


ಅವರು ಊಟಮಾಡುತ್ತಿದ್ದಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು ಅದಕ್ಕಾಗಿ ದೇವರಿಗೆ ಸ್ತೋತ್ರ ಸಲ್ಲಿಸಿ, ಅದನ್ನು ಮುರಿದು, “ತೆಗೆದುಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ” ಎಂದು ಹೇಳಿ ತನ್ನ ಶಿಷ್ಯರಿಗೆ ಕೊಟ್ಟನು.


ನಾನು ಫರೋಹನ ಲೋಟವನ್ನು ಹಿಡಿದುಕೊಂಡಿದ್ದರಿಂದ ದ್ರಾಕ್ಷಿಹಣ್ಣುಗಳನ್ನು ತೆಗೆದುಕೊಂಡು ಲೋಟದೊಳಗೆ ರಸಹಿಂಡಿ ಲೋಟವನ್ನು ಫರೋಹನಿಗೆ ಕೊಟ್ಟೆನು” ಎಂದು ಹೇಳಿದನು.


ಮೂರುದಿನಗಳೊಳಗಾಗಿ ಫರೋಹನು ನಿನ್ನನ್ನು ಕ್ಷಮಿಸಿ ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳುವನು. ನೀನು ಮೊದಲಿನಂತೆ ಅವನಿಗೆ ಪಾನದಾಯಕನಾಗಿರುವೆ.


“ಅರಸನಾದ ನೆಬೂಕದ್ನೆಚ್ಚರನೆಂಬ ನಾನು ಈ ಕನಸನ್ನು ಕಂಡೆನು. ಈಗ ನೀನು, ಬೇಲ್ತೆಶಚ್ಚರನೇ (ದಾನಿಯೇಲನೇ), ಇದರ ಅರ್ಥವನ್ನು ನನಗೆ ತಿಳಿಸು. ನನ್ನ ರಾಜ್ಯದಲ್ಲಿರುವ ವಿದ್ವಾಂಸರಲ್ಲಿ ಯಾರೂ ಇದರ ಅರ್ಥವನ್ನು ನನಗೆ ಹೇಳಲಾರರು. ಆದರೆ ನೀನು ಈ ಕನಸಿನ ಅರ್ಥವನ್ನು ತಿಳಿಸಬಲ್ಲೆ. ಏಕೆಂದರೆ ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿರುವದು ನನಗೆ ತಿಳಿದದೆ” ಎಂದೆನು.


ಮುಂದೆ ನಡೆಯಲಿರುವುದನ್ನು ದೇವರು ನಿಮಗೆ ತಿಳಿಸಿದ್ದಾನೆ. ನಾನು ಹೇಳಿದಂತೆಯೇ ಸಂಭವಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು