Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 40:20 - ಪರಿಶುದ್ದ ಬೈಬಲ್‌

20 ಮೂರನೆಯ ದಿನ ಬಂದಿತು. ಅದು ಫರೋಹನ ಜನ್ಮದಿನವಾಗಿತ್ತು. ಫರೋಹನು ತನ್ನ ಎಲ್ಲಾ ಸೇವಕರಿಗೆ ಔತಣಕೂಟವನ್ನು ಏರ್ಪಡಿಸಿದನು. ಔತಣಕೂಟದಲ್ಲಿ ಫರೋಹನು ಭಕ್ಷ್ಯಗಾರನನ್ನೂ ಮತ್ತು ಪಾನದಾಯಕನನ್ನೂ ಸೆರೆಮನೆಯಿಂದ ಬಿಡುಗಡೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಮೂರನೆಯ ದಿನದಲ್ಲಿ ಫರೋಹನ ಜನ್ಮ ದಿನವಾದುದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯಪಾನದಾಯಕನನ್ನೂ ಮತ್ತು ಮುಖ್ಯ ಅಡಿಗೆಭಟ್ಟನನ್ನು ಬಿಡಿಸಿ ಸೇವಕರ ಮಧ್ಯದಲ್ಲಿ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಮೂರನೆಯ ದಿನ ಫರೋಹನು ಹುಟ್ಟಿದ ಹಬ್ಬದಿನವಾಗಿತ್ತು. ಅವನು ತನ್ನ ಪರಿವಾರದವರಿಗೆಲ್ಲ ಔತಣವನ್ನು ಏರ್ಪಡಿಸಿದ್ದ. ಮುಖ್ಯ ಪಾನಸೇವಕನನ್ನೂ ಮುಖ್ಯ ಅಡಿಗೆಭಟ್ಟನನ್ನೂ ಬಿಡಿಸಿ ಬರಮಾಡಿದ, ತನ್ನ ಪರಿವಾರದವರ ಮಧ್ಯದಲ್ಲೆ ಅವರ ತಲೆಯನ್ನು ಎತ್ತಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಮೂರನೆಯ ದಿನದಲ್ಲಿ ಫರೋಹನ ಜನ್ಮದಿನವಾದ್ದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯ ಪಾನದಾಯಕನನ್ನೂ ಮುಖ್ಯಭಕ್ಷ್ಯಕಾರನನ್ನೂ ಬಿಡಿಸಿ ಸೇವಕರ ಮಧ್ಯದಲ್ಲಿ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಮೂರನೆಯ ದಿನದಲ್ಲಿ ಫರೋಹನ ಜನ್ಮದಿನವಾಗಿದ್ದರಿಂದ ಅವನು ತನ್ನ ಸೇವಕರೆಲ್ಲರಿಗೂ ಔತಣವನ್ನು ಮಾಡಿಸಿ, ಮುಖ್ಯ ಪಾನದಾಯಕನನ್ನು ಮತ್ತು ಮುಖ್ಯ ರೊಟ್ಟಿಗಾರನನ್ನು ತನ್ನ ಅಧಿಕಾರಿಗಳ ಮುಂದೆ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 40:20
14 ತಿಳಿವುಗಳ ಹೋಲಿಕೆ  

ಹೆರೋದನ ಹುಟ್ಟುಹಬ್ಬದ ದಿನದಂದು ಹೆರೋದ್ಯಳ ಮಗಳು ಹೆರೋದನ ಮತ್ತು ಅವನ ಅತಿಥಿಗಳ ಮುಂದೆ ನರ್ತಿಸಿದಳು. ಹೆರೋದನು ಅವಳನ್ನು ಬಹಳ ಮೆಚ್ಚಿಕೊಂಡನು.


ಮೂರುದಿನಗಳೊಳಗಾಗಿ ರಾಜನು ನಿನ್ನನ್ನು ಸೆರೆಮನೆಯಿಂದ ಬಿಡಿಸಿ ನಿನ್ನ ಶಿರಚ್ಛೇದನ ಮಾಡಿಸುವನು; ನಿನ್ನ ದೇಹವನ್ನು ಕಂಬಕ್ಕೆ ನೇತುಹಾಕಿಸುವನು; ಪಕ್ಷಿಗಳು ನಿನ್ನ ದೇಹವನ್ನು ತಿಂದುಬಿಡುತ್ತವೆ” ಎಂದು ಹೇಳಿದನು.


ಮೂರುದಿನಗಳೊಳಗಾಗಿ ಫರೋಹನು ನಿನ್ನನ್ನು ಕ್ಷಮಿಸಿ ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳುವನು. ನೀನು ಮೊದಲಿನಂತೆ ಅವನಿಗೆ ಪಾನದಾಯಕನಾಗಿರುವೆ.


ಒಮ್ಮೆ ಯೋಹಾನನನ್ನು ಮರಣಕ್ಕೆ ಈಡುಮಾಡುವ ಸುಸಮಯ ಹೆರೋದ್ಯಳಿಗೆ ದೊರೆಯಿತು. ಅಂದು ಹೆರೋದನ ಹುಟ್ಟುಹಬ್ಬದ ದಿನವಾಗಿತ್ತು. ಹೆರೋದನು ರಾಜಾಧಿಕಾರಿಗಳಿಗೂ ಸೇನಾಧಿಪತಿಗಳಿಗೂ ಮತ್ತು ಗಲಿಲಾಯದ ಪ್ರಮುಖರಿಗೂ ಒಂದು ಔತಣಕೂಟವನ್ನು ಏರ್ಪಡಿಸಿದನು.


ಬಾಬಿಲೋನ್ ರಾಜನಾದ ಎವೀಲ್ಮೆರೋದಕನು, ಯೆಹೂದದ ರಾಜನಾದ ಯೆಹೋಯಾಖೀನನನ್ನು ಸೆರೆಯಿಂದ ಬಿಡುಗಡೆ ಮಾಡಿದನು. ಯೆಹೋಯಾಖೀನನನ್ನು ಸೆರೆಹಿಡಿದ ಮೂವತ್ತೇಳನೆಯ ವರ್ಷದ ನಂತರ ಇದು ಸಂಭವಿಸಿತು. ಎವೀಲ್ಮೆರೋದಕನ ಆಳ್ವಿಕೆಯ ಹನ್ನೆರಡನೆ ತಿಂಗಳಿನ ಇಪ್ಪತ್ತೇಳನೆಯ ದಿನದಂದು ಇದು ಸಂಭವಿಸಿತು.


“ಬಹುಕಾಲದ ನಂತರ ಯಜಮಾನನು ಮನೆಗೆ ಬಂದನು. ತಾನು ಕೊಟ್ಟಿದ್ದ ಹಣದ ಕುರಿತಾಗಿ ಅವನು ಸೇವಕರನ್ನು ವಿಚಾರಿಸಿ ಲೆಕ್ಕ ಕೇಳಿದನು.


ಬಳಿಕ ಯೋಬನು ಬಾಯಿ ತೆರೆದು ತನ್ನ ಜನ್ಮ ದಿನವನ್ನು ಶಪಿಸಿ ಹೀಗೆಂದನು:


ತನ್ನ ಆಳ್ವಿಕೆಯ ಮೂರನೆ ವರ್ಷದಲ್ಲಿ ರಾಜ್ಯದ ಅಧಿಕಾರಿಗಳಿಗೂ ನಾಯಕರುಗಳಿಗೂ ಒಂದು ಔತಣವನ್ನು ಏರ್ಪಡಿಸಿದನು. ಮೇದ್ಯ. ಪರ್ಶಿಯದ ಎಲ್ಲಾ ಸೈನ್ಯಾಧಿಕಾರಿಗಳೂ ಪ್ರಧಾನರೂ ಔತಣದಲ್ಲಿ ಭಾಗವಹಿಸಿದ್ದರು.


ಇಸಾಕನು ಬೆಳೆದು ಊಟಮಾಡುವಷ್ಟು ದೊಡ್ಡವನಾದನು. ಆಗ ಅಬ್ರಹಾಮನು ಒಂದು ದೊಡ್ಡ ಔತಣವನ್ನು ಮಾಡಿಸಿದನು.


ಅವನ ಪ್ರವಾದನೆಯು ನೆರವೇರುವ ತನಕ ಅವನು ಗುಲಾಮನಾಗಿದ್ದನು. ಯೋಸೇಫನು ಸತ್ಯವಂತನೆಂದು ಯೆಹೋವನ ಸಂದೇಶವು ನಿರೂಪಿಸಿತು.


ಯೆಹೂದದ ರಾಜನಾಗಿದ್ದ ಯೆಹೋಯಾಖೀನನು ಮೂವತ್ತೇಳು ವರ್ಷ ಬಾಬಿಲೋನಿನ ಸೆರೆಮನೆಯಲ್ಲಿದ್ದನು. ಆತನ ಕಾರಾಗೃಹವಾಸದ ಮೂವತ್ತೇಳನೇ ವರ್ಷದಲ್ಲಿ ಬಾಬಿಲೋನಿನ ರಾಜನಾದ ಎವೀಲ್ಮೆರೋದಕನು ಯೆಹೋಯಾಖೀನನ ಮೇಲೆ ದಯೆತೋರಿದನು. ಆ ವರ್ಷ ಅವನು ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡುಗಡೆ ಮಾಡಿದನು. ಇದೇ ವರ್ಷ ಎವೀಲ್ಮೆರೋದಕನು ಯೆಹೋಯಾಖೀನನನ್ನು ಆ ವರ್ಷದ ಹನ್ನೆರಡನೆ ತಿಂಗಳಿನ ಇಪ್ಪತ್ತೈದನೆ ದಿನ ಬಿಡುಗಡೆ ಮಾಡಿದನು.


ಸೊಲೊಮೋನನು ಎಚ್ಚರಗೊಂಡನು. ದೇವರು ಕನಸಿನಲ್ಲಿ ತನ್ನೊಡನೆ ಮಾತನಾಡಿದನೆಂಬುದು ಅವನಿಗೆ ತಿಳಿಯಿತು. ನಂತರ ಸೊಲೊಮೋನನು ಜೆರುಸಲೇಮಿಗೆ ಹೋಗಿ, ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯ ಎದುರಿನಲ್ಲಿ ನಿಂತುಕೊಂಡನು. ಸೊಲೊಮೋನನು ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಅನಂತರ ಅವನು ತನ್ನ ಆಳ್ವಿಕೆಗೆ ಸಹಾಯ ಮಾಡಿದ ಎಲ್ಲ ನಾಯಕರಿಗೆ ಮತ್ತು ಅಧಿಕಾರಿಗಳಿಗೆ ಒಂದು ಔತಣವನ್ನೇರ್ಪಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು